Homeಮುಖಪುಟಜಾರ್ಖಂಡ್‌: ವಾಮಾಚಾರದ ಆರೋಪ, ಮಹಿಳೆಗೆ ಚಿತ್ರಹಿಂಸೆ ಕೊಟ್ಟು ಹತ್ಯೆ ಮಾಡಿದ ಗ್ರಾಮಸ್ಥರು

ಜಾರ್ಖಂಡ್‌: ವಾಮಾಚಾರದ ಆರೋಪ, ಮಹಿಳೆಗೆ ಚಿತ್ರಹಿಂಸೆ ಕೊಟ್ಟು ಹತ್ಯೆ ಮಾಡಿದ ಗ್ರಾಮಸ್ಥರು

- Advertisement -
- Advertisement -

ವಾಮಾಚಾರ ಮಾಡುತ್ತಿದ್ದ ಆರೋಪದಲ್ಲಿ 55 ವರ್ಷದ ಮಹಿಳೆಯೊಬ್ಬರಿಗೆ ಬಿದಿರಿನ ಕೋಲುಗಳಿಂದ ಮನಬಂದಂತೆ ಥಳಿಸಿ, ಚಿತ್ರಹಿಂಸೆ ಕೊಟ್ಟು ವಿಷ ಕುಡಿಸಿ ಹತ್ಯೆಗೈದ ಹೃದಯ ವಿದ್ರಾವಕ ಘಟನೆ ಜಾರ್ಖಂಡ್‌ನಲ್ಲಿ ಗುರುವಾರ (ಜೂ.9) ಸಂಜೆ ನಡೆದಿದ್ದು, ಪ್ರಕರಣದಲ್ಲಿ 24 ಜನರನ್ನು ಬಂಧಿಸಲಾಗಿದೆ.

ಜಾರ್ಖಂಡ್‌ನ ಲೋಹರ್ದಗಾದ ಗಣೇಶಪುರ ಗ್ರಾಮದಲ್ಲಿ ಹೊಲೊ ದೇವಿ ಎಂದು ಗುರುತಿಸಲಾದ ಮಹಿಳೆಗೆ ಚಿತ್ರಹಿಂಸೆ ಕೊಟ್ಟು ಹತ್ಯೆ ಮಾಡಿದ ಗ್ರಾಮಸ್ಥರು ಆಕೆಯ ಮೃತದೇಹವನ್ನು ಗೋಣಿಚೀಲದಲ್ಲಿ ಹಾಕಿ ಗ್ರಾಮದ ಸಮೀಪವಿರುವ ಧಾರ್ಧರಿಯಾ ಜಲಪಾತಕ್ಕೆ ಎಸೆದು, ವಿಕೃತಿ ಮೆರೆದಿದ್ದರು.

ಮಹಿಳೆಯ ಕುಟುಂಬಸ್ಥರಿಂದ ಮಾಹಿತಿ ಪಡೆದ ಪೊಲೀಸರು ಗ್ರಾಮಕ್ಕೆ ಆಗಮಿಸಿ ಜಲಪಾತದ ತಳದಿಂದ ಮೃತದೇಹವನ್ನು ಹೊರತೆಗೆದಿದ್ದಾರೆ. ತಕ್ಷಣ ಕಾರ್ಯರೂಪಕ್ಕೆ ಬಂದ ಪೊಲೀಸರು ಸೆರೆಂಗ್‌ಡಾಗ್ ಪೊಲೀಸ್ ಠಾಣೆಯಲ್ಲಿ ಹೆಸರಿಸಲಾದ 27 ಮಂದಿ ಮತ್ತು 20 ಕ್ಕೂ ಹೆಚ್ಚು ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

ಇದನ್ನೂ ಓದಿ: ಮೂರೂವರೆ ವರ್ಷದಲ್ಲಿ 752 ಕೋಮು ಪ್ರಕರಣಗಳನ್ನು ಕಂಡ ’ಸೌಹಾರ್ದ ಕರ್ನಾಟಕ’

“ಇದುವರೆಗೆ ಪ್ರಕರಣದಲ್ಲಿ ನಾವು 24 ಆರೋಪಿಗಳನ್ನು ಬಂಧಿಸಿದ್ದೇವೆ, ಇತರರ ಹುಡುಕಾಟ ಇನ್ನೂ ಮುಂದುವರೆದಿದೆ” ಎಂದು ಲೋಹರ್ಡಗಾ ಎಸ್‌ಪಿ ಆರ್.ರಾಮ್‌ಕುಮಾರ್ ಹೇಳಿದ್ದಾರೆ.

ಈ ವರ್ಷದ ಜನವರಿಯಿಂದ ಗ್ರಾಮದಲ್ಲಿ ಐವರು ಅನಾರೋಗ್ಯದಿಂದ ಸಾವನ್ನಪ್ಪಿದ್ದು, ಇದಕ್ಕೆ ಮಹಿಳೆ ವಾಮಾಚಾರ ಮಾಡುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದರು. ಆದರೆ, ಇದು ಮೂಢನಂಬಿಕೆಗೆ ಸಂಬಂಧಿಸಿದೆ ಎಂದು ಮೃತ ಮಹಿಳೆಯ ಕುಟುಂಬ ಸದಸ್ಯರು ಆರೋಪಿಸಿದ್ದಾರೆ.

ಮೃತ ಮಹಿಳೆಯ ಕುಟುಂಬದ ಸದಸ್ಯೆ ಚಂದ್ರಮಣಿ ದೇವಿ ಹೇಳುವಂತೆ, “ಗ್ರಾಮಸ್ಥರು ಬೆಳಿಗ್ಗೆ 6 ಗಂಟೆಗೆ ಕರೆದ ಪಂಚಾಯತಿ  ಕರೆದರು,  ಸಂಜೆಯವರೆಗೂ ನಡೆಯಿತು. ಬಳಿಕ ಗ್ರಾಮಸ್ಥರು ಮಹಿಳೆಗೆ ಮರಣದಂಡನೆ ವಿಧಿಸಿದರು. ಆಕೆಗೆ ಮೊದಲು ಎಲ್ಲರು ಹೊಡೆದರು. ಬಳಿಕ  ಬಿದಿರಿನ ಕೋಲುಗಳಿಂದ ಅರ್ಧ ಸಾಯುವಂತೆ ಮಾಡಿ, ನಂತರ ವಿಷ ಕುಡಿಸಿ ಆಕೆಯನ್ನು ಹೊಡೆದು ಕೊಂದರು. ನೀರಿಗಾಗಿ ಕೂಗಾಡುತ್ತಿದ್ದರೂ ಗ್ರಾಮಸ್ಥರು ನೀರು ಕೊಡಲು ಬಿಡಲಿಲ್ಲ’ ಎಂದು ನೋವು ತೋಡಿಕೊಂಡಿದ್ದಾರೆ. ಅವರು ಸತ್ತಿದ್ದಾರೆ ಎಂದು ಗ್ರಾಮಸ್ಥರಿಗೆ ಖಾತ್ರಿಯಾದ ನಂತರ, ಮೃತದೇಹವನ್ನು ಗೋಣಿಚೀಲದಲ್ಲಿ ಹಾಕಿ ಗ್ರಾಮದ ಸಮೀಪವಿರುವ ಧಾರ್ಧರಿಯಾ ಜಲಪಾತದ ಮೇಲಿನಿಂದ ಆಕೆಯನ್ನು ಎಸೆದರು ಎಂದು ಘಟನೆಯನ್ನು ವಿವರಿಸಿದ್ದಾರೆ.

ಬುಧವಾರ ನಡೆದ ಮತ್ತೊಂದು ಘಟನೆಯಲ್ಲಿ, ಜಾರ್ಖಂಡ್‌ನ ಗುಮ್ಲಾದಲ್ಲಿ ಗ್ರಾಮದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ಇಬ್ಬರು ಬುಡಕಟ್ಟು ಯುವಕರಿಗೆ ಗ್ರಾಮಸ್ಥರುನ ಬೆಂಕಿ ಹಚ್ಚಿದ್ದಾರೆ. ಇಬ್ಬರನ್ನೂ ಆಸ್ಪತ್ರೆಗೆ ಸೇರಿಸಲಾಯಿತಾದರೂ ಒಬ್ಬರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಮತ್ತೊಬ್ಬರು ಜೀವ ಉಳಿಸಿಕೊಳ್ಳಲು ಹೋರಾಡುತ್ತಿದ್ದಾರೆ ಎಂದು ವರದಿಯಾಗಿದೆ.


ಇದನ್ನೂ ಓದಿ: ರಾಜ್ಯದ 11 ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ಸೋಮವಾರ ರಜೆ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...