Homeಮುಖಪುಟಜಾರ್ಖಂಡ್ | ಪೊಲೀಸ್ ನೇಮಕಾತಿ ಪರೀಕ್ಷೆ ವೇಳೆ 12 ಅಭ್ಯರ್ಥಿಗಳು ಸಾವು

ಜಾರ್ಖಂಡ್ | ಪೊಲೀಸ್ ನೇಮಕಾತಿ ಪರೀಕ್ಷೆ ವೇಳೆ 12 ಅಭ್ಯರ್ಥಿಗಳು ಸಾವು

- Advertisement -
- Advertisement -

ಜಾರ್ಖಂಡ್‌ನಲ್ಲಿ ಈ ವರ್ಷದ ಅಬಕಾರಿ ಕಾನ್‌ಸ್ಟೇಬಲ್ ನೇಮಕಾತಿಯ ದೈಹಿಕ ಪರೀಕ್ಷೆಯ ವೇಳೆ 12 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಈ ಬಾರಿ ಅಬಕಾರಿ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆಯ ಮೌಲ್ಯಮಾಪನದಲ್ಲಿ ಬದಲಾವಣೆ ಮಾಡಲಾಗಿದೆ. ಅಭ್ಯರ್ಥಿಗಳು 1.6 ಕಿಮೀ ಬದಲಿಗೆ 10 ಕಿಮೀ ಓಡಬೇಕು. ಫಿಟ್ನೆಸ್ ಮಟ್ಟವನ್ನು ಮೌಲ್ಯಮಾಪನ ಮಾಡದಿರುವುದು, ಅತಿಯಾದ ಆರ್ದ್ರತೆ ಮತ್ತು ಲಿಖಿತ ಪರೀಕ್ಷೆಯ ಮೊದಲು ದೈಹಿಕ ಪರೀಕ್ಷೆಗಳನ್ನು ನಡೆಸುವ ನಿರ್ಧಾರದಿಂದ 12 ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಲಾಗಿದೆ.

ಆಗಸ್ಟ್ 22 ರಿಂದ ಜಾರ್ಖಂಡ್ ಪೊಲೀಸರ ಮೇಲ್ವಿಚಾರಣೆಯಲ್ಲಿ ದೈಹಿಕ ಪರೀಕ್ಷೆ ಡ್ರೈವ್‌ನ ಮೊದಲ ಹಂತ ನಡೆಯುತ್ತಿದೆ. 60 ನಿಮಿಷಗಳಲ್ಲಿ ಓಟವನ್ನು ಪೂರ್ಣಗೊಳಿಸುವ ಅರ್ಹ ಅಭ್ಯರ್ಥಿಗಳು ನಂತರ ಲಿಖಿತ ಪರೀಕ್ಷೆ ಮತ್ತು ಅಂತಿಮ ವೈದ್ಯಕೀಯ ಪರೀಕ್ಷೆಗೆ ಒಳಗಾಗುತ್ತಾರೆ. ಪರೀಕ್ಷೆಗೆ ಕಡ್ಡಾಯವಾಗಿರುವ 10 ಕಿಮೀ ಓಟವನ್ನು ಓಡುವಾಗ 12 ಮಂದಿ ಸಾವನ್ನಪ್ಪಿದ್ದಾರೆ.

ಮೃತರನ್ನು 19 ರಿಂದ 31 ವರ್ಷ ವಯಸ್ಸಿನವರು ಎಂದು ಗುರುತಿಸಲಾಗಿದ್ದು, ಪಲಾಮು ಮೂಲದ ಅಮರೇಶ್ ಕುಮಾರ್, ಪ್ರದೀಪ್ ಕುಮಾರ್, ಅಜಯ್ ಮಹತೋ, ಅರುಣ್ ಕುಮಾರ್ ಮತ್ತು ದೀಪಕ್ ಕುಮಾರ್ ಪಾಂಡು, ಹಜಾರಿಬಾಗ್‌ನ ಮನೋಜ್ ಕುಮಾರ್ ಮತ್ತು ಸೂರಜ್ ಕುಮಾರ್ ವರ್ಮಾ, ಸಾಹಿಬ್‌ಗಂಜ್‌ನ ವಿಕಾಸ್ ಲಿಂಡಾ ಮತ್ತು ಗಿರಿದಿಹ್‌ನ ಸುಮಿತ್ ಯಾದವ್ ಸಾವನ್ನಪ್ಪಿದವರು. ಇನ್ನೂ ಮೂವರ ವಿವರಗಳನ್ನು ಇದುವರೆಗೂ ಬಹಿರಂಗಪಡಿಸಿಲ್ಲ.

ಸೆಪ್ಟೆಂಬರ್ 2ರವರೆಗೆ ಒಟ್ಟು 1.87 ಲಕ್ಷ ಅಭ್ಯರ್ಥಿಗಳು ದೈಹಿಕ ಪರೀಕ್ಷೆಗೆ ಹಾಜರಾಗಿದ್ದು,ಅದರಲ್ಲಿ 1.17 ಲಕ್ಷ ಮಂದಿ ಮುಂದಿನ ಸುತ್ತಿಗೆ ಅರ್ಹತೆ ಪಡೆದಿದ್ದಾರೆ.

ಸರ್ಕಾರಿ ಮೂಲಗಳ ಪ್ರಕಾರ, 2000ರಲ್ಲಿ ಜಾರ್ಖಂಡ್ ರಚನೆಯಾದ ನಂತರ ಇದೇ ಮೊದಲ ಬಾರಿಗೆ ಅಬಕಾರಿ ಕಾನ್‌ಸ್ಟೇಬಲ್ ನೇಮಕಾತಿ ಡ್ರೈವ್ ನಡೆಸಲಾಗಿದೆ. 2008 ಮತ್ತು 2019 ರಲ್ಲಿ ಪ್ರಯತ್ನಿಸಿದರೂ ಪೂರ್ಣಗೊಂಡಿರಲಿಲ್ಲ.

12 ಮಂದಿಯ ಸಾವಿನ ಹಿನ್ನೆಲೆ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕ ಸ್ಥಗಿತಗೊಳಿಸಲಾಗಿದೆ ಮತ್ತು ತನಿಖೆಗೆ ಸೂಚಿಸಲಾಗಿದೆ. ಸೆಪ್ಟೆಂಬರ್ 9ರಂದು ನೇಮಕಾತಿ ಡ್ರೈವ್ ಪುನರಾರಂಭವಾಗಲಿದೆ. ಆದರೆ, ಅಭ್ಯರ್ಥಿಗಳ ಸಾವಿನ ಕುರಿತು ಇನ್ನೂ ವರದಿ ಬಂದಿಲ್ಲ.

“ರಾಜ್ಯ ಸರ್ಕಾರವು ಕಾನೂನು ನಿಗದಿಪಡಿಸಿದ ಕಾರ್ಯವಿಧಾನದ ಪ್ರಕಾರ ಪರೀಕ್ಷೆ ನಡೆಸಿದೆ. ಹಲವು ಅಭ್ಯರ್ಥಿಗಳು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಅದು ವಿವಿಧ ಕಾರಣಗಳಿಗೆ ಸಂಭವಿಸಿರಬಹುದು” ಎಂದು ಪೊಲೀಸರು ಸಮರ್ಥಿಸಿಕೊಂಡಿದ್ದಾರೆ.

ಇದನ್ನೂ ಓದಿ : ವಿವಾದಿತ ಅಧಿಕಾರಿ ಪೂಜಾ ಖೇಡ್ಕರ್‌ನ್ನು ಐಎಎಸ್‌ನಿಂದ ವಜಾಗೊಳಿಸಿದ ಕೇಂದ್ರ ಸರ್ಕಾರ : ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...