Homeಚಳವಳಿಜೇನುಕುರುಬ ಆದಿವಾಸಿ ಯುವಕನಿಗೆ ಅರಣ್ಯ ಸಿಬ್ಬಂದಿಯಿಂದ ಗುಂಡೇಟು: ಭುಗಿಲೆದ್ದ ಆಕ್ರೋಶ

ಜೇನುಕುರುಬ ಆದಿವಾಸಿ ಯುವಕನಿಗೆ ಅರಣ್ಯ ಸಿಬ್ಬಂದಿಯಿಂದ ಗುಂಡೇಟು: ಭುಗಿಲೆದ್ದ ಆಕ್ರೋಶ

- Advertisement -
- Advertisement -

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಬೈಲಕುಪ್ಪೆ ಬಳಿಯ ರಾಣಿಗೇಟ್ ಜೇನುಕುರುಬರ ಹಾಡಿಯ ಬಸವ ಎಂಬ ವ್ಯಕ್ತಿಯನ್ನು ಅಲ್ಲಿನ ಅರಣ್ಯ ಇಲಾಖೆಯ ವಾಚ್‌ಮನ್ ಮತ್ತು ಗಾರ್ಡ್ ಗಳು ಕ್ಷುಲ್ಲಕ ಕಾರಣಕ್ಕೆ ಗುಂಡಿಕ್ಕಿ ಹೊಡೆದಿದ್ದಾರೆ. ಆ ವ್ಯಕ್ತಿ ಸದ್ಯ ಮೈಸೂರಿನ ಕೆ.ಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅರಣ್ಯ ಸಿಬ್ಬಂದಿಯ ಈ ಅಮಾನವೀಯ ದೌರ್ಜನ್ಯ ಖಂಡಿಸಿ ಆಕ್ರೋಶ ಭುಗಿಲೆದ್ದಿದೆ. ಇಂದು ಗುರುವಾರ ಬೆಳಿಗ್ಗೆ 10.30ಕ್ಕೆ ಮೈಸೂರಿನ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಜೇನುಕುರುಬರ ಯುವಕ ಬಸವ ಎಂಬುವವರು ಡಿಸೆಂಬರ್ 1ರ ಬುಧವಾರ ಮಧ್ಯಾಹ್ನ 12 ಗಂಟೆ ಸಮಯದಲ್ಲಿ ಬಹಿರ್ದೆಶೆಗೆ ಹೋಗಿದ್ದಾಗ ಆತನಿಗೆ ಅರಣ್ಯ ಇಲಾಖೆಯ ವಾಚ್ ಮನ್ ಸುಬ್ರಮಣಿ ಎಂಬಾತ ಬಂದೂಕಿನಿಂದ ಶೂಟ್ ಮಾಡಿದ್ದಾನೆ ಎಂದು ಸಂತ್ರಸ್ತನ ಪತ್ನಿ ಬೈಲಕುಪ್ಪೆ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಘಟನೆಯ ವಿವರ:

ಜೋಳ ಕೊಯ್ಲು ಮಾಡುವ ಸಂದರ್ಭದಲ್ಲಿ ಬಸವ ಎಂಬುವವರು ಪಕ್ಕದ ಅಣ್ಣಯ್ಯ ಎಂಬುವವರ ಜಮೀನಿಗೆ ಬರ್ಹಿದೆಸೆಗೆಂದು ಹೋಗಿದ್ದಾರೆ. ಆಗ ಅರಣ್ಯ ಇಲಾಖೆಯ ವಾಚ್‌ಮನ್ ಸುಬ್ರಮಣಿ ಜೊತೆಗೆ ಮಹೇಶ ಮತ್ತು ಸಿದ್ದ ಎಂಬುವವರು ಹಾಗೂ ಗಾರ್ಡ್ ಮಂಜು ಇವರುಗಳು ಬಸವನನ್ನು ಅಟ್ಟಿಸಿಕೊಂಡು ಬಂದು ಸಿಗದಿದ್ದಾಗ ಸುಬ್ರಮಣಿ ಎಂಬಾತನು ಕೋವಿಯಿಂದ ಗುಂಡು ಹಾರಿಸಿದ್ದಾರೆ. ಹಿಂಬಾಗಕ್ಕೆ ಗುಂಡು ಬಿದ್ದಿದೆ. ಗುಂಡಿನ ಶಬ್ದ ಕೇಳಿ ಜನ ಸೇರಿದಾಗ ಮಂಜು ಎಂಬುವವರನ್ನು ಹೊರತುಪಡಿಸಿ ಉಳಿದವರು ಓಡಿ ಹೋಗಿದ್ದಾರೆ. ನಂತರ ಸಂತ್ರಸ್ತನನ್ನು ಕುಶಾಲನಗರ ಆಸ್ಪತ್ರೆಗೆ ಸೇರಿಸಿದ್ದು, ಅಲ್ಲಿ ಗುಂಡು ತೆಗೆಯಲು ಆಗದೆ ನಂತರ ಮೈಸೂರಿನ ಕೆ.ಆರ್ ಆಸ್ಪತ್ರೆಗೆ ಸೇರಿಸಲಾಗಿದೆ.

ಒಂದೂವರೆ ತಿಂಗಳ ಹಿಂದೆ ಇದೇ ಅರಣ್ಯ ಸಿಬ್ಬಂದಿ ಮತ್ತು ನಮಗೂ ನಮ್ಮ ಮನೆ ಮುಂದಿನ ಮರದ ವಿಚಾರವಾಗಿ ಜಗಳವಾಗಿತ್ತು. ಸಿಬ್ಬಂದಿಯ ಅನ್ಯಾಯವನ್ನು ನಾವು ಪ್ರಶ್ನಿಸಿ ಜಗಳವಾಡುತ್ತಿದ್ದೇವು. ಹಾಗಾಗಿ ನಮ್ಮ ಮೇಲೆ ಅವರಿಗೆ ದ್ವೇಷ ಎಂದು ಸಂತ್ರಸ್ತನ ಪತ್ನಿ ಪುಷ್ಪ ಆರೋಪಿಸಿದ್ದಾರೆ.

ದೂರಿನ ಪ್ರತಿ

ಆದಿವಾಸಿಗಳ ನೆರವಿಗೆ ಸ್ಥಳೀಯ ಸಂಸ್ಥೆಗಳಾದ ಗ್ರೀನ್ ಇಂಡಿಯಾದ ಡಾ.ಮಹೇಂದ್ರ ಕುಮಾರ ಮತ್ತು ಕಾರ್ಡ್ ಸಂಸ್ಥೆಯ ರಾಯ್ ಡೇವಿಡ್ ಸ್ಥಳಕ್ಕೆ ತಲುಪಿ ಪೊಲೀಸ್ ದೂರು ಸಲ್ಲಿಸಿ ಆದಿವಾಸಿಗಳಿಗೆ ಧೈರ್ಯ ತುಂಬಿದ್ದಾರೆ. ಈ ಅಮಾನವೀಯ ಘಟನೆ ಖಂಡಿಸಿ ಇಂದು ಮೈಸೂರಿನಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ಮತ್ತು ಪತ್ರಿಕಾಗೋಷ್ಠಿ ನಡೆಸುವುದಾಗಿ ಡಾ. ಮಹೇಂದ್ರ ಕುಮಾರ್ ತಿಳಿಸಿದ್ದಾರೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಅವರು, “ಹಾಡಿಯ ಜನ ತಿಳಿಸುವ ಪ್ರಕಾರ, ಕಳೆದ ಒಂದೂವರೆ ತಿಂಗಳ ಹಿಂದೆ ಇದೇ ಐದಾರು ಜನ ಅರಣ್ಯ ಸಿಬ್ಬಂದಿಗಳ ಜೊತೆ ನಡೆಯಲಾಗಿದ್ದ ಕ್ಷುಲ್ಲಕ ವಾದ ಜಗಳಕ್ಕೆ ತಿರುಗಿ, ಅದು ದ್ವೇಷಕ್ಲೆ ನಾಂದಿ ಹಾಡಿದೆ. ಕೊನೆಗೆ ಗುಂಡಿಟ್ಟು ಕೊಲ್ಲುವ ಪ್ರಯತ್ನದವರೆಗೂ ಮುಂದುವರೆದಿದೆ. ಆದಿವಾಸಿಗಳೆಂದರೆ ತೀರಾ ಕನಿಷ್ಠ ಎಂಬ ಮನಸ್ಥಿತಿ ಇಲ್ಲಿಯ ಅರಣ್ಯ ಇಲಾಖೆಯ ಸಿಬ್ಬಂದಿಯವರಲ್ಲಿದೆ. ಗುಂಡು ಹೊಡೆದ ಮೇಲೆಯೂ ಇಲಾಖೆಯವರು ಎಲ್ಲಿಂದಲೋ ಕಟ್ಟಿಗೆ ತಂದು ಹಾಕಿ ಪ್ರಕರಣವನ್ನು ತಿರುಚುವ ಪಯತ್ನ ಮಾಡುತ್ತಿದ್ದಾರೆ. ಆದರೆ ಅವರು ಬೈಕಿನಲ್ಲಿ ಕಟ್ಟಿಗೆ ತಂದು ಹಾಕುತ್ತಿರುವುದಕ್ಕೆ ನಮ್ಮಲ್ಲಿ ಪುರಾವೆಗಳಿವೆ, ಅದನ್ನು ಪೋಲೀಸ್ ಇಲಾಖೆಗೆ ಸಲ್ಲಿಸಿದ್ದೇವೆ” ಎಂದರು.

ಪೊಲೀಸರು ನೀಡಿರುವ ಹಿಂಬರಹ

ಅರಣ್ಯ ಇಲಾಖೆಯ ಸಿಬ್ಬಂದಿಗಳು ಬಸವ ಮತ್ತು ಆತನ ಸಹಚರರು ಗಂಧದ ಕಟ್ಟಿಗೆ ಸಾಗಿಸುತ್ತಿದ್ದರೆಂದು ದೂರು ನೀಡಿದ್ದಾರೆ. ಪೋಲೀಸರು ಇವರ ವಿರುದ್ದ FIR ದಾಖಲಿಸಿದ್ದಾರೆ. ಆದರೆ ಹಾಡಿಯ ಜೇನು ಕುರುಬರು ಕೊಟ್ಟ ದೂರಿಗೆ ಕೇವಲ ಎಂಡಾರ್ಸಮೆಂಟ್ ನೀಡಲಾಗಿದ್ದು, ಇಲಾಖೆಯ ಸಿಬ್ಬಂದಿಗಳ ವಿರುದ್ದ FIR ಮಾಡಲಾಗುವುದಿಲ್ಲವೆಂದೂ, ಬದಲಾಗಿ ತನಿಖೆ ನಡೆಸುತ್ತೇವೆಂದು ಪೋಲೀಸ್ ಇಲಾಖೆಯವರು ತಿಳಿಸಿರುತ್ತಾರೆ. ಸ್ಥಳೀಯ ಶಾಸಕರಾದ ಮಹದೇವಪ್ಪನವರು ಹಾಗೂ ಸ್ಥಳೀಯ ಗ್ರಾಮ ಪಂಚಾಯತ್ ,ಇತರ ನಾಯಕರುಗಳು, ಪೋಲೀಸ್ ಇಲಾಖೆಗೆ ಪೋನ್ ಮಾಡಿ ಆದಿವಾಸಿಗಳಿಗೆ ಆದ ಅನ್ಯಾಯದ ವಿರುದ್ದ FIR ದಾಖಲಿಸಲು ತಿಳಿಸಿದರೂ ಮೇಲಿನ ಎಸ್ಪಿಯವರ ಆದೇಶದ ಪ್ರಕಾರ ದಾಖಲಿಸಲು ನಮಗೆ ಅನುಮತಿ ಇಲ್ಲವೆಂದು ತಿಳಿಸಿದ್ದಾರೆ. ಇದನ್ನು ವಿರೋಧಿಸಿ ಇಂದು ರಾಜ್ಯ ಮೂಲ ಆದಿವಾಸಿ ವೇದಿಕೆ ಮತ್ತು ಬುಡಕಟ್ಟು ಕೃಷಿಕರ ಸಂಘಟನೆಗಳು ಸೇರಿ ಪ್ರತಿಭಟಿಸುತ್ತೇವೆ ಎಂದು ತಿಳಿಸಿದ್ದಾರೆ.

ಅರಣ್ಯ ಸಿಬ್ಬಂದಿ ತಂದು ಹಾಕಿರುವ ಮರದ ತುಂಡುಗಳು

ನಟ ಚೇತನ್ ಈ ಅನ್ಯಾಯವನ್ನು ಖಂಡಿಸಿದ್ದು, ಮೈಸೂರಿನ ಪ್ರತಿಭಟನೆಯಲ್ಲಿ ಭಾಗವಹಿಸುತ್ತೇನೆ ಎಂದು ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, “ನಿನ್ನೆ ಪಿರಿಯಾಪಟ್ಟಣದಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಯೊಬ್ಬರಿಂದ ಗುಂಡೇಟು ತಿಂದು ಆಸ್ಪತ್ರೆಯಲ್ಲಿರುವ ಆದಿವಾಸಿ ವ್ಯಕ್ತಿಗೆ ನ್ಯಾಯ ಕೇಳಲು, ನಾನೀಗ ಮೈಸೂರಿಗೆ ಹೊರಟಿದ್ದೇನೆ.ಈ ವಿಷಯದ ಕುರಿತಾಗಿ, ಇಂದು ಬೆಳಗ್ಗೆ 10 ಗಂಟೆಯಿಂದ ಮೈಸೂರಿನ ಡಿಸಿ ಕಚೇರಿಯ ಎದುರು, ಆದಿವಾಸಿ ಗುಂಪುಗಳು ಮತ್ತು ಮಾನವ ಹಕ್ಕುಗಳ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಾರೆ. ನಾನು ಕೂಡ ಅವರೊಂದಿಗೆ ಕೈ ಜೋಡಿಸುತ್ತೇನೆ” ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ಇದು ಫ್ಯಾಸಿಸ್ಟರು, ಬಂಡವಾಳಿಗರು V/S ದಮನಿತರ ಸ್ವಾಭಿಮಾನದ ನಡುವಿನ ಹೋರಾಟ…!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....