Homeಮುಖಪುಟಜಾರ್ಖಂಡ್‌: ’ಪವಿತ್ರ ಮರ’ ಕಡಿದ ಆರೋಪದಲ್ಲಿ ವ್ಯಕ್ತಿಯನ್ನು ಹತ್ಯೆ ಮಾಡಿದ 150 ಜನರ ಗುಂಪು

ಜಾರ್ಖಂಡ್‌: ’ಪವಿತ್ರ ಮರ’ ಕಡಿದ ಆರೋಪದಲ್ಲಿ ವ್ಯಕ್ತಿಯನ್ನು ಹತ್ಯೆ ಮಾಡಿದ 150 ಜನರ ಗುಂಪು

- Advertisement -
- Advertisement -

’ಪವಿತ್ರ ಮರ’ ಕಡಿಯುವ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ವ್ಯಕ್ತಿಯೊಬ್ಬರನ್ನು ಗುಂಪೊಂದು ಹತ್ಯೆ ಮಾಡಿರುವ ಘಟನೆ ಮಂಗಳವಾರ ಜಾರ್ಖಂಡ್‌ನ ಸಿಮ್ಡೆಗಾದಲ್ಲಿ ನಡೆದಿದೆ.

ಮಂಗಳವಾರ ಮಧ್ಯಾಹ್ನ ಕೊಲೆಬೀರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮೃತ ಸಂತ್ರಸ್ತರನ್ನು ಸಂಜು ಪ್ರಧಾನ್ ಎಂದು ಗುರುತಿಸಲಾಗಿದೆ.

ಪವಿತ್ರ ಮರ ಎಂದು ಕರೆಯಲಾಗುವ ಮರದ ಭಾಗಗಳನ್ನು ಕತ್ತರಿಸಿ ಮಾರಾಟ ಮಾಡುವ ಮೂಲಕ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿದ್ದಾರೆ ಎಂದು ಆರೋಪಿಸಿದ ಸುಮಾರು 100 ರಿಂದ 150 ಜನರ ಗುಂಪೊಂದು ಸಂಜು ಪ್ರಧಾನ್ ಅವರನ್ನು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಮೂಲದ ಯುವಕನ ಬಂಧನ: ಏನಿದು ಬುಲ್ಲಿ ಬಾಯ್ ಪ್ರಕರಣ?

“ಈ ಮರವು ಮುಂಡಾ ಸಮುದಾಯದ ಧಾರ್ಮಿಕ ಪ್ರಾಮುಖ್ಯತೆಯನ್ನು ಹೊಂದಿದ್ದು, ಅವರು ಅದರ ಬಗ್ಗೆ ತುಂಬಾ ಭಾವುಕರಾಗಿದ್ದಾರೆ. ಮೃತ ವ್ಯಕ್ತಿ ಅಕ್ಟೋಬರ್ 2021 ರಲ್ಲಿ ಈ ಮರಗಳನ್ನು ಕತ್ತರಿಸಿದ್ದರು. ಇದು ಅವರ ಭಾವನೆಗಳಿಗೆ ಧಕ್ಕೆ ತಂದಿದೆ. ಇಂದು ಹೆಚ್ಚಿನ ಸಂಖ್ಯೆಯ ಜನರು ಸಭೆ ನಡೆಸಿ ಅವರನ್ನು ಹೊಡೆಯಲು ನಿರ್ಧರಿಸಿದ್ದರು ಇದು ಅವರ ಸಾವಿಗೆ ಕಾರಣವಾಗಿದೆ” ಎಂದು ಸಿಮ್ಡೆಗಾ ಪೊಲೀಸರು ಹೇಳಿದ್ದಾರೆ.

ಈ ಜನರ ಗುಂಪು ಮೊದಲು ಮೃತರನ್ನು ದೊಣ್ಣೆ ಮತ್ತು ಇಟ್ಟಿಗೆಗಳಿಂದ ಹೊಡೆದಿದೆ. ಅವರು ಸತ್ತ ಬಳಿಕ ಬೆಂಕಿಗೆ ಎಸೆದಿದ್ದಾರೆ ಎಂದು ಸಂತ್ರಸ್ತೆಯ ಕುಟುಂಬದವರು ಪೊಲೀಸರಿಗೆ ತಿಳಿಸಿದ್ದಾರೆ.

“ಮೃತದೇಹವನ್ನು ಪೋಸ್ಟ್‌ಮಾರ್ಟಮ್‌ಗೆ ಕಳುಹಿಸಲಾಗಿದೆ. ಅವರು ಹೊಡೆದಿದ್ದರಿಂದ ಅಥವಾ ಬೆಂಕಿಗೆ ಹಾಕಿದ್ದರಿಂದ ಸಾವನ್ನಪ್ಪಿದ್ದಾರೆಯೇ ಎಂಬುದು ವರದಿ ಬಂದ ನಂತರ ತಿಳಿಯಲಿದೆ. ಎಫ್‌ಐಆರ್ ಅನ್ನು ಸೂಕ್ತ ವಿಭಾಗಗಳೊಂದಿಗೆ ದಾಖಲಿಸಲಾಗುತ್ತಿದೆ. ಆರೋಪಿಯ ಗುರುತು ಪತ್ತೆ ಕಾರ್ಯ ನಡೆಯುತ್ತಿದೆ” ಎಂದು ಸಿಮ್ಡೆಗಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶಮ್ಸ್ ತಬ್ರೇಜ್ ಹೇಳಿದ್ದಾರೆ.

ಗಮನಾರ್ಹ ವಿಷಯವೆಂದರೆ ಜಾರ್ಖಂಡ್ ವಿಧಾನಸಭೆ ಕಳೆದ ವರ್ಷ ಡಿಸೆಂಬರ್‌ನಲ್ಲಿ ಗುಂಪು ಹಿಂಸಾಚಾರ ಮತ್ತು ಗುಂಪು ಹತ್ಯೆ ತಡೆ ಮಸೂದೆ 2021 ಅನ್ನು ಅಂಗೀಕರಿಸಿದೆ.


ಇದನ್ನೂ ಓದಿ: ‘ಶ್ರೀಕೃಷ್ಣ ಪ್ರತಿದಿನ ನನ್ನ ಕನಸಿನಲ್ಲಿ ಬರುತ್ತಾನೆ!’: ಅಖಿಲೇಶ್‌ ಯಾದವ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...

SIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

ಭಾರತೀಯ ಚುನಾವಣಾ ಆಯೋಗವು (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಇತರ ಚುನಾವಣೆ ಸಂಬಂಧಿತ ವಿಷಯಗಳ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೊರಗಿರುವ ದ್ರಾವಿಡ ಮುನ್ನೇತ್ರ ಕಳಗಂ...

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...