Homeಮುಖಪುಟಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

- Advertisement -
- Advertisement -

ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ.

ರೆಡ್‌ಬರ್ಡ್‌ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ ಮಾಡುತ್ತಿದ್ದ ವಿಮಾನ, ಸಂಜೆ 7.11ಕ್ಕೆ ರಾಂಚಿ ವಿಮಾನ ನಿಲ್ದಾಣದಿಂದ ಟೇಕ್‌ ಆಫ್‌ ಆಗಿದ್ದು, ಸ್ವಲ್ಪ ಹೊತ್ತಿನಲ್ಲೇ ಪತನಗೊಂಡಿದೆ ಎಂದು ವರದಿಗಳು ಹೇಳಿವೆ.

ಕ್ಯಾಪ್ಟನ್ ವಿವೇಕ್ ವಿಕಾಸ್ ಭಗತ್, ಕ್ಯಾಪ್ಟನ್ ಸವ್ರಜ್‌ದೀಪ್ ಸಿಂಗ್, ರೋಗಿ ಸಂಜಯ್ ಕುಮಾರ್, ವೈದ್ಯ ವಿಕಾಸ್ ಕುಮಾರ್ ಗುಪ್ತಾ, ಪ್ಯಾರಾಮೆಡಿಕ್ ಸಚಿನ್ ಕುಮಾರ್ ಮಿಶ್ರಾ, ಸಹಾಯಕರಾದ ಅರ್ಚನಾ ದೇವಿ ಮತ್ತು ಧುರು ಕುಮಾರ್ ಮೃತರು ಎಂದು ತಿಳಿದು ಬಂದಿದೆ.

“ವಿಮಾನ ಸಂಜೆ 7.30ರ ಸುಮಾರಿಗೆ ಕಾಣೆಯಾಗಿತ್ತು. ನಂತರ ಅದು ಸಿಮಾರಿಯಾದ ಬರಿಯಾಟು ಪಂಚಾಯತ್ ಪ್ರದೇಶದ ಕಾಡಿನಲ್ಲಿ ಪತನಗೊಂಡಿದೆ. ಅದರಲ್ಲಿದ್ದ ಏಳು ಮಂದಿಯೂ ದುರಂತದಲ್ಲಿ ಸಾವನ್ನಪ್ಪಿದ್ದಾರೆ. ವಿಮಾನ ರಾಂಚಿಯಿಂದ ದೆಹಲಿಗೆ ತೆರಳುತ್ತಿತ್ತು” ಎಂದು ಛಾತ್ರಾ ಜಿಲ್ಲಾಧಿಕಾರಿ ಕೀರ್ತಿಶ್ರೀ ಅವರು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಏಳು ಮಂದಿ ಮೃತರ ಶವಗಳನ್ನು ಹೊರತೆಗೆಯಲಾಗಿದೆ ಎಂದು ಎಸ್‌ಡಿಪಿಒ ಶುಭಂ ಖಂಡೇಲ್ವಾಲ್ ಪಿಟಿಐಗೆ ಹೇಳಿದ್ದಾರೆ.

ಡಿಜಿಸಿಎ ವೆಬ್‌ಸೈಟ್ ಪ್ರಕಾರ, ದೆಹಲಿ ಮೂಲದ ನಾನ್-ಶೆಡ್ಯೂಲ್ಡ್ ಆಪರೇಟರ್ ಆಗಿರುವ ರೆಡ್‌ಬರ್ಡ್, ಅಪಘಾತಕ್ಕೀಡಾದ ವಿಮಾನ ಸೇರಿದಂತೆ ಆರು ವಿಮಾನಗಳನ್ನು ಹೊಂದಿದೆ.

ರಾಂಚಿಯ ದೇವ್‌ಕಮಲ್ ಆಸ್ಪತ್ರೆಯ ರೋಗಿಯೊಬ್ಬರು ಏರ್ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಿದ್ದರು ಎಂದು ಆಸ್ಪತ್ರೆಯ ಸಿಇಒ ಅನಂತ್ ಸಿನ್ಹಾ ಅವರನ್ನು ಉಲ್ಲೇಖಿಸಿ ಪಿಟಿಐ ವರದಿ ತಿಳಿಸಿದೆ.

“ಲತೇಹರ್ ಜಿಲ್ಲೆಯ ಚಂದ್ವಾ ನಿವಾಸಿ ಸಂಜಯ್ ಕುಮಾರ್ (41) ಎಂಬ ರೋಗಿಯನ್ನು ಫೆಬ್ರವರಿ 16ರಂದು ಶೇ. 65ರಷ್ಟು ಸುಟ್ಟ ಗಾಯಗಳೊಂದಿಗೆ ಆಸ್ಪತ್ರೆಗೆ ಕರೆತರಲಾಗಿತ್ತು. ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಕುಟುಂಬ ಸದಸ್ಯರು ಉತ್ತಮ ಚಿಕಿತ್ಸೆಗಾಗಿ ಅವರನ್ನು ದೆಹಲಿಗೆ ಕರೆದೊಯ್ಯಲು ನಿರ್ಧರಿಸಿದ್ದರು” ಎಂದು ಸಿನ್ಹಾ ವಿವರಿಸಿದ್ದಾರೆ.

ದೆಹಲಿಗೆ ತೆರಳುವ ಸಲುವಾಗಿ ಸಂಜೆ 4.30ರ ಸುಮಾರಿಗೆ ಸಂಜಯ್ ಕುಮಾರ್ ಅವರನ್ನು ಕರೆದುಕೊಂಡು ಆಸ್ಪತ್ರೆಯಿಂದ ಹೊರಟ್ಟಿದ್ದರು ಎಂದು ಮಾಹಿತಿ ನೀಡಿದ್ದಾರೆ.

ವಿಮಾನವು ಟೇಕ್ ಆಫ್ ಆದ ಸುಮಾರು 20 ನಿಮಿಷಗಳ ನಂತರ ವಾಯು ಸಂಚಾರ ನಿಯಂತ್ರಣ ಕೇಂದ್ರದೊಂದಿಗಿನ ಸಂಪರ್ಕವನ್ನು ಕಳೆದುಕೊಂಡಿತ್ತು ಎಂದು ರಾಂಚಿ ವಿಮಾನ ನಿಲ್ದಾಣದ ನಿರ್ದೇಶಕ ವಿನೋದ್ ಕುಮಾರ್ ತಿಳಿಸಿದ್ದಾರೆ.

“ಅಪಘಾತಕ್ಕೆ ಪ್ರತಿಕೂಲ ಹವಾಮಾನ ಕಾರಣವಾಗಿರಬಹುದು, ಆದರೆ ತನಿಖೆಯ ನಂತರವೇ ನಿಜವಾದ ಕಾರಣ ತಿಳಿದುಬರಲಿದೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...