Homeಎಲೆಮರೆಜೀತಕ್ಕಿದ್ದ ಜೇನುಕುರುಬರ ಸೋಮಣ್ಣರ ಪಾರಂಪರಿಕ ಜ್ಞಾನದ ಕಣಜ ಕಂಡರೆ ಬೆರಗಾಗುತ್ತೀರಿ!

ಜೀತಕ್ಕಿದ್ದ ಜೇನುಕುರುಬರ ಸೋಮಣ್ಣರ ಪಾರಂಪರಿಕ ಜ್ಞಾನದ ಕಣಜ ಕಂಡರೆ ಬೆರಗಾಗುತ್ತೀರಿ!

ಸೋಮಣ್ಣನಿಗೆ 2016 ರಲ್ಲಿ ಮೊದಲಪಟ್ಟಿಯಲ್ಲಿ ರಾಜ್ಯೋತ್ಸವ ಪ್ರಶಸ್ರಿ ಘೋಷಣೆಯಾಗಿ, ಎರಡನೆ ಪಟ್ಟಿಯಲ್ಲಿ ಕೈಬಿಡಲಾಗಿತ್ತು. ಹೀಗಾಗಿ ಜನಪರ ಚಿಂತಕರು ಸೋಮಣ್ಣನ ಹಾಡಿಗೆ ಹೋಗಿ `ಜನರಾಜ್ಯೋತ್ಸವ’ಪ್ರಶಸ್ತಿ ಪ್ರದಾನ ಮಾಡಿದ್ದರು.

- Advertisement -
- Advertisement -

ಎಲೆಮರೆ – 9

ಅರುಣ್ ಜೋಳದಕೂಡ್ಲಿಗಿ

ಹೆಗ್ಗಡದೇವನಕೋಟೆ ಸಮೀಪದ ಮೊತ್ತಹಾಡಿ ಜೇನುಕುರುಬರ ಹಾಡಿ. ಅಲ್ಲಿ ತನ್ನದೇ ಸಮುದಾಯಕ್ಕಾಗಿ ಹೋರಾಟ ರೂಪಿಸಿದ, ಬುಡಕಟ್ಟು ಪರಂಪರೆಯ ಅಪಾರ ಜ್ಞಾನ ಹೊಂದಿದ ಸೋಮಣ್ಣ ಇಂದಿಗೂ ತನ್ನ ಸಮುದಾಯದ ಏಳಿಗೆಗಾಗಿ ದುಡಿಯುತ್ತಿದ್ದಾರೆ. ಜೇನುಕುರುಬರ ಸೋಮಣ್ಣನ ಬದುಕಿನ ಪಯಣ ತ್ರಾಸದಾಯಕವಾದದ್ದು. 1957 ರಲ್ಲಿ ಜನಿಸಿದ ಸೋಮಣ್ಣ ಸಾಂಪ್ರದಾಯಕ ಶಿಕ್ಷಣ ಪಡೆಯದೆ, ಮನೆಯನ್ನು ಮುತ್ತಿದ್ದ ಬಡತನದ ಬೆಂಕಿಯಲ್ಲಿ ಅರಳಿ ಬಂದದ್ದೇ ಒಂದು ಸಾಹಸ. ತಂದೆ ಕುನ್ನಯ್ಯನಿಗಿದ್ದ ಪಾರಂಪರಿಕ ಜ್ಞಾನವನ್ನು ಜತನದಿಂದ ಕಲಿತ ಸೋಮಣ್ಣ ಕಾಡುಬದುಕಿನ ಎಲ್ಲಾ ಬಗೆಯ ತಿಳಿವು, ಅರಿವುಗಳನ್ನು ಪಡೆಯುತ್ತಲೇ ಪಾರಂಪರಿಕ ಜ್ಞಾನದ ಕಣಜವಾದದ್ದೊಂದು ಸಾಹಸದ ಪಯಣ. ಬಡತನದ ಕಾರಣಕ್ಕೆ ಸ್ಥಳೀಯ ಜಮೀನ್ದಾರರಲ್ಲಿ ಜೀತಕ್ಕಿದ್ದ ಸೋಮಣ್ಣ 1976ರಲ್ಲಿ ಜೀತಕಾರ್ಮಿಕ ವ್ಯವಸ್ಥೆ (ನಿಷೇಧ) ಕಾಯ್ದೆ ಜಾರಿಗೆ ಬಂದಾಗ ಇದರಿಂದ ಮುಕ್ತಿ ಪಡೆದರು. ಆಗ ಸೋಮಣ್ಣಗೆ 19 ವರ್ಷ. ಸೋಮಣ್ಣನಿಗೆ ಸಿಕ್ಕ ಈ ಬಗೆಯ ವೈಯಕ್ತಿಕ ಮುಕ್ತಿಯು ಸಮುದಾಯದ ಮುಕ್ತಿಯೆಡೆಗೆ ಸೆಳೆಯಿತು. ತನ್ನ ಒಡನಾಡಿ ಬಂಧುಗಳಾದ ಬುಡಕಟ್ಟು ಸಮುದಾಯದ ಅಸಂಖ್ಯಾತ ಜನ ಸಂಕಷ್ಟದಲ್ಲಿರುವುದು ಅರಿವಿಗೆ ಬಂತು.

1972ರ ವನ್ಯಜೀವಿ ಸಂರಕ್ಷಣಾ ಕಾಯ್ದೆ ಜಾರಿಗೆ ಬಂದಾಗ, ತಮ್ಮ ಸುತ್ತಮುತ್ತಲಿನ ನೂರಾರು ಬುಡಕಟ್ಟು ಕಾಲನಿಗಳು ಸ್ಥಳಾಂತರಗೊಂಡು ಅನಾಥಪ್ರಜ್ಞೆಯಲ್ಲಿ ಬದುಕಿದ್ದನ್ನೂ, 1974ರಲ್ಲಿ ಕಬಿನಿ ಅಣೆಕಟ್ಟು ನಿರ್ಮಾಣ ಆರಂಭವಾದಾಗ, ದೊಡ್ಡ ಪ್ರಮಾಣದಲ್ಲಿ ಅರಣ್ಯಭೂಮಿ ನಾಶವಾದದ್ದನ್ನೂ ಸೋಮಣ್ಣ ಸ್ವತಃ ನೋಡಿದ್ದರು. ಇದರಿಂದ ಕೇವಲ ನೈಸರ್ಗಿಕ ಅರಣ್ಯ ಮಾತ್ರ ನಾಶವಾಗುವುದಲ್ಲ; ಬದಲಾಗಿ ಬುಡಕಟ್ಟು ಜನರ ಜೀವನ, ಸಂಸ್ಕೃತಿ ಹಾಗೂ ಜ್ಞಾನವೂ ನಾಶವಾಗುತ್ತದೆ ಎನ್ನುವುದನ್ನು ತನ್ನ ಸಮುದಾಯಕ್ಕೆ ಸೋಮಣ್ಣ ಮನವರಿಕೆ ಮಾಡಿಕೊಡತೊಡಗಿದರು.

ಇಂತಹ ಹಾದಿಯಲ್ಲಿ ಸೋಮಣ್ಣನಿಗೆ ತನ್ನವರಿಗೆ ಭೂಮಿ ಸಿಕ್ಕರೆ ಇನ್ನೊಬ್ಬರ ಆಶ್ರಯವಿಲ್ಲದೆ ಬದುಕುತ್ತಾರೆ ಎಂಬ ಕನಸು ಚಿಗುರೊಡೆಯಿತು. ಈ ಕನಸಿನ ಜಾಡುಹಿಡಿದು ಕಳೆದ ಮೂರ್ನಾಲ್ಕು ದಶಕಗಳಿಂದ ಸೋಮಣ್ಣ ಭೂರಹಿತ ಆದಿವಾಸಿಗಳನ್ನು ಒಗ್ಗೂಡಿಸಿದ್ದಾರೆ. ಅಂತೆಯೇ ಸ್ಥಳೀಯ ಚಳವಳಿಗಳ ಸಂಗಾತಿಗಳ ಜೊತೆಗೂಡಿ ಕೂಡುಹೋರಾಟ ಕಟ್ಟಿದ್ದಾರೆ. ಇದರ ಫಲವಾಗಿ ಕಟ್ಟಿದ ರಾಜ್ಯ ಮೂಲನಿವಾಸಿ ವೇದಿಕೆಯ ಅಧ್ಯಕ್ಷನಾಗಿ ಜನಪರ ಕಾರ್ಯಗಳಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದಾರೆ. ಇಂತಹ ನಿರಂತರ ಸಾಂಘಿಕ ಪ್ರಯತ್ನದಿಂದಾಗಿ ಆದಿವಾಸಿಗಳಿಗೆ ಸರಿಸುಮಾರು ಆರು ಸಾವಿರ ಎಕರೆ ಕೃಷಿ ಭೂಮಿ ಸಿಗುವಂತೆ ಮಾಡಿದ್ದಾರೆ. ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯ ನಾಗರಹೊಳೆ ಮತ್ತು ಕಾಕನಕೋಟೆ ಅರಣ್ಯ ಪ್ರದೇಶದಿಂದ ಒಕ್ಕಲೆದ್ದ ಆದಿವಾಸಿಗಳನ್ನು ಸೋಮಣ್ಣ ಸಂಘಟಿಸಿ, ಪುನರ್ವಸತಿಗಾಗಿ ಅನೇಕ ಚಳವಳಿಗಳನ್ನು ರೂಪಿಸಿದ್ದಾರೆ. ಹೀಗಾಗಿ ಆದಿವಾಸಿಗಳು ಆತಂಕಕ್ಕೆ ಒಳಗಾದಾಗಲೆಲ್ಲಾ ಅವರುಗಳು ಎದೆಗುಂದಿ ತತ್ತರಿಸಿದಾಗಲೆಲ್ಲಾ ಸೋಮಣ್ಣ ಆದಿವಾಸಿಗಳ ಎಂದೂ ಜತೆಗಾರನಾಗಿ ಶಕ್ತಿ ತುಂಬಿದ್ದಾರೆ.

`ಸೋಮಣ್ಣ ಆದಿವಾಸಿಗಳ ಅಖಂಡ ಪ್ರಜ್ಞೆ, ಹರಿತ ಮುನ್ನೋಟ, ಜಟಿಲ ಮನಸ್ಥಿತಿ ಮತ್ತು ತಪ್ತ ಅಂತರಾಳಗಳನ್ನು ಏಕೀಭವಿಸಿದಂತಿದ್ದಾನೆ. ಅರಣ್ಯಕ್ಕೆ ಸಂಬಂಧಿಸಿದ ಕಾನೂನುಗಳು ಇವರನ್ನು ದಿಕ್ಕಾಪಾಲಾಗಿಸಿವೆ. ಸ್ಥಳೀಯ ಅಧಿಕಾರಸ್ಥ ಸಮುದಾಯಗಳು, ಯಾವ ಒಳನೋಟಗಳು ಇಲ್ಲದ ಸರಕಾರಗಳು, ಎನ್‍ಜಿಓಗಳು ಯಾವೂ ಸೋಮಣ್ಣನ ತಾಯ್ನೆಲವನ್ನು ಆತನಿಗೆ ಉಳಿಸಿಕೊಟ್ಟಿಲ್ಲ’ ಎಂದು ಪ್ರೊ. ಎ.ಎಸ್.ಪ್ರಭಾಕರ್ ಅವರು ಹೇಳುತ್ತಾರೆ.

ಕಾಡುಬದುಕಿನ ಬಗ್ಗೆ ಸೋಮಣ್ಣನ ಮಾತುಗಳನ್ನು ಕೇಳಿಸಿಕೊಂಡರೆ, ಆತ ಆದಿವಾಸಿಗಳ ವಿಷಾದ ಮತ್ತು ಚಿಂತನೆಗಳ ಫಲವಾಗಿ ರೂಪುಗೊಂಡ ಅನುಭಾವಿಯಂತೆ ಕಾಣುತ್ತಾನೆ. ಸರಿಸುಮಾರು ಅರ್ಧ ಶತಮಾನದಿಂದ ಅರಣ್ಯ ಮತ್ತು ಆದಿವಾಸಿಗಳ ಮೇಲೆ ಕಣ್ಣೆದುರು ನಡೆದ ಮತ್ತು ನಡೆಯುತ್ತಲೇ ಇರುವ ‘ನಾಗರಿಕ’ ಜಗತ್ತಿನ ಕ್ರೌರ್ಯವನ್ನು ಆತ ತನ್ನ ಮುಗುಳ್ನಗೆಯಿಂದಲೇ ಎದುರಿಸಿದ್ದಾನೆ. ತನ್ನ ಮೂಲ ನೆಲೆ, ದೈವ, ತನ್ನ ಹಿರೀಕರ ಆತ್ಮಗಳು, ಒಡನಾಡಿದ್ದ ಮರ ಗಿಡ ಹೂವುಗಳು, ಸಹಜೀವನ ನಡೆಸಿದ್ದ ಕಾಡುಪ್ರಾಣಿಗಳು ಇವ್ಯಾವು ಈಗ ಸೋಮಣ್ಣನ ಜೊತೆಗಿಲ್ಲ. ಪ್ರಭುತ್ವ ಈತನನ್ನು ವಂಚಿಸಿದೆ. ದಿಕ್ಕಾಪಾಲಾದ ಆದಿವಾಸಿಗಳು ಕಾಡಂಚಿನ ಪುಟ್ಟ ಜಾಗಗಳಲ್ಲಿ, ನಗರಗಳ ಕೊಳಗೇರಿಗಳಲ್ಲಿ ಬದುಕುತ್ತಿದ್ದಾರೆ. ಒಕ್ಕಲೇಳುವಾಗ ಪ್ರಭುತ್ವ ಕೊಟ್ಟ ಭರವಸೆಗಳು ಭ್ರಮೆಗಳಾಗಿ ಹೋಗಿವೆ. ಪ್ರಾಣಿಗಳೂ ವಾಸಿಸಲು ಯೋಗ್ಯವಾಗಿಲ್ಲದ ಸ್ಥಳಗಳಲ್ಲಿ ಆದಿವಾಸಿಗಳು ಬದುಕುತ್ತಿದ್ದಾರೆ. ಆದಿವಾಸಿಗಳಿಂದ ಎಲ್ಲವನ್ನೂ ಕಿತ್ತುಕೊಂಡು ಪ್ರಭುತ್ವ ಈ ಸಮುದಾಯಗಳನ್ನು ವಂಚಿಸುತ್ತಲೇ ಬಂದಿದೆ. ಇಂದೂ ಸಹ ರಾಜ್ಯೋತ್ಸವ ಪ್ರಶಸ್ತಿಯನ್ನು ಕೊಟ್ಟಂತೆ ಮಾಡಿ ಸೋಮಣ್ಣನಿಗೆ ವಂಚನೆ ಮಾಡಲಾಗಿದೆ. ಇದು ಕೇವಲ ಸೋಮಣ್ಣನಿಗೆ ಆದ ವಂಚನೆಯಲ್ಲ. ಕರ್ನಾಟಕದ ಆದಿವಾಸಿ ಸಮುದಾಯಗಳಿಗೆ ಆದ ವಂಚನೆಯೇ ಆಗಿದೆ.

ಸೋಮಣ್ಣನಿಗೆ 2016 ರಲ್ಲಿ ಮೊದಲಪಟ್ಟಿಯಲ್ಲಿ ರಾಜ್ಯೋತ್ಸವ ಪ್ರಶಸ್ರಿ ಘೋಷಣೆಯಾಗಿ, ಎರಡನೆ ಪಟ್ಟಿಯಲ್ಲಿ ಕೈಬಿಡಲಾಗಿತ್ತು. ಹೀಗಾಗಿ ಜನಪರ ಚಿಂತಕರು ಸೋಮಣ್ಣನ ಹಾಡಿಗೆ ಹೋಗಿ `ಜನರಾಜ್ಯೋತ್ಸವ’ಪ್ರಶಸ್ತಿ ಪ್ರದಾನ ಮಾಡಿದ್ದರು. ಆಗ ಪ್ರಶಸ್ತಿ ಪ್ರದಾನ ಮಾಡಿದ ದೇವನೂರ ಮಹಾದೇವ `ಇವತ್ತು ಅಂತಃಕರಣದ ಧ್ವನಿ ಮಾತಾಗಿದೆ, ಕರುಳಬಳ್ಳಿ ಸ್ಪಂದಿಸಿದೆ, ಅಂತಃಕರಣದ ಮಿಡಿತಕ್ಕೆ ಬೆಲೆ ಕಟ್ಟಲಾಗದು. ಮೂಲನಿವಾಸಿಗಳ ಉಸಿರಲ್ಲಿ ಮನುಕುಲದ ಉಸಿರಾಟ ಇದೆ, ಇಂತಹ ಬದುಕು ನಾಗರಿಕ ಜಗತ್ತಿನ ದಬ್ಬಾಳಿಕೆಗೆ ನಲುಗಿ ತತ್ತರಿಸಿದೆ. ಮೂಲನಿವಾಸಿಗಳು ಈ ನೆಲದ ಮಾಜಿ ಒಡೆಯರು. ಆದ್ದರಿಂದ ಆದಿವಾಸಿಗಳ ಇಂತಹ ಸಂಗತಿಗಳನ್ನು ಹುಡುಕಿ ಮತ್ತೆ ಬೀಜ ಬಿತ್ತಬೇಕಾಗಿದೆ. ಈ ಕಾರ್ಯಕ್ರಮವನ್ನು ಆಯೋಜನೆ ಮಾಡಿದ ಅಂತಃಕರಣದ ಸ್ನೇಹಿತರಂತ ನೂರು ಜನ ಈ ರಾಜ್ಯದಲ್ಕಿ ಸಿಕ್ಕಿದರೆ ಸಾಕು ನಾವು ನಮ್ಮ ಕನಸುಗಳನ್ನು ನನಸು ಮಾಡಬಹುದು’ ಎಂದಿದ್ದರು.

ಪ್ರಶಸ್ತಿ ಸ್ವೀಕರಿಸಿದ ಸೋಮಣ್ಣ `ವಿಶಾಲ ಮನಸಿನ ಜನರು ಇವತ್ತು ನನಗೆ ಪ್ರಶಸ್ತಿ ಕೊಟ್ಟಿದ್ದೀರ, ಸರ್ಕಾರ ಪ್ರಶಸ್ತಿ ಕೊಟ್ಟಿದ್ರೂ ಕೂಡ ಇಷ್ಟೊಂದು ಸಂತೋಷ ಆಗ್ತಿರ್ಲಿಲ್ಲ. ನೀವು ಕೊಟ್ಟಿರೋ ಪ್ರಶಸ್ತಿ ಸುಪ್ರೀಂಕೋರ್ಟ್ ತೀರ್ಪಿಗಿಂತಲೂ ದೊಡ್ಡದು. ಕಟ್ಟಕಡೆಯ ವ್ಯಕ್ತಿಯನ್ನು ಗುರುತಿಸಿ, ರಾಜ್ಯದ ಮೂಲೆಮೂಲೆಯ ಜನರು ಬಂದು ಜಾತಿಧರ್ಮದ ಭೇದವಿಲ್ಲದೆ ನನ್ನನ್ನು ಕಂಡಿದಿರಲ್ವಾ ಇದಕ್ಕಿಂತ ಹೆಚ್ಚು ನನಗೇನು ಬೇಕು? ಎನ್ನುತ್ತಾ ಭಾವುಕರಾದರು. ಸೋಮಣ್ಣನಂತಹವರ ಹಕ್ಕೊತ್ತಾಯದ ಹೋರಾಟಗಳಿಗೆ ಜನಪರ ಚಳವಳಿಗಾರರು, ಅಧ್ಯಯನಕಾರರು, ಪತ್ರಕರ್ತರು, ಚಿಂತಕರು ಜೊತೆಯಾಗಿ ಬೆಂಬಲಿಸಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...