Homeಮುಖಪುಟಜಾರ್ಖಂಡ್‌‌‌‌ ಸಿಎಂ ಹೇಮಂತ್‌‌ ಸೋರೆನ್‌‌ ಶಾಸಕ ಸ್ಥಾನದಿಂದ ಅನರ್ಹ ಸಾಧ್ಯತೆ; ಉರುಳಲಿದೆಯೆ ಮತ್ತೊಂದು ಸರ್ಕಾರ?

ಜಾರ್ಖಂಡ್‌‌‌‌ ಸಿಎಂ ಹೇಮಂತ್‌‌ ಸೋರೆನ್‌‌ ಶಾಸಕ ಸ್ಥಾನದಿಂದ ಅನರ್ಹ ಸಾಧ್ಯತೆ; ಉರುಳಲಿದೆಯೆ ಮತ್ತೊಂದು ಸರ್ಕಾರ?

- Advertisement -
- Advertisement -

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜಾರ್ಖಂಡ್‌ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರನ್ನು ಚುನಾವಣಾ ಆಯೋಗವು ತಪ್ಪಿತಸ್ಥರೆಂದು ಪರಿಗಣಿಸಿದ್ದು, ಕೇವಲ ‘ಅನರ್ಹತೆ’ಗೆ ಶಿಫಾರಸು ಮಾಡಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ.

ಈ ಹಿನ್ನಲೆಯಲ್ಲಿ ರಾಜ್ಯಪಾಲರು ಅನರ್ಹತೆಯ ಆದೇಶವನ್ನು ಗೆಜೆಟ್‌ನಲ್ಲಿ ಸೂಚಿಸಿದರೆ, ಸೊರೆನ್ ರಾಜೀನಾಮೆ ನೀಡಬೇಕಾಗುತ್ತದೆ. ಹೇಮಂತ್‌ ಸೊರೆನ್ ಅವರ ಜೊತೆ ಅವರ ಮಂತ್ರಿಮಂಡಲವೂ ರಾಜೀನಾಮೆ ನೀಡಲಿದೆ. ಆದರೆ ಆರು ತಿಂಗಳೊಳಗೆ ಚುನಾವಣಾ ಆಯೋಗ ನಡೆಸುವ ಉಪಚುನಾವಣೆಯಲ್ಲಿ ಅವರು ಮತ್ತೆ ಆಯ್ಕೆಯಾಗಬಹುದಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜಾರ್ಖಂಡ್‌ನ ಹಿರಿಯ ನಾಯಕರಾದ ಸರಯು ರಾಯ್ ಅವರು ಮುಖ್ಯಮಂತ್ರಿ ಸೋರೆನ್‌ ಅವರು ಶಾಸಕ ಸ್ಥಾನಕ್ಕೆ ಯೋಗ್ಯರಲ್ಲ ಎಂದು ಚುನಾವಣಾ ಆಯೋಗವು ಘೋಷಿಸಿದೆ ಎಂದು “ಅತ್ಯಂತ ವಿಶ್ವಾಸಾರ್ಹ ಮೂಲ”ಗಳನ್ನು ಉಲ್ಲೇಖಿಸಿ ಅವರು ಹೇಳಿದ್ದಾರೆ.

“ವಿಶ್ವಾಸಾರ್ಹ ಮೂಲಗಳ ಪ್ರಕಾರ, ಚುನಾವಣಾ ಆಯೋಗವು ಹೇಮಂತ್ ಸೊರೆನ್‌ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿದೆ. ಅನರ್ಹತೆಯ ಅಧಿಸೂಚನೆಯು ರಾಜಭವನದಿಂದ ಹೊರಬಂದ ತಕ್ಷಣ ಅವರು ರಾಜೀನಾಮೆ ನೀಡಬೇಕು ಅಥವಾ ಗೌರವಾನ್ವಿತ ನ್ಯಾಯಾಲಯದಿಂದ ಈ ಅಧಿಸೂಚನೆಗೆ ತಡೆಯಾಜ್ಞೆ ಪಡೆಯಬೇಕು” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ‘ಮಾಬ್‌ ಲಿಂಚಿಂಗ್‌ ವಿರೋಧಿ ಮಸೂದೆ’ಗೆ ಸಹಿ ಹಾಕಲು ನಿರಾಕರಿಸಿದ ಜಾರ್ಖಂಡ್‌ ರಾಜ್ಯಪಾಲ

ಮುಖ್ಯಮಂತ್ರಿ ಹೇಮಂತ್‌ ಸೊರೆನ್‌ ಅವರು ಸ್ವತಃ ತಾವೇ ಸರ್ಕಾರಿ ಗುತ್ತಿಗೆ ಪಡೆದಿದ್ದರಿಂದ ಶಾಸಕ ಸ್ಥಾನದಿಂದ ಅನರ್ಹಗೊಂಡಿದ್ದಾರೆ ಎಂದು ಚುನಾವಣಾ ಆಯೋಜ ಅಭಿಪ್ರಾಯಪಟ್ಟಿದೆ ಎಂದು ಮೂಲಗಳು ತಿಳಿಸಿವೆ. ಅವರು ಗಣಿಗಾರಿಕೆ ಗುತ್ತಿಗೆಯನ್ನು ತನಗೇ ತಾನೆ ಪಡೆದುಕೊಂಡಿದ್ದಾರ ಎಂದು ಆರೋಪಿಸಿ ಅವರ ವಿರುದ್ಧ ದೂರು ದಾಖಲಿಸಲಾಗಿದೆ.

ರಾಜ್ಯಪಾಲ ರಮೇಶ್ ಬೈಸ್ ಅವರು ಹೇಮಂತ್‌ ಸೋರೆನ್ ಅವರ ಅನರ್ಹತೆಯ ಬಗ್ಗೆ ಚುನಾವಣಾ ಆಯೋಗದ ಅಭಿಪ್ರಾಯವನ್ನು ಪರಿಶೀಲಿಸುತ್ತಿದ್ದು, ಶೀಘ್ರದಲ್ಲೇ ಅದನ್ನು ತಿಳಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ ಮುಂದಕ್ಕೆ ಹೇಮಂತ್‌ ಸೊರೆನ್ ಅವರು ಚುನಾವಣೆಯಲ್ಲಿ ಸ್ಪರ್ಧಿಸದೆ ಇರಲು ನಿರ್ಬಂಧಿಸಲಾಗಿಲ್ಲ ಎಂದು ಮೂಲ ಹೇಳಿದೆ. ಈ ನಡುವೆ ಮುಖ್ಯಮಂತ್ರಿ ಸೋರೆನ್ ಅವರು ತಮ್ಮ ಮುಂದಿನ ಕ್ರಮದ ಬಗ್ಗೆ ಸಂವಿಧಾನಿಕ ತಜ್ಞರೊಂದಿಗೆ ಸಮಾಲೋಚನೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.

ರಾಜ್ಯಪಾಲರ ಆದೇಶದ ನಂತರ ಮುಖ್ಯಮಂತ್ರಿ ಸೊರೆನ್ ಅವರು ರಾಂಚಿಯ ತಮ್ಮ ನಿವಾಸದಲ್ಲಿ ಯುಪಿಎ ಸಭೆಯನ್ನು ಕರೆದಿದ್ದಾರೆ. “ಜಾರ್ಖಂಡ್‌ನಲ್ಲಿನ ಇತ್ತೀಚಿನ ರಾಜಕೀಯ ಬೆಳವಣಿಗೆಗಳು ಮತ್ತು ಊಹಾಪೋಹಗಳನ್ನು ಗಮನದಲ್ಲಿಟ್ಟುಕೊಂಡು ನಮಗೆ ಜಾರ್ಖಂಡ್ ಕಾಂಗ್ರೆಸ್ ಶಾಸಕರು ರಾಂಚಿಯಲ್ಲಿ ಲಭ್ಯವಾಗುವಂತೆ ಸೂಚನೆ ನೀಡಿದ್ದೇವೆ. ನಾಳೆ ಬೆಳಗ್ಗೆ 11 ಗಂಟೆಗೆ ಸಿಎಂ ನಿವಾಸದಲ್ಲಿ ಮತ್ತೊಂದು ಸಭೆಗೆ ನಮ್ಮನ್ನು (ಯುಪಿಎ ಶಾಸಕರು) ಕರೆಯಲಾಗಿದೆ” ಎಂದು ಜಾರ್ಖಂಡ್‌ನ ಕಾಂಗ್ರೆಸ್ ಶಾಸಕಿ ಪೂರ್ಣಿಮಾ ನೀರಜ್ ಸಿಂಗ್ ಅವರು ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಇದನ್ನೂ ಓದಿ: ದೆಹಲಿ ಮಾದರಿಯಲ್ಲಿ ಜಾರ್ಖಂಡ್‌ನಲ್ಲಿಯೂ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳ ಬಲವರ್ಧನೆ: ಕೇಜ್ರಿವಾಲ್‌ ಭೇಟಿ ಬಳಿಕ ಹೇಮಂತ್ ಸೊರೆನ್ ಘೋಷಣೆ 

ಯುಪಿಎ ಮೈತ್ರಿಕೂಟದ ಭಾಗವಾಗಿ ಆಡಳಿತಾರೂಢ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಪಕ್ಷದ ಹೇಮಂತ್‌ ಸೋರೆನ್ ಅವರು 2024 ರವರೆಗೆ ಮುಖ್ಯಮಂತ್ರಿಯಾಗಿ ಉಳಿಯುತ್ತಾರೆ ಪಕ್ಷವೂ ವಿಶ್ವಾಸ ವ್ಯಕ್ತಪಡಿಸಿದೆ.

82 ಸದಸ್ಯರಿರುವ ಜಾರ್ಖಂಡ್‌ ಅಸೆಂಬ್ಲಿಯಲ್ಲಿ JMM (30) ಮತ್ತು ಕಾಂಗ್ರೆಸ್ (17) ಸೇರಿ ಒಟ್ಟು 47 ಸದಸ್ಯರನ್ನು ಹೊಂದಿವೆ. ವಿಧಾನಸೌಧದ ವೆಬ್‌ಸೈಟ್‌ನ ಪ್ರಕಾರ 25 ಸದಸ್ಯರಿರುವ ಬಿಜೆಪಿ ರಾಜ್ಯದ ಪ್ರಮುಖ ಪ್ರತಿಪಕ್ಷವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...