HomeUncategorizedಜಾರ್ಖಂಡ್ | ಸಿಎಂ ವಿರುದ್ಧ ಸ್ಪರ್ಧಿಸಲು ಅಭ್ಯರ್ಥಿಗಳಿಲ್ಲದೆ ಪಕ್ಷದೊಳಗೆಯೆ 5 ಕೋಟಿ ರೂ. ನೀಡಲು ಮುಂದಾದ...

ಜಾರ್ಖಂಡ್ | ಸಿಎಂ ವಿರುದ್ಧ ಸ್ಪರ್ಧಿಸಲು ಅಭ್ಯರ್ಥಿಗಳಿಲ್ಲದೆ ಪಕ್ಷದೊಳಗೆಯೆ 5 ಕೋಟಿ ರೂ. ನೀಡಲು ಮುಂದಾದ ಬಿಜೆಪಿ!

- Advertisement -
- Advertisement -

ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ವಿರುದ್ಧ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಯಾವುದಾದರೂ ಬಿಜೆಪಿ ಅಭ್ಯರ್ಥಿಗೆ 5 ಕೋಟಿ ರೂ.ಗಳನ್ನು ನೀಡುವುದಾಗಿ ಪಕ್ಷವೆ “ಆಮಿಷ” ಒಡ್ಡುತ್ತಿದೆ ಎಂದು ಆಡಳಿತರೂಢ ಜೆಎಂಎಂ ನಾಯಕರೊಬ್ಬರು ಹೇಳಿದ್ದಾರೆ.

ಜೆಎಂಎಂ ನಾಯಕ ಮನೋಜ್ ಪಾಂಡೆ ಭಾನುವಾರ ಸುದ್ದಿ ಸಂಸ್ಥೆ ಎಎನ್‌ಐ ಜೊತೆಗೆ ಮಾತನಾಡುತ್ತಾ, ಸಿಎಂ ಹೇಮಂತ್ ಸೊರೆನ್ ಅವರ ಕ್ಷೇತ್ರವಾದ ಬರ್ಹೈತ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಯಾವುದೇ ಅಭ್ಯರ್ಥಿಯನ್ನು ಹುಡುಕಲು ಸಾಧ್ಯವಾಗುತ್ತಿಲ್ಲ” ಎಂದು ಹೇಳಿದ್ದಾರೆ. ಜಾರ್ಖಂಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಅವರು ಅದಕ್ಕಾಗಿ ಹುಡುಕಾಟ ನಡೆಸುತ್ತಿದ್ದಾರೆ, ಆದರೆ ಇನ್ನೂ ಸರಿಯಾದ ಅಭ್ಯರ್ಥಿಯನ್ನು ಹುಡುಕಲು ಸಾಧ್ಯವಾಗುತ್ತಿಲ್ಲ. ಈಗ ಅವರು ಅಭ್ಯರ್ಥಿಯನ್ನು ಸೆಳೆಯಲು ಪಕ್ಷದೊಳಗೆ 5 ಕೋಟಿ ರೂಪಾಯಿಗಳ ಪ್ಯಾಕೇಜ್ ಘೋಷಿಸಿದ್ದಾರೆ ಎಂಬ ಮಾಹಿತಿ ನಮಗೆ ಬಂದಿದೆ” ಎಂದು ಅವರು ಹೇಳಿದ್ದಾರೆ.

ಈಗ ಅವರು ಹಣ ನೀಡಿ ಅಭ್ಯರ್ಥಿಯನ್ನು ನಿಲ್ಲಿಸಲು ಪ್ರಯತ್ನಿಸುತ್ತಿದ್ದಾರೆ. ಆದರೆ ಯಾರಾದರೂ ರಾಜಕೀಯವಾಗಿ ಹುತಾತ್ಮರಾಗಲು ಬಯಸುತ್ತಾರೆಯೆ ಎಂದು ಅವರು ಕೇಳಿದ್ದಾರೆ.

ಬಿಜೆಪಿ ಹೀಗೇಕೆ ಮಾಡುತ್ತಿದೆ ಎಂಬ ಉತ್ತರಿಸಿದ ಪಾಂಡೆ, ಕ್ಷೇತ್ರದಲ್ಲಿ ಬಿಜೆಪಿಗೆ 100-150 ಮತಗಳು ಸಿಗುವುದಿಲ್ಲ ಎಂದು ಅವರಿಗೆ ತಿಳಿದಿದೆ. ಆದ್ದರಿಂದ ಯಾವುದೇ ಅಭ್ಯರ್ಥಿ ಸಿಎಂ ಸೋರೆನ್ ವಿರುದ್ಧ ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸುವುದಿಲ್ಲ ಎಂದು ಹೇಳಿದ್ದಾರೆ.

“ಬಿಜೆಪಿ ಅಭ್ಯರ್ಥಿ ಕೇವಲ 250 ಮತಗಳನ್ನು ಪಡೆಯುತ್ತಾನೆ ಎಂದು ಎಂದರೆ ಅದು ಎಷ್ಟು ಅವಮಾನಕರ ವಿಷಯ. ಅದಕ್ಕಾಗಿಯೇ ಅವರು ಯಾವುದೇ ಅಭ್ಯರ್ಥಿಯನ್ನು ಕ್ಷೇತ್ರದಲ್ಲಿ ಸೊರೆನ್ ವಿರುದ್ಧ ನಿಲ್ಲಿಸುವುದಿಲ್ಲ. ಅಥವಾ ಹಣದ ದುರಾಸೆಗೆ ಯಾರಾದರೂ ನಾಮಪತ್ರ ಸಲ್ಲಿಸಿದರೂ ಸಲ್ಲಿಸುತ್ತಾರೆ” ಎಂದು ಅವರು ಹೇಳಿದ್ದಾರೆ.

ಗುರುವಾರ ಬರ್ಹೈತ್ ಕ್ಷೇತ್ರದಿಂದ ಸಿಎಂ ಸೋರೆನ್ ನಾಮಪತ್ರ ಸಲ್ಲಿಸಿದರೆ, ಅವರ ಪತ್ನಿ ಕಲ್ಪನಾ ಸೊರೆನ್ ಗಂಡೇ ವಿಧಾನಸಭಾ ಸ್ಥಾನಕ್ಕೆ ದಾಖಲೆಗಳನ್ನು ಸಲ್ಲಿಸಿದ್ದಾರೆ. ಬರ್ಹೈತ್ ಸಂತಾಲ್ ಪರಗಾನಾ ಪ್ರದೇಶದ ಅಡಿಯಲ್ಲಿ ಬರುತ್ತದೆ. ಇದನ್ನು ಜೆಎಂಎಂ ಭದ್ರಕೋಟೆ ಎಂದೆ ಪರಿಗಣಿಸಲಾಗಿದೆ.

2019 ರ ವಿಧಾನಸಭಾ ಚುನಾವಣೆಯಲ್ಲಿ, ಸೊರೆನ್ ಸಂತಾಲ್ ಪ್ರದೇಶದಲ್ಲಿ ಬರ್ಹೈತ್ ಮತ್ತು ದುಮ್ಕಾ ಎಂಬ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದರು. ಈ ಎರಡೂ ಸ್ಥಾನಗಳಲ್ಲಿ ಅವರು ಗೆದ್ದಿದ್ದರು.

ಅವರು ಬಿಜೆಪಿಯ ಸೈಮನ್ ಮಾಲ್ಟೊ ಅವರನ್ನು 25,740 ಮತಗಳಿಂದ ಸೋಲಿಸುವ ಮೂಲಕ ಬರ್ಹೈತ್ ಕ್ಷೇತ್ರವನ್ನು ಮತ್ತು ಲೋಯಿಸ್ ಮರಾಂಡಿ ದುಮ್ಕಾ ಕ್ಷೇತ್ರದಲ್ಲಿ 13,188 ಮತಗಳ ಅಂತರದಿಂದ ಸೋಲಿಸಿದ್ದರು. ನಂತರ ಸೊರೆನ್ ಅವರು ದುಮ್ಕಾ ಸ್ಥಾನವನ್ನು ತೆರವು ಮಾಡಿದ್ದರು.

81 ಸದಸ್ಯ ಬಲದ ಜಾರ್ಖಂಡ್ ವಿಧಾನಸಭೆಗೆ ನವೆಂಬರ್ 13 ಮತ್ತು 20 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ನವೆಂಬರ್ 20 ರಂದು ಫಲಿತಾಂಶ ಪ್ರಕಟವಾಗಲಿದೆ.

ಇದನ್ನೂ ಓದಿ: ದಾನದ ಹೆಸರಿನಲ್ಲಿ ‘ಧಾರ್ಮಿಕ ನಂಬಿಕೆ’ಯನ್ನು ಪ್ರಭಾವಿಸುವುದು ಪ್ರಜಾಪ್ರಭುತ್ವಕ್ಕೆ ಮಾರಕ – ಉಪ ರಾಷ್ಟ್ರಪತಿ ಜಗದೀಪ್ ಧನಕರ್

ದಾನದ ಹೆಸರಿನಲ್ಲಿ ‘ಧಾರ್ಮಿಕ ನಂಬಿಕೆ’ಯನ್ನು ಪ್ರಭಾವಿಸುವುದು ಪ್ರಜಾಪ್ರಭುತ್ವಕ್ಕೆ ಮಾರಕ – ಉಪ ರಾಷ್ಟ್ರಪತಿ ಜಗದೀಪ್ ಧನಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...