Homeಮುಖಪುಟಜಾರ್ಖಂಡ್| ಪೊಲೀಸರೊಂದಿಗೆ ಘರ್ಷಣೆ ಆರೋಪ : ಬಿಜೆಪಿ ನಾಯಕರು ಸೇರಿ 12 ಸಾವಿರಕ್ಕೂ ಅಧಿಕ ಮಂದಿ...

ಜಾರ್ಖಂಡ್| ಪೊಲೀಸರೊಂದಿಗೆ ಘರ್ಷಣೆ ಆರೋಪ : ಬಿಜೆಪಿ ನಾಯಕರು ಸೇರಿ 12 ಸಾವಿರಕ್ಕೂ ಅಧಿಕ ಮಂದಿ ವಿರುದ್ದ ಪ್ರಕರಣ ದಾಖಲು

- Advertisement -
- Advertisement -

ಜಾರ್ಖಂಡ್‌ನ ರಾಜಧಾನಿ ರಾಂಚಿಯಲ್ಲಿ ನಡೆದ ಭಾರತೀಯ ಜನತಾ ಯುವಮೋರ್ಚ (ಬಿಜೆವೈಎಂ) ರ್‍ಯಾಲಿಯಲ್ಲಿ ಪೊಲೀಸ್ ಸಿಬ್ಬಂದಿಯೊಂದಿಗೆ ಘರ್ಷಣೆಯಲ್ಲಿ ಭಾಗಿಯಾದ ಆರೋಪದಲ್ಲಿ ಗುರುತಿಸಲಾದ 51 ವ್ಯಕ್ತಿಗಳು ಸೇರಿದಂತೆ 12,000ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಬಿಜೆಪಿ ಜಾರ್ಖಂಡ್ ಘಟಕದ ಅಧ್ಯಕ್ಷ ಬಾಬುಲಾಲ್ ಮರಾಂಡಿ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಅಮರ್ ಕುಮಾರ್ ಬೌರಿ, ಕೇಂದ್ರ ಸಚಿವ ಸಂಜಯ್ ಸೇಠ್ ಮತ್ತು ಕೇಂದ್ರದ ಮಾಜಿ ಸಚಿವ ಅರ್ಜುನ್ ಮುಂಡಾ ಸೇರಿದಂತೆ ಕೆಲವು ಪ್ರಮುಖ ಬಿಜೆಪಿ ನಾಯಕರನ್ನು ಎಫ್‌ಐಆರ್‌ನಲ್ಲಿ ಹೆಸರಿಸಲಾಗಿದೆ ಎಂದು ತಿಳಿದು ಬಂದಿದೆ.

ರಾಂಚಿಯ ಹಿರಿಯ ಪೊಲೀಸ್ ಅಧೀಕ್ಷಕ (ಎಸ್‌ಎಸ್‌ಪಿ) ಚಂದನ್ ಕುಮಾರ್ ಸಿನ್ಹಾ , “ಮ್ಯಾಜಿಸ್ಟ್ರೇಟ್ ಹೇಳಿಕೆಯ ಮೇರೆಗೆ ರಾಂಚಿಯ ಲಾಲ್‌ಪುರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಅಂತಹವರ ವಿರುದ್ಧ ಶೀಘ್ರವೇ ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದ್ದಾರೆ.

51 ಗುರುತಿಸಿದ ವ್ಯಕ್ತಿಗಳು ಸೇರಿದಂತೆ 12,000 ಜನರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಲಾಲ್‌ಪುರ ಪೊಲೀಸ್ ಠಾಣೆ ಪ್ರಭಾರಿ ರೂಪೇಶ್ ಕುಮಾರ್ ಸಿಂಗ್ ಹೇಳಿದ್ದಾರೆ.

ಈ ನಡುವೆ, ಶುಕ್ರವಾರದ ರ್‍ಯಾಲಿಯಲ್ಲಿ ಭಾರತೀಯ ಜನತಾ ಯುವ ಮೋರ್ಚಾ ಕಾರ್ಯಕರ್ತರ ಮೇಲೆ ಪೊಲೀಸ್ ಕ್ರಮವನ್ನು ವಿರೋಧಿಸಿ ಬಿಜೆಪಿ ಕಾರ್ಯಕರ್ತರು ಶನಿವಾರ ಎಲ್ಲ ಜಿಲ್ಲಾ ಕೇಂದ್ರಗಳು ಮತ್ತು ಪೊಲೀಸ್ ಠಾಣೆಗಳ ಎದುರು ಪ್ರತಿಭಟನೆ ನಡೆಸಿದರು.

ಮುಖ್ಯಮಂತ್ರಿ ಹೇಮಂತ್ ಸೊರೇನ್ ಸರ್ಕಾರದಿಂದ “ಅನ್ಯಾಯ” ಮತ್ತು “ಚುನಾವಣಾ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲತೆ” ವಿರುದ್ಧ ರಾಂಚಿಯಲ್ಲಿ ನಡೆದ ಪ್ರತಿಭಟನಾ ರ್‍ಯಾಲಿಯಲ್ಲಿ ಬ್ಯಾರಿಕೇಡ್‌ಗಳನ್ನು ಮುರಿದ ಕಾರಣಕ್ಕೆ ಪೊಲೀಸರು ಮತ್ತು ಬಿಜೆಪಿ ಯುವ ಘಟಕದ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ.

ಬಿಜೆವೈಎಂ ಕಾರ್ಯಕರ್ತರನ್ನು ಚದುರಿಸಲು ಪೊಲೀಸರು ಅಶ್ರುವಾಯು ಮತ್ತು ಜಲಫಿರಂಗಿಗಳನ್ನು ಬಳಸಿದರು ಮತ್ತು ರಬ್ಬರ್ ಗುಂಡುಗಳನ್ನು ಹಾರಿಸಿದ್ದಾರೆ.

ಜಿಲ್ಲಾಡಳಿತವು ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ, 2023 ರ ಸೆಕ್ಷನ್ 163 ಅನ್ನು ಜಾರಿಗೊಳಿಸಿದೆ. ರಾಂಚಿಯ ಮೊರಬಾಡಿ ಮೈದಾನದಲ್ಲಿ ಶುಕ್ರವಾರ ಬೆಳಿಗ್ಗೆ 11 ರಿಂದ ಸಾರ್ವಜನಿಕ ಸಭೆಗಳು, ರ್ಯಾಲಿಗಳು, ಧರಣಿಗಳು, ಪ್ರದರ್ಶನಗಳು ಮತ್ತು ಸಭೆಗಳನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ.

ಇದನ್ನೂ ಓದಿ : ಮೇಲಾಧಿಕಾರಿಗಳು, ಪತ್ರಕರ್ತನಿಂದ ಕಿರುಕುಳ ಆರೋಪ : ದಲಿತ ಪೊಲೀಸ್ ಕಾನ್‌ಸ್ಟೇಬಲ್ ಆತ್ಮಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಬಂಧನ

ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಅವರನ್ನು ದೆಹಲಿ ಪೊಲೀಸರು ಮಂಗಳವಾರ (ಫೆ. 24) ಮುಂಜಾನೆ ಸುಮಾರು 4:30ಕ್ಕೆ ಬಂಧಿಸಿದ್ದಾರೆ. ಕಳೆದ ವಾರ ದೆಹಲಿಯ ಭಾರತ್ ಮಂಟಪದಲ್ಲಿ ನಡೆದ...

ಭೂ ವಿವಾದದಲ್ಲಿ ಸಹೋದರರ ಹತ್ಯೆ; ಒಂದೇ ಕುಟುಂಬದ 13 ಮಂದಿಗೆ ಜೀವಾವಧಿ ಶಿಕ್ಷೆ

ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಮಾರು 10 ವರ್ಷಗಳ ಹಿಂದೆ ಇಬ್ಬರು ಸಹೋದರರನ್ನು ಹತ್ಯೆಗೈದ ಪ್ರಕರಣದಲ್ಲಿ ಒಂದೇ ಕುಟುಂಬದ 13 ಮಂದಿಗೆ ಉತ್ತರ ಪ್ರದೇಶದ ಸಹರಾನ್‌ಪುರದ ಸ್ಥಳೀಯ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು...

ಉತ್ತರ ಪ್ರದೇಶ: ಬಜರಂಗದಳ ದೂರಿನ ಮೇರೆಗೆ ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ಕೇರಳ ಮೂಲದ ಪಾದ್ರಿಯ ಬಂಧನ

ಬಜರಂಗದಳ ಸದಸ್ಯರು ನೀಡಿದ ದೂರಿನ ಮೇರೆಗೆ ಧಾರ್ಮಿಕ ಮತಾಂತರದ ಆರೋಪದ ಮೇಲೆ ಕೇರಳದ ಪಾದ್ರಿಯೊಬ್ಬರನ್ನು ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ತಿರುವನಂತಪುರಂ ಮೂಲದ ಪಾದ್ರಿ ಜೋಸ್ ಥಾಮಸ್,...

‘ನಾಚಿಕೆಗೇಡು ಅಂದ್ರೇನು ನಾನು ಹೇಳ್ತೇನೆ’: ಅಮೆರಿಕ ವ್ಯಾಪಾರ ಒಪ್ಪಂದ, ಎಪ್‌ಸ್ಟೀನ್ ಫೈಲ್ಸ್ ಉಲ್ಲೇಖಿಸಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಎಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಶರ್ಟ್‌ ಬಿಚ್ಚಿ ಪ್ರತಿಭಟಿಸಿದ್ದನ್ನು 'ಗಲೀಜು, ನಾಚಿಕೆಗೇಡು'ಎಂದಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ. ವಿಡಿಯೋ ಮೂಲಕ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, "ಪ್ರಧಾನಿ...

ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರೆಡ್‌ಬರ್ಡ್‌ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ...

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...