Homeಮುಖಪುಟಕೆನರಾ ಬ್ಯಾಂಕ್‌ಗೆ ವಂಚನೆ: ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ್ ಗೋಯಲ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಕೆನರಾ ಬ್ಯಾಂಕ್‌ಗೆ ವಂಚನೆ: ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ್ ಗೋಯಲ್‌ಗೆ 14 ದಿನಗಳ ನ್ಯಾಯಾಂಗ ಬಂಧನ

- Advertisement -
- Advertisement -

ಕೆನರಾ ಬ್ಯಾಂಕ್‌ಗೆ  538 ಕೋಟಿ ವಂಚನೆ ಮಾಡಿ, ಅಕ್ರಮ ಹಣ ವರ್ಗಾವಣೆ ಮಾಡಿರುವ ಪ್ರಕರಣದಲ್ಲಿ ಬಂಧಿತರಾಗಿರುವ ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಅವರನ್ನು ಪಿಎಂಎಲ್‌ಎ ಕೋರ್ಟ್ 14 ದಿನ ಅವಧಿಗೆ ನ್ಯಾಯಾಂಗ ಬಂಧನಕ್ಕೆ ಗುರುವಾರ ಬಪ್ಪಿಸಿದೆ.

ಜಾರಿ ನಿರ್ದೇಶನಾಲಯವು (ED) ಮುಂಬೈನಲ್ಲಿರುವ ಕೇಂದ್ರೀಯ ಸಂಸ್ಥೆಯ ಕಚೇರಿಯಲ್ಲಿ ಸುದೀರ್ಘ ವಿಚಾರಣೆಯ ನಂತರ ಗೋಯಲ್ ಅವರನ್ನು ಸೆಪ್ಟೆಂಬರ್ 1ರಂದು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ಬಂಧಿಸಿತು.

ಉದ್ಯಮಿಯ ಗೋಯಲ್ ಅವರನ್ನು ಗುರುವಾರ ಇಡಿ ರಿಮಾಂಡ್‌ನ ಕೊನೆಯಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ತನಿಖಾ ಸಂಸ್ಥೆಯು ಯಾವುದೇ ಹೆಚ್ಚಿನ ಬಂಧನವನ್ನು ಕೋರದ ಕಾರಣ ನ್ಯಾಯಾಲಯವು ಗೋಯಲ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ದಕ್ಷಿಣ ಮುಂಬೈನ ಆರ್ಥರ್ ರಸ್ತೆಯ ಜೈಲಿಗೆ ಕಳುಹಿಸಬೇಕು ಎಂಬ ಗೋಯಲ್ ಮನವಿಯನ್ನು ಕೋರ್ಟ್ ಪುರಸ್ಕರಿಸಿತು.

ಗೋಯಲ್‌ ರನ್ನು ಸೆ.1ರಂದು ಪಿಎಂಎಲ್‌ಎ ಕಾಯ್ದೆಯಡಿ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಬಂಧಿಸಿದ್ದರು. ಪಿಎಂಎಲ್‌ಎ ವಿಶೇಷ ಕೋರ್ಟ್‌ನ ನ್ಯಾಯಾಧೀಶರಾದ ಎಂ.ಜಿ.ದೇಶಪಾಂಡೆ ಅವರ ಎದುರು ಗುರುವಾರ ಹಾಜರುಪಡಿಸಲಾಗಿತ್ತು.

ಬಳಿಕ, ತಾವು ವಿವಿಧ ಅನಾರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದು, ಕುಟುಂಬ ಹಾಗೂ ಪರಿಣತ ವೈದ್ಯರಿಂದ ವಿಶ್ವ ಆರೋಗ್ಯ ತಪಾಸಣೆಗೆ ಒಳಗಾಗಲು ಅನುವು ಮಾಡಿಕೊಡಬೇಕು. ನಿಯಮಿತವಾಗಿ ವೈದ್ಯಕೀಯ ಸೌಲಭ್ಯ ಒದಗಿಸಬೇಕು ಎಂದು ಕೋರಿ ಗೋಯಲ್ ಅರ್ಜಿಸಲ್ಲಿಸಿದರು.

”ಹೃದಯಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು, ಏಷಿಯನ್ ಹಾರ್ಟ್ ಇನ್‌ಸ್ಟಿಟ್ಯೂಟ್‌ನಲ್ಲಿ ಶಸ್ತ್ರಚಿಕಿತ್ಸೆಯಾಗಿದೆ. ಈ ಸಮಸ್ಯೆ ಗಂಭೀರವಾಗಿದ್ದು, ಜೀವಕ್ಕೂ ತೊಡಕಾಗಬಹುದಾಗಿದೆ. ಅಲ್ಲದ ಅಧಿಕದೊತ್ತಡ, ಮಧುಮೇಹ ಸಮಸ್ಯೆಗಳು ಇವೆ” ಎಂದು ಉಲ್ಲೇಖಿಸಿದ್ದಾರೆ.

ಈ ಅರ್ಜಿ ಕುರಿತು ಪ್ರತಿಕ್ರಿಯೆ ದಾಖಲಿಸುವಂತೆ ಕೋರ್ಟ್‌ ಇ.ಡಿ ಪರ ವಕೀಲರಿಗೆ ಸೂಚಿಸಿತು.

ನರೇಶ್ ಗೋಯಲ್ ಕೇಸ್

78 ವರ್ಷದ ನರೇಶ್ ಗೋಯಲ್ ಅವರನ್ನು 538 ಕೋಟಿ ರೂ. ಬ್ಯಾಂಕ್ ವಂಚನೆ ಪ್ರಕರಣದಲ್ಲಿ ಬಂಧಿಸಲಾಗಿದೆ. ವಿವಿಧ ಟ್ರಸ್ಟ್‌ಗಳನ್ನು ರಚಿಸುವ ಮೂಲಕ ಮತ್ತು ಅವುಗಳನ್ನು ಬಳಸಿಕೊಂಡು ಆಸ್ತಿಗಳನ್ನು ಖರೀದಿಸಲು ಭಾರತದಿಂದ ವಿದೇಶಕ್ಕೆ ಹಣವನ್ನು ಪೋಲು ಮಾಡಿದ್ದಾರೆ. ಸರ್ಕಾರಿ ಸ್ವಾಮ್ಯದ ಕೆನರಾ ಬ್ಯಾಂಕ್‌ನಲ್ಲಿ ಗೋಯಲ್ ₹538 ಕೋಟಿ ವಂಚನೆ ಮಾಡಿದ್ದಾರೆ ಎಂದು ತನಿಖಾ ಸಂಸ್ಥೆ ತಿಳಿಸಿದೆ.

ಕೆನರಾ ಬ್ಯಾಂಕ್‌ನಲ್ಲಿ ₹ 538 ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಟ್ ಏರ್‌ವೇಸ್, ಗೋಯಲ್, ಅವರ ಪತ್ನಿ ಅನಿತಾ ಮತ್ತು ಕೆಲವು ಮಾಜಿ ಕಂಪನಿ ಅಧಿಕಾರಿಗಳ ವಿರುದ್ಧ ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ಎಫ್‌ಐಆರ್‌ನಿಂದ ಹಣ ವರ್ಗಾವಣೆ ಪ್ರಕರಣವು ದಾಖಲಾಗಿದೆ. ಜೆಟ್ ಏರ್‌ವೇಸ್ (ಇಂಡಿಯಾ) ಲಿಮಿಟೆಡ್‌ಗೆ ₹848.86 ಕೋಟಿ ಮೊತ್ತದ ಸಾಲದ ಮಿತಿಗಳು ಮತ್ತು ಸಾಲಗಳನ್ನು ಮಂಜೂರು ಮಾಡಿದೆ ಎಂದು ಆರೋಪಿಸಿ ಸರ್ಕಾರದ ಸಾಲದಾತರ ದೂರಿನ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಇದರಲ್ಲಿ ₹538.62 ಕೋಟಿ ಬಾಕಿ ಉಳಿದಿದೆ.

ಇದನ್ನೂ ಓದಿ: ಕೆನರಾ ಬ್ಯಾಂಕ್‌ಗೆ 538 ಕೋಟಿ ವಂಚನೆ:  ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...