Homeಮುಖಪುಟವಿಶ್ವಕಪ್ ಸೆಮಿಫೈನಲ್ ಗೆಲುವಿನ ನಂತರ ಜೀಸಸ್‌ಗೆ ಧನ್ಯವಾದ; ಆನ್‌ಲೈನ್‌ ದ್ವೇಷಕ್ಕೆ ಗುರಿಯಾದ ಜೆಮಿಮಾ ರೊಡ್ರಿಗಸ್

ವಿಶ್ವಕಪ್ ಸೆಮಿಫೈನಲ್ ಗೆಲುವಿನ ನಂತರ ಜೀಸಸ್‌ಗೆ ಧನ್ಯವಾದ; ಆನ್‌ಲೈನ್‌ ದ್ವೇಷಕ್ಕೆ ಗುರಿಯಾದ ಜೆಮಿಮಾ ರೊಡ್ರಿಗಸ್

- Advertisement -
- Advertisement -

ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಗಮನಾರ್ಹ ಅಜೇಯ ಶತಕದೊಂದಿಗೆ ಭಾರತವನ್ನು ಮೊದಲ ಐಸಿಸಿ ಮಹಿಳಾ ವಿಶ್ವಕಪ್ ಪ್ರಶಸ್ತಿಗೆ ಮುನ್ನಡೆಸಿದ ಭಾರತೀಯ ಕ್ರಿಕೆಟ್‌ ತಾರೆ ಜೆಮಿಮಾ ರೊಡ್ರಿಗಸ್, ಪಂದ್ಯದ ನಂತರದ ಭಾಷಣದಲ್ಲಿ ಸಾರ್ವಜನಿಕವಾಗಿ ಯೇಸುವಿಗೆ ಧನ್ಯವಾದ ಹೇಳಿದ ನಂತರ ಬಲಪಂಥೀಯ ಸಾಮಾಜಿಕ ಮಾಧ್ಯಮ ಬಳಕೆದಾರರಿಂದ ಆನ್‌ಲೈನ್ ದ್ವೇಷಕ್ಕೆ ಗುರಿಯಾಗಿದ್ದಾರೆ.

ಪ್ಲೇಯರ್ ಆಪ್‌ ದಿ ಮ್ಯಾಚ್ ಪ್ರಶಸ್ತಿಗೆ ಭಾಜನರಾದ 25 ವರ್ಷದ ಬ್ಯಾಟರ್, ಸೆಮಿಫೈನಲ್ ಗೆಲುವಿನ ನಂತರ ತನ್ನ ಧಾರ್ಮಿಕ ನಂಬಿಕೆಗೆ ಕೃತಜ್ಞತೆ ಸಲ್ಲಿಸಿದರು. “ನಾನು ಯೇಸುವಿಗೆ ಧನ್ಯವಾದ ಹೇಳಲು ಬಯಸುತ್ತೇನೆ; ಇದನ್ನು ನಾನೇ ಮಾಡಲು ಸಾಧ್ಯವಾಗಲಿಲ್ಲ” ಎಂದು ಅವರು ಪಂದ್ಯದ ಬಳಿಕ ನಡೆದ ಸಮಾರಂಭದಲ್ಲಿ ಹೇಳಿದರು. “ಆಟ ಆಡುವಾಗ ನಾನು ಬೈಬಲ್‌ ಗ್ರಂಥವನ್ನು ಉಲ್ಲೇಖಿಸುತ್ತಿದ್ದೆ, ಸ್ಥಿರವಾಗಿ ನಿಲ್ಲಲು ಮತ್ತು ದೇವರು ನನಗಾಗಿ ಹೋರಾಡುತ್ತಾನೆ” ಎಂದು ಹೇಳಿದ್ದರು.

ಜೆಮಿಮಾ ಅವರ ವೈಯಕ್ತಿಕ ನಂಬಿಕೆಗಳನ್ನು ಪ್ರತಿಬಿಂಬಿಸುವ ಹೇಳಿಕೆಗಳಿಗೆ ಆನ್‌ಲೈನ್‌ನಲ್ಲಿ ಬಲಪಂಥೀಯವಾದಿ ಬಳಕೆದಾರರಿಂದ ನಿಂದನೆ ಎದುರಿಸುವಂತಾಗಿದೆ. “ಅವರು ಕ್ರಿಶ್ಚಿಯನ್ ಧರ್ಮವನ್ನು ಪ್ರಚಾರ ಮಾಡುತ್ತಿದ್ದಾರೆ, ಮತಾಂತರಗಳಲ್ಲಿ ತೊಡಗಿದ್ದಾರೆ” ಎಂದು ಆರೋಪಿಸಿದರು.

ಹಲವಾರು ಬಲಪಂಥೀಯ ಖಾತೆಗಳಲ್ಲಿ, ಜೆಮಿಮಾ ಅವರು ತಮ್ಮ ತಂದೆ ಇವಾನ್ ರಾಡ್ರಿಗಸ್ ಅವರೊಂದಿಗೆ ಚರ್ಚ್ ಕಾರ್ಯಕ್ರಮಗಳಿಗೆ ಹಾಜರಾಗುತ್ತಿರುವ ಹಳೆಯ ವೀಡಿಯೊಗಳನ್ನು ಈಗ ವೈರಲ್ ಮಾಡಲಾಗುತ್ತಿದೆ. ಅವರು ಸಮುದಾಯ ಸಂಪರ್ಕದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

“ಜೆಮಿಮಾ ರಾಡ್ರಿಗಸ್ ಕ್ರಿಕೆಟ್ ಅನ್ನು ಸಾಮೂಹಿಕ ಮತಾಂತರಕ್ಕೆ ಸಾಧನವಾಗಿ ಬಳಸಿದ್ದಾರೆ. ಧಾರ್ಮಿಕ ಮತಾಂತರಕ್ಕಾಗಿ ಅಂತಹ ನಾಟಕ ಮಾಡಿದ ಒಬ್ಬ ಭಾರತೀಯನನ್ನು ನನಗೆ ತೋರಿಸಿ” ಎಂದು ಒಬ್ಬ ಬಳಕೆದಾರರು ಬರೆದಿದ್ದಾರೆ. ಮತ್ತೊಬ್ಬರು ಅವರನ್ನು ‘ಪಾಕಿಸ್ತಾನಿ ಕ್ರಿಕೆಟಿಗ ಮೊಹಮ್ಮದ್ ರಿಜ್ವಾನ್ ಅವರ  ಪ್ರತಿ’ ಎಂದು ಕರೆದು ಅಪಹಾಸ್ಯ ಮಾಡಿದ್ದಾರೆ. ಹಿಂದೂ ಆಟಗಾರರು ವಿಜಯಗಳ ನಂತರ ‘ಭಗವಾನ್ ಅಥವಾ ಭಗವದ್ಗೀತೆಯನ್ನು ಎಂದಿಗೂ ಪ್ರಾರ್ಥಿಸುವುದಿಲ್ಲ’ ಎಂದು ಆರೋಪಿಸಿದ್ದಾರೆ.

ಕೆಲವು ಬಳಕೆದಾರರು ರಾಡ್ರಿಗಸ್ ಕ್ರಿಶ್ಚಿಯನ್ ಪ್ರಾರ್ಥನಾ ಸೇವೆಯಲ್ಲಿ ಭಾಗವಹಿಸುತ್ತಿರುವ ಹಳೆಯ ವೀಡಿಯೊವನ್ನು ಸಹ ಹಂಚಿಕೊಂಡಿದ್ದಾರೆ. ಅವಹೇಳನಕಾರಿ ಶೀರ್ಷಿಕೆ ನೀಡಿದ್ದು, “ಅಕ್ಕಿ ಚೀಲ ಮತಾಂತರ” ದಂತಹ ನಿಂದನಾತ್ಮಕ ಪದ ಬಳಸಿದ್ದಾರೆ. ಭಾರತದ ವಿಶ್ವಕಪ್ ಗೆಲುವಿನ ನಂತರ ಕೆಲವರು ಅವರ ನಂಬಿಕೆಯನ್ನು ಅಪಹಾಸ್ಯ ಮಾಡಿದ್ದಾರೆ. ‘ಯೇಸು ಫೈನಲ್‌ನಲ್ಲಿ ಸಹಾಯ ಮಾಡಲು ಬರಲಿಲ್ಲ’ ಎಂದು ವ್ಯಂಗ್ಯವಾಡಿದ್ದಾರೆ.

ಆನ್‌ಲೈನ್ ಪ್ರತಿಕ್ರಿಯೆಯ ಹೊರತಾಗಿಯೂ, ರಾಡ್ರಿಗಸ್ ಅವರ ಆಟವು ಭಾರತದ ಅಭಿಯಾನದ ಪ್ರಮುಖ ಅಂಶಗಳಲ್ಲಿ ಒಂದಾಗಿದೆ. ಆಸ್ಟ್ರೇಲಿಯಾ ವಿರುದ್ಧದ ಅವರ ಅಜೇಯ ಶತಕವು ಭಾರತವನ್ನು ಫೈನಲ್‌ಗೆ ಕೊಂಡೊಯ್ಯುವಲ್ಲಿ ನಿರ್ಣಾಯಕ ಪಾತ್ರ ವಹಿಸಿತು, ಅಲ್ಲಿ ಅವರು ದಕ್ಷಿಣ ಆಫ್ರಿಕಾವನ್ನು 52 ರನ್‌ಗಳಿಂದ ಸೋಲಿಸಿ ತಮ್ಮ ಮೊದಲ ಐಸಿಸಿ ಮಹಿಳಾ ವಿಶ್ವಕಪ್ ಪ್ರಶಸ್ತಿಯನ್ನು ಗೆದ್ದರು.

299 ರನ್‌ಗಳ ಗುರಿಯನ್ನು ಬೆನ್ನಟ್ಟಿದ ದಕ್ಷಿಣ ಆಫ್ರಿಕಾ, ಲಾರಾ ವೋಲ್ವಾರ್ಡ್ ಅವರ ಹೋರಾಟದ ಶತಕದ ಹೊರತಾಗಿಯೂ 246 ರನ್‌ಗಳಿಗೆ ಆಲೌಟ್ ಆಯಿತು.

ಉತ್ತರ ಪ್ರದೇಶ| ದಲಿತ ಸಮುದಾಯದ ಕೃಷಿ ಕಾರ್ಮಿಕನನ್ನು ಥಳಿಸಿ ಕೊಂದ ಭೂಮಾಲೀಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನವದೆಹಲಿ| ಕೆಂಪು ಕೋಟೆ ಬಳಿ ಕಾರು ಸ್ಫೋಟ; 8 ಸಾವು, ಹಲವರಿಗೆ ಗಾಯ

ಸೋಮವಾರ ಸಂಜೆ ದೆಹಲಿಯ ಕೆಂಪು ಕೋಟೆ (ಲಾಲ್ ಕಿಲಾ) ಮೆಟ್ರೋ ನಿಲ್ದಾಣದ ಗೇಟ್ ಸಂಖ್ಯೆ 1 ರ ಬಳಿ ಕಾರಿನಲ್ಲಿ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದು, 24 ಜನರು...

ಡಿಜಿಟಲ್ ಡ್ಯಾಶ್‌ಬೋರ್ಡ್‌, 24X7 ಆಸ್ಪತ್ರೆ ಬೆಂಬಲ : ಪೋಕ್ಸೋ ಸಂತ್ರಸ್ತರ ಪುನರ್ವಸತಿಗೆ ಮಾದರಿ ಎಸ್‌ಒಪಿ ಬಿಡುಗಡೆ ಮಾಡಿದ ಹೈಕೋರ್ಟ್

ಲೈಂಗಿಕ ದೌರ್ಜನ್ಯಗಳಿಗೆ ಒಳಗಾದ ಅಪ್ರಾಪ್ತರ ರಕ್ಷಣೆ ಮತ್ತು ಪುನರ್ವಸತಿಗೆ ಒಂದು ಪ್ರಮಾಣಿತ ಕಾರ್ಯಾಚರಣಾ ಕಾರ್ಯವಿಧಾನ (Standard Operating Procedure-SOP) ರೂಪಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. "ಹಲವಾರು ಬಾರಿ ಈ ಸಂಬಂಧ ನಿರ್ದೇಶನಗಳನ್ನು...

ತಿರುಪತಿ ಪ್ರವೇಶ ಮಾರ್ಗದಲ್ಲಿ ಮಾಂಸಾಹಾರ ಸೇವನೆ; ಇಬ್ಬರು ನೌಕರರನ್ನು ವಜಾಗೊಳಿಸಿದ ಟಿಟಿಡಿ

ತಿರುಪತಿ ಗಿರಿಯ ದೇವಾಲಯದ ಪ್ರವೇಶ ದ್ವಾರವಾದ ಅಲಿಪಿರಿ ಬಳಿ ಮಾಂಸಾಹಾರ ಸೇವಿಸುತ್ತಿದ್ದಾರೆಂದು ಆರೋಪಿಸಲಾದ ವೀಡಿಯೊ ಕಾಣಿಸಿಕೊಂಡ ನಂತರ ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಇಬ್ಬರು ಹೊರಗುತ್ತಿಗೆ ನೌಕರರನ್ನು ವಜಾಗೊಳಿಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾದ...

ಬಿಹಾರ ವಿಧಾನಸಭೆ ಚುನಾವಣೆ| ಪ್ರಚಾರಕ್ಕೆ ಅಪ್ರಾಪ್ತ ಮಕ್ಕಳ ಬಳಕೆ; ಜಿಲ್ಲಾ ಮ್ಯಾಜಿಸ್ಟ್ರೇಟ್‌ಗೆ ಎನ್‌ಸಿಪಿಸಿಆರ್‌ ನೋಟಿಸ್

ಬಿಹಾರದ ಸಮಸ್ತಿಪುರ ಜಿಲ್ಲೆಯಲ್ಲಿ ನಡೆದ ಚುನಾವಣಾ ರ‍್ಯಾಲಿಯ ಸಂದರ್ಭದಲ್ಲಿ ಅಪ್ರಾಪ್ತ ವಯಸ್ಕನನ್ನು ವೇದಿಕೆಗೆ ಕರೆತರಲಾಗಿದೆ ಎಂಬ ವರದಿಗಳ ಬಗ್ಗೆ ಭಾರತದ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (ಎನ್‌ಸಿಪಿಸಿಆರ್‌) ಗಂಭೀರ ಕಳವಳ ವ್ಯಕ್ತಪಡಿಸಿದೆ....

ಬೆಂಗಳೂರು ಸೆಂಟ್ರಲ್ ಜೈಲಿನಲ್ಲಿ ಕೈದಿಗಳ ಮದ್ಯಪಾನ-ಮೊಬೈಲ್ ಬಳಕೆ; ಹಿರಿಯ ಜೈಲಾಧಿಕಾರಿಗಳ ಅಮಾನತು

ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕಾನೂನುಬಾಹಿರ ಚಟುವಟಿಕೆಗಳು, ಮೊಬೈಲ್ ಬಳಕೆ, ಮದ್ಯಪಾನ ಮತ್ತು ಹಣ ಕೊಟ್ಟವರಿಗೆ ವಿಐಪಿ ಉಪಚಾರದ ವೀಡಿಯೊಗಳು ವೈರಲ್ ಆದ ನಂತರ ಹಿರಿಯ ಜೈಲು ಅಧಿಕಾರಿಗಳನ್ನು ರಾಜ್ಯ ಸರ್ಕಾರ...

ಮಹಿಳೆಯರು ದೇಶದ ಅತಿ ದೊಡ್ಡ ಅಲ್ಪಸಂಖ್ಯಾತರು : ಸುಪ್ರೀಂ ಕೋರ್ಟ್ ಟಿಪ್ಪಣಿ

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇಕಡ 33ರಷ್ಟು ಮೀಸಲಾತಿ ಒದಗಿಸುವ ಸಂವಿಧಾನ (ನೂರ ಆರನೇ ತಿದ್ದುಪಡಿ) ಕಾಯ್ದೆ 2023 (ನಾರಿ ಶಕ್ತಿ ವಂದನ ಅಧಿನಿಯಂ)ರ ನಿಬಂಧನೆಯನ್ನು ಪ್ರಶ್ನಿಸಿ ಸಲ್ಲಿಸಲಾದ ರಿಟ್ ಅರ್ಜಿಗೆ...

ಎಲ್.ಕೆ ಅಡ್ವಾಣಿಯನ್ನು ಹಾಡಿ ಹೊಗಳಿದ ಶಶಿ ತರೂರ್ : ಅಂತರ ಕಾಯ್ದುಕೊಂಡ ಕಾಂಗ್ರೆಸ್

ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ ಅವರನ್ನು 'ನಿಜವಾದ ಮುತ್ಸದ್ದಿ' ಎಂದು ಬಣ್ಣಿಸಿದ ಪಕ್ಷದ ಸಂಸದ ಶಶಿ ತರೂರ್ ಅವರ ಸಾಮಾಜಿಕ ಮಾಧ್ಯಮ ಪೋಸ್ಟ್‌ನಿಂದ ಕಾಂಗ್ರೆಸ್ ಅಂತರ...

ಮಧ್ಯಪ್ರದೇಶ| ‘ನನ್ನ ಜೊತೆ ಮದ್ಯಪಾನ ಮಾಡುವ ಹಕ್ಕು ನಿನಗಿಲ್ಲ..’; ಎಂದು ದಲಿತ ಯುವಕನಿಗೆ ಚಾಕುವಿನಿಂದ ಇರಿದ ವ್ಯಕ್ತಿ

ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಜಾತಿ ಆಧಾರಿತ ಹಿಂಸಾಚಾರದ ಒಂದು ಆತಂಕಕಾರಿ ಪ್ರಕರಣ ವರದಿಯಾಗಿದ್ದು, ಇಬ್ಬರು ಸ್ನೇಹಿತರ ನಡುವೆ ಕುಡಿದು ನಡೆದ ಜಗಳ ಚಾಕುವಿನಿಂದ ಹಲ್ಲೆಗೆ ಇರಿದ ಹಂತಕ್ಕೆ ತಲುಪಿದೆ. ಪೊಲೀಸರ ಪ್ರಕಾರ, ಮಹಾವೀರ್ ಕಾಲೋನಿಯ ನಿವಾಸಿಗಳಾದ...

‘ಆರ್‌ಎಸ್‌ಎಸ್ ನಮ್ಮ ರಾಷ್ಟ್ರಧ್ವಜಕ್ಕೆ ಅಗೌರವ ತೋರಿ 100 ವರ್ಷ’: ಪ್ರಿಯಾಂಕ್ ಖರ್ಗೆ ಆರೋಪ

ಬೆಂಗಳೂರು: 'ಇತಿಹಾಸವು ಆರ್‌ಎಸ್‌ಎಸ್ ದೇಶಕ್ಕೆ ಬಗೆದ ದ್ರೋಹದ ಉದಾಹರಣೆಗಳಿಂದ ತುಂಬಿಕೊಂಡಿದೆ. ಇಡೀ ಬಿಜೆಪಿ ವ್ಯವಸ್ಥೆ ಎಷ್ಟೇ ಪ್ರಯತ್ನಿಸಿದ್ದರೂ ಆರ್‌ಎಸ್‌ಎಸ್‌ನ ಸಂವಿಧಾನ ವಿರೋಧಿ ಚರಿತ್ರೆಯನ್ನು ಎಂದಿಗೂ ಮರೆಮಾಚಲು ಸಾಧ್ಯವಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...

ಆರ್‌ಎಸ್‌ಎಸ್‌ ನೋಂದಣಿ ಮಾಡಿಕೊಂಡಿಲ್ಲ ಏಕೆ? ಒತ್ತಡಕ್ಕೆ ಮಣಿದು ಉತ್ತರ ಕೊಟ್ಟ ಭಾಗವತ್

ರಾಷ್ಟ್ರೀಯ ಸ್ವಯಂ ಸೇವಕ ಸಂಘ ( ಆರ್‌ಎಸ್‌ಎಸ್‌) ನೋಂದಣಿ ಏಕೆ ಮಾಡಿಕೊಂಡಿಲ್ಲ? ಎಂಬ ಪ್ರಶ್ನೆಯ ಸುತ್ತ ಚರ್ಚೆಗಳು ಇತ್ತೀಚೆಗೆ ಕಾವು ಪಡೆದುಕೊಂಡಿವೆ. ಪರಿಣಾಮ, ಸಾಮಾನ್ಯ ಜನರೂ ಕೂಡ ಆರ್‌ಎಸ್‌ಎಸ್‌ ಭಾರತೀಯ ಕಾನೂನಿನಡಿ ನೋಂದಣಿ...