Homeಚಳವಳಿಜೇನುಕುರುಬ ಆದಿವಾಸಿ ಯುವಕನಿಗೆ ಅರಣ್ಯ ಸಿಬ್ಬಂದಿಯಿಂದ ಗುಂಡೇಟು: ಭುಗಿಲೆದ್ದ ಆಕ್ರೋಶ

ಜೇನುಕುರುಬ ಆದಿವಾಸಿ ಯುವಕನಿಗೆ ಅರಣ್ಯ ಸಿಬ್ಬಂದಿಯಿಂದ ಗುಂಡೇಟು: ಭುಗಿಲೆದ್ದ ಆಕ್ರೋಶ

- Advertisement -
- Advertisement -

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಬೈಲಕುಪ್ಪೆ ಬಳಿಯ ರಾಣಿಗೇಟ್ ಜೇನುಕುರುಬರ ಹಾಡಿಯ ಬಸವ ಎಂಬ ವ್ಯಕ್ತಿಯನ್ನು ಅಲ್ಲಿನ ಅರಣ್ಯ ಇಲಾಖೆಯ ವಾಚ್‌ಮನ್ ಮತ್ತು ಗಾರ್ಡ್ ಗಳು ಕ್ಷುಲ್ಲಕ ಕಾರಣಕ್ಕೆ ಗುಂಡಿಕ್ಕಿ ಹೊಡೆದಿದ್ದಾರೆ. ಆ ವ್ಯಕ್ತಿ ಸದ್ಯ ಮೈಸೂರಿನ ಕೆ.ಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅರಣ್ಯ ಸಿಬ್ಬಂದಿಯ ಈ ಅಮಾನವೀಯ ದೌರ್ಜನ್ಯ ಖಂಡಿಸಿ ಆಕ್ರೋಶ ಭುಗಿಲೆದ್ದಿದೆ. ಇಂದು ಗುರುವಾರ ಬೆಳಿಗ್ಗೆ 10.30ಕ್ಕೆ ಮೈಸೂರಿನ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಜೇನುಕುರುಬರ ಯುವಕ ಬಸವ ಎಂಬುವವರು ಡಿಸೆಂಬರ್ 1ರ ಬುಧವಾರ ಮಧ್ಯಾಹ್ನ 12 ಗಂಟೆ ಸಮಯದಲ್ಲಿ ಬಹಿರ್ದೆಶೆಗೆ ಹೋಗಿದ್ದಾಗ ಆತನಿಗೆ ಅರಣ್ಯ ಇಲಾಖೆಯ ವಾಚ್ ಮನ್ ಸುಬ್ರಮಣಿ ಎಂಬಾತ ಬಂದೂಕಿನಿಂದ ಶೂಟ್ ಮಾಡಿದ್ದಾನೆ ಎಂದು ಸಂತ್ರಸ್ತನ ಪತ್ನಿ ಬೈಲಕುಪ್ಪೆ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಘಟನೆಯ ವಿವರ:

ಜೋಳ ಕೊಯ್ಲು ಮಾಡುವ ಸಂದರ್ಭದಲ್ಲಿ ಬಸವ ಎಂಬುವವರು ಪಕ್ಕದ ಅಣ್ಣಯ್ಯ ಎಂಬುವವರ ಜಮೀನಿಗೆ ಬರ್ಹಿದೆಸೆಗೆಂದು ಹೋಗಿದ್ದಾರೆ. ಆಗ ಅರಣ್ಯ ಇಲಾಖೆಯ ವಾಚ್‌ಮನ್ ಸುಬ್ರಮಣಿ ಜೊತೆಗೆ ಮಹೇಶ ಮತ್ತು ಸಿದ್ದ ಎಂಬುವವರು ಹಾಗೂ ಗಾರ್ಡ್ ಮಂಜು ಇವರುಗಳು ಬಸವನನ್ನು ಅಟ್ಟಿಸಿಕೊಂಡು ಬಂದು ಸಿಗದಿದ್ದಾಗ ಸುಬ್ರಮಣಿ ಎಂಬಾತನು ಕೋವಿಯಿಂದ ಗುಂಡು ಹಾರಿಸಿದ್ದಾರೆ. ಹಿಂಬಾಗಕ್ಕೆ ಗುಂಡು ಬಿದ್ದಿದೆ. ಗುಂಡಿನ ಶಬ್ದ ಕೇಳಿ ಜನ ಸೇರಿದಾಗ ಮಂಜು ಎಂಬುವವರನ್ನು ಹೊರತುಪಡಿಸಿ ಉಳಿದವರು ಓಡಿ ಹೋಗಿದ್ದಾರೆ. ನಂತರ ಸಂತ್ರಸ್ತನನ್ನು ಕುಶಾಲನಗರ ಆಸ್ಪತ್ರೆಗೆ ಸೇರಿಸಿದ್ದು, ಅಲ್ಲಿ ಗುಂಡು ತೆಗೆಯಲು ಆಗದೆ ನಂತರ ಮೈಸೂರಿನ ಕೆ.ಆರ್ ಆಸ್ಪತ್ರೆಗೆ ಸೇರಿಸಲಾಗಿದೆ.

ಒಂದೂವರೆ ತಿಂಗಳ ಹಿಂದೆ ಇದೇ ಅರಣ್ಯ ಸಿಬ್ಬಂದಿ ಮತ್ತು ನಮಗೂ ನಮ್ಮ ಮನೆ ಮುಂದಿನ ಮರದ ವಿಚಾರವಾಗಿ ಜಗಳವಾಗಿತ್ತು. ಸಿಬ್ಬಂದಿಯ ಅನ್ಯಾಯವನ್ನು ನಾವು ಪ್ರಶ್ನಿಸಿ ಜಗಳವಾಡುತ್ತಿದ್ದೇವು. ಹಾಗಾಗಿ ನಮ್ಮ ಮೇಲೆ ಅವರಿಗೆ ದ್ವೇಷ ಎಂದು ಸಂತ್ರಸ್ತನ ಪತ್ನಿ ಪುಷ್ಪ ಆರೋಪಿಸಿದ್ದಾರೆ.

ದೂರಿನ ಪ್ರತಿ

ಆದಿವಾಸಿಗಳ ನೆರವಿಗೆ ಸ್ಥಳೀಯ ಸಂಸ್ಥೆಗಳಾದ ಗ್ರೀನ್ ಇಂಡಿಯಾದ ಡಾ.ಮಹೇಂದ್ರ ಕುಮಾರ ಮತ್ತು ಕಾರ್ಡ್ ಸಂಸ್ಥೆಯ ರಾಯ್ ಡೇವಿಡ್ ಸ್ಥಳಕ್ಕೆ ತಲುಪಿ ಪೊಲೀಸ್ ದೂರು ಸಲ್ಲಿಸಿ ಆದಿವಾಸಿಗಳಿಗೆ ಧೈರ್ಯ ತುಂಬಿದ್ದಾರೆ. ಈ ಅಮಾನವೀಯ ಘಟನೆ ಖಂಡಿಸಿ ಇಂದು ಮೈಸೂರಿನಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ಮತ್ತು ಪತ್ರಿಕಾಗೋಷ್ಠಿ ನಡೆಸುವುದಾಗಿ ಡಾ. ಮಹೇಂದ್ರ ಕುಮಾರ್ ತಿಳಿಸಿದ್ದಾರೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಅವರು, “ಹಾಡಿಯ ಜನ ತಿಳಿಸುವ ಪ್ರಕಾರ, ಕಳೆದ ಒಂದೂವರೆ ತಿಂಗಳ ಹಿಂದೆ ಇದೇ ಐದಾರು ಜನ ಅರಣ್ಯ ಸಿಬ್ಬಂದಿಗಳ ಜೊತೆ ನಡೆಯಲಾಗಿದ್ದ ಕ್ಷುಲ್ಲಕ ವಾದ ಜಗಳಕ್ಕೆ ತಿರುಗಿ, ಅದು ದ್ವೇಷಕ್ಲೆ ನಾಂದಿ ಹಾಡಿದೆ. ಕೊನೆಗೆ ಗುಂಡಿಟ್ಟು ಕೊಲ್ಲುವ ಪ್ರಯತ್ನದವರೆಗೂ ಮುಂದುವರೆದಿದೆ. ಆದಿವಾಸಿಗಳೆಂದರೆ ತೀರಾ ಕನಿಷ್ಠ ಎಂಬ ಮನಸ್ಥಿತಿ ಇಲ್ಲಿಯ ಅರಣ್ಯ ಇಲಾಖೆಯ ಸಿಬ್ಬಂದಿಯವರಲ್ಲಿದೆ. ಗುಂಡು ಹೊಡೆದ ಮೇಲೆಯೂ ಇಲಾಖೆಯವರು ಎಲ್ಲಿಂದಲೋ ಕಟ್ಟಿಗೆ ತಂದು ಹಾಕಿ ಪ್ರಕರಣವನ್ನು ತಿರುಚುವ ಪಯತ್ನ ಮಾಡುತ್ತಿದ್ದಾರೆ. ಆದರೆ ಅವರು ಬೈಕಿನಲ್ಲಿ ಕಟ್ಟಿಗೆ ತಂದು ಹಾಕುತ್ತಿರುವುದಕ್ಕೆ ನಮ್ಮಲ್ಲಿ ಪುರಾವೆಗಳಿವೆ, ಅದನ್ನು ಪೋಲೀಸ್ ಇಲಾಖೆಗೆ ಸಲ್ಲಿಸಿದ್ದೇವೆ” ಎಂದರು.

ಪೊಲೀಸರು ನೀಡಿರುವ ಹಿಂಬರಹ

ಅರಣ್ಯ ಇಲಾಖೆಯ ಸಿಬ್ಬಂದಿಗಳು ಬಸವ ಮತ್ತು ಆತನ ಸಹಚರರು ಗಂಧದ ಕಟ್ಟಿಗೆ ಸಾಗಿಸುತ್ತಿದ್ದರೆಂದು ದೂರು ನೀಡಿದ್ದಾರೆ. ಪೋಲೀಸರು ಇವರ ವಿರುದ್ದ FIR ದಾಖಲಿಸಿದ್ದಾರೆ. ಆದರೆ ಹಾಡಿಯ ಜೇನು ಕುರುಬರು ಕೊಟ್ಟ ದೂರಿಗೆ ಕೇವಲ ಎಂಡಾರ್ಸಮೆಂಟ್ ನೀಡಲಾಗಿದ್ದು, ಇಲಾಖೆಯ ಸಿಬ್ಬಂದಿಗಳ ವಿರುದ್ದ FIR ಮಾಡಲಾಗುವುದಿಲ್ಲವೆಂದೂ, ಬದಲಾಗಿ ತನಿಖೆ ನಡೆಸುತ್ತೇವೆಂದು ಪೋಲೀಸ್ ಇಲಾಖೆಯವರು ತಿಳಿಸಿರುತ್ತಾರೆ. ಸ್ಥಳೀಯ ಶಾಸಕರಾದ ಮಹದೇವಪ್ಪನವರು ಹಾಗೂ ಸ್ಥಳೀಯ ಗ್ರಾಮ ಪಂಚಾಯತ್ ,ಇತರ ನಾಯಕರುಗಳು, ಪೋಲೀಸ್ ಇಲಾಖೆಗೆ ಪೋನ್ ಮಾಡಿ ಆದಿವಾಸಿಗಳಿಗೆ ಆದ ಅನ್ಯಾಯದ ವಿರುದ್ದ FIR ದಾಖಲಿಸಲು ತಿಳಿಸಿದರೂ ಮೇಲಿನ ಎಸ್ಪಿಯವರ ಆದೇಶದ ಪ್ರಕಾರ ದಾಖಲಿಸಲು ನಮಗೆ ಅನುಮತಿ ಇಲ್ಲವೆಂದು ತಿಳಿಸಿದ್ದಾರೆ. ಇದನ್ನು ವಿರೋಧಿಸಿ ಇಂದು ರಾಜ್ಯ ಮೂಲ ಆದಿವಾಸಿ ವೇದಿಕೆ ಮತ್ತು ಬುಡಕಟ್ಟು ಕೃಷಿಕರ ಸಂಘಟನೆಗಳು ಸೇರಿ ಪ್ರತಿಭಟಿಸುತ್ತೇವೆ ಎಂದು ತಿಳಿಸಿದ್ದಾರೆ.

ಅರಣ್ಯ ಸಿಬ್ಬಂದಿ ತಂದು ಹಾಕಿರುವ ಮರದ ತುಂಡುಗಳು

ನಟ ಚೇತನ್ ಈ ಅನ್ಯಾಯವನ್ನು ಖಂಡಿಸಿದ್ದು, ಮೈಸೂರಿನ ಪ್ರತಿಭಟನೆಯಲ್ಲಿ ಭಾಗವಹಿಸುತ್ತೇನೆ ಎಂದು ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, “ನಿನ್ನೆ ಪಿರಿಯಾಪಟ್ಟಣದಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಯೊಬ್ಬರಿಂದ ಗುಂಡೇಟು ತಿಂದು ಆಸ್ಪತ್ರೆಯಲ್ಲಿರುವ ಆದಿವಾಸಿ ವ್ಯಕ್ತಿಗೆ ನ್ಯಾಯ ಕೇಳಲು, ನಾನೀಗ ಮೈಸೂರಿಗೆ ಹೊರಟಿದ್ದೇನೆ.ಈ ವಿಷಯದ ಕುರಿತಾಗಿ, ಇಂದು ಬೆಳಗ್ಗೆ 10 ಗಂಟೆಯಿಂದ ಮೈಸೂರಿನ ಡಿಸಿ ಕಚೇರಿಯ ಎದುರು, ಆದಿವಾಸಿ ಗುಂಪುಗಳು ಮತ್ತು ಮಾನವ ಹಕ್ಕುಗಳ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಾರೆ. ನಾನು ಕೂಡ ಅವರೊಂದಿಗೆ ಕೈ ಜೋಡಿಸುತ್ತೇನೆ” ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ಇದು ಫ್ಯಾಸಿಸ್ಟರು, ಬಂಡವಾಳಿಗರು V/S ದಮನಿತರ ಸ್ವಾಭಿಮಾನದ ನಡುವಿನ ಹೋರಾಟ…!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...