Homeಎಲೆಮರೆಜೀತಕ್ಕಿದ್ದ ಜೇನುಕುರುಬರ ಸೋಮಣ್ಣರ ಪಾರಂಪರಿಕ ಜ್ಞಾನದ ಕಣಜ ಕಂಡರೆ ಬೆರಗಾಗುತ್ತೀರಿ!

ಜೀತಕ್ಕಿದ್ದ ಜೇನುಕುರುಬರ ಸೋಮಣ್ಣರ ಪಾರಂಪರಿಕ ಜ್ಞಾನದ ಕಣಜ ಕಂಡರೆ ಬೆರಗಾಗುತ್ತೀರಿ!

ಸೋಮಣ್ಣನಿಗೆ 2016 ರಲ್ಲಿ ಮೊದಲಪಟ್ಟಿಯಲ್ಲಿ ರಾಜ್ಯೋತ್ಸವ ಪ್ರಶಸ್ರಿ ಘೋಷಣೆಯಾಗಿ, ಎರಡನೆ ಪಟ್ಟಿಯಲ್ಲಿ ಕೈಬಿಡಲಾಗಿತ್ತು. ಹೀಗಾಗಿ ಜನಪರ ಚಿಂತಕರು ಸೋಮಣ್ಣನ ಹಾಡಿಗೆ ಹೋಗಿ `ಜನರಾಜ್ಯೋತ್ಸವ’ಪ್ರಶಸ್ತಿ ಪ್ರದಾನ ಮಾಡಿದ್ದರು.

- Advertisement -
- Advertisement -

ಎಲೆಮರೆ – 9

ಅರುಣ್ ಜೋಳದಕೂಡ್ಲಿಗಿ

ಹೆಗ್ಗಡದೇವನಕೋಟೆ ಸಮೀಪದ ಮೊತ್ತಹಾಡಿ ಜೇನುಕುರುಬರ ಹಾಡಿ. ಅಲ್ಲಿ ತನ್ನದೇ ಸಮುದಾಯಕ್ಕಾಗಿ ಹೋರಾಟ ರೂಪಿಸಿದ, ಬುಡಕಟ್ಟು ಪರಂಪರೆಯ ಅಪಾರ ಜ್ಞಾನ ಹೊಂದಿದ ಸೋಮಣ್ಣ ಇಂದಿಗೂ ತನ್ನ ಸಮುದಾಯದ ಏಳಿಗೆಗಾಗಿ ದುಡಿಯುತ್ತಿದ್ದಾರೆ. ಜೇನುಕುರುಬರ ಸೋಮಣ್ಣನ ಬದುಕಿನ ಪಯಣ ತ್ರಾಸದಾಯಕವಾದದ್ದು. 1957 ರಲ್ಲಿ ಜನಿಸಿದ ಸೋಮಣ್ಣ ಸಾಂಪ್ರದಾಯಕ ಶಿಕ್ಷಣ ಪಡೆಯದೆ, ಮನೆಯನ್ನು ಮುತ್ತಿದ್ದ ಬಡತನದ ಬೆಂಕಿಯಲ್ಲಿ ಅರಳಿ ಬಂದದ್ದೇ ಒಂದು ಸಾಹಸ. ತಂದೆ ಕುನ್ನಯ್ಯನಿಗಿದ್ದ ಪಾರಂಪರಿಕ ಜ್ಞಾನವನ್ನು ಜತನದಿಂದ ಕಲಿತ ಸೋಮಣ್ಣ ಕಾಡುಬದುಕಿನ ಎಲ್ಲಾ ಬಗೆಯ ತಿಳಿವು, ಅರಿವುಗಳನ್ನು ಪಡೆಯುತ್ತಲೇ ಪಾರಂಪರಿಕ ಜ್ಞಾನದ ಕಣಜವಾದದ್ದೊಂದು ಸಾಹಸದ ಪಯಣ. ಬಡತನದ ಕಾರಣಕ್ಕೆ ಸ್ಥಳೀಯ ಜಮೀನ್ದಾರರಲ್ಲಿ ಜೀತಕ್ಕಿದ್ದ ಸೋಮಣ್ಣ 1976ರಲ್ಲಿ ಜೀತಕಾರ್ಮಿಕ ವ್ಯವಸ್ಥೆ (ನಿಷೇಧ) ಕಾಯ್ದೆ ಜಾರಿಗೆ ಬಂದಾಗ ಇದರಿಂದ ಮುಕ್ತಿ ಪಡೆದರು. ಆಗ ಸೋಮಣ್ಣಗೆ 19 ವರ್ಷ. ಸೋಮಣ್ಣನಿಗೆ ಸಿಕ್ಕ ಈ ಬಗೆಯ ವೈಯಕ್ತಿಕ ಮುಕ್ತಿಯು ಸಮುದಾಯದ ಮುಕ್ತಿಯೆಡೆಗೆ ಸೆಳೆಯಿತು. ತನ್ನ ಒಡನಾಡಿ ಬಂಧುಗಳಾದ ಬುಡಕಟ್ಟು ಸಮುದಾಯದ ಅಸಂಖ್ಯಾತ ಜನ ಸಂಕಷ್ಟದಲ್ಲಿರುವುದು ಅರಿವಿಗೆ ಬಂತು.

1972ರ ವನ್ಯಜೀವಿ ಸಂರಕ್ಷಣಾ ಕಾಯ್ದೆ ಜಾರಿಗೆ ಬಂದಾಗ, ತಮ್ಮ ಸುತ್ತಮುತ್ತಲಿನ ನೂರಾರು ಬುಡಕಟ್ಟು ಕಾಲನಿಗಳು ಸ್ಥಳಾಂತರಗೊಂಡು ಅನಾಥಪ್ರಜ್ಞೆಯಲ್ಲಿ ಬದುಕಿದ್ದನ್ನೂ, 1974ರಲ್ಲಿ ಕಬಿನಿ ಅಣೆಕಟ್ಟು ನಿರ್ಮಾಣ ಆರಂಭವಾದಾಗ, ದೊಡ್ಡ ಪ್ರಮಾಣದಲ್ಲಿ ಅರಣ್ಯಭೂಮಿ ನಾಶವಾದದ್ದನ್ನೂ ಸೋಮಣ್ಣ ಸ್ವತಃ ನೋಡಿದ್ದರು. ಇದರಿಂದ ಕೇವಲ ನೈಸರ್ಗಿಕ ಅರಣ್ಯ ಮಾತ್ರ ನಾಶವಾಗುವುದಲ್ಲ; ಬದಲಾಗಿ ಬುಡಕಟ್ಟು ಜನರ ಜೀವನ, ಸಂಸ್ಕೃತಿ ಹಾಗೂ ಜ್ಞಾನವೂ ನಾಶವಾಗುತ್ತದೆ ಎನ್ನುವುದನ್ನು ತನ್ನ ಸಮುದಾಯಕ್ಕೆ ಸೋಮಣ್ಣ ಮನವರಿಕೆ ಮಾಡಿಕೊಡತೊಡಗಿದರು.

ಇಂತಹ ಹಾದಿಯಲ್ಲಿ ಸೋಮಣ್ಣನಿಗೆ ತನ್ನವರಿಗೆ ಭೂಮಿ ಸಿಕ್ಕರೆ ಇನ್ನೊಬ್ಬರ ಆಶ್ರಯವಿಲ್ಲದೆ ಬದುಕುತ್ತಾರೆ ಎಂಬ ಕನಸು ಚಿಗುರೊಡೆಯಿತು. ಈ ಕನಸಿನ ಜಾಡುಹಿಡಿದು ಕಳೆದ ಮೂರ್ನಾಲ್ಕು ದಶಕಗಳಿಂದ ಸೋಮಣ್ಣ ಭೂರಹಿತ ಆದಿವಾಸಿಗಳನ್ನು ಒಗ್ಗೂಡಿಸಿದ್ದಾರೆ. ಅಂತೆಯೇ ಸ್ಥಳೀಯ ಚಳವಳಿಗಳ ಸಂಗಾತಿಗಳ ಜೊತೆಗೂಡಿ ಕೂಡುಹೋರಾಟ ಕಟ್ಟಿದ್ದಾರೆ. ಇದರ ಫಲವಾಗಿ ಕಟ್ಟಿದ ರಾಜ್ಯ ಮೂಲನಿವಾಸಿ ವೇದಿಕೆಯ ಅಧ್ಯಕ್ಷನಾಗಿ ಜನಪರ ಕಾರ್ಯಗಳಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದಾರೆ. ಇಂತಹ ನಿರಂತರ ಸಾಂಘಿಕ ಪ್ರಯತ್ನದಿಂದಾಗಿ ಆದಿವಾಸಿಗಳಿಗೆ ಸರಿಸುಮಾರು ಆರು ಸಾವಿರ ಎಕರೆ ಕೃಷಿ ಭೂಮಿ ಸಿಗುವಂತೆ ಮಾಡಿದ್ದಾರೆ. ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯ ನಾಗರಹೊಳೆ ಮತ್ತು ಕಾಕನಕೋಟೆ ಅರಣ್ಯ ಪ್ರದೇಶದಿಂದ ಒಕ್ಕಲೆದ್ದ ಆದಿವಾಸಿಗಳನ್ನು ಸೋಮಣ್ಣ ಸಂಘಟಿಸಿ, ಪುನರ್ವಸತಿಗಾಗಿ ಅನೇಕ ಚಳವಳಿಗಳನ್ನು ರೂಪಿಸಿದ್ದಾರೆ. ಹೀಗಾಗಿ ಆದಿವಾಸಿಗಳು ಆತಂಕಕ್ಕೆ ಒಳಗಾದಾಗಲೆಲ್ಲಾ ಅವರುಗಳು ಎದೆಗುಂದಿ ತತ್ತರಿಸಿದಾಗಲೆಲ್ಲಾ ಸೋಮಣ್ಣ ಆದಿವಾಸಿಗಳ ಎಂದೂ ಜತೆಗಾರನಾಗಿ ಶಕ್ತಿ ತುಂಬಿದ್ದಾರೆ.

`ಸೋಮಣ್ಣ ಆದಿವಾಸಿಗಳ ಅಖಂಡ ಪ್ರಜ್ಞೆ, ಹರಿತ ಮುನ್ನೋಟ, ಜಟಿಲ ಮನಸ್ಥಿತಿ ಮತ್ತು ತಪ್ತ ಅಂತರಾಳಗಳನ್ನು ಏಕೀಭವಿಸಿದಂತಿದ್ದಾನೆ. ಅರಣ್ಯಕ್ಕೆ ಸಂಬಂಧಿಸಿದ ಕಾನೂನುಗಳು ಇವರನ್ನು ದಿಕ್ಕಾಪಾಲಾಗಿಸಿವೆ. ಸ್ಥಳೀಯ ಅಧಿಕಾರಸ್ಥ ಸಮುದಾಯಗಳು, ಯಾವ ಒಳನೋಟಗಳು ಇಲ್ಲದ ಸರಕಾರಗಳು, ಎನ್‍ಜಿಓಗಳು ಯಾವೂ ಸೋಮಣ್ಣನ ತಾಯ್ನೆಲವನ್ನು ಆತನಿಗೆ ಉಳಿಸಿಕೊಟ್ಟಿಲ್ಲ’ ಎಂದು ಪ್ರೊ. ಎ.ಎಸ್.ಪ್ರಭಾಕರ್ ಅವರು ಹೇಳುತ್ತಾರೆ.

ಕಾಡುಬದುಕಿನ ಬಗ್ಗೆ ಸೋಮಣ್ಣನ ಮಾತುಗಳನ್ನು ಕೇಳಿಸಿಕೊಂಡರೆ, ಆತ ಆದಿವಾಸಿಗಳ ವಿಷಾದ ಮತ್ತು ಚಿಂತನೆಗಳ ಫಲವಾಗಿ ರೂಪುಗೊಂಡ ಅನುಭಾವಿಯಂತೆ ಕಾಣುತ್ತಾನೆ. ಸರಿಸುಮಾರು ಅರ್ಧ ಶತಮಾನದಿಂದ ಅರಣ್ಯ ಮತ್ತು ಆದಿವಾಸಿಗಳ ಮೇಲೆ ಕಣ್ಣೆದುರು ನಡೆದ ಮತ್ತು ನಡೆಯುತ್ತಲೇ ಇರುವ ‘ನಾಗರಿಕ’ ಜಗತ್ತಿನ ಕ್ರೌರ್ಯವನ್ನು ಆತ ತನ್ನ ಮುಗುಳ್ನಗೆಯಿಂದಲೇ ಎದುರಿಸಿದ್ದಾನೆ. ತನ್ನ ಮೂಲ ನೆಲೆ, ದೈವ, ತನ್ನ ಹಿರೀಕರ ಆತ್ಮಗಳು, ಒಡನಾಡಿದ್ದ ಮರ ಗಿಡ ಹೂವುಗಳು, ಸಹಜೀವನ ನಡೆಸಿದ್ದ ಕಾಡುಪ್ರಾಣಿಗಳು ಇವ್ಯಾವು ಈಗ ಸೋಮಣ್ಣನ ಜೊತೆಗಿಲ್ಲ. ಪ್ರಭುತ್ವ ಈತನನ್ನು ವಂಚಿಸಿದೆ. ದಿಕ್ಕಾಪಾಲಾದ ಆದಿವಾಸಿಗಳು ಕಾಡಂಚಿನ ಪುಟ್ಟ ಜಾಗಗಳಲ್ಲಿ, ನಗರಗಳ ಕೊಳಗೇರಿಗಳಲ್ಲಿ ಬದುಕುತ್ತಿದ್ದಾರೆ. ಒಕ್ಕಲೇಳುವಾಗ ಪ್ರಭುತ್ವ ಕೊಟ್ಟ ಭರವಸೆಗಳು ಭ್ರಮೆಗಳಾಗಿ ಹೋಗಿವೆ. ಪ್ರಾಣಿಗಳೂ ವಾಸಿಸಲು ಯೋಗ್ಯವಾಗಿಲ್ಲದ ಸ್ಥಳಗಳಲ್ಲಿ ಆದಿವಾಸಿಗಳು ಬದುಕುತ್ತಿದ್ದಾರೆ. ಆದಿವಾಸಿಗಳಿಂದ ಎಲ್ಲವನ್ನೂ ಕಿತ್ತುಕೊಂಡು ಪ್ರಭುತ್ವ ಈ ಸಮುದಾಯಗಳನ್ನು ವಂಚಿಸುತ್ತಲೇ ಬಂದಿದೆ. ಇಂದೂ ಸಹ ರಾಜ್ಯೋತ್ಸವ ಪ್ರಶಸ್ತಿಯನ್ನು ಕೊಟ್ಟಂತೆ ಮಾಡಿ ಸೋಮಣ್ಣನಿಗೆ ವಂಚನೆ ಮಾಡಲಾಗಿದೆ. ಇದು ಕೇವಲ ಸೋಮಣ್ಣನಿಗೆ ಆದ ವಂಚನೆಯಲ್ಲ. ಕರ್ನಾಟಕದ ಆದಿವಾಸಿ ಸಮುದಾಯಗಳಿಗೆ ಆದ ವಂಚನೆಯೇ ಆಗಿದೆ.

ಸೋಮಣ್ಣನಿಗೆ 2016 ರಲ್ಲಿ ಮೊದಲಪಟ್ಟಿಯಲ್ಲಿ ರಾಜ್ಯೋತ್ಸವ ಪ್ರಶಸ್ರಿ ಘೋಷಣೆಯಾಗಿ, ಎರಡನೆ ಪಟ್ಟಿಯಲ್ಲಿ ಕೈಬಿಡಲಾಗಿತ್ತು. ಹೀಗಾಗಿ ಜನಪರ ಚಿಂತಕರು ಸೋಮಣ್ಣನ ಹಾಡಿಗೆ ಹೋಗಿ `ಜನರಾಜ್ಯೋತ್ಸವ’ಪ್ರಶಸ್ತಿ ಪ್ರದಾನ ಮಾಡಿದ್ದರು. ಆಗ ಪ್ರಶಸ್ತಿ ಪ್ರದಾನ ಮಾಡಿದ ದೇವನೂರ ಮಹಾದೇವ `ಇವತ್ತು ಅಂತಃಕರಣದ ಧ್ವನಿ ಮಾತಾಗಿದೆ, ಕರುಳಬಳ್ಳಿ ಸ್ಪಂದಿಸಿದೆ, ಅಂತಃಕರಣದ ಮಿಡಿತಕ್ಕೆ ಬೆಲೆ ಕಟ್ಟಲಾಗದು. ಮೂಲನಿವಾಸಿಗಳ ಉಸಿರಲ್ಲಿ ಮನುಕುಲದ ಉಸಿರಾಟ ಇದೆ, ಇಂತಹ ಬದುಕು ನಾಗರಿಕ ಜಗತ್ತಿನ ದಬ್ಬಾಳಿಕೆಗೆ ನಲುಗಿ ತತ್ತರಿಸಿದೆ. ಮೂಲನಿವಾಸಿಗಳು ಈ ನೆಲದ ಮಾಜಿ ಒಡೆಯರು. ಆದ್ದರಿಂದ ಆದಿವಾಸಿಗಳ ಇಂತಹ ಸಂಗತಿಗಳನ್ನು ಹುಡುಕಿ ಮತ್ತೆ ಬೀಜ ಬಿತ್ತಬೇಕಾಗಿದೆ. ಈ ಕಾರ್ಯಕ್ರಮವನ್ನು ಆಯೋಜನೆ ಮಾಡಿದ ಅಂತಃಕರಣದ ಸ್ನೇಹಿತರಂತ ನೂರು ಜನ ಈ ರಾಜ್ಯದಲ್ಕಿ ಸಿಕ್ಕಿದರೆ ಸಾಕು ನಾವು ನಮ್ಮ ಕನಸುಗಳನ್ನು ನನಸು ಮಾಡಬಹುದು’ ಎಂದಿದ್ದರು.

ಪ್ರಶಸ್ತಿ ಸ್ವೀಕರಿಸಿದ ಸೋಮಣ್ಣ `ವಿಶಾಲ ಮನಸಿನ ಜನರು ಇವತ್ತು ನನಗೆ ಪ್ರಶಸ್ತಿ ಕೊಟ್ಟಿದ್ದೀರ, ಸರ್ಕಾರ ಪ್ರಶಸ್ತಿ ಕೊಟ್ಟಿದ್ರೂ ಕೂಡ ಇಷ್ಟೊಂದು ಸಂತೋಷ ಆಗ್ತಿರ್ಲಿಲ್ಲ. ನೀವು ಕೊಟ್ಟಿರೋ ಪ್ರಶಸ್ತಿ ಸುಪ್ರೀಂಕೋರ್ಟ್ ತೀರ್ಪಿಗಿಂತಲೂ ದೊಡ್ಡದು. ಕಟ್ಟಕಡೆಯ ವ್ಯಕ್ತಿಯನ್ನು ಗುರುತಿಸಿ, ರಾಜ್ಯದ ಮೂಲೆಮೂಲೆಯ ಜನರು ಬಂದು ಜಾತಿಧರ್ಮದ ಭೇದವಿಲ್ಲದೆ ನನ್ನನ್ನು ಕಂಡಿದಿರಲ್ವಾ ಇದಕ್ಕಿಂತ ಹೆಚ್ಚು ನನಗೇನು ಬೇಕು? ಎನ್ನುತ್ತಾ ಭಾವುಕರಾದರು. ಸೋಮಣ್ಣನಂತಹವರ ಹಕ್ಕೊತ್ತಾಯದ ಹೋರಾಟಗಳಿಗೆ ಜನಪರ ಚಳವಳಿಗಾರರು, ಅಧ್ಯಯನಕಾರರು, ಪತ್ರಕರ್ತರು, ಚಿಂತಕರು ಜೊತೆಯಾಗಿ ಬೆಂಬಲಿಸಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....