Homeಮುಖಪುಟವಿಶ್ವಕಪ್ ಸೆಮಿಫೈನಲ್ ಗೆಲುವಿನ ನಂತರ ಜೀಸಸ್‌ಗೆ ಧನ್ಯವಾದ; ಆನ್‌ಲೈನ್‌ ದ್ವೇಷಕ್ಕೆ ಗುರಿಯಾದ ಜೆಮಿಮಾ ರೊಡ್ರಿಗಸ್

ವಿಶ್ವಕಪ್ ಸೆಮಿಫೈನಲ್ ಗೆಲುವಿನ ನಂತರ ಜೀಸಸ್‌ಗೆ ಧನ್ಯವಾದ; ಆನ್‌ಲೈನ್‌ ದ್ವೇಷಕ್ಕೆ ಗುರಿಯಾದ ಜೆಮಿಮಾ ರೊಡ್ರಿಗಸ್

- Advertisement -
- Advertisement -

ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಗಮನಾರ್ಹ ಅಜೇಯ ಶತಕದೊಂದಿಗೆ ಭಾರತವನ್ನು ಮೊದಲ ಐಸಿಸಿ ಮಹಿಳಾ ವಿಶ್ವಕಪ್ ಪ್ರಶಸ್ತಿಗೆ ಮುನ್ನಡೆಸಿದ ಭಾರತೀಯ ಕ್ರಿಕೆಟ್‌ ತಾರೆ ಜೆಮಿಮಾ ರೊಡ್ರಿಗಸ್, ಪಂದ್ಯದ ನಂತರದ ಭಾಷಣದಲ್ಲಿ ಸಾರ್ವಜನಿಕವಾಗಿ ಯೇಸುವಿಗೆ ಧನ್ಯವಾದ ಹೇಳಿದ ನಂತರ ಬಲಪಂಥೀಯ ಸಾಮಾಜಿಕ ಮಾಧ್ಯಮ ಬಳಕೆದಾರರಿಂದ ಆನ್‌ಲೈನ್ ದ್ವೇಷಕ್ಕೆ ಗುರಿಯಾಗಿದ್ದಾರೆ.

ಪ್ಲೇಯರ್ ಆಪ್‌ ದಿ ಮ್ಯಾಚ್ ಪ್ರಶಸ್ತಿಗೆ ಭಾಜನರಾದ 25 ವರ್ಷದ ಬ್ಯಾಟರ್, ಸೆಮಿಫೈನಲ್ ಗೆಲುವಿನ ನಂತರ ತನ್ನ ಧಾರ್ಮಿಕ ನಂಬಿಕೆಗೆ ಕೃತಜ್ಞತೆ ಸಲ್ಲಿಸಿದರು. “ನಾನು ಯೇಸುವಿಗೆ ಧನ್ಯವಾದ ಹೇಳಲು ಬಯಸುತ್ತೇನೆ; ಇದನ್ನು ನಾನೇ ಮಾಡಲು ಸಾಧ್ಯವಾಗಲಿಲ್ಲ” ಎಂದು ಅವರು ಪಂದ್ಯದ ಬಳಿಕ ನಡೆದ ಸಮಾರಂಭದಲ್ಲಿ ಹೇಳಿದರು. “ಆಟ ಆಡುವಾಗ ನಾನು ಬೈಬಲ್‌ ಗ್ರಂಥವನ್ನು ಉಲ್ಲೇಖಿಸುತ್ತಿದ್ದೆ, ಸ್ಥಿರವಾಗಿ ನಿಲ್ಲಲು ಮತ್ತು ದೇವರು ನನಗಾಗಿ ಹೋರಾಡುತ್ತಾನೆ” ಎಂದು ಹೇಳಿದ್ದರು.

ಜೆಮಿಮಾ ಅವರ ವೈಯಕ್ತಿಕ ನಂಬಿಕೆಗಳನ್ನು ಪ್ರತಿಬಿಂಬಿಸುವ ಹೇಳಿಕೆಗಳಿಗೆ ಆನ್‌ಲೈನ್‌ನಲ್ಲಿ ಬಲಪಂಥೀಯವಾದಿ ಬಳಕೆದಾರರಿಂದ ನಿಂದನೆ ಎದುರಿಸುವಂತಾಗಿದೆ. “ಅವರು ಕ್ರಿಶ್ಚಿಯನ್ ಧರ್ಮವನ್ನು ಪ್ರಚಾರ ಮಾಡುತ್ತಿದ್ದಾರೆ, ಮತಾಂತರಗಳಲ್ಲಿ ತೊಡಗಿದ್ದಾರೆ” ಎಂದು ಆರೋಪಿಸಿದರು.

ಹಲವಾರು ಬಲಪಂಥೀಯ ಖಾತೆಗಳಲ್ಲಿ, ಜೆಮಿಮಾ ಅವರು ತಮ್ಮ ತಂದೆ ಇವಾನ್ ರಾಡ್ರಿಗಸ್ ಅವರೊಂದಿಗೆ ಚರ್ಚ್ ಕಾರ್ಯಕ್ರಮಗಳಿಗೆ ಹಾಜರಾಗುತ್ತಿರುವ ಹಳೆಯ ವೀಡಿಯೊಗಳನ್ನು ಈಗ ವೈರಲ್ ಮಾಡಲಾಗುತ್ತಿದೆ. ಅವರು ಸಮುದಾಯ ಸಂಪರ್ಕದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

“ಜೆಮಿಮಾ ರಾಡ್ರಿಗಸ್ ಕ್ರಿಕೆಟ್ ಅನ್ನು ಸಾಮೂಹಿಕ ಮತಾಂತರಕ್ಕೆ ಸಾಧನವಾಗಿ ಬಳಸಿದ್ದಾರೆ. ಧಾರ್ಮಿಕ ಮತಾಂತರಕ್ಕಾಗಿ ಅಂತಹ ನಾಟಕ ಮಾಡಿದ ಒಬ್ಬ ಭಾರತೀಯನನ್ನು ನನಗೆ ತೋರಿಸಿ” ಎಂದು ಒಬ್ಬ ಬಳಕೆದಾರರು ಬರೆದಿದ್ದಾರೆ. ಮತ್ತೊಬ್ಬರು ಅವರನ್ನು ‘ಪಾಕಿಸ್ತಾನಿ ಕ್ರಿಕೆಟಿಗ ಮೊಹಮ್ಮದ್ ರಿಜ್ವಾನ್ ಅವರ  ಪ್ರತಿ’ ಎಂದು ಕರೆದು ಅಪಹಾಸ್ಯ ಮಾಡಿದ್ದಾರೆ. ಹಿಂದೂ ಆಟಗಾರರು ವಿಜಯಗಳ ನಂತರ ‘ಭಗವಾನ್ ಅಥವಾ ಭಗವದ್ಗೀತೆಯನ್ನು ಎಂದಿಗೂ ಪ್ರಾರ್ಥಿಸುವುದಿಲ್ಲ’ ಎಂದು ಆರೋಪಿಸಿದ್ದಾರೆ.

ಕೆಲವು ಬಳಕೆದಾರರು ರಾಡ್ರಿಗಸ್ ಕ್ರಿಶ್ಚಿಯನ್ ಪ್ರಾರ್ಥನಾ ಸೇವೆಯಲ್ಲಿ ಭಾಗವಹಿಸುತ್ತಿರುವ ಹಳೆಯ ವೀಡಿಯೊವನ್ನು ಸಹ ಹಂಚಿಕೊಂಡಿದ್ದಾರೆ. ಅವಹೇಳನಕಾರಿ ಶೀರ್ಷಿಕೆ ನೀಡಿದ್ದು, “ಅಕ್ಕಿ ಚೀಲ ಮತಾಂತರ” ದಂತಹ ನಿಂದನಾತ್ಮಕ ಪದ ಬಳಸಿದ್ದಾರೆ. ಭಾರತದ ವಿಶ್ವಕಪ್ ಗೆಲುವಿನ ನಂತರ ಕೆಲವರು ಅವರ ನಂಬಿಕೆಯನ್ನು ಅಪಹಾಸ್ಯ ಮಾಡಿದ್ದಾರೆ. ‘ಯೇಸು ಫೈನಲ್‌ನಲ್ಲಿ ಸಹಾಯ ಮಾಡಲು ಬರಲಿಲ್ಲ’ ಎಂದು ವ್ಯಂಗ್ಯವಾಡಿದ್ದಾರೆ.

ಆನ್‌ಲೈನ್ ಪ್ರತಿಕ್ರಿಯೆಯ ಹೊರತಾಗಿಯೂ, ರಾಡ್ರಿಗಸ್ ಅವರ ಆಟವು ಭಾರತದ ಅಭಿಯಾನದ ಪ್ರಮುಖ ಅಂಶಗಳಲ್ಲಿ ಒಂದಾಗಿದೆ. ಆಸ್ಟ್ರೇಲಿಯಾ ವಿರುದ್ಧದ ಅವರ ಅಜೇಯ ಶತಕವು ಭಾರತವನ್ನು ಫೈನಲ್‌ಗೆ ಕೊಂಡೊಯ್ಯುವಲ್ಲಿ ನಿರ್ಣಾಯಕ ಪಾತ್ರ ವಹಿಸಿತು, ಅಲ್ಲಿ ಅವರು ದಕ್ಷಿಣ ಆಫ್ರಿಕಾವನ್ನು 52 ರನ್‌ಗಳಿಂದ ಸೋಲಿಸಿ ತಮ್ಮ ಮೊದಲ ಐಸಿಸಿ ಮಹಿಳಾ ವಿಶ್ವಕಪ್ ಪ್ರಶಸ್ತಿಯನ್ನು ಗೆದ್ದರು.

299 ರನ್‌ಗಳ ಗುರಿಯನ್ನು ಬೆನ್ನಟ್ಟಿದ ದಕ್ಷಿಣ ಆಫ್ರಿಕಾ, ಲಾರಾ ವೋಲ್ವಾರ್ಡ್ ಅವರ ಹೋರಾಟದ ಶತಕದ ಹೊರತಾಗಿಯೂ 246 ರನ್‌ಗಳಿಗೆ ಆಲೌಟ್ ಆಯಿತು.

ಉತ್ತರ ಪ್ರದೇಶ| ದಲಿತ ಸಮುದಾಯದ ಕೃಷಿ ಕಾರ್ಮಿಕನನ್ನು ಥಳಿಸಿ ಕೊಂದ ಭೂಮಾಲೀಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇಮಕಾತಿ ಅಕ್ರಮ ಖಂಡಿಸಿ ಜಾರ್ಖಂಡ್‌ನಲ್ಲಿ ಧರಣಿ: ವಿದ್ಯಾರ್ಥಿಗಳ ಹೋರಾಟಕ್ಕೆ ತಲೆಬಾಗಿದ ಸಿಎಂ ಹೇಮಂತ್ ಸೊರೇನ್, ‘ನ್ಯಾಯದ ಭರವಸೆ’

ಜಾರ್ಖಂಡ್‌ನ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಹಾಗೂ ಯುವಜನತೆ ತಮ್ಮ ಭವಿಷ್ಯದ ಭದ್ರತೆಗಾಗಿ ಬೀದಿಗಿಳಿದು ನಡೆಸುತ್ತಿರುವ ಬೃಹತ್ ಪ್ರತಿಭಟನೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು...

ಪ.ಬಂಗಾಳ : ಮಮತಾ ಬ್ಯಾನರ್ಜಿ ಕಾರಿನ ಮೇಲೆ ದಾಳಿ; ಕಲ್ಲು, ಚಪ್ಪಲಿ ತೂರಿದ ಗುಂಪು

ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ಮನೆಗೆ ಹೋಗುತ್ತಿದ್ದಾಗ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದ್ದ ಕಾರಿನ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಭಾನುವಾರ...

SIR ನೆಪದಲ್ಲಿ 1 ಕೋಟಿ ಮತ ಡಿಲೀಟ್ ಮಾಡೋ ಸಂಚು: ಎಚ್ಚೆತ್ತುಕೊಳ್ಳುವಂತೆ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಕರೆ

SIR ನೆಪದಲ್ಲಿ ಮತದಾರರ ಪಟ್ಟಿಯಿಂದ ಒಂದು ಕೋಟಿಗೂ ಹೆಚ್ಚು ಮತಗಳನ್ನು ಅಳಿಸುವ ಸಂಚು ನಡೆಯುತ್ತಿದೆ, ಕಾಂಗ್ರೆಸ್ ಕಾರ್ಯಕರ್ತರು ಈ ವಿಚಾರದಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯ...

‘ಮೋದಿ ದೇಶದ ಯುವಕರನ್ನು ಸಬಲೀಕರಣಗೊಳಿಸಲು ಶ್ರಮಿಸುತ್ತಿದ್ದಾರೆ ’: ‘ಜೆನ್ ಝೀ’ಗಳನ್ನು ‘ಬಾಹ್ಯ ಶಕ್ತಿಗಳು ದಾರಿ ತಪ್ಪಿಸುತ್ತಿವೆ’: ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ

ಭುವನೇಶ್ವರ: ಜಾಗತಿಕ ವೇದಿಕೆಯಲ್ಲಿ "ತಮ್ಮನ್ನು ದಾರಿ ತಪ್ಪಿಸಲು ಮತ್ತು ಭಾರತವನ್ನು ದುರ್ಬಲಗೊಳಿಸಲು" ನಿರಂತರವಾಗಿ ಪ್ರಯತ್ನಿಸುತ್ತಿರುವ "ಬಾಹ್ಯ ಶಕ್ತಿಗಳಿಗೆ" ಬಲಿಯಾಗಬೇಡಿ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಭಾನುವಾರ ಜೆನ್ ಝೀ (GEN-Z)...

ಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ

ಹೈದರಾಬಾದ್‌ನ ‘ನಾಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಬಾರದು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಂದು ಗುಂಪು ಆಡಳಿತ...

3ನೇ ಹಂತದ ‘SIR’ ಕರಡು ಮತದಾರರ ಪಟ್ಟಿ ಬಿಡುಗಡೆ: 12 ರಾಜ್ಯಗಳಲ್ಲಿ 1.58 ಕೋಟಿ ಮತದಾರರ ಹೆಸರು ಕೈಬಿಟ್ಟ ಆಯೋಗ, ಇನ್ನು ಕರ್ನಾಟಕ ಬಾಕಿ

3ನೇ ಹಂತದದಲ್ಲಿ ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜುಲೈನಿಂದ ನಡೆಸಲಾದ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಬಳಿಕ ಬಿಡುಗಡೆಯಾದ ಕರಡು ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದ ಹೆಸರುಗಳು...

ದಾರುಲ್ ಉಲೂಮ್ ದಿಯೋಬಂದ್ ಆವರಣದಲ್ಲಿ ಶಿವಲಿಂಗವಿದೆ ಎಂದ ಹಿಂದುತ್ವ ಸಂಘಟನೆ : ಆ.11ರಂದು ಗಂಗಾಜಲ ಅರ್ಪಿಸುವುದಾಗಿ ಘೋಷಣೆ

ಉತ್ತರ ಪ್ರದೇಶದ ದಿಯೋಬಂದ್‌ನಲ್ಲಿರುವ ಪ್ರಸಿದ್ದ ಮುಸ್ಲಿಂ ಶಿಕ್ಷಣ ಸಂಸ್ಥೆ ದಾರುಲ್ ಉಲೂಮ್ ಆವರಣದಲ್ಲಿ ಶಿವಲಿಂಗವಿದೆ ಎಂದು ಪ್ರತಿಪಾದಿಸಿರುವ ಹಿಂದೂ ರಕ್ಷಾ ದಳ ಸಂಘಟನೆ, ಆಗಸ್ಟ್ 11 ರಂದು ಸಂಸ್ಥೆಗೆ ಭೇಟಿ ನೀಡಿ ಗಂಗಾಜಲ...

‘ಮೋದಿ ನಮ್ಮನ್ನು ಗುಂಡಿಕ್ಕಿ ಕೊಂದರೂ ಈ ಜೀವಿತಾವಧಿಯಲ್ಲಿ ವಂದೇ ಮಾತರಂ ಪೂರ್ಣ ಆವೃತ್ತಿ ಹಾಡುವುದಿಲ್ಲ’: ಕೇರಳ ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿತ್ತಾನ್

ಕಾಸರಗೋಡು (ಕೇರಳ): ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ 'ಹರ್ ಘರ್ ತಿರಂಗಾ' ಅಭಿಯಾನದ ಸಮಯದಲ್ಲಿ ರಾಷ್ಟ್ರಗೀತೆ 'ವಂದೇ ಮಾತರಂ'ನ ಸಂಪೂರ್ಣ ವಾಗ್ವಾದ/ಆವೃತ್ತಿಯನ್ನು ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಸಂವಹನದ ಸುತ್ತ ಭಾರಿ ವಿವಾದ...

ಮೊಜ್ತಬಾ ಖಾಮಿನೈ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದ ಇಸ್ರೇಲ್ ಮಾಧ್ಯಮಗಳು : ವಿಡಿಯೋ ಬಿಡುಗಡೆ ಮಾಡಿ ಕೌಂಟರ್ ಕೊಟ್ಟ ಇರಾನ್

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಾಮಿನೈ ಅವರ ಆರೋಗ್ಯ ಸ್ಥಿತಿ 'ಅತ್ಯಂತ ಗಂಭೀರವಾಗಿದೆ' ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ, ಅವರು ಉತ್ತಮ ಆರೋಗ್ಯದಿಂದ ಇರುವಂತೆ ಕಾಣಿಸುವ ದಿನಾಂಕವಿಲ್ಲದ ವಿಡಿಯೋ ಒಂದನ್ನು...

‘ಬ್ರಿಟಿಷರಿಂದ ಕಠಿಣ ಶಿಕ್ಷೆ ಅನುಭವಿಸಿದವರು ಸಾವರ್ಕರ್’ ಎಂಬ ಕೇರಳ ಶಾಲೆಯೊಂದರ ಕ್ವಿಜ್‌ ಪ್ರಶ್ನೆ ತಂದಿಟ್ಟ ವಿವಾದ

ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಮತ್ತು ಕುಂಬಳೆ ಉಪಜಿಲ್ಲೆಗಳ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕ್ವಿಜ್‌ನಲ್ಲಿ ವಿ ವಿನಾಯಕ ದಾಮೋದರ ಸಾವರ್ಕರ್ ಕುರಿತಾದ ಪ್ರಶ್ನೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ....