Homeಚಳವಳಿಜೇನುಕುರುಬ ಆದಿವಾಸಿ ಯುವಕನಿಗೆ ಅರಣ್ಯ ಸಿಬ್ಬಂದಿಯಿಂದ ಗುಂಡೇಟು: ಭುಗಿಲೆದ್ದ ಆಕ್ರೋಶ

ಜೇನುಕುರುಬ ಆದಿವಾಸಿ ಯುವಕನಿಗೆ ಅರಣ್ಯ ಸಿಬ್ಬಂದಿಯಿಂದ ಗುಂಡೇಟು: ಭುಗಿಲೆದ್ದ ಆಕ್ರೋಶ

- Advertisement -
- Advertisement -

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಬೈಲಕುಪ್ಪೆ ಬಳಿಯ ರಾಣಿಗೇಟ್ ಜೇನುಕುರುಬರ ಹಾಡಿಯ ಬಸವ ಎಂಬ ವ್ಯಕ್ತಿಯನ್ನು ಅಲ್ಲಿನ ಅರಣ್ಯ ಇಲಾಖೆಯ ವಾಚ್‌ಮನ್ ಮತ್ತು ಗಾರ್ಡ್ ಗಳು ಕ್ಷುಲ್ಲಕ ಕಾರಣಕ್ಕೆ ಗುಂಡಿಕ್ಕಿ ಹೊಡೆದಿದ್ದಾರೆ. ಆ ವ್ಯಕ್ತಿ ಸದ್ಯ ಮೈಸೂರಿನ ಕೆ.ಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅರಣ್ಯ ಸಿಬ್ಬಂದಿಯ ಈ ಅಮಾನವೀಯ ದೌರ್ಜನ್ಯ ಖಂಡಿಸಿ ಆಕ್ರೋಶ ಭುಗಿಲೆದ್ದಿದೆ. ಇಂದು ಗುರುವಾರ ಬೆಳಿಗ್ಗೆ 10.30ಕ್ಕೆ ಮೈಸೂರಿನ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಜೇನುಕುರುಬರ ಯುವಕ ಬಸವ ಎಂಬುವವರು ಡಿಸೆಂಬರ್ 1ರ ಬುಧವಾರ ಮಧ್ಯಾಹ್ನ 12 ಗಂಟೆ ಸಮಯದಲ್ಲಿ ಬಹಿರ್ದೆಶೆಗೆ ಹೋಗಿದ್ದಾಗ ಆತನಿಗೆ ಅರಣ್ಯ ಇಲಾಖೆಯ ವಾಚ್ ಮನ್ ಸುಬ್ರಮಣಿ ಎಂಬಾತ ಬಂದೂಕಿನಿಂದ ಶೂಟ್ ಮಾಡಿದ್ದಾನೆ ಎಂದು ಸಂತ್ರಸ್ತನ ಪತ್ನಿ ಬೈಲಕುಪ್ಪೆ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಘಟನೆಯ ವಿವರ:

ಜೋಳ ಕೊಯ್ಲು ಮಾಡುವ ಸಂದರ್ಭದಲ್ಲಿ ಬಸವ ಎಂಬುವವರು ಪಕ್ಕದ ಅಣ್ಣಯ್ಯ ಎಂಬುವವರ ಜಮೀನಿಗೆ ಬರ್ಹಿದೆಸೆಗೆಂದು ಹೋಗಿದ್ದಾರೆ. ಆಗ ಅರಣ್ಯ ಇಲಾಖೆಯ ವಾಚ್‌ಮನ್ ಸುಬ್ರಮಣಿ ಜೊತೆಗೆ ಮಹೇಶ ಮತ್ತು ಸಿದ್ದ ಎಂಬುವವರು ಹಾಗೂ ಗಾರ್ಡ್ ಮಂಜು ಇವರುಗಳು ಬಸವನನ್ನು ಅಟ್ಟಿಸಿಕೊಂಡು ಬಂದು ಸಿಗದಿದ್ದಾಗ ಸುಬ್ರಮಣಿ ಎಂಬಾತನು ಕೋವಿಯಿಂದ ಗುಂಡು ಹಾರಿಸಿದ್ದಾರೆ. ಹಿಂಬಾಗಕ್ಕೆ ಗುಂಡು ಬಿದ್ದಿದೆ. ಗುಂಡಿನ ಶಬ್ದ ಕೇಳಿ ಜನ ಸೇರಿದಾಗ ಮಂಜು ಎಂಬುವವರನ್ನು ಹೊರತುಪಡಿಸಿ ಉಳಿದವರು ಓಡಿ ಹೋಗಿದ್ದಾರೆ. ನಂತರ ಸಂತ್ರಸ್ತನನ್ನು ಕುಶಾಲನಗರ ಆಸ್ಪತ್ರೆಗೆ ಸೇರಿಸಿದ್ದು, ಅಲ್ಲಿ ಗುಂಡು ತೆಗೆಯಲು ಆಗದೆ ನಂತರ ಮೈಸೂರಿನ ಕೆ.ಆರ್ ಆಸ್ಪತ್ರೆಗೆ ಸೇರಿಸಲಾಗಿದೆ.

ಒಂದೂವರೆ ತಿಂಗಳ ಹಿಂದೆ ಇದೇ ಅರಣ್ಯ ಸಿಬ್ಬಂದಿ ಮತ್ತು ನಮಗೂ ನಮ್ಮ ಮನೆ ಮುಂದಿನ ಮರದ ವಿಚಾರವಾಗಿ ಜಗಳವಾಗಿತ್ತು. ಸಿಬ್ಬಂದಿಯ ಅನ್ಯಾಯವನ್ನು ನಾವು ಪ್ರಶ್ನಿಸಿ ಜಗಳವಾಡುತ್ತಿದ್ದೇವು. ಹಾಗಾಗಿ ನಮ್ಮ ಮೇಲೆ ಅವರಿಗೆ ದ್ವೇಷ ಎಂದು ಸಂತ್ರಸ್ತನ ಪತ್ನಿ ಪುಷ್ಪ ಆರೋಪಿಸಿದ್ದಾರೆ.

ದೂರಿನ ಪ್ರತಿ

ಆದಿವಾಸಿಗಳ ನೆರವಿಗೆ ಸ್ಥಳೀಯ ಸಂಸ್ಥೆಗಳಾದ ಗ್ರೀನ್ ಇಂಡಿಯಾದ ಡಾ.ಮಹೇಂದ್ರ ಕುಮಾರ ಮತ್ತು ಕಾರ್ಡ್ ಸಂಸ್ಥೆಯ ರಾಯ್ ಡೇವಿಡ್ ಸ್ಥಳಕ್ಕೆ ತಲುಪಿ ಪೊಲೀಸ್ ದೂರು ಸಲ್ಲಿಸಿ ಆದಿವಾಸಿಗಳಿಗೆ ಧೈರ್ಯ ತುಂಬಿದ್ದಾರೆ. ಈ ಅಮಾನವೀಯ ಘಟನೆ ಖಂಡಿಸಿ ಇಂದು ಮೈಸೂರಿನಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ಮತ್ತು ಪತ್ರಿಕಾಗೋಷ್ಠಿ ನಡೆಸುವುದಾಗಿ ಡಾ. ಮಹೇಂದ್ರ ಕುಮಾರ್ ತಿಳಿಸಿದ್ದಾರೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಅವರು, “ಹಾಡಿಯ ಜನ ತಿಳಿಸುವ ಪ್ರಕಾರ, ಕಳೆದ ಒಂದೂವರೆ ತಿಂಗಳ ಹಿಂದೆ ಇದೇ ಐದಾರು ಜನ ಅರಣ್ಯ ಸಿಬ್ಬಂದಿಗಳ ಜೊತೆ ನಡೆಯಲಾಗಿದ್ದ ಕ್ಷುಲ್ಲಕ ವಾದ ಜಗಳಕ್ಕೆ ತಿರುಗಿ, ಅದು ದ್ವೇಷಕ್ಲೆ ನಾಂದಿ ಹಾಡಿದೆ. ಕೊನೆಗೆ ಗುಂಡಿಟ್ಟು ಕೊಲ್ಲುವ ಪ್ರಯತ್ನದವರೆಗೂ ಮುಂದುವರೆದಿದೆ. ಆದಿವಾಸಿಗಳೆಂದರೆ ತೀರಾ ಕನಿಷ್ಠ ಎಂಬ ಮನಸ್ಥಿತಿ ಇಲ್ಲಿಯ ಅರಣ್ಯ ಇಲಾಖೆಯ ಸಿಬ್ಬಂದಿಯವರಲ್ಲಿದೆ. ಗುಂಡು ಹೊಡೆದ ಮೇಲೆಯೂ ಇಲಾಖೆಯವರು ಎಲ್ಲಿಂದಲೋ ಕಟ್ಟಿಗೆ ತಂದು ಹಾಕಿ ಪ್ರಕರಣವನ್ನು ತಿರುಚುವ ಪಯತ್ನ ಮಾಡುತ್ತಿದ್ದಾರೆ. ಆದರೆ ಅವರು ಬೈಕಿನಲ್ಲಿ ಕಟ್ಟಿಗೆ ತಂದು ಹಾಕುತ್ತಿರುವುದಕ್ಕೆ ನಮ್ಮಲ್ಲಿ ಪುರಾವೆಗಳಿವೆ, ಅದನ್ನು ಪೋಲೀಸ್ ಇಲಾಖೆಗೆ ಸಲ್ಲಿಸಿದ್ದೇವೆ” ಎಂದರು.

ಪೊಲೀಸರು ನೀಡಿರುವ ಹಿಂಬರಹ

ಅರಣ್ಯ ಇಲಾಖೆಯ ಸಿಬ್ಬಂದಿಗಳು ಬಸವ ಮತ್ತು ಆತನ ಸಹಚರರು ಗಂಧದ ಕಟ್ಟಿಗೆ ಸಾಗಿಸುತ್ತಿದ್ದರೆಂದು ದೂರು ನೀಡಿದ್ದಾರೆ. ಪೋಲೀಸರು ಇವರ ವಿರುದ್ದ FIR ದಾಖಲಿಸಿದ್ದಾರೆ. ಆದರೆ ಹಾಡಿಯ ಜೇನು ಕುರುಬರು ಕೊಟ್ಟ ದೂರಿಗೆ ಕೇವಲ ಎಂಡಾರ್ಸಮೆಂಟ್ ನೀಡಲಾಗಿದ್ದು, ಇಲಾಖೆಯ ಸಿಬ್ಬಂದಿಗಳ ವಿರುದ್ದ FIR ಮಾಡಲಾಗುವುದಿಲ್ಲವೆಂದೂ, ಬದಲಾಗಿ ತನಿಖೆ ನಡೆಸುತ್ತೇವೆಂದು ಪೋಲೀಸ್ ಇಲಾಖೆಯವರು ತಿಳಿಸಿರುತ್ತಾರೆ. ಸ್ಥಳೀಯ ಶಾಸಕರಾದ ಮಹದೇವಪ್ಪನವರು ಹಾಗೂ ಸ್ಥಳೀಯ ಗ್ರಾಮ ಪಂಚಾಯತ್ ,ಇತರ ನಾಯಕರುಗಳು, ಪೋಲೀಸ್ ಇಲಾಖೆಗೆ ಪೋನ್ ಮಾಡಿ ಆದಿವಾಸಿಗಳಿಗೆ ಆದ ಅನ್ಯಾಯದ ವಿರುದ್ದ FIR ದಾಖಲಿಸಲು ತಿಳಿಸಿದರೂ ಮೇಲಿನ ಎಸ್ಪಿಯವರ ಆದೇಶದ ಪ್ರಕಾರ ದಾಖಲಿಸಲು ನಮಗೆ ಅನುಮತಿ ಇಲ್ಲವೆಂದು ತಿಳಿಸಿದ್ದಾರೆ. ಇದನ್ನು ವಿರೋಧಿಸಿ ಇಂದು ರಾಜ್ಯ ಮೂಲ ಆದಿವಾಸಿ ವೇದಿಕೆ ಮತ್ತು ಬುಡಕಟ್ಟು ಕೃಷಿಕರ ಸಂಘಟನೆಗಳು ಸೇರಿ ಪ್ರತಿಭಟಿಸುತ್ತೇವೆ ಎಂದು ತಿಳಿಸಿದ್ದಾರೆ.

ಅರಣ್ಯ ಸಿಬ್ಬಂದಿ ತಂದು ಹಾಕಿರುವ ಮರದ ತುಂಡುಗಳು

ನಟ ಚೇತನ್ ಈ ಅನ್ಯಾಯವನ್ನು ಖಂಡಿಸಿದ್ದು, ಮೈಸೂರಿನ ಪ್ರತಿಭಟನೆಯಲ್ಲಿ ಭಾಗವಹಿಸುತ್ತೇನೆ ಎಂದು ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, “ನಿನ್ನೆ ಪಿರಿಯಾಪಟ್ಟಣದಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಯೊಬ್ಬರಿಂದ ಗುಂಡೇಟು ತಿಂದು ಆಸ್ಪತ್ರೆಯಲ್ಲಿರುವ ಆದಿವಾಸಿ ವ್ಯಕ್ತಿಗೆ ನ್ಯಾಯ ಕೇಳಲು, ನಾನೀಗ ಮೈಸೂರಿಗೆ ಹೊರಟಿದ್ದೇನೆ.ಈ ವಿಷಯದ ಕುರಿತಾಗಿ, ಇಂದು ಬೆಳಗ್ಗೆ 10 ಗಂಟೆಯಿಂದ ಮೈಸೂರಿನ ಡಿಸಿ ಕಚೇರಿಯ ಎದುರು, ಆದಿವಾಸಿ ಗುಂಪುಗಳು ಮತ್ತು ಮಾನವ ಹಕ್ಕುಗಳ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಾರೆ. ನಾನು ಕೂಡ ಅವರೊಂದಿಗೆ ಕೈ ಜೋಡಿಸುತ್ತೇನೆ” ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ಇದು ಫ್ಯಾಸಿಸ್ಟರು, ಬಂಡವಾಳಿಗರು V/S ದಮನಿತರ ಸ್ವಾಭಿಮಾನದ ನಡುವಿನ ಹೋರಾಟ…!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...