Homeಮುಖಪುಟಜಾರ್ಖಂಡ್‌‌‌‌ ಸಿಎಂ ಹೇಮಂತ್‌‌ ಸೋರೆನ್‌‌ ಶಾಸಕ ಸ್ಥಾನದಿಂದ ಅನರ್ಹ ಸಾಧ್ಯತೆ; ಉರುಳಲಿದೆಯೆ ಮತ್ತೊಂದು ಸರ್ಕಾರ?

ಜಾರ್ಖಂಡ್‌‌‌‌ ಸಿಎಂ ಹೇಮಂತ್‌‌ ಸೋರೆನ್‌‌ ಶಾಸಕ ಸ್ಥಾನದಿಂದ ಅನರ್ಹ ಸಾಧ್ಯತೆ; ಉರುಳಲಿದೆಯೆ ಮತ್ತೊಂದು ಸರ್ಕಾರ?

- Advertisement -
- Advertisement -

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜಾರ್ಖಂಡ್‌ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರನ್ನು ಚುನಾವಣಾ ಆಯೋಗವು ತಪ್ಪಿತಸ್ಥರೆಂದು ಪರಿಗಣಿಸಿದ್ದು, ಕೇವಲ ‘ಅನರ್ಹತೆ’ಗೆ ಶಿಫಾರಸು ಮಾಡಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ.

ಈ ಹಿನ್ನಲೆಯಲ್ಲಿ ರಾಜ್ಯಪಾಲರು ಅನರ್ಹತೆಯ ಆದೇಶವನ್ನು ಗೆಜೆಟ್‌ನಲ್ಲಿ ಸೂಚಿಸಿದರೆ, ಸೊರೆನ್ ರಾಜೀನಾಮೆ ನೀಡಬೇಕಾಗುತ್ತದೆ. ಹೇಮಂತ್‌ ಸೊರೆನ್ ಅವರ ಜೊತೆ ಅವರ ಮಂತ್ರಿಮಂಡಲವೂ ರಾಜೀನಾಮೆ ನೀಡಲಿದೆ. ಆದರೆ ಆರು ತಿಂಗಳೊಳಗೆ ಚುನಾವಣಾ ಆಯೋಗ ನಡೆಸುವ ಉಪಚುನಾವಣೆಯಲ್ಲಿ ಅವರು ಮತ್ತೆ ಆಯ್ಕೆಯಾಗಬಹುದಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜಾರ್ಖಂಡ್‌ನ ಹಿರಿಯ ನಾಯಕರಾದ ಸರಯು ರಾಯ್ ಅವರು ಮುಖ್ಯಮಂತ್ರಿ ಸೋರೆನ್‌ ಅವರು ಶಾಸಕ ಸ್ಥಾನಕ್ಕೆ ಯೋಗ್ಯರಲ್ಲ ಎಂದು ಚುನಾವಣಾ ಆಯೋಗವು ಘೋಷಿಸಿದೆ ಎಂದು “ಅತ್ಯಂತ ವಿಶ್ವಾಸಾರ್ಹ ಮೂಲ”ಗಳನ್ನು ಉಲ್ಲೇಖಿಸಿ ಅವರು ಹೇಳಿದ್ದಾರೆ.

“ವಿಶ್ವಾಸಾರ್ಹ ಮೂಲಗಳ ಪ್ರಕಾರ, ಚುನಾವಣಾ ಆಯೋಗವು ಹೇಮಂತ್ ಸೊರೆನ್‌ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿದೆ. ಅನರ್ಹತೆಯ ಅಧಿಸೂಚನೆಯು ರಾಜಭವನದಿಂದ ಹೊರಬಂದ ತಕ್ಷಣ ಅವರು ರಾಜೀನಾಮೆ ನೀಡಬೇಕು ಅಥವಾ ಗೌರವಾನ್ವಿತ ನ್ಯಾಯಾಲಯದಿಂದ ಈ ಅಧಿಸೂಚನೆಗೆ ತಡೆಯಾಜ್ಞೆ ಪಡೆಯಬೇಕು” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ‘ಮಾಬ್‌ ಲಿಂಚಿಂಗ್‌ ವಿರೋಧಿ ಮಸೂದೆ’ಗೆ ಸಹಿ ಹಾಕಲು ನಿರಾಕರಿಸಿದ ಜಾರ್ಖಂಡ್‌ ರಾಜ್ಯಪಾಲ

ಮುಖ್ಯಮಂತ್ರಿ ಹೇಮಂತ್‌ ಸೊರೆನ್‌ ಅವರು ಸ್ವತಃ ತಾವೇ ಸರ್ಕಾರಿ ಗುತ್ತಿಗೆ ಪಡೆದಿದ್ದರಿಂದ ಶಾಸಕ ಸ್ಥಾನದಿಂದ ಅನರ್ಹಗೊಂಡಿದ್ದಾರೆ ಎಂದು ಚುನಾವಣಾ ಆಯೋಜ ಅಭಿಪ್ರಾಯಪಟ್ಟಿದೆ ಎಂದು ಮೂಲಗಳು ತಿಳಿಸಿವೆ. ಅವರು ಗಣಿಗಾರಿಕೆ ಗುತ್ತಿಗೆಯನ್ನು ತನಗೇ ತಾನೆ ಪಡೆದುಕೊಂಡಿದ್ದಾರ ಎಂದು ಆರೋಪಿಸಿ ಅವರ ವಿರುದ್ಧ ದೂರು ದಾಖಲಿಸಲಾಗಿದೆ.

ರಾಜ್ಯಪಾಲ ರಮೇಶ್ ಬೈಸ್ ಅವರು ಹೇಮಂತ್‌ ಸೋರೆನ್ ಅವರ ಅನರ್ಹತೆಯ ಬಗ್ಗೆ ಚುನಾವಣಾ ಆಯೋಗದ ಅಭಿಪ್ರಾಯವನ್ನು ಪರಿಶೀಲಿಸುತ್ತಿದ್ದು, ಶೀಘ್ರದಲ್ಲೇ ಅದನ್ನು ತಿಳಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ ಮುಂದಕ್ಕೆ ಹೇಮಂತ್‌ ಸೊರೆನ್ ಅವರು ಚುನಾವಣೆಯಲ್ಲಿ ಸ್ಪರ್ಧಿಸದೆ ಇರಲು ನಿರ್ಬಂಧಿಸಲಾಗಿಲ್ಲ ಎಂದು ಮೂಲ ಹೇಳಿದೆ. ಈ ನಡುವೆ ಮುಖ್ಯಮಂತ್ರಿ ಸೋರೆನ್ ಅವರು ತಮ್ಮ ಮುಂದಿನ ಕ್ರಮದ ಬಗ್ಗೆ ಸಂವಿಧಾನಿಕ ತಜ್ಞರೊಂದಿಗೆ ಸಮಾಲೋಚನೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.

ರಾಜ್ಯಪಾಲರ ಆದೇಶದ ನಂತರ ಮುಖ್ಯಮಂತ್ರಿ ಸೊರೆನ್ ಅವರು ರಾಂಚಿಯ ತಮ್ಮ ನಿವಾಸದಲ್ಲಿ ಯುಪಿಎ ಸಭೆಯನ್ನು ಕರೆದಿದ್ದಾರೆ. “ಜಾರ್ಖಂಡ್‌ನಲ್ಲಿನ ಇತ್ತೀಚಿನ ರಾಜಕೀಯ ಬೆಳವಣಿಗೆಗಳು ಮತ್ತು ಊಹಾಪೋಹಗಳನ್ನು ಗಮನದಲ್ಲಿಟ್ಟುಕೊಂಡು ನಮಗೆ ಜಾರ್ಖಂಡ್ ಕಾಂಗ್ರೆಸ್ ಶಾಸಕರು ರಾಂಚಿಯಲ್ಲಿ ಲಭ್ಯವಾಗುವಂತೆ ಸೂಚನೆ ನೀಡಿದ್ದೇವೆ. ನಾಳೆ ಬೆಳಗ್ಗೆ 11 ಗಂಟೆಗೆ ಸಿಎಂ ನಿವಾಸದಲ್ಲಿ ಮತ್ತೊಂದು ಸಭೆಗೆ ನಮ್ಮನ್ನು (ಯುಪಿಎ ಶಾಸಕರು) ಕರೆಯಲಾಗಿದೆ” ಎಂದು ಜಾರ್ಖಂಡ್‌ನ ಕಾಂಗ್ರೆಸ್ ಶಾಸಕಿ ಪೂರ್ಣಿಮಾ ನೀರಜ್ ಸಿಂಗ್ ಅವರು ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಇದನ್ನೂ ಓದಿ: ದೆಹಲಿ ಮಾದರಿಯಲ್ಲಿ ಜಾರ್ಖಂಡ್‌ನಲ್ಲಿಯೂ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳ ಬಲವರ್ಧನೆ: ಕೇಜ್ರಿವಾಲ್‌ ಭೇಟಿ ಬಳಿಕ ಹೇಮಂತ್ ಸೊರೆನ್ ಘೋಷಣೆ 

ಯುಪಿಎ ಮೈತ್ರಿಕೂಟದ ಭಾಗವಾಗಿ ಆಡಳಿತಾರೂಢ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಪಕ್ಷದ ಹೇಮಂತ್‌ ಸೋರೆನ್ ಅವರು 2024 ರವರೆಗೆ ಮುಖ್ಯಮಂತ್ರಿಯಾಗಿ ಉಳಿಯುತ್ತಾರೆ ಪಕ್ಷವೂ ವಿಶ್ವಾಸ ವ್ಯಕ್ತಪಡಿಸಿದೆ.

82 ಸದಸ್ಯರಿರುವ ಜಾರ್ಖಂಡ್‌ ಅಸೆಂಬ್ಲಿಯಲ್ಲಿ JMM (30) ಮತ್ತು ಕಾಂಗ್ರೆಸ್ (17) ಸೇರಿ ಒಟ್ಟು 47 ಸದಸ್ಯರನ್ನು ಹೊಂದಿವೆ. ವಿಧಾನಸೌಧದ ವೆಬ್‌ಸೈಟ್‌ನ ಪ್ರಕಾರ 25 ಸದಸ್ಯರಿರುವ ಬಿಜೆಪಿ ರಾಜ್ಯದ ಪ್ರಮುಖ ಪ್ರತಿಪಕ್ಷವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...