Homeಮುಖಪುಟಜಾರ್ಖಂಡ್ | ಪೊಲೀಸ್ ನೇಮಕಾತಿ ಪರೀಕ್ಷೆ ವೇಳೆ 12 ಅಭ್ಯರ್ಥಿಗಳು ಸಾವು

ಜಾರ್ಖಂಡ್ | ಪೊಲೀಸ್ ನೇಮಕಾತಿ ಪರೀಕ್ಷೆ ವೇಳೆ 12 ಅಭ್ಯರ್ಥಿಗಳು ಸಾವು

- Advertisement -
- Advertisement -

ಜಾರ್ಖಂಡ್‌ನಲ್ಲಿ ಈ ವರ್ಷದ ಅಬಕಾರಿ ಕಾನ್‌ಸ್ಟೇಬಲ್ ನೇಮಕಾತಿಯ ದೈಹಿಕ ಪರೀಕ್ಷೆಯ ವೇಳೆ 12 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಈ ಬಾರಿ ಅಬಕಾರಿ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆಯ ಮೌಲ್ಯಮಾಪನದಲ್ಲಿ ಬದಲಾವಣೆ ಮಾಡಲಾಗಿದೆ. ಅಭ್ಯರ್ಥಿಗಳು 1.6 ಕಿಮೀ ಬದಲಿಗೆ 10 ಕಿಮೀ ಓಡಬೇಕು. ಫಿಟ್ನೆಸ್ ಮಟ್ಟವನ್ನು ಮೌಲ್ಯಮಾಪನ ಮಾಡದಿರುವುದು, ಅತಿಯಾದ ಆರ್ದ್ರತೆ ಮತ್ತು ಲಿಖಿತ ಪರೀಕ್ಷೆಯ ಮೊದಲು ದೈಹಿಕ ಪರೀಕ್ಷೆಗಳನ್ನು ನಡೆಸುವ ನಿರ್ಧಾರದಿಂದ 12 ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಲಾಗಿದೆ.

ಆಗಸ್ಟ್ 22 ರಿಂದ ಜಾರ್ಖಂಡ್ ಪೊಲೀಸರ ಮೇಲ್ವಿಚಾರಣೆಯಲ್ಲಿ ದೈಹಿಕ ಪರೀಕ್ಷೆ ಡ್ರೈವ್‌ನ ಮೊದಲ ಹಂತ ನಡೆಯುತ್ತಿದೆ. 60 ನಿಮಿಷಗಳಲ್ಲಿ ಓಟವನ್ನು ಪೂರ್ಣಗೊಳಿಸುವ ಅರ್ಹ ಅಭ್ಯರ್ಥಿಗಳು ನಂತರ ಲಿಖಿತ ಪರೀಕ್ಷೆ ಮತ್ತು ಅಂತಿಮ ವೈದ್ಯಕೀಯ ಪರೀಕ್ಷೆಗೆ ಒಳಗಾಗುತ್ತಾರೆ. ಪರೀಕ್ಷೆಗೆ ಕಡ್ಡಾಯವಾಗಿರುವ 10 ಕಿಮೀ ಓಟವನ್ನು ಓಡುವಾಗ 12 ಮಂದಿ ಸಾವನ್ನಪ್ಪಿದ್ದಾರೆ.

ಮೃತರನ್ನು 19 ರಿಂದ 31 ವರ್ಷ ವಯಸ್ಸಿನವರು ಎಂದು ಗುರುತಿಸಲಾಗಿದ್ದು, ಪಲಾಮು ಮೂಲದ ಅಮರೇಶ್ ಕುಮಾರ್, ಪ್ರದೀಪ್ ಕುಮಾರ್, ಅಜಯ್ ಮಹತೋ, ಅರುಣ್ ಕುಮಾರ್ ಮತ್ತು ದೀಪಕ್ ಕುಮಾರ್ ಪಾಂಡು, ಹಜಾರಿಬಾಗ್‌ನ ಮನೋಜ್ ಕುಮಾರ್ ಮತ್ತು ಸೂರಜ್ ಕುಮಾರ್ ವರ್ಮಾ, ಸಾಹಿಬ್‌ಗಂಜ್‌ನ ವಿಕಾಸ್ ಲಿಂಡಾ ಮತ್ತು ಗಿರಿದಿಹ್‌ನ ಸುಮಿತ್ ಯಾದವ್ ಸಾವನ್ನಪ್ಪಿದವರು. ಇನ್ನೂ ಮೂವರ ವಿವರಗಳನ್ನು ಇದುವರೆಗೂ ಬಹಿರಂಗಪಡಿಸಿಲ್ಲ.

ಸೆಪ್ಟೆಂಬರ್ 2ರವರೆಗೆ ಒಟ್ಟು 1.87 ಲಕ್ಷ ಅಭ್ಯರ್ಥಿಗಳು ದೈಹಿಕ ಪರೀಕ್ಷೆಗೆ ಹಾಜರಾಗಿದ್ದು,ಅದರಲ್ಲಿ 1.17 ಲಕ್ಷ ಮಂದಿ ಮುಂದಿನ ಸುತ್ತಿಗೆ ಅರ್ಹತೆ ಪಡೆದಿದ್ದಾರೆ.

ಸರ್ಕಾರಿ ಮೂಲಗಳ ಪ್ರಕಾರ, 2000ರಲ್ಲಿ ಜಾರ್ಖಂಡ್ ರಚನೆಯಾದ ನಂತರ ಇದೇ ಮೊದಲ ಬಾರಿಗೆ ಅಬಕಾರಿ ಕಾನ್‌ಸ್ಟೇಬಲ್ ನೇಮಕಾತಿ ಡ್ರೈವ್ ನಡೆಸಲಾಗಿದೆ. 2008 ಮತ್ತು 2019 ರಲ್ಲಿ ಪ್ರಯತ್ನಿಸಿದರೂ ಪೂರ್ಣಗೊಂಡಿರಲಿಲ್ಲ.

12 ಮಂದಿಯ ಸಾವಿನ ಹಿನ್ನೆಲೆ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕ ಸ್ಥಗಿತಗೊಳಿಸಲಾಗಿದೆ ಮತ್ತು ತನಿಖೆಗೆ ಸೂಚಿಸಲಾಗಿದೆ. ಸೆಪ್ಟೆಂಬರ್ 9ರಂದು ನೇಮಕಾತಿ ಡ್ರೈವ್ ಪುನರಾರಂಭವಾಗಲಿದೆ. ಆದರೆ, ಅಭ್ಯರ್ಥಿಗಳ ಸಾವಿನ ಕುರಿತು ಇನ್ನೂ ವರದಿ ಬಂದಿಲ್ಲ.

“ರಾಜ್ಯ ಸರ್ಕಾರವು ಕಾನೂನು ನಿಗದಿಪಡಿಸಿದ ಕಾರ್ಯವಿಧಾನದ ಪ್ರಕಾರ ಪರೀಕ್ಷೆ ನಡೆಸಿದೆ. ಹಲವು ಅಭ್ಯರ್ಥಿಗಳು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಅದು ವಿವಿಧ ಕಾರಣಗಳಿಗೆ ಸಂಭವಿಸಿರಬಹುದು” ಎಂದು ಪೊಲೀಸರು ಸಮರ್ಥಿಸಿಕೊಂಡಿದ್ದಾರೆ.

ಇದನ್ನೂ ಓದಿ : ವಿವಾದಿತ ಅಧಿಕಾರಿ ಪೂಜಾ ಖೇಡ್ಕರ್‌ನ್ನು ಐಎಎಸ್‌ನಿಂದ ವಜಾಗೊಳಿಸಿದ ಕೇಂದ್ರ ಸರ್ಕಾರ : ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...