Homeಮುಖಪುಟಜಾರ್ಖಂಡ್ ವಿಧಾನಸಭೆಗೆ ದಾಖಲೆ ಸಂಖ್ಯೆಯ ಮಹಿಳಾ ಶಾಸಕರು ಆಯ್ಕೆ

ಜಾರ್ಖಂಡ್ ವಿಧಾನಸಭೆಗೆ ದಾಖಲೆ ಸಂಖ್ಯೆಯ ಮಹಿಳಾ ಶಾಸಕರು ಆಯ್ಕೆ

- Advertisement -
- Advertisement -

ಕಳೆದ ವಾರ ಪ್ರಕಟವಾದ ಜಾರ್ಖಂಡ್ ಚುನಾವಣಾ ಫಲಿತಾಂಶದಲ್ಲಿ ಇದುವೆ ಮೊದಲ ಬಾರಿಗೆ ರಾಜ್ಯದ ವಿಧಾನಸಭೆಗೆ ಗರಿಷ್ಠ ಸಂಖ್ಯೆಯ ಮಹಿಳಾ ಶಾಸಕರು ಆಯ್ಕೆಯಾಗಿದ್ದಾರೆ ಎಂದು ವರದಿಯಾಗಿದೆ. ಇಂಡಿಯಾ ಮತ್ತು ಎನ್‌ಡಿಎ ಮೈತ್ರಿಕೂಟಗಳು ಒಟ್ಟಾಗಿ ಕಣಕ್ಕಿಳಿಸಿದ 26 ಮಹಿಳಾ ಅಭ್ಯರ್ಥಿಗಳ ಪೈಕಿ ಹನ್ನೆರಡು ಮಂದಿ ವಿಧಾನಸಭೆಗೆ ಪ್ರವೇಶಿಸಿದ್ದಾರೆ. 2019ರಲ್ಲಿ ರಾಜ್ಯದ ವಿಧಾನಸಭೆಗೆ 10 ಮಂದಿ ಮಹಿಳಾ ಶಾಸಕರು ಆಯ್ಕೆಯಾಗಿದ್ದರು.

24 ವರ್ಷಗಳ ಹಿಂದೆ ರಚನೆಯಾದ ಜಾರ್ಖಂಡ್ ರಾಜ್ಯದ ವಿಧಾನಸಭೆಯಲ್ಲಿ ಪ್ರತಿ ವಿಧಾನಸಭಾ ಚುನಾವಣೆಗೂ ಮಹಿಳಾ ಶಾಸಕರ ಸಂಖ್ಯೆ ಹೆಚ್ಚುತ್ತಿದೆ. 81 ಸ್ಥಾನಗಳಿರುವ ಜಾರ್ಖಂಡ್ ವಿಧಾನಸಭೆಯಲ್ಲಿ 2000 ರಲ್ಲಿ, ರಾಜ್ಯದಲ್ಲಿ ಮೂವರು ಮಹಿಳಾ ಶಾಸಕರು ಆಯ್ಕೆಯಾಗಿದ್ದರು. 2005 ರಲ್ಲಿ ಈ ಸಂಖ್ಯೆ ಎಂಟಕ್ಕೆ ಮತ್ತು 2014 ರಲ್ಲಿ ಸಂಖ್ಯೆ ಒಂಬತ್ತಕ್ಕೆ ಏರಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಚುನಾಯಿತರಾದ 12 ಮಂದಿ ಮಹಿಳಾ ಶಾಸಕರಲ್ಲಿ ಕಾಂಗ್ರೆಸ್ ಟಿಕೆಟ್‌ನಲ್ಲಿ ಗರಿಷ್ಠ ಐವರು ಆಯ್ಕೆಯಾಗಿದ್ದರೆ, ನಾಲ್ವರು ಬಿಜೆಪಿ ಟಿಕೆಟ್‌ನಲ್ಲಿ ಆಯ್ಕೆಯಾಗಿದ್ದಾರೆ. ಉಳಿದ ಮೂವರು ಮಹಿಳಾ ಶಾಸಕರು ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರ ಜೆಎಂಎಂ ಪಕ್ಷದಿಂದ ಆಯ್ಕೆಯಾಗಿದ್ದಾರೆ. ಆಯ್ಕೆಯಾದ ಪ್ರಮುಖ ಮಹಿಳೆಯರಲ್ಲಿ ಹೇಮಂತ್ ಸೋರೆನ್ ಅವರ ಪತ್ನಿ ಕಲ್ಪನಾ, ಬಿಜೆಪಿಯ ಮಾಜಿ ಸಚಿವ ಡಾ ಲೋಯಿಸ್ ಮರಾಂಡಿ ಮತ್ತು ಸಬಿತಾ ಮಹತೋ ಸೇರಿದ್ದಾರೆ.

ಆಯ್ಕೆಯಾದ 12 ಮಹಿಳೆಯರ ಪೈಕಿ ಕಾಂಗ್ರೆಸ್‌ನ ನಿಸಾತ್ ಆಲಂ ಗರಿಷ್ಠ 86,000 ಮತಗಳ ಅಂತರದಿಂದ ಪಾಕುರ್ ಕ್ಷೇತ್ರವನ್ನು ಗೆದ್ದ ಕೀರ್ತಿಗೆ ಪಾತ್ರರಾಗಿದ್ದಾರೆ. ಟೆಂಡರ್ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಪ್ರಸ್ತುತ ಜೈಲು ಸೇರಿರುವ ಮಾಜಿ ಸಚಿವ ಅಲಂಗೀರ್ ಆಲಂ ಅವರ ಪತ್ನಿ ನಿಸಾತ್ ಆಲಂ ಅವರು ತಮ್ಮ ಪತಿ ಪ್ರತಿನಿಧಿಸಿದ್ದ ಕ್ಷೇತ್ರದಲ್ಲಿ ಮೊದಲ ಬಾರಿಗೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು.

ಮತ್ತೊಬ್ಬ ಮಹಿಳಾ ಶಾಸಕರಾದ ಕಾಂಗ್ರೆಸ್ ನಾಯಕ ಸಮ್ರೇಶ್ ಸಿಂಗ್ ಅವರ ಸೊಸೆ ಶ್ವೇತಾ ಸಿಂಗ್ ಕೂಡ ಬೊಕಾರೊದಿಂದ ಬಿಜೆಪಿಯ ಬಿರಾಂಚಿ ನಾರಾಯಣ್ ಅವರನ್ನು 7,207 ಮತಗಳಿಂದ ಸೋಲಿಸುವ ಮೂಲಕ ಆಯ್ಕೆಯಾಗಿದ್ದಾರೆ.

ಮಹಿಳಾ ಶಾಸಕರ ಪೈಕಿ ಪ್ರಮುಖ ವ್ಯಕ್ತಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರ ಪತ್ನಿ ಕಲ್ಪನಾ ಸೊರೆನ್ ಅವರು 17,142 ಮತಗಳ ಅಂತರದಿಂದ ಬಿಜೆಪಿಯ ಮುನಿಯಾ ದೇವಿ ಅವರನ್ನು ಸೋಲಿಸುವ ಮೂಲಕ ಸತತ ಎರಡನೇ ಅವಧಿಗೆ ಜಾರ್ಖಂಡ್ ವಿಧಾನಸಭೆಗೆ ಪ್ರವೇಶಿಸಿದ್ದಾರೆ.

ಮಾಜಿ ಸಚಿವೆ ದೀಪಿಕಾ ಪಾಂಡೆ ಸಿಂಗ್ ಅವರು ಮಹ್ಗಾಮ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿಯ ಅಶೋಕ್ ಕುಮಾರ್ ಅವರನ್ನು 18,645 ಅಂತರದಿಂದ ಸೋಲಿಸುವ ಮೂಲಕ ಮತ್ತೊಮ್ಮೆ ಆಯ್ಕೆಯಾಗಿದ್ದಾರೆ.

ವಿಧಾನಸಭೆ ಚುನಾವಣೆಗೆ ಮುನ್ನ ಬಿಜೆಪಿಯಿಂದ ಟಿಕೆಟ್ ನಿರಾಕರಿಸಿದ ನಂತರ ಜೆಎಂಎಂಗೆ ಪಕ್ಷಾಂತರವಾದ ಬಿಜೆಪಿಯ ಮಾಜಿ ಸಚಿವ ಲೂಯಿಸ್ ಮರಾಂಡಿ ಕೂಡ ಜಾಮಾ ಕ್ಷೇತ್ರದಿಂದ ಆಯ್ಕೆಯಾಗಿದ್ದಾರೆ. ಅದೇ ರೀತಿ, ಕಾಂಗ್ರೆಸ್ ಟಿಕೆಟ್‌ನಲ್ಲಿ ಸ್ಪರ್ಧಿಸಿದ್ದ ಶಿಲ್ಪಿ ನೇಹಾ ಟಿರ್ಕಿ ಎರಡನೇ ಬಾರಿಗೆ ಮರ್ದಾರ್ ಕ್ಷೇತ್ರದಿಂದ ಆಯ್ಕೆಯಾಗಿದ್ದಾರೆ.

ಈ ನಡುವೆ ಪ್ರಮಾಣ ವಚನ ಸಮಾರಂಭಕ್ಕೆ ಪ್ರಧಾನಿಯನ್ನು ಆಹ್ವಾನಿಸಲು ಮುಖ್ಯಮಂತ್ರಿ ಹೇಮಂತ್ ಸೊರೇನ್ ಮತ್ತು ಅವರ ಪತ್ನಿ ಕಲ್ಪನಾ ಸೋರೆನ್ ಅವರು ದೆಹಲಿಗೆ ಪ್ರಯಾಣಿಸಿದ್ದಾರೆ. ಇದೇ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಇತರ ಗಣ್ಯರನ್ನು ಗುರುವಾರ ನಡೆಯುವ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಆಹ್ವಾನಿಸಿದ್ದಾರೆ.

ಇದನ್ನೂ ಓದಿ: ಪಶ್ಚಿಮ ಬಂಗಾಳ| ಪೊಲೀಸ್ ಕಸ್ಟಡಿಯಲ್ಲಿ ಇಬ್ಬರು ಮಹಿಳೆಯರಿಗೆ ಚಿತ್ರಹಿಂಸೆ ಪ್ರಕರಣ; ಎಸ್‌ಐಟಿ ತನಿಖೆಗೆ ಸುಪ್ರೀಂಕೋರ್ಟ್‌ ಆದೇಶ

ಪಶ್ಚಿಮ ಬಂಗಾಳ| ಪೊಲೀಸ್ ಕಸ್ಟಡಿಯಲ್ಲಿ ಇಬ್ಬರು ಮಹಿಳೆಯರಿಗೆ ಚಿತ್ರಹಿಂಸೆ ಪ್ರಕರಣ; ಎಸ್‌ಐಟಿ ತನಿಖೆಗೆ ಸುಪ್ರೀಂಕೋರ್ಟ್‌ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...