Homeಚಳವಳಿಜೇನುಕುರುಬ ಆದಿವಾಸಿ ಯುವಕನಿಗೆ ಅರಣ್ಯ ಸಿಬ್ಬಂದಿಯಿಂದ ಗುಂಡೇಟು: ಭುಗಿಲೆದ್ದ ಆಕ್ರೋಶ

ಜೇನುಕುರುಬ ಆದಿವಾಸಿ ಯುವಕನಿಗೆ ಅರಣ್ಯ ಸಿಬ್ಬಂದಿಯಿಂದ ಗುಂಡೇಟು: ಭುಗಿಲೆದ್ದ ಆಕ್ರೋಶ

- Advertisement -
- Advertisement -

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಬೈಲಕುಪ್ಪೆ ಬಳಿಯ ರಾಣಿಗೇಟ್ ಜೇನುಕುರುಬರ ಹಾಡಿಯ ಬಸವ ಎಂಬ ವ್ಯಕ್ತಿಯನ್ನು ಅಲ್ಲಿನ ಅರಣ್ಯ ಇಲಾಖೆಯ ವಾಚ್‌ಮನ್ ಮತ್ತು ಗಾರ್ಡ್ ಗಳು ಕ್ಷುಲ್ಲಕ ಕಾರಣಕ್ಕೆ ಗುಂಡಿಕ್ಕಿ ಹೊಡೆದಿದ್ದಾರೆ. ಆ ವ್ಯಕ್ತಿ ಸದ್ಯ ಮೈಸೂರಿನ ಕೆ.ಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅರಣ್ಯ ಸಿಬ್ಬಂದಿಯ ಈ ಅಮಾನವೀಯ ದೌರ್ಜನ್ಯ ಖಂಡಿಸಿ ಆಕ್ರೋಶ ಭುಗಿಲೆದ್ದಿದೆ. ಇಂದು ಗುರುವಾರ ಬೆಳಿಗ್ಗೆ 10.30ಕ್ಕೆ ಮೈಸೂರಿನ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಜೇನುಕುರುಬರ ಯುವಕ ಬಸವ ಎಂಬುವವರು ಡಿಸೆಂಬರ್ 1ರ ಬುಧವಾರ ಮಧ್ಯಾಹ್ನ 12 ಗಂಟೆ ಸಮಯದಲ್ಲಿ ಬಹಿರ್ದೆಶೆಗೆ ಹೋಗಿದ್ದಾಗ ಆತನಿಗೆ ಅರಣ್ಯ ಇಲಾಖೆಯ ವಾಚ್ ಮನ್ ಸುಬ್ರಮಣಿ ಎಂಬಾತ ಬಂದೂಕಿನಿಂದ ಶೂಟ್ ಮಾಡಿದ್ದಾನೆ ಎಂದು ಸಂತ್ರಸ್ತನ ಪತ್ನಿ ಬೈಲಕುಪ್ಪೆ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಘಟನೆಯ ವಿವರ:

ಜೋಳ ಕೊಯ್ಲು ಮಾಡುವ ಸಂದರ್ಭದಲ್ಲಿ ಬಸವ ಎಂಬುವವರು ಪಕ್ಕದ ಅಣ್ಣಯ್ಯ ಎಂಬುವವರ ಜಮೀನಿಗೆ ಬರ್ಹಿದೆಸೆಗೆಂದು ಹೋಗಿದ್ದಾರೆ. ಆಗ ಅರಣ್ಯ ಇಲಾಖೆಯ ವಾಚ್‌ಮನ್ ಸುಬ್ರಮಣಿ ಜೊತೆಗೆ ಮಹೇಶ ಮತ್ತು ಸಿದ್ದ ಎಂಬುವವರು ಹಾಗೂ ಗಾರ್ಡ್ ಮಂಜು ಇವರುಗಳು ಬಸವನನ್ನು ಅಟ್ಟಿಸಿಕೊಂಡು ಬಂದು ಸಿಗದಿದ್ದಾಗ ಸುಬ್ರಮಣಿ ಎಂಬಾತನು ಕೋವಿಯಿಂದ ಗುಂಡು ಹಾರಿಸಿದ್ದಾರೆ. ಹಿಂಬಾಗಕ್ಕೆ ಗುಂಡು ಬಿದ್ದಿದೆ. ಗುಂಡಿನ ಶಬ್ದ ಕೇಳಿ ಜನ ಸೇರಿದಾಗ ಮಂಜು ಎಂಬುವವರನ್ನು ಹೊರತುಪಡಿಸಿ ಉಳಿದವರು ಓಡಿ ಹೋಗಿದ್ದಾರೆ. ನಂತರ ಸಂತ್ರಸ್ತನನ್ನು ಕುಶಾಲನಗರ ಆಸ್ಪತ್ರೆಗೆ ಸೇರಿಸಿದ್ದು, ಅಲ್ಲಿ ಗುಂಡು ತೆಗೆಯಲು ಆಗದೆ ನಂತರ ಮೈಸೂರಿನ ಕೆ.ಆರ್ ಆಸ್ಪತ್ರೆಗೆ ಸೇರಿಸಲಾಗಿದೆ.

ಒಂದೂವರೆ ತಿಂಗಳ ಹಿಂದೆ ಇದೇ ಅರಣ್ಯ ಸಿಬ್ಬಂದಿ ಮತ್ತು ನಮಗೂ ನಮ್ಮ ಮನೆ ಮುಂದಿನ ಮರದ ವಿಚಾರವಾಗಿ ಜಗಳವಾಗಿತ್ತು. ಸಿಬ್ಬಂದಿಯ ಅನ್ಯಾಯವನ್ನು ನಾವು ಪ್ರಶ್ನಿಸಿ ಜಗಳವಾಡುತ್ತಿದ್ದೇವು. ಹಾಗಾಗಿ ನಮ್ಮ ಮೇಲೆ ಅವರಿಗೆ ದ್ವೇಷ ಎಂದು ಸಂತ್ರಸ್ತನ ಪತ್ನಿ ಪುಷ್ಪ ಆರೋಪಿಸಿದ್ದಾರೆ.

ದೂರಿನ ಪ್ರತಿ

ಆದಿವಾಸಿಗಳ ನೆರವಿಗೆ ಸ್ಥಳೀಯ ಸಂಸ್ಥೆಗಳಾದ ಗ್ರೀನ್ ಇಂಡಿಯಾದ ಡಾ.ಮಹೇಂದ್ರ ಕುಮಾರ ಮತ್ತು ಕಾರ್ಡ್ ಸಂಸ್ಥೆಯ ರಾಯ್ ಡೇವಿಡ್ ಸ್ಥಳಕ್ಕೆ ತಲುಪಿ ಪೊಲೀಸ್ ದೂರು ಸಲ್ಲಿಸಿ ಆದಿವಾಸಿಗಳಿಗೆ ಧೈರ್ಯ ತುಂಬಿದ್ದಾರೆ. ಈ ಅಮಾನವೀಯ ಘಟನೆ ಖಂಡಿಸಿ ಇಂದು ಮೈಸೂರಿನಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ಮತ್ತು ಪತ್ರಿಕಾಗೋಷ್ಠಿ ನಡೆಸುವುದಾಗಿ ಡಾ. ಮಹೇಂದ್ರ ಕುಮಾರ್ ತಿಳಿಸಿದ್ದಾರೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಅವರು, “ಹಾಡಿಯ ಜನ ತಿಳಿಸುವ ಪ್ರಕಾರ, ಕಳೆದ ಒಂದೂವರೆ ತಿಂಗಳ ಹಿಂದೆ ಇದೇ ಐದಾರು ಜನ ಅರಣ್ಯ ಸಿಬ್ಬಂದಿಗಳ ಜೊತೆ ನಡೆಯಲಾಗಿದ್ದ ಕ್ಷುಲ್ಲಕ ವಾದ ಜಗಳಕ್ಕೆ ತಿರುಗಿ, ಅದು ದ್ವೇಷಕ್ಲೆ ನಾಂದಿ ಹಾಡಿದೆ. ಕೊನೆಗೆ ಗುಂಡಿಟ್ಟು ಕೊಲ್ಲುವ ಪ್ರಯತ್ನದವರೆಗೂ ಮುಂದುವರೆದಿದೆ. ಆದಿವಾಸಿಗಳೆಂದರೆ ತೀರಾ ಕನಿಷ್ಠ ಎಂಬ ಮನಸ್ಥಿತಿ ಇಲ್ಲಿಯ ಅರಣ್ಯ ಇಲಾಖೆಯ ಸಿಬ್ಬಂದಿಯವರಲ್ಲಿದೆ. ಗುಂಡು ಹೊಡೆದ ಮೇಲೆಯೂ ಇಲಾಖೆಯವರು ಎಲ್ಲಿಂದಲೋ ಕಟ್ಟಿಗೆ ತಂದು ಹಾಕಿ ಪ್ರಕರಣವನ್ನು ತಿರುಚುವ ಪಯತ್ನ ಮಾಡುತ್ತಿದ್ದಾರೆ. ಆದರೆ ಅವರು ಬೈಕಿನಲ್ಲಿ ಕಟ್ಟಿಗೆ ತಂದು ಹಾಕುತ್ತಿರುವುದಕ್ಕೆ ನಮ್ಮಲ್ಲಿ ಪುರಾವೆಗಳಿವೆ, ಅದನ್ನು ಪೋಲೀಸ್ ಇಲಾಖೆಗೆ ಸಲ್ಲಿಸಿದ್ದೇವೆ” ಎಂದರು.

ಪೊಲೀಸರು ನೀಡಿರುವ ಹಿಂಬರಹ

ಅರಣ್ಯ ಇಲಾಖೆಯ ಸಿಬ್ಬಂದಿಗಳು ಬಸವ ಮತ್ತು ಆತನ ಸಹಚರರು ಗಂಧದ ಕಟ್ಟಿಗೆ ಸಾಗಿಸುತ್ತಿದ್ದರೆಂದು ದೂರು ನೀಡಿದ್ದಾರೆ. ಪೋಲೀಸರು ಇವರ ವಿರುದ್ದ FIR ದಾಖಲಿಸಿದ್ದಾರೆ. ಆದರೆ ಹಾಡಿಯ ಜೇನು ಕುರುಬರು ಕೊಟ್ಟ ದೂರಿಗೆ ಕೇವಲ ಎಂಡಾರ್ಸಮೆಂಟ್ ನೀಡಲಾಗಿದ್ದು, ಇಲಾಖೆಯ ಸಿಬ್ಬಂದಿಗಳ ವಿರುದ್ದ FIR ಮಾಡಲಾಗುವುದಿಲ್ಲವೆಂದೂ, ಬದಲಾಗಿ ತನಿಖೆ ನಡೆಸುತ್ತೇವೆಂದು ಪೋಲೀಸ್ ಇಲಾಖೆಯವರು ತಿಳಿಸಿರುತ್ತಾರೆ. ಸ್ಥಳೀಯ ಶಾಸಕರಾದ ಮಹದೇವಪ್ಪನವರು ಹಾಗೂ ಸ್ಥಳೀಯ ಗ್ರಾಮ ಪಂಚಾಯತ್ ,ಇತರ ನಾಯಕರುಗಳು, ಪೋಲೀಸ್ ಇಲಾಖೆಗೆ ಪೋನ್ ಮಾಡಿ ಆದಿವಾಸಿಗಳಿಗೆ ಆದ ಅನ್ಯಾಯದ ವಿರುದ್ದ FIR ದಾಖಲಿಸಲು ತಿಳಿಸಿದರೂ ಮೇಲಿನ ಎಸ್ಪಿಯವರ ಆದೇಶದ ಪ್ರಕಾರ ದಾಖಲಿಸಲು ನಮಗೆ ಅನುಮತಿ ಇಲ್ಲವೆಂದು ತಿಳಿಸಿದ್ದಾರೆ. ಇದನ್ನು ವಿರೋಧಿಸಿ ಇಂದು ರಾಜ್ಯ ಮೂಲ ಆದಿವಾಸಿ ವೇದಿಕೆ ಮತ್ತು ಬುಡಕಟ್ಟು ಕೃಷಿಕರ ಸಂಘಟನೆಗಳು ಸೇರಿ ಪ್ರತಿಭಟಿಸುತ್ತೇವೆ ಎಂದು ತಿಳಿಸಿದ್ದಾರೆ.

ಅರಣ್ಯ ಸಿಬ್ಬಂದಿ ತಂದು ಹಾಕಿರುವ ಮರದ ತುಂಡುಗಳು

ನಟ ಚೇತನ್ ಈ ಅನ್ಯಾಯವನ್ನು ಖಂಡಿಸಿದ್ದು, ಮೈಸೂರಿನ ಪ್ರತಿಭಟನೆಯಲ್ಲಿ ಭಾಗವಹಿಸುತ್ತೇನೆ ಎಂದು ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, “ನಿನ್ನೆ ಪಿರಿಯಾಪಟ್ಟಣದಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಯೊಬ್ಬರಿಂದ ಗುಂಡೇಟು ತಿಂದು ಆಸ್ಪತ್ರೆಯಲ್ಲಿರುವ ಆದಿವಾಸಿ ವ್ಯಕ್ತಿಗೆ ನ್ಯಾಯ ಕೇಳಲು, ನಾನೀಗ ಮೈಸೂರಿಗೆ ಹೊರಟಿದ್ದೇನೆ.ಈ ವಿಷಯದ ಕುರಿತಾಗಿ, ಇಂದು ಬೆಳಗ್ಗೆ 10 ಗಂಟೆಯಿಂದ ಮೈಸೂರಿನ ಡಿಸಿ ಕಚೇರಿಯ ಎದುರು, ಆದಿವಾಸಿ ಗುಂಪುಗಳು ಮತ್ತು ಮಾನವ ಹಕ್ಕುಗಳ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಾರೆ. ನಾನು ಕೂಡ ಅವರೊಂದಿಗೆ ಕೈ ಜೋಡಿಸುತ್ತೇನೆ” ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ಇದು ಫ್ಯಾಸಿಸ್ಟರು, ಬಂಡವಾಳಿಗರು V/S ದಮನಿತರ ಸ್ವಾಭಿಮಾನದ ನಡುವಿನ ಹೋರಾಟ…!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...