Homeಮುಖಪುಟಜಾರ್ಖಂಡ್ ವಿಧಾನಸಭೆಗೆ ದಾಖಲೆ ಸಂಖ್ಯೆಯ ಮಹಿಳಾ ಶಾಸಕರು ಆಯ್ಕೆ

ಜಾರ್ಖಂಡ್ ವಿಧಾನಸಭೆಗೆ ದಾಖಲೆ ಸಂಖ್ಯೆಯ ಮಹಿಳಾ ಶಾಸಕರು ಆಯ್ಕೆ

- Advertisement -
- Advertisement -

ಕಳೆದ ವಾರ ಪ್ರಕಟವಾದ ಜಾರ್ಖಂಡ್ ಚುನಾವಣಾ ಫಲಿತಾಂಶದಲ್ಲಿ ಇದುವೆ ಮೊದಲ ಬಾರಿಗೆ ರಾಜ್ಯದ ವಿಧಾನಸಭೆಗೆ ಗರಿಷ್ಠ ಸಂಖ್ಯೆಯ ಮಹಿಳಾ ಶಾಸಕರು ಆಯ್ಕೆಯಾಗಿದ್ದಾರೆ ಎಂದು ವರದಿಯಾಗಿದೆ. ಇಂಡಿಯಾ ಮತ್ತು ಎನ್‌ಡಿಎ ಮೈತ್ರಿಕೂಟಗಳು ಒಟ್ಟಾಗಿ ಕಣಕ್ಕಿಳಿಸಿದ 26 ಮಹಿಳಾ ಅಭ್ಯರ್ಥಿಗಳ ಪೈಕಿ ಹನ್ನೆರಡು ಮಂದಿ ವಿಧಾನಸಭೆಗೆ ಪ್ರವೇಶಿಸಿದ್ದಾರೆ. 2019ರಲ್ಲಿ ರಾಜ್ಯದ ವಿಧಾನಸಭೆಗೆ 10 ಮಂದಿ ಮಹಿಳಾ ಶಾಸಕರು ಆಯ್ಕೆಯಾಗಿದ್ದರು.

24 ವರ್ಷಗಳ ಹಿಂದೆ ರಚನೆಯಾದ ಜಾರ್ಖಂಡ್ ರಾಜ್ಯದ ವಿಧಾನಸಭೆಯಲ್ಲಿ ಪ್ರತಿ ವಿಧಾನಸಭಾ ಚುನಾವಣೆಗೂ ಮಹಿಳಾ ಶಾಸಕರ ಸಂಖ್ಯೆ ಹೆಚ್ಚುತ್ತಿದೆ. 81 ಸ್ಥಾನಗಳಿರುವ ಜಾರ್ಖಂಡ್ ವಿಧಾನಸಭೆಯಲ್ಲಿ 2000 ರಲ್ಲಿ, ರಾಜ್ಯದಲ್ಲಿ ಮೂವರು ಮಹಿಳಾ ಶಾಸಕರು ಆಯ್ಕೆಯಾಗಿದ್ದರು. 2005 ರಲ್ಲಿ ಈ ಸಂಖ್ಯೆ ಎಂಟಕ್ಕೆ ಮತ್ತು 2014 ರಲ್ಲಿ ಸಂಖ್ಯೆ ಒಂಬತ್ತಕ್ಕೆ ಏರಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಚುನಾಯಿತರಾದ 12 ಮಂದಿ ಮಹಿಳಾ ಶಾಸಕರಲ್ಲಿ ಕಾಂಗ್ರೆಸ್ ಟಿಕೆಟ್‌ನಲ್ಲಿ ಗರಿಷ್ಠ ಐವರು ಆಯ್ಕೆಯಾಗಿದ್ದರೆ, ನಾಲ್ವರು ಬಿಜೆಪಿ ಟಿಕೆಟ್‌ನಲ್ಲಿ ಆಯ್ಕೆಯಾಗಿದ್ದಾರೆ. ಉಳಿದ ಮೂವರು ಮಹಿಳಾ ಶಾಸಕರು ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರ ಜೆಎಂಎಂ ಪಕ್ಷದಿಂದ ಆಯ್ಕೆಯಾಗಿದ್ದಾರೆ. ಆಯ್ಕೆಯಾದ ಪ್ರಮುಖ ಮಹಿಳೆಯರಲ್ಲಿ ಹೇಮಂತ್ ಸೋರೆನ್ ಅವರ ಪತ್ನಿ ಕಲ್ಪನಾ, ಬಿಜೆಪಿಯ ಮಾಜಿ ಸಚಿವ ಡಾ ಲೋಯಿಸ್ ಮರಾಂಡಿ ಮತ್ತು ಸಬಿತಾ ಮಹತೋ ಸೇರಿದ್ದಾರೆ.

ಆಯ್ಕೆಯಾದ 12 ಮಹಿಳೆಯರ ಪೈಕಿ ಕಾಂಗ್ರೆಸ್‌ನ ನಿಸಾತ್ ಆಲಂ ಗರಿಷ್ಠ 86,000 ಮತಗಳ ಅಂತರದಿಂದ ಪಾಕುರ್ ಕ್ಷೇತ್ರವನ್ನು ಗೆದ್ದ ಕೀರ್ತಿಗೆ ಪಾತ್ರರಾಗಿದ್ದಾರೆ. ಟೆಂಡರ್ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಪ್ರಸ್ತುತ ಜೈಲು ಸೇರಿರುವ ಮಾಜಿ ಸಚಿವ ಅಲಂಗೀರ್ ಆಲಂ ಅವರ ಪತ್ನಿ ನಿಸಾತ್ ಆಲಂ ಅವರು ತಮ್ಮ ಪತಿ ಪ್ರತಿನಿಧಿಸಿದ್ದ ಕ್ಷೇತ್ರದಲ್ಲಿ ಮೊದಲ ಬಾರಿಗೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು.

ಮತ್ತೊಬ್ಬ ಮಹಿಳಾ ಶಾಸಕರಾದ ಕಾಂಗ್ರೆಸ್ ನಾಯಕ ಸಮ್ರೇಶ್ ಸಿಂಗ್ ಅವರ ಸೊಸೆ ಶ್ವೇತಾ ಸಿಂಗ್ ಕೂಡ ಬೊಕಾರೊದಿಂದ ಬಿಜೆಪಿಯ ಬಿರಾಂಚಿ ನಾರಾಯಣ್ ಅವರನ್ನು 7,207 ಮತಗಳಿಂದ ಸೋಲಿಸುವ ಮೂಲಕ ಆಯ್ಕೆಯಾಗಿದ್ದಾರೆ.

ಮಹಿಳಾ ಶಾಸಕರ ಪೈಕಿ ಪ್ರಮುಖ ವ್ಯಕ್ತಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರ ಪತ್ನಿ ಕಲ್ಪನಾ ಸೊರೆನ್ ಅವರು 17,142 ಮತಗಳ ಅಂತರದಿಂದ ಬಿಜೆಪಿಯ ಮುನಿಯಾ ದೇವಿ ಅವರನ್ನು ಸೋಲಿಸುವ ಮೂಲಕ ಸತತ ಎರಡನೇ ಅವಧಿಗೆ ಜಾರ್ಖಂಡ್ ವಿಧಾನಸಭೆಗೆ ಪ್ರವೇಶಿಸಿದ್ದಾರೆ.

ಮಾಜಿ ಸಚಿವೆ ದೀಪಿಕಾ ಪಾಂಡೆ ಸಿಂಗ್ ಅವರು ಮಹ್ಗಾಮ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿಯ ಅಶೋಕ್ ಕುಮಾರ್ ಅವರನ್ನು 18,645 ಅಂತರದಿಂದ ಸೋಲಿಸುವ ಮೂಲಕ ಮತ್ತೊಮ್ಮೆ ಆಯ್ಕೆಯಾಗಿದ್ದಾರೆ.

ವಿಧಾನಸಭೆ ಚುನಾವಣೆಗೆ ಮುನ್ನ ಬಿಜೆಪಿಯಿಂದ ಟಿಕೆಟ್ ನಿರಾಕರಿಸಿದ ನಂತರ ಜೆಎಂಎಂಗೆ ಪಕ್ಷಾಂತರವಾದ ಬಿಜೆಪಿಯ ಮಾಜಿ ಸಚಿವ ಲೂಯಿಸ್ ಮರಾಂಡಿ ಕೂಡ ಜಾಮಾ ಕ್ಷೇತ್ರದಿಂದ ಆಯ್ಕೆಯಾಗಿದ್ದಾರೆ. ಅದೇ ರೀತಿ, ಕಾಂಗ್ರೆಸ್ ಟಿಕೆಟ್‌ನಲ್ಲಿ ಸ್ಪರ್ಧಿಸಿದ್ದ ಶಿಲ್ಪಿ ನೇಹಾ ಟಿರ್ಕಿ ಎರಡನೇ ಬಾರಿಗೆ ಮರ್ದಾರ್ ಕ್ಷೇತ್ರದಿಂದ ಆಯ್ಕೆಯಾಗಿದ್ದಾರೆ.

ಈ ನಡುವೆ ಪ್ರಮಾಣ ವಚನ ಸಮಾರಂಭಕ್ಕೆ ಪ್ರಧಾನಿಯನ್ನು ಆಹ್ವಾನಿಸಲು ಮುಖ್ಯಮಂತ್ರಿ ಹೇಮಂತ್ ಸೊರೇನ್ ಮತ್ತು ಅವರ ಪತ್ನಿ ಕಲ್ಪನಾ ಸೋರೆನ್ ಅವರು ದೆಹಲಿಗೆ ಪ್ರಯಾಣಿಸಿದ್ದಾರೆ. ಇದೇ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಇತರ ಗಣ್ಯರನ್ನು ಗುರುವಾರ ನಡೆಯುವ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಆಹ್ವಾನಿಸಿದ್ದಾರೆ.

ಇದನ್ನೂ ಓದಿ: ಪಶ್ಚಿಮ ಬಂಗಾಳ| ಪೊಲೀಸ್ ಕಸ್ಟಡಿಯಲ್ಲಿ ಇಬ್ಬರು ಮಹಿಳೆಯರಿಗೆ ಚಿತ್ರಹಿಂಸೆ ಪ್ರಕರಣ; ಎಸ್‌ಐಟಿ ತನಿಖೆಗೆ ಸುಪ್ರೀಂಕೋರ್ಟ್‌ ಆದೇಶ

ಪಶ್ಚಿಮ ಬಂಗಾಳ| ಪೊಲೀಸ್ ಕಸ್ಟಡಿಯಲ್ಲಿ ಇಬ್ಬರು ಮಹಿಳೆಯರಿಗೆ ಚಿತ್ರಹಿಂಸೆ ಪ್ರಕರಣ; ಎಸ್‌ಐಟಿ ತನಿಖೆಗೆ ಸುಪ್ರೀಂಕೋರ್ಟ್‌ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...