Homeಮುಖಪುಟಹೇಮಂತ್ ಸೊರೆನ್ ಬಂಧನ: ಸೇಡಿನ ರಾಜಕೀಯ ಎಂದ ಪ್ರತಿಪಕ್ಷಗಳ ನಾಯಕರು

ಹೇಮಂತ್ ಸೊರೆನ್ ಬಂಧನ: ಸೇಡಿನ ರಾಜಕೀಯ ಎಂದ ಪ್ರತಿಪಕ್ಷಗಳ ನಾಯಕರು

- Advertisement -
- Advertisement -

ಜಾರ್ಖಾಂಡ್‌ ಸಿಎಂ ಹೇಮಂತ್ ಸೊರೆನ್ ಅವರನ್ನು ನಿನ್ನೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು  ಬಂಧಿಸಿದ್ದಾರೆ. ಭೂ ಹಗರಣ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಜಾರ್ಖಂಡ್ ಮುಕ್ತಿ ಮೋರ್ಚಾ(ಜೆಎಂಎಂ) ನಾಯಕ ಮತ್ತು ಜಾರ್ಖಾಂಡ್‌ ಸಿಎಂ ಹೇಮಂತ್ ಸೊರೆನ್ ಅವರನ್ನು 7 ಗಂಟೆಗಳ ಕಾಲ ವಿಚಾರಣೆ ನಡೆಸಿದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಳಿಕ ಅವರನ್ನು ಬಂಧಿಸಿದ್ದರು. ಈ ಬಂಧನವು ಮೋದಿ ಸರ್ಕಾರ ಮತ್ತು ವಿರೋಧ ಪಕ್ಷಗಳ ನಡುವಿನ ರಾಜಕೀಯ ಜಟಾಪಟಿಗೆ ಕಾರಣವಾಗಿದ್ದು, ಸುರೇನ್‌ ಬಂಧನವನ್ನು ವಿರೋಧ ಪಕ್ಷದ ನಾಯಕರು ರಾಜಕೀಯ ಸೇಡಿನ ಕ್ರಮ ಎಂದು ಬಣ್ಣಿಸಿದ್ದಾರೆ.

ಜೆಎಂಎಂ ಶಾಸಕರು ಇಡಿ ಕ್ರಮವನ್ನು ಖಂಡಿಸಿದ್ದು, ದಾಳಿಗಳು ಮತ್ತು ಮುಖ್ಯಮಂತ್ರಿಯ ಬಂಧನವು ಉನ್ನತವಾದ ರಾಜಕೀಯ ಪಿತೂರಿಯಿಂದ ಕೂಡಿದೆ ಎಂದು ಹೇಳಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋರೆನ್ ವಿರುದ್ಧದ ಕ್ರಮವು ಸಂಯುಕ್ತ ವ್ಯವಸ್ಥೆಯನ್ನು ತೊಡೆದು ಹಾಕುವುದರ ಭಾಗವಾಗಿದೆ ಎಂದು ಹೇಳಿದ್ದಾರೆ. ಪಿಎಂಎಲ್‌ಎ ನಿಬಂಧನೆಗಳನ್ನು ವಿಧಿಸುವ ಮೂಲಕ ವಿರೋಧ ಪಕ್ಷದ ನಾಯಕರನ್ನು ಬೆದರಿಸುವುದು ಬಿಜೆಪಿಯ ಟೂಲ್ ಕಿಟ್‌ನ ಭಾಗವಾಗಿದೆ. ಷಡ್ಯಂತ್ರದ ಭಾಗವಾಗಿ ಪ್ರತಿಪಕ್ಷದ ಸರ್ಕಾರಗಳನ್ನು ಒಂದೊಂದಾಗಿ ಅಸ್ಥಿರಗೊಳಿಸುವ ಬಿಜೆಪಿಯ ಕೆಲಸ ಮುಂದುವರೆದಿದೆ ಎಂದು ಹೇಳಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ ರಾಹುಲ್ ಗಾಂಧಿ, ಕೇಂದ್ರ ಸರ್ಕಾರದ ಸಂಸ್ಥೆಗಳಾದ ಇಡಿ, ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (ಸಿಬಿಐ) ಮತ್ತು ಆದಾಯ ತೆರಿಗೆ (ಐಟಿ) ಇಲಾಖೆಗಳು ಸರ್ಕಾರಿ ಸಂಸ್ಥೆಗಳಾಗಿ ಉಳಿದಿಲ್ಲ. ಬಿಜೆಪಿ ವಿರೋಧಿಗಳನ್ನು ತೊಡೆದುಹಾಕುವ ಕೋಶವಾಗಿ ಮಾರ್ಪಟ್ಟಿವೆ. ಸ್ವತಃ ಭ್ರಷ್ಟಾಚಾರದಲ್ಲಿ ಮುಳುಗಿರುವ ಬಿಜೆಪಿ ಅಧಿಕಾರದ ವ್ಯಾಮೋಹದಲ್ಲಿ ಪ್ರಜಾಪ್ರಭುತ್ವವನ್ನು ನಾಶಮಾಡುವ ಅಭಿಯಾನವನ್ನು ನಡೆಸುತ್ತಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

CPI(ML)ನ ಪ್ರಧಾನ ಕಾರ್ಯದರ್ಶಿ ದೀಪಂಕರ್ ಭಟ್ಟಾಚಾರ್ಯ ಅವರು ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, ಸೋರೆನ್ ಅವರ ಬಂಧನವು ಮೋದಿ ಆಡಳಿತದಿಂದ ಪ್ರತಿಪಕ್ಷಗಳ ವಿರುದ್ಧ ನಡೆಯುತ್ತಿರುವ ಯುದ್ಧದ ಭೀಕರತೆಯನ್ನು ಸೂಚಿಸುತ್ತದೆ ಎಂದು ಹೇಳಿದ್ದಾರೆ, ತಮ್ಮ ಪಕ್ಷವು ಜಾರ್ಖಂಡ್‌ನ ಹೊಸ ಮುಖ್ಯಮಂತ್ರಿಯಾಗಿ ಚಂಪೈ ಸೊರೆನ್ ಅವರನ್ನು ಬೆಂಬಲಿಸುತ್ತದೆ ಎಂದು ಹೇಳಿದ್ದಾರೆ.

ಶಿವಸೇನೆಯ ಉದ್ಧವ್ ಠಾಕ್ರೆ ಬಣದ ರಾಜ್ಯಸಭಾ ಸಂಸದ ಪ್ರಿಯಾಂಕಾ ಚತುರ್ವೇದಿ ಅವರು ಈ ಕುರಿತು ಪ್ರತಿಕ್ರಿಯಸಿದ್ದು, ಇಡಿ, ಸಿಬಿಐ ಮತ್ತು ಐಟಿ ಇಲಾಖೆಯು ಬಿಜೆಪಿಯ ಆಸ್ಥಾನಗಳಾಗಿ ಮಾರ್ಪಟ್ಟಿದೆ ಎಂದು ಬರೆದಿದ್ದಾರೆ.

ಜಾರ್ಖಂಡ್ ಮುಖ್ಯಮಂತ್ರಿ ಬಂಧನದ ಕುರಿತು ಚರ್ಚಿಸಲು INDIA ಮೈತ್ರಿಕೂಟದ ನಾಯಕರು ಬುಧವಾರ ಸಂಜೆ ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ಮನೆಯಲ್ಲಿ ಸಭೆ ನಡೆಸಿದ್ದಾರೆ. ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ, ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಮತ್ತು ಡಿಎಂಕೆ ನಾಯಕ ಟಿ.ಆರ್.ಬಾಲು ಸೇರಿ ಪ್ರತಿಪಕ್ಷಗಳ ಹಲವು ನಾಯಕರು ಸಭೆಯಲ್ಲಿ ಭಾಗವಹಿಸಿದ್ದರು.

ಹೇಮಂತ್ ಸೊರೆನ್ ಅವರ ಬಂಧನದ ಬಳಿಕ ಆಡಳಿತಾರೂಢ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಪಕ್ಷದ ಹಿರಿಯ ನಾಯಕ ಮತ್ತು ರಾಜ್ಯದ ಸಾರಿಗೆ ಸಚಿವ ಚಂಪೈ ಸೊರೆನ್ ಅವರನ್ನು ಜೆಎಂಎಂನ ಶಾಸಕಾಂಗ ಪಕ್ಷದ ನಾಯಕ ಎಂದು ಘೋಷಿಸಲಾಗಿದೆ. ಈ ಮೊದಲು ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲು ಕೇಂದ್ರ ಸರ್ಕಾರಕ್ಕೆ ತನ್ನ ಬಂಧನವು ಅವಕಾಶ ನೀಡುತ್ತದೆ ಎಂದು ಹೇಮಂತ್ ಸೊರೆನ್ ಆತಂಕ ವ್ಯಕ್ತಪಡಿಸಿದ್ದರು ಎಂದು ಮೂಲಗಳು ತಿಳಿಸಿವೆ.

ಬುಧವಾರ ಜಾರ್ಖಂಡ್ ಪೊಲೀಸರು ಹೇಮಂತ್‌ ಸೋರೆನ್ ನೀಡಿದ ದೂರಿನ ಆಧಾರದ ಮೇಲೆ  ಹಿರಿಯ ಇಡಿ ಅಧಿಕಾರಿಗಳ ವಿರುದ್ಧ ಎಸ್ಸಿ, ಎಸ್ಟಿ ಕಾಯ್ದೆಯಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಇಡಿ ಅಧಿಕಾರಿಗಳು ವಿಚಾರಣೆಯ ನೆಪದಲ್ಲಿ ನನಗೆ ಕಿರುಕುಳ ಕೊಡುತ್ತಿದ್ದಾರೆ. ಇಡಿ ಕ್ರಮವು ನಮ್ಮ ಸಮುದಾಯಕ್ಕೆ ಅಪಮಾನವನ್ನುಂಟು ಮಾಡಿದೆ ಎಂದು ಹೇಮಂತ್ ಸೊರೇನ್ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದರು.

ಇದನ್ನು ಓದಿ: ಹೇಮಂತ್ ಸೊರೆನ್ ಅರೆಸ್ಟ್‌: ಜಾರ್ಖಾಂಡ್‌ಗೆ ನೂತನ ಸಿಎಂ

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...