Homeಮುಖಪುಟಜಾರ್ಖಂಡ್: ಐಟಿ ಅಧಿಕಾರಿಗಳು ದಾಳಿಗೆ ಬಳಸಿದ ಕಾರಿನಲ್ಲಿತ್ತು ಬಿಜೆಪಿ ಸ್ಟಿಕ್ಕರ್!

ಜಾರ್ಖಂಡ್: ಐಟಿ ಅಧಿಕಾರಿಗಳು ದಾಳಿಗೆ ಬಳಸಿದ ಕಾರಿನಲ್ಲಿತ್ತು ಬಿಜೆಪಿ ಸ್ಟಿಕ್ಕರ್!

ಐಟಿ ಅಧಿಕಾರಿಗಳು ಬಳಸಿದ ಬಿಜೆಪಿ ಸ್ಟಿಕ್ಕರ್ ಇದ್ದ ಕಾರು ಬಿಜೆಪಿ ಮುಖಂಡ ದಿನೇಶ್ ಮಹತೋ ಹೆಸರಿನಲ್ಲಿ ನೋಂದಾಯಿಸಲಾಗಿದೆ ಎಂದು ಯತೀಶ್ ರೆಡ್ಡಿ ಆರೋಪಿಸಿದ್ದಾರೆ.

- Advertisement -
- Advertisement -

ಐಟಿ, ಈಡಿ, ಸಿಬಿಐ ಸೇರಿದಂತೆ ಮುಂತಾದ ಸ್ವತಂತ್ರ ತನಿಖಾ ಸಂಸ್ಥೆಗಳು ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರದ ಅಣತಿಯಿಂತೆ ನಡೆದುಕೊಳ್ಳುತ್ತಿವೆ, ಅವು ನಿಷ್ಪಷಪಾತವಾಗಿ ಕೆಲಸ ಮಾಡುತ್ತಿಲ್ಲ ಎಂದು ವಿಪಕ್ಷಗಳು ಆರೋಪ ಮಾಡುತ್ತಲೇ ಇವೆ. ಆ ಆರೋಪಗಳಿಗೆ ಇಂಬು ಕೊಡುವಂತೆ ಘಟನೆಯೊಂದು ಜಾರ್ಖಂಡ್‌ನಲ್ಲಿ ಜರುಗಿದೆ. ಕಾಂಗ್ರೆಸ್ ಶಾಸಕರ ಮೇಲೆ ಐಟಿ ದಾಳಿ ನಡೆಸಲು ಅಧಿಕಾರಿಗಳು ಬಳಸಿದ್ದ ಕಾರಿನ ಮೇಲೆ ಬಿಜೆಪಿ ಪಕ್ಷದ ಸ್ಟಿಕ್ಕರ್ ಇದ್ದುದ್ದು ಭಾರೀ ಕೋಲಾಹಲಕ್ಕೆ ಕಾರಣವಾಗಿದೆ.

ಆಡಳಿತರೂಢ ಮೈತ್ರಿ ಪಕ್ಷಗಳಲ್ಲಿ ಒಂದಾದ ಜಾರ್ಖಂಡ್‌ ಕಾಂಗ್ರೆಸ್ ಪಕ್ಷದ ಪ್ರದೀಪ್ ಯಾದವ್ ಮತ್ತು ಕುಮಾರ್ ಜೈಮಂಗಲ್ ಎಂಬ ಶಾಸಕರ ನಿವಾಸದ ಮೇಲೆ ಶುಕ್ರವಾರ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಆದರೆ ಜೈಮಂಗಲ್‌ರವರ ನಿವಾಸದ ಮೇಲೆ ದಾಳಿ ನಡೆಸಲು ಐಟಿ ಅಧಿಕಾರಿಗಳು ಬಳಸಿದ ಕಾರಿನ ಮೇಲೆ ಬಿಜೆಪಿ ಸ್ಟಿಕ್ಕರ್ ಪತ್ತೆಯಾಗಿರುವುದರಿಂದ ಕಾಂಗ್ರೆಸ್ ಪಕ್ಷ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಅಧಿಕಾರಿಗಳು ಆಗಮಿಸಿದ ಕಾರಿನ ಮೇಲೆ ಬಿಜೆಪಿ ವಿಧಾನಸಭೆ ಪಾಸ್ ಎಂದು ಬರೆದಿರು ಸ್ಟಿಕ್ಕರ್ ಇದ್ದು ಅದನ್ನು ಅಧಿಕಾರಿಯೊಬ್ಬ ಕಿತ್ತುಹಾಕುವುದು ವಿಡಿಯೋದಲ್ಲಿ ಸೆರೆಯಾಗಿದೆ. ಆ ವಿಡಿಯೋ ಎಲ್ಲಡೆ ವೈರಲ್ ಆಗತೊಡಗಿದೆ.

ಜಾರ್ಖಂಡ್‌ನಲ್ಲಿ ಬಿಜೆಪಿ ಒಡೆತನದ ಕಾರುಗಳನ್ನು ಬಳಸಿಕೊಂಡು ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಮತ್ತು ಅದರ ಮೇಲೆ ಬಿಜೆಪಿ ಸ್ಟಿಕ್ಕರ್ ಅಂಟಿಸಿದ್ದಾರೆ. JH01 L-5626 ನಂಬರ್‌ನ ಕಾರು ಬಿಜೆಪಿ ಮುಖಂಡ ದಿನೇಶ್ ಮಹತೋ ಹೆಸರಿನಲ್ಲಿ ನೋಂದಾಯಿಸಲಾಗಿದೆ ಎಂದು ಟಿಆರ್‌ಎಸ್ ಪಕ್ಷದ ಮುಖಂಡ ಯತೀಶ್ ರೆಡ್ಡಿ ಆರೋಪಿಸಿದ್ದಾರೆ.

ಇತ್ತೀಚೆಗೆ ಬಿಜೆಪಿ ಪಕ್ಷವು ಜಾರ್ಖಂಡ್‌ನಲ್ಲಿ ಆಪರೇಷನ್ ಕಮಲ ನಡೆಸಲು ಯತ್ನಿಸಿತು. ಆದರೆ ನಾನು ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಅದಕ್ಕೆ ಅವಕಾಶ ಕೊಡದೆ ತಡೆಯೊಡ್ಡಿದೆವು. ಹಾಗಾಗಿ ಬಿಜೆಪಿ ಪಕ್ಷವು ನಮ್ಮನ್ನು ಬೆದರಿಸಲು ಪ್ರಾಯೋಜಿತ ಐಟಿ ದಾಳಿ ನಡೆಸುತ್ತಿದೆ ಎಂದು ಕಾಂಗ್ರೆಸ್ ಶಾಸಕ ಜೈಮಂಗಲ್ ಆರೋಪಿಸಿದ್ದಾರೆ.

ಪ್ರಜಾತಾಂತ್ರಿಕವಾಗಿ ಜನಾದೇಶದ ಮೂಲಕ ಆಯ್ಕೆಯಾದ ಸರ್ಕಾರಕ್ಕೆ ತೊಂದರೆ ಕೊಡುತ್ತಿರುವುದು ಏಕೆ ಎಂಬುದನ್ನು ಬಿಜೆಪಿ ಜನರಿಗೆ ಹೇಳಬೇಕಿದೆ ಎಂದು ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಆಗ್ರಹಿಸಿದ್ದಾರೆ.

ಆದರೆ ಈ ಆರೋಪಗಳನ್ನು ಬಿಜೆಪಿ ನಿರಾಕರಿಸಿದೆ. ರಾಜ್ಯ ಬಿಜೆಪಿ ಅಧ್ಯಕ್ಷ ದೀಪಕ್ ಪ್ರಕಾಶ್ ಮಾತನಾಡಿ, “ಕಾಂಗ್ರೆಸ್ ಕಾರ್ಯಕರ್ತರ ಪಿತೂರಿಯಿಂದಾಗಿ ಐಟಿ ಅಧಿಕಾರಿಗಳ ಕಾರಿನ ಮೇಲೆ ಬಿಜೆಪಿ ಸ್ಟಿಕ್ಕರ್ ಗಳು ಕಂಡುಬಂದಿವೆ. ಈ ರೀತಿಯ ಕಾರುಗಳು ಬಾಡಿಗೆಗೆ ದೊರೆಯುತ್ತವೆ ಎಂಬುದು ಎಲ್ಲರಿಗೂ ಗೊತ್ತಿದೆ. ಬಿಜೆಪಿ ಸಂಬಂಧ ಕಲ್ಪಿಸುವುದರಲ್ಲಿ ಯಾವುದೇ ಅರ್ಥವಿಲ್ಲ” ಎಂದಿದ್ದಾರೆ.

ಇದನ್ನೂ ಓದಿ: ಗುಜರಾತ್ ಸೇತುವೆ ದುರಂತ: ನವೀಕರಣಕ್ಕೆ ಮಂಜೂರಾಗಿದ್ದ ₹2 ಕೋಟಿಗಳಲ್ಲಿ ಗಡಿಯಾರ ಕಂಪೆನಿ ಖರ್ಚು ಮಾಡಿದ್ದು ಕೇವಲ ₹12 ಲಕ್ಷ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...