Homeಮುಖಪುಟಜಾರ್ಖಂಡ್‌‌‌‌ ಸಿಎಂ ಹೇಮಂತ್‌‌ ಸೋರೆನ್‌‌ ಶಾಸಕ ಸ್ಥಾನದಿಂದ ಅನರ್ಹ ಸಾಧ್ಯತೆ; ಉರುಳಲಿದೆಯೆ ಮತ್ತೊಂದು ಸರ್ಕಾರ?

ಜಾರ್ಖಂಡ್‌‌‌‌ ಸಿಎಂ ಹೇಮಂತ್‌‌ ಸೋರೆನ್‌‌ ಶಾಸಕ ಸ್ಥಾನದಿಂದ ಅನರ್ಹ ಸಾಧ್ಯತೆ; ಉರುಳಲಿದೆಯೆ ಮತ್ತೊಂದು ಸರ್ಕಾರ?

- Advertisement -
- Advertisement -

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜಾರ್ಖಂಡ್‌ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರನ್ನು ಚುನಾವಣಾ ಆಯೋಗವು ತಪ್ಪಿತಸ್ಥರೆಂದು ಪರಿಗಣಿಸಿದ್ದು, ಕೇವಲ ‘ಅನರ್ಹತೆ’ಗೆ ಶಿಫಾರಸು ಮಾಡಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ.

ಈ ಹಿನ್ನಲೆಯಲ್ಲಿ ರಾಜ್ಯಪಾಲರು ಅನರ್ಹತೆಯ ಆದೇಶವನ್ನು ಗೆಜೆಟ್‌ನಲ್ಲಿ ಸೂಚಿಸಿದರೆ, ಸೊರೆನ್ ರಾಜೀನಾಮೆ ನೀಡಬೇಕಾಗುತ್ತದೆ. ಹೇಮಂತ್‌ ಸೊರೆನ್ ಅವರ ಜೊತೆ ಅವರ ಮಂತ್ರಿಮಂಡಲವೂ ರಾಜೀನಾಮೆ ನೀಡಲಿದೆ. ಆದರೆ ಆರು ತಿಂಗಳೊಳಗೆ ಚುನಾವಣಾ ಆಯೋಗ ನಡೆಸುವ ಉಪಚುನಾವಣೆಯಲ್ಲಿ ಅವರು ಮತ್ತೆ ಆಯ್ಕೆಯಾಗಬಹುದಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜಾರ್ಖಂಡ್‌ನ ಹಿರಿಯ ನಾಯಕರಾದ ಸರಯು ರಾಯ್ ಅವರು ಮುಖ್ಯಮಂತ್ರಿ ಸೋರೆನ್‌ ಅವರು ಶಾಸಕ ಸ್ಥಾನಕ್ಕೆ ಯೋಗ್ಯರಲ್ಲ ಎಂದು ಚುನಾವಣಾ ಆಯೋಗವು ಘೋಷಿಸಿದೆ ಎಂದು “ಅತ್ಯಂತ ವಿಶ್ವಾಸಾರ್ಹ ಮೂಲ”ಗಳನ್ನು ಉಲ್ಲೇಖಿಸಿ ಅವರು ಹೇಳಿದ್ದಾರೆ.

“ವಿಶ್ವಾಸಾರ್ಹ ಮೂಲಗಳ ಪ್ರಕಾರ, ಚುನಾವಣಾ ಆಯೋಗವು ಹೇಮಂತ್ ಸೊರೆನ್‌ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿದೆ. ಅನರ್ಹತೆಯ ಅಧಿಸೂಚನೆಯು ರಾಜಭವನದಿಂದ ಹೊರಬಂದ ತಕ್ಷಣ ಅವರು ರಾಜೀನಾಮೆ ನೀಡಬೇಕು ಅಥವಾ ಗೌರವಾನ್ವಿತ ನ್ಯಾಯಾಲಯದಿಂದ ಈ ಅಧಿಸೂಚನೆಗೆ ತಡೆಯಾಜ್ಞೆ ಪಡೆಯಬೇಕು” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ‘ಮಾಬ್‌ ಲಿಂಚಿಂಗ್‌ ವಿರೋಧಿ ಮಸೂದೆ’ಗೆ ಸಹಿ ಹಾಕಲು ನಿರಾಕರಿಸಿದ ಜಾರ್ಖಂಡ್‌ ರಾಜ್ಯಪಾಲ

ಮುಖ್ಯಮಂತ್ರಿ ಹೇಮಂತ್‌ ಸೊರೆನ್‌ ಅವರು ಸ್ವತಃ ತಾವೇ ಸರ್ಕಾರಿ ಗುತ್ತಿಗೆ ಪಡೆದಿದ್ದರಿಂದ ಶಾಸಕ ಸ್ಥಾನದಿಂದ ಅನರ್ಹಗೊಂಡಿದ್ದಾರೆ ಎಂದು ಚುನಾವಣಾ ಆಯೋಜ ಅಭಿಪ್ರಾಯಪಟ್ಟಿದೆ ಎಂದು ಮೂಲಗಳು ತಿಳಿಸಿವೆ. ಅವರು ಗಣಿಗಾರಿಕೆ ಗುತ್ತಿಗೆಯನ್ನು ತನಗೇ ತಾನೆ ಪಡೆದುಕೊಂಡಿದ್ದಾರ ಎಂದು ಆರೋಪಿಸಿ ಅವರ ವಿರುದ್ಧ ದೂರು ದಾಖಲಿಸಲಾಗಿದೆ.

ರಾಜ್ಯಪಾಲ ರಮೇಶ್ ಬೈಸ್ ಅವರು ಹೇಮಂತ್‌ ಸೋರೆನ್ ಅವರ ಅನರ್ಹತೆಯ ಬಗ್ಗೆ ಚುನಾವಣಾ ಆಯೋಗದ ಅಭಿಪ್ರಾಯವನ್ನು ಪರಿಶೀಲಿಸುತ್ತಿದ್ದು, ಶೀಘ್ರದಲ್ಲೇ ಅದನ್ನು ತಿಳಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ ಮುಂದಕ್ಕೆ ಹೇಮಂತ್‌ ಸೊರೆನ್ ಅವರು ಚುನಾವಣೆಯಲ್ಲಿ ಸ್ಪರ್ಧಿಸದೆ ಇರಲು ನಿರ್ಬಂಧಿಸಲಾಗಿಲ್ಲ ಎಂದು ಮೂಲ ಹೇಳಿದೆ. ಈ ನಡುವೆ ಮುಖ್ಯಮಂತ್ರಿ ಸೋರೆನ್ ಅವರು ತಮ್ಮ ಮುಂದಿನ ಕ್ರಮದ ಬಗ್ಗೆ ಸಂವಿಧಾನಿಕ ತಜ್ಞರೊಂದಿಗೆ ಸಮಾಲೋಚನೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.

ರಾಜ್ಯಪಾಲರ ಆದೇಶದ ನಂತರ ಮುಖ್ಯಮಂತ್ರಿ ಸೊರೆನ್ ಅವರು ರಾಂಚಿಯ ತಮ್ಮ ನಿವಾಸದಲ್ಲಿ ಯುಪಿಎ ಸಭೆಯನ್ನು ಕರೆದಿದ್ದಾರೆ. “ಜಾರ್ಖಂಡ್‌ನಲ್ಲಿನ ಇತ್ತೀಚಿನ ರಾಜಕೀಯ ಬೆಳವಣಿಗೆಗಳು ಮತ್ತು ಊಹಾಪೋಹಗಳನ್ನು ಗಮನದಲ್ಲಿಟ್ಟುಕೊಂಡು ನಮಗೆ ಜಾರ್ಖಂಡ್ ಕಾಂಗ್ರೆಸ್ ಶಾಸಕರು ರಾಂಚಿಯಲ್ಲಿ ಲಭ್ಯವಾಗುವಂತೆ ಸೂಚನೆ ನೀಡಿದ್ದೇವೆ. ನಾಳೆ ಬೆಳಗ್ಗೆ 11 ಗಂಟೆಗೆ ಸಿಎಂ ನಿವಾಸದಲ್ಲಿ ಮತ್ತೊಂದು ಸಭೆಗೆ ನಮ್ಮನ್ನು (ಯುಪಿಎ ಶಾಸಕರು) ಕರೆಯಲಾಗಿದೆ” ಎಂದು ಜಾರ್ಖಂಡ್‌ನ ಕಾಂಗ್ರೆಸ್ ಶಾಸಕಿ ಪೂರ್ಣಿಮಾ ನೀರಜ್ ಸಿಂಗ್ ಅವರು ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಇದನ್ನೂ ಓದಿ: ದೆಹಲಿ ಮಾದರಿಯಲ್ಲಿ ಜಾರ್ಖಂಡ್‌ನಲ್ಲಿಯೂ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳ ಬಲವರ್ಧನೆ: ಕೇಜ್ರಿವಾಲ್‌ ಭೇಟಿ ಬಳಿಕ ಹೇಮಂತ್ ಸೊರೆನ್ ಘೋಷಣೆ 

ಯುಪಿಎ ಮೈತ್ರಿಕೂಟದ ಭಾಗವಾಗಿ ಆಡಳಿತಾರೂಢ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಪಕ್ಷದ ಹೇಮಂತ್‌ ಸೋರೆನ್ ಅವರು 2024 ರವರೆಗೆ ಮುಖ್ಯಮಂತ್ರಿಯಾಗಿ ಉಳಿಯುತ್ತಾರೆ ಪಕ್ಷವೂ ವಿಶ್ವಾಸ ವ್ಯಕ್ತಪಡಿಸಿದೆ.

82 ಸದಸ್ಯರಿರುವ ಜಾರ್ಖಂಡ್‌ ಅಸೆಂಬ್ಲಿಯಲ್ಲಿ JMM (30) ಮತ್ತು ಕಾಂಗ್ರೆಸ್ (17) ಸೇರಿ ಒಟ್ಟು 47 ಸದಸ್ಯರನ್ನು ಹೊಂದಿವೆ. ವಿಧಾನಸೌಧದ ವೆಬ್‌ಸೈಟ್‌ನ ಪ್ರಕಾರ 25 ಸದಸ್ಯರಿರುವ ಬಿಜೆಪಿ ರಾಜ್ಯದ ಪ್ರಮುಖ ಪ್ರತಿಪಕ್ಷವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್: ಮಹಿಳೆಗೆ ಲೈಂಗಿಕ ಶೋಷಣೆ, ಬೆದರಿಕೆ ಆರೋಪ; ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಬಂಧನ 

ಕಳೆದ ಸೆಪ್ಟೆಂಬರ್‌ನಿಂದ ಅತ್ಯಾಚಾರ ಪ್ರಕರಣವೊಂದರಲ್ಲಿ ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಅವರನ್ನು ಪಂಜಾಬ್ ಪೊಲೀಸರು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಸನೂರ್‌ನಿಂದ ಮೊದಲ ಬಾರಿಗೆ ಶಾಸಕರಾಗಿರುವ ಪಠಣಮಜ್ರಾ...

ಆಸ್ತಿ ವಿವರ ಮುಚ್ಚಿಟ್ಟು ನಾಮಪತ್ರ ಸಲ್ಲಿಸಿದ ಬಿಜೆಪಿ ಕೇರಳ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ : ಕಾಂಗ್ರೆಸ್ ಆರೋಪ

ಬಿಜೆಪಿ ಕೇರಳ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ತಮ್ಮ ಆಸ್ತಿ ವಿವರಗಳನ್ನು ಮುಚ್ಚಿಟ್ಟು ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ತಿರುವನಂತಪುರಂ ಜಿಲ್ಲೆಯ ನೇಮಮ್...

2026ರ ಮೊದಲ 74 ದಿನಗಳಲ್ಲಿ 170 ಕಸ್ಟಡಿ ಸಾವುಗಳು ವರದಿ; ಸಂಸತ್ತಿಗೆ ಕೇಂದ್ರ ಸರ್ಕಾರ ಮಾಹಿತಿ 

2026 ರ ಮೊದಲ 74 ದಿನಗಳಲ್ಲಿ (ಜನವರಿ 1 ರಿಂದ ಮಾರ್ಚ್ 15 ರವರೆಗೆ) ಭಾರತದಾದ್ಯಂತ ಒಟ್ಟು 170 ಕಸ್ಟಡಿ ಸಾವಿನ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಸಂಸತ್ತಿಗೆ ತಿಳಿಸಿದೆ. ಗೃಹ...

ಮುಸ್ಲಿಂ ಗ್ಯಾಸ್ ಏಜೆನ್ಸಿ ಮಾಲೀಕರನ್ನು ಬಾಂಗ್ಲಾದೇಶಿ ಎಂದು ನಿಂದನೆ; ಬುಲಂದ್‌ಶಹರ್‌ನಲ್ಲಿ ಹಿಂದೂ ರಕ್ಷಾ ದಳ ನಾಯಕನ ಬಂಧನ

ಉತ್ತರ ಪ್ರದೇಶದ ಬುಲಂದ್‌ಶಹರ್ ಜಿಲ್ಲೆಯಲ್ಲಿ ಹಿಂದೂ ರಕ್ಷಾ ದಳದ ನಾಯಕನೊಬ್ಬ ಮುಸ್ಲಿಂ ಗ್ಯಾಸ್ ಏಜೆನ್ಸಿ ಮಾಲೀಕರನ್ನು "ಬಾಂಗ್ಲಾದೇಶಿ" ಎಂದು ಕರೆದು ಬೆದರಿಕೆ ಹಾಕುತ್ತಿರುವ ವೀಡಿಯೊ ಕಾಣಿಸಿಕೊಂಡ ನಂತರ ಆತನನ್ನು ಬಂಧಿಸಲಾಗಿದೆ. ಜಿಲ್ಲೆಯ ಖುರ್ಜಾ ನಗರದಲ್ಲಿ...

ಭಾರತ 6ನೇ ಅತ್ಯಂತ ಕಲುಷಿತ ರಾಷ್ಟ್ರ; ಉತ್ತರ ಪ್ರದೇಶದ ಲೋನಿ ವಿಶ್ವದ ಅತ್ಯಂತ ಕಲುಷಿತ ನಗರ: ವರದಿ

ಪ್ರಮುಖ ವಾಯು ಮಾಲಿನ್ಯಕಾರಕ ಸೂಕ್ಷ್ಮ ಕಣಗಳ ಮಟ್ಟದಲ್ಲಿ ಭಾರತ ಆರನೇ ಅತ್ಯಂತ ಕಲುಷಿತ ರಾಷ್ಟ್ರವಾಗಿದ್ದರೆ, ಉತ್ತರ ಪ್ರದೇಶದ ಲೋನಿ ಜಗತ್ತಿನಾದ್ಯಂತ ಅತ್ಯಂತ ಕಲುಷಿತ ನಗರವಾಗಿದೆ. ದೆಹಲಿ ನಾಲ್ಕನೇ ಸ್ಥಾನದಲ್ಲಿದೆ ಎಂದು ವಿಶ್ವ ವಾಯು...

ನಿಷ್ಕ್ರಿಯ ದಯಾಮರಣಕ್ಕೆ ಅನುಮತಿ ಪಡೆದ ಭಾರತದ ಮೊದಲ ವ್ಯಕ್ತಿ ಹರೀಶ್ ರಾಣಾ ದೆಹಲಿ ಏಮ್ಸ್‌ನಲ್ಲಿ ನಿಧನ

ಕಳೆದ 13 ವರ್ಷಗಳಿಂದ ಕೋಮಾದಲ್ಲಿದ್ದು ಜೀವನ್ಮರಣ ಹೋರಾಟ ನಡೆಸಿ, ಅಂತಿಮವಾಗಿ 2026ರ ಮಾರ್ಚ್ 11ರಂದು ನಿಷ್ಕ್ರಿಯ ದಯಾಮರಣಕ್ಕೆ ಸುಪ್ರೀಂ ಕೋರ್ಟ್‌ನಿಂದ ಅನುಮತಿ ಪಡೆದ 32 ವರ್ಷದ ಯುವಕ ಹರೀಶ್ ರಾಣಾ, ಮಂಗಳವಾರ (ಮಾ.24)...

ಪಶ್ಚಿಮ ಏಷ್ಯಾ ಸಂಘರ್ಷ: ಪಾಕಿಸ್ತಾನ ಮಧ್ಯವರ್ತಿಯಾದರೆ ಅದು ಭಾರತದ ರಾಜತಾಂತ್ರಿಕ ಹಿನ್ನೆಡೆಯಾಗಬಹುದು; ಕಾಂಗ್ರೆಸ್ 

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಸಂವಹನದಲ್ಲಿ ಪಾಕಿಸ್ತಾನ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂಬ ವರದಿಗಳು ದೃಢಪಟ್ಟರೆ ಭಾರತಕ್ಕೆ ರಾಜತಾಂತ್ರಿಕ ಹಿನ್ನಡೆಯಾಗಬಹುದು ಎಂದು ಕಾಂಗ್ರೆಸ್ ಪಕ್ಷ ಮಂಗಳವಾರ ಹೇಳಿದೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಮಧ್ಯೆ,...

ಭಯೋತ್ಪಾದಕ ಚಟುವಟಿಕೆಗಳ ಆರೋಪ; ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಜೀವಾವಧಿ ಶಿಕ್ಷೆ

ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಭಯೋತ್ಪಾದನಾ ಚಟುವಟಿಕೆಗಳ ಆರೋಪದ ಮೇಲೆ ದೆಹಲಿಯ ವಿಶೇಷ ನ್ಯಾಯಾಲಯವು ಮಂಗಳವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ಆಕೆಯ ಸಹಚರರಾದ ಸೋಫಿ...

ಬಿಜೆಪಿ ಸೀಲ್ ಇರುವ ಚು.ಆಯೋಗದ ಪತ್ರದ ಕುರಿತ ಪೋಸ್ಟ್‌ಗಳನ್ನು ತೆಗೆದು ಹಾಕಲು ಕೇರಳ ಪೊಲೀಸರಿಂದ ಸೂಚನೆ

ಚುನಾವಣಾ ಆಯೋಗದ ಪತ್ರದಲ್ಲಿ ಬಿಜೆಪಿ ಕೇರಳ ರಾಜ್ಯ ಘಟಕದ ಸೀಲ್ ಇದ್ದ ಬಗ್ಗೆ ಸೋಮವಾರದಿಂದ (ಮಾ.23) ಭಾರೀ ಚರ್ಚೆಯಾಗುತ್ತಿದೆ. ಸಿಪಿಐ(ಎಂ), ಕಾಂಗ್ರೆಸ್, ಟಿಎಂಸಿ ಸೇರಿದಂತೆ ಪ್ರತಿಪಕ್ಷಗಳು ಮತ್ತು ಸಾಮಾಜಿಕ ಜಾಲತಾಣ ಬಳಕೆದಾರರು ಚುನಾವಣಾ...

ಪಂಜಾಬ್: ಮಾಜಿ ಸಚಿವ ಲಾಲ್‌ಜಿತ್ ಸಿಂಗ್ ಭುಲ್ಲರ್ ಕಿರುಕುಳಕ್ಕೆ ಅಧಿಕಾರಿ ಆತ್ಮಹತ್ಯೆ; ಅಮೃತಸರದಲ್ಲಿ ಶವಪರೀಕ್ಷೆಗೆ ಕುಟುಂಬ ಒಪ್ಪಿಗೆ

ಪಂಜಾಬ್‌ನ ಮಾಜಿ ಸಚಿವ ಲಾಲ್‌ಜಿತ್ ಸಿಂಗ್ ಭುಲ್ಲರ್ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡ ಗೋದಾಮು ನಿಗಮದ ಅಧಿಕಾರಿ ಗಗನ್‌ದೀಪ್ ಸಿಂಗ್ ರಾಂಧವ ಅವರ ಮರಣೋತ್ತರ ಪರೀಕ್ಷೆಯನ್ನು ಮಂಗಳವಾರ ಅಮೃತಸರದಲ್ಲಿ ನಡೆಸಲಾಗುವುದು...