Homeಚಳವಳಿಜೇನುಕುರುಬ ಆದಿವಾಸಿ ಯುವಕನಿಗೆ ಅರಣ್ಯ ಸಿಬ್ಬಂದಿಯಿಂದ ಗುಂಡೇಟು: ಭುಗಿಲೆದ್ದ ಆಕ್ರೋಶ

ಜೇನುಕುರುಬ ಆದಿವಾಸಿ ಯುವಕನಿಗೆ ಅರಣ್ಯ ಸಿಬ್ಬಂದಿಯಿಂದ ಗುಂಡೇಟು: ಭುಗಿಲೆದ್ದ ಆಕ್ರೋಶ

- Advertisement -
- Advertisement -

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಬೈಲಕುಪ್ಪೆ ಬಳಿಯ ರಾಣಿಗೇಟ್ ಜೇನುಕುರುಬರ ಹಾಡಿಯ ಬಸವ ಎಂಬ ವ್ಯಕ್ತಿಯನ್ನು ಅಲ್ಲಿನ ಅರಣ್ಯ ಇಲಾಖೆಯ ವಾಚ್‌ಮನ್ ಮತ್ತು ಗಾರ್ಡ್ ಗಳು ಕ್ಷುಲ್ಲಕ ಕಾರಣಕ್ಕೆ ಗುಂಡಿಕ್ಕಿ ಹೊಡೆದಿದ್ದಾರೆ. ಆ ವ್ಯಕ್ತಿ ಸದ್ಯ ಮೈಸೂರಿನ ಕೆ.ಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅರಣ್ಯ ಸಿಬ್ಬಂದಿಯ ಈ ಅಮಾನವೀಯ ದೌರ್ಜನ್ಯ ಖಂಡಿಸಿ ಆಕ್ರೋಶ ಭುಗಿಲೆದ್ದಿದೆ. ಇಂದು ಗುರುವಾರ ಬೆಳಿಗ್ಗೆ 10.30ಕ್ಕೆ ಮೈಸೂರಿನ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಜೇನುಕುರುಬರ ಯುವಕ ಬಸವ ಎಂಬುವವರು ಡಿಸೆಂಬರ್ 1ರ ಬುಧವಾರ ಮಧ್ಯಾಹ್ನ 12 ಗಂಟೆ ಸಮಯದಲ್ಲಿ ಬಹಿರ್ದೆಶೆಗೆ ಹೋಗಿದ್ದಾಗ ಆತನಿಗೆ ಅರಣ್ಯ ಇಲಾಖೆಯ ವಾಚ್ ಮನ್ ಸುಬ್ರಮಣಿ ಎಂಬಾತ ಬಂದೂಕಿನಿಂದ ಶೂಟ್ ಮಾಡಿದ್ದಾನೆ ಎಂದು ಸಂತ್ರಸ್ತನ ಪತ್ನಿ ಬೈಲಕುಪ್ಪೆ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಘಟನೆಯ ವಿವರ:

ಜೋಳ ಕೊಯ್ಲು ಮಾಡುವ ಸಂದರ್ಭದಲ್ಲಿ ಬಸವ ಎಂಬುವವರು ಪಕ್ಕದ ಅಣ್ಣಯ್ಯ ಎಂಬುವವರ ಜಮೀನಿಗೆ ಬರ್ಹಿದೆಸೆಗೆಂದು ಹೋಗಿದ್ದಾರೆ. ಆಗ ಅರಣ್ಯ ಇಲಾಖೆಯ ವಾಚ್‌ಮನ್ ಸುಬ್ರಮಣಿ ಜೊತೆಗೆ ಮಹೇಶ ಮತ್ತು ಸಿದ್ದ ಎಂಬುವವರು ಹಾಗೂ ಗಾರ್ಡ್ ಮಂಜು ಇವರುಗಳು ಬಸವನನ್ನು ಅಟ್ಟಿಸಿಕೊಂಡು ಬಂದು ಸಿಗದಿದ್ದಾಗ ಸುಬ್ರಮಣಿ ಎಂಬಾತನು ಕೋವಿಯಿಂದ ಗುಂಡು ಹಾರಿಸಿದ್ದಾರೆ. ಹಿಂಬಾಗಕ್ಕೆ ಗುಂಡು ಬಿದ್ದಿದೆ. ಗುಂಡಿನ ಶಬ್ದ ಕೇಳಿ ಜನ ಸೇರಿದಾಗ ಮಂಜು ಎಂಬುವವರನ್ನು ಹೊರತುಪಡಿಸಿ ಉಳಿದವರು ಓಡಿ ಹೋಗಿದ್ದಾರೆ. ನಂತರ ಸಂತ್ರಸ್ತನನ್ನು ಕುಶಾಲನಗರ ಆಸ್ಪತ್ರೆಗೆ ಸೇರಿಸಿದ್ದು, ಅಲ್ಲಿ ಗುಂಡು ತೆಗೆಯಲು ಆಗದೆ ನಂತರ ಮೈಸೂರಿನ ಕೆ.ಆರ್ ಆಸ್ಪತ್ರೆಗೆ ಸೇರಿಸಲಾಗಿದೆ.

ಒಂದೂವರೆ ತಿಂಗಳ ಹಿಂದೆ ಇದೇ ಅರಣ್ಯ ಸಿಬ್ಬಂದಿ ಮತ್ತು ನಮಗೂ ನಮ್ಮ ಮನೆ ಮುಂದಿನ ಮರದ ವಿಚಾರವಾಗಿ ಜಗಳವಾಗಿತ್ತು. ಸಿಬ್ಬಂದಿಯ ಅನ್ಯಾಯವನ್ನು ನಾವು ಪ್ರಶ್ನಿಸಿ ಜಗಳವಾಡುತ್ತಿದ್ದೇವು. ಹಾಗಾಗಿ ನಮ್ಮ ಮೇಲೆ ಅವರಿಗೆ ದ್ವೇಷ ಎಂದು ಸಂತ್ರಸ್ತನ ಪತ್ನಿ ಪುಷ್ಪ ಆರೋಪಿಸಿದ್ದಾರೆ.

ದೂರಿನ ಪ್ರತಿ

ಆದಿವಾಸಿಗಳ ನೆರವಿಗೆ ಸ್ಥಳೀಯ ಸಂಸ್ಥೆಗಳಾದ ಗ್ರೀನ್ ಇಂಡಿಯಾದ ಡಾ.ಮಹೇಂದ್ರ ಕುಮಾರ ಮತ್ತು ಕಾರ್ಡ್ ಸಂಸ್ಥೆಯ ರಾಯ್ ಡೇವಿಡ್ ಸ್ಥಳಕ್ಕೆ ತಲುಪಿ ಪೊಲೀಸ್ ದೂರು ಸಲ್ಲಿಸಿ ಆದಿವಾಸಿಗಳಿಗೆ ಧೈರ್ಯ ತುಂಬಿದ್ದಾರೆ. ಈ ಅಮಾನವೀಯ ಘಟನೆ ಖಂಡಿಸಿ ಇಂದು ಮೈಸೂರಿನಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ಮತ್ತು ಪತ್ರಿಕಾಗೋಷ್ಠಿ ನಡೆಸುವುದಾಗಿ ಡಾ. ಮಹೇಂದ್ರ ಕುಮಾರ್ ತಿಳಿಸಿದ್ದಾರೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಅವರು, “ಹಾಡಿಯ ಜನ ತಿಳಿಸುವ ಪ್ರಕಾರ, ಕಳೆದ ಒಂದೂವರೆ ತಿಂಗಳ ಹಿಂದೆ ಇದೇ ಐದಾರು ಜನ ಅರಣ್ಯ ಸಿಬ್ಬಂದಿಗಳ ಜೊತೆ ನಡೆಯಲಾಗಿದ್ದ ಕ್ಷುಲ್ಲಕ ವಾದ ಜಗಳಕ್ಕೆ ತಿರುಗಿ, ಅದು ದ್ವೇಷಕ್ಲೆ ನಾಂದಿ ಹಾಡಿದೆ. ಕೊನೆಗೆ ಗುಂಡಿಟ್ಟು ಕೊಲ್ಲುವ ಪ್ರಯತ್ನದವರೆಗೂ ಮುಂದುವರೆದಿದೆ. ಆದಿವಾಸಿಗಳೆಂದರೆ ತೀರಾ ಕನಿಷ್ಠ ಎಂಬ ಮನಸ್ಥಿತಿ ಇಲ್ಲಿಯ ಅರಣ್ಯ ಇಲಾಖೆಯ ಸಿಬ್ಬಂದಿಯವರಲ್ಲಿದೆ. ಗುಂಡು ಹೊಡೆದ ಮೇಲೆಯೂ ಇಲಾಖೆಯವರು ಎಲ್ಲಿಂದಲೋ ಕಟ್ಟಿಗೆ ತಂದು ಹಾಕಿ ಪ್ರಕರಣವನ್ನು ತಿರುಚುವ ಪಯತ್ನ ಮಾಡುತ್ತಿದ್ದಾರೆ. ಆದರೆ ಅವರು ಬೈಕಿನಲ್ಲಿ ಕಟ್ಟಿಗೆ ತಂದು ಹಾಕುತ್ತಿರುವುದಕ್ಕೆ ನಮ್ಮಲ್ಲಿ ಪುರಾವೆಗಳಿವೆ, ಅದನ್ನು ಪೋಲೀಸ್ ಇಲಾಖೆಗೆ ಸಲ್ಲಿಸಿದ್ದೇವೆ” ಎಂದರು.

ಪೊಲೀಸರು ನೀಡಿರುವ ಹಿಂಬರಹ

ಅರಣ್ಯ ಇಲಾಖೆಯ ಸಿಬ್ಬಂದಿಗಳು ಬಸವ ಮತ್ತು ಆತನ ಸಹಚರರು ಗಂಧದ ಕಟ್ಟಿಗೆ ಸಾಗಿಸುತ್ತಿದ್ದರೆಂದು ದೂರು ನೀಡಿದ್ದಾರೆ. ಪೋಲೀಸರು ಇವರ ವಿರುದ್ದ FIR ದಾಖಲಿಸಿದ್ದಾರೆ. ಆದರೆ ಹಾಡಿಯ ಜೇನು ಕುರುಬರು ಕೊಟ್ಟ ದೂರಿಗೆ ಕೇವಲ ಎಂಡಾರ್ಸಮೆಂಟ್ ನೀಡಲಾಗಿದ್ದು, ಇಲಾಖೆಯ ಸಿಬ್ಬಂದಿಗಳ ವಿರುದ್ದ FIR ಮಾಡಲಾಗುವುದಿಲ್ಲವೆಂದೂ, ಬದಲಾಗಿ ತನಿಖೆ ನಡೆಸುತ್ತೇವೆಂದು ಪೋಲೀಸ್ ಇಲಾಖೆಯವರು ತಿಳಿಸಿರುತ್ತಾರೆ. ಸ್ಥಳೀಯ ಶಾಸಕರಾದ ಮಹದೇವಪ್ಪನವರು ಹಾಗೂ ಸ್ಥಳೀಯ ಗ್ರಾಮ ಪಂಚಾಯತ್ ,ಇತರ ನಾಯಕರುಗಳು, ಪೋಲೀಸ್ ಇಲಾಖೆಗೆ ಪೋನ್ ಮಾಡಿ ಆದಿವಾಸಿಗಳಿಗೆ ಆದ ಅನ್ಯಾಯದ ವಿರುದ್ದ FIR ದಾಖಲಿಸಲು ತಿಳಿಸಿದರೂ ಮೇಲಿನ ಎಸ್ಪಿಯವರ ಆದೇಶದ ಪ್ರಕಾರ ದಾಖಲಿಸಲು ನಮಗೆ ಅನುಮತಿ ಇಲ್ಲವೆಂದು ತಿಳಿಸಿದ್ದಾರೆ. ಇದನ್ನು ವಿರೋಧಿಸಿ ಇಂದು ರಾಜ್ಯ ಮೂಲ ಆದಿವಾಸಿ ವೇದಿಕೆ ಮತ್ತು ಬುಡಕಟ್ಟು ಕೃಷಿಕರ ಸಂಘಟನೆಗಳು ಸೇರಿ ಪ್ರತಿಭಟಿಸುತ್ತೇವೆ ಎಂದು ತಿಳಿಸಿದ್ದಾರೆ.

ಅರಣ್ಯ ಸಿಬ್ಬಂದಿ ತಂದು ಹಾಕಿರುವ ಮರದ ತುಂಡುಗಳು

ನಟ ಚೇತನ್ ಈ ಅನ್ಯಾಯವನ್ನು ಖಂಡಿಸಿದ್ದು, ಮೈಸೂರಿನ ಪ್ರತಿಭಟನೆಯಲ್ಲಿ ಭಾಗವಹಿಸುತ್ತೇನೆ ಎಂದು ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, “ನಿನ್ನೆ ಪಿರಿಯಾಪಟ್ಟಣದಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಯೊಬ್ಬರಿಂದ ಗುಂಡೇಟು ತಿಂದು ಆಸ್ಪತ್ರೆಯಲ್ಲಿರುವ ಆದಿವಾಸಿ ವ್ಯಕ್ತಿಗೆ ನ್ಯಾಯ ಕೇಳಲು, ನಾನೀಗ ಮೈಸೂರಿಗೆ ಹೊರಟಿದ್ದೇನೆ.ಈ ವಿಷಯದ ಕುರಿತಾಗಿ, ಇಂದು ಬೆಳಗ್ಗೆ 10 ಗಂಟೆಯಿಂದ ಮೈಸೂರಿನ ಡಿಸಿ ಕಚೇರಿಯ ಎದುರು, ಆದಿವಾಸಿ ಗುಂಪುಗಳು ಮತ್ತು ಮಾನವ ಹಕ್ಕುಗಳ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಾರೆ. ನಾನು ಕೂಡ ಅವರೊಂದಿಗೆ ಕೈ ಜೋಡಿಸುತ್ತೇನೆ” ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ಇದು ಫ್ಯಾಸಿಸ್ಟರು, ಬಂಡವಾಳಿಗರು V/S ದಮನಿತರ ಸ್ವಾಭಿಮಾನದ ನಡುವಿನ ಹೋರಾಟ…!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....