Homeಮುಖಪುಟಕೆನರಾ ಬ್ಯಾಂಕ್‌ಗೆ ವಂಚನೆ: ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ್ ಗೋಯಲ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಕೆನರಾ ಬ್ಯಾಂಕ್‌ಗೆ ವಂಚನೆ: ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ್ ಗೋಯಲ್‌ಗೆ 14 ದಿನಗಳ ನ್ಯಾಯಾಂಗ ಬಂಧನ

- Advertisement -
- Advertisement -

ಕೆನರಾ ಬ್ಯಾಂಕ್‌ಗೆ  538 ಕೋಟಿ ವಂಚನೆ ಮಾಡಿ, ಅಕ್ರಮ ಹಣ ವರ್ಗಾವಣೆ ಮಾಡಿರುವ ಪ್ರಕರಣದಲ್ಲಿ ಬಂಧಿತರಾಗಿರುವ ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಅವರನ್ನು ಪಿಎಂಎಲ್‌ಎ ಕೋರ್ಟ್ 14 ದಿನ ಅವಧಿಗೆ ನ್ಯಾಯಾಂಗ ಬಂಧನಕ್ಕೆ ಗುರುವಾರ ಬಪ್ಪಿಸಿದೆ.

ಜಾರಿ ನಿರ್ದೇಶನಾಲಯವು (ED) ಮುಂಬೈನಲ್ಲಿರುವ ಕೇಂದ್ರೀಯ ಸಂಸ್ಥೆಯ ಕಚೇರಿಯಲ್ಲಿ ಸುದೀರ್ಘ ವಿಚಾರಣೆಯ ನಂತರ ಗೋಯಲ್ ಅವರನ್ನು ಸೆಪ್ಟೆಂಬರ್ 1ರಂದು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ಬಂಧಿಸಿತು.

ಉದ್ಯಮಿಯ ಗೋಯಲ್ ಅವರನ್ನು ಗುರುವಾರ ಇಡಿ ರಿಮಾಂಡ್‌ನ ಕೊನೆಯಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ತನಿಖಾ ಸಂಸ್ಥೆಯು ಯಾವುದೇ ಹೆಚ್ಚಿನ ಬಂಧನವನ್ನು ಕೋರದ ಕಾರಣ ನ್ಯಾಯಾಲಯವು ಗೋಯಲ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ದಕ್ಷಿಣ ಮುಂಬೈನ ಆರ್ಥರ್ ರಸ್ತೆಯ ಜೈಲಿಗೆ ಕಳುಹಿಸಬೇಕು ಎಂಬ ಗೋಯಲ್ ಮನವಿಯನ್ನು ಕೋರ್ಟ್ ಪುರಸ್ಕರಿಸಿತು.

ಗೋಯಲ್‌ ರನ್ನು ಸೆ.1ರಂದು ಪಿಎಂಎಲ್‌ಎ ಕಾಯ್ದೆಯಡಿ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಬಂಧಿಸಿದ್ದರು. ಪಿಎಂಎಲ್‌ಎ ವಿಶೇಷ ಕೋರ್ಟ್‌ನ ನ್ಯಾಯಾಧೀಶರಾದ ಎಂ.ಜಿ.ದೇಶಪಾಂಡೆ ಅವರ ಎದುರು ಗುರುವಾರ ಹಾಜರುಪಡಿಸಲಾಗಿತ್ತು.

ಬಳಿಕ, ತಾವು ವಿವಿಧ ಅನಾರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದು, ಕುಟುಂಬ ಹಾಗೂ ಪರಿಣತ ವೈದ್ಯರಿಂದ ವಿಶ್ವ ಆರೋಗ್ಯ ತಪಾಸಣೆಗೆ ಒಳಗಾಗಲು ಅನುವು ಮಾಡಿಕೊಡಬೇಕು. ನಿಯಮಿತವಾಗಿ ವೈದ್ಯಕೀಯ ಸೌಲಭ್ಯ ಒದಗಿಸಬೇಕು ಎಂದು ಕೋರಿ ಗೋಯಲ್ ಅರ್ಜಿಸಲ್ಲಿಸಿದರು.

”ಹೃದಯಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು, ಏಷಿಯನ್ ಹಾರ್ಟ್ ಇನ್‌ಸ್ಟಿಟ್ಯೂಟ್‌ನಲ್ಲಿ ಶಸ್ತ್ರಚಿಕಿತ್ಸೆಯಾಗಿದೆ. ಈ ಸಮಸ್ಯೆ ಗಂಭೀರವಾಗಿದ್ದು, ಜೀವಕ್ಕೂ ತೊಡಕಾಗಬಹುದಾಗಿದೆ. ಅಲ್ಲದ ಅಧಿಕದೊತ್ತಡ, ಮಧುಮೇಹ ಸಮಸ್ಯೆಗಳು ಇವೆ” ಎಂದು ಉಲ್ಲೇಖಿಸಿದ್ದಾರೆ.

ಈ ಅರ್ಜಿ ಕುರಿತು ಪ್ರತಿಕ್ರಿಯೆ ದಾಖಲಿಸುವಂತೆ ಕೋರ್ಟ್‌ ಇ.ಡಿ ಪರ ವಕೀಲರಿಗೆ ಸೂಚಿಸಿತು.

ನರೇಶ್ ಗೋಯಲ್ ಕೇಸ್

78 ವರ್ಷದ ನರೇಶ್ ಗೋಯಲ್ ಅವರನ್ನು 538 ಕೋಟಿ ರೂ. ಬ್ಯಾಂಕ್ ವಂಚನೆ ಪ್ರಕರಣದಲ್ಲಿ ಬಂಧಿಸಲಾಗಿದೆ. ವಿವಿಧ ಟ್ರಸ್ಟ್‌ಗಳನ್ನು ರಚಿಸುವ ಮೂಲಕ ಮತ್ತು ಅವುಗಳನ್ನು ಬಳಸಿಕೊಂಡು ಆಸ್ತಿಗಳನ್ನು ಖರೀದಿಸಲು ಭಾರತದಿಂದ ವಿದೇಶಕ್ಕೆ ಹಣವನ್ನು ಪೋಲು ಮಾಡಿದ್ದಾರೆ. ಸರ್ಕಾರಿ ಸ್ವಾಮ್ಯದ ಕೆನರಾ ಬ್ಯಾಂಕ್‌ನಲ್ಲಿ ಗೋಯಲ್ ₹538 ಕೋಟಿ ವಂಚನೆ ಮಾಡಿದ್ದಾರೆ ಎಂದು ತನಿಖಾ ಸಂಸ್ಥೆ ತಿಳಿಸಿದೆ.

ಕೆನರಾ ಬ್ಯಾಂಕ್‌ನಲ್ಲಿ ₹ 538 ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಟ್ ಏರ್‌ವೇಸ್, ಗೋಯಲ್, ಅವರ ಪತ್ನಿ ಅನಿತಾ ಮತ್ತು ಕೆಲವು ಮಾಜಿ ಕಂಪನಿ ಅಧಿಕಾರಿಗಳ ವಿರುದ್ಧ ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ಎಫ್‌ಐಆರ್‌ನಿಂದ ಹಣ ವರ್ಗಾವಣೆ ಪ್ರಕರಣವು ದಾಖಲಾಗಿದೆ. ಜೆಟ್ ಏರ್‌ವೇಸ್ (ಇಂಡಿಯಾ) ಲಿಮಿಟೆಡ್‌ಗೆ ₹848.86 ಕೋಟಿ ಮೊತ್ತದ ಸಾಲದ ಮಿತಿಗಳು ಮತ್ತು ಸಾಲಗಳನ್ನು ಮಂಜೂರು ಮಾಡಿದೆ ಎಂದು ಆರೋಪಿಸಿ ಸರ್ಕಾರದ ಸಾಲದಾತರ ದೂರಿನ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಇದರಲ್ಲಿ ₹538.62 ಕೋಟಿ ಬಾಕಿ ಉಳಿದಿದೆ.

ಇದನ್ನೂ ಓದಿ: ಕೆನರಾ ಬ್ಯಾಂಕ್‌ಗೆ 538 ಕೋಟಿ ವಂಚನೆ:  ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಬಂಧನ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ರಾಜಸ್ಥಾನ: ಬಿಜೆಪಿ ಸರ್ಕಾರದ ಯೋಜನೆಯಲ್ಲಿ 1,140 ಕೋಟಿ ರೂ.ನಷ್ಟ: ತಮ್ಮದೇ ಸರಕಾರದ ವಿರುದ್ಧ ಆರೋಪಿಸಿದ...

0
ರಾಜಸ್ಥಾನದ ಬಿಜೆಪಿ ಸರಕಾರ ಅಧಿಕಾರಕ್ಕೇರಿದ ಆರು ತಿಂಗಳಲ್ಲೇ ಬಿಕ್ಕಟ್ಟನ್ನು ಎದುರಿಸುತ್ತಿದ್ದು, ಮುಖ್ಯಮಂತ್ರಿಯ ಅಧೀನದ ಇಲಾಖೆಯಲ್ಲಿನ ವಸತಿ ಯೋಜನೆಯಲ್ಲಿನ ಲೋಪದೋಷವನ್ನು ಕ್ಯಾಬಿನೆಟ್ ಸಚಿವರೋರ್ವರು ಬಹಿರಂಗಪಡಿಸಿದ್ದು, ಇದರಿಂದ ಸರಕಾರದ ಬೊಕ್ಕಸಕ್ಕೆ 1,146 ಕೋಟಿ ರೂ. ನಷ್ಟವಾಗಿದೆ...