Homeಮುಖಪುಟಜಾರ್ಖಂಡ್‌‌‌‌ ಸಿಎಂ ಹೇಮಂತ್‌‌ ಸೋರೆನ್‌‌ ಶಾಸಕ ಸ್ಥಾನದಿಂದ ಅನರ್ಹ ಸಾಧ್ಯತೆ; ಉರುಳಲಿದೆಯೆ ಮತ್ತೊಂದು ಸರ್ಕಾರ?

ಜಾರ್ಖಂಡ್‌‌‌‌ ಸಿಎಂ ಹೇಮಂತ್‌‌ ಸೋರೆನ್‌‌ ಶಾಸಕ ಸ್ಥಾನದಿಂದ ಅನರ್ಹ ಸಾಧ್ಯತೆ; ಉರುಳಲಿದೆಯೆ ಮತ್ತೊಂದು ಸರ್ಕಾರ?

- Advertisement -
- Advertisement -

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜಾರ್ಖಂಡ್‌ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರನ್ನು ಚುನಾವಣಾ ಆಯೋಗವು ತಪ್ಪಿತಸ್ಥರೆಂದು ಪರಿಗಣಿಸಿದ್ದು, ಕೇವಲ ‘ಅನರ್ಹತೆ’ಗೆ ಶಿಫಾರಸು ಮಾಡಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ.

ಈ ಹಿನ್ನಲೆಯಲ್ಲಿ ರಾಜ್ಯಪಾಲರು ಅನರ್ಹತೆಯ ಆದೇಶವನ್ನು ಗೆಜೆಟ್‌ನಲ್ಲಿ ಸೂಚಿಸಿದರೆ, ಸೊರೆನ್ ರಾಜೀನಾಮೆ ನೀಡಬೇಕಾಗುತ್ತದೆ. ಹೇಮಂತ್‌ ಸೊರೆನ್ ಅವರ ಜೊತೆ ಅವರ ಮಂತ್ರಿಮಂಡಲವೂ ರಾಜೀನಾಮೆ ನೀಡಲಿದೆ. ಆದರೆ ಆರು ತಿಂಗಳೊಳಗೆ ಚುನಾವಣಾ ಆಯೋಗ ನಡೆಸುವ ಉಪಚುನಾವಣೆಯಲ್ಲಿ ಅವರು ಮತ್ತೆ ಆಯ್ಕೆಯಾಗಬಹುದಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜಾರ್ಖಂಡ್‌ನ ಹಿರಿಯ ನಾಯಕರಾದ ಸರಯು ರಾಯ್ ಅವರು ಮುಖ್ಯಮಂತ್ರಿ ಸೋರೆನ್‌ ಅವರು ಶಾಸಕ ಸ್ಥಾನಕ್ಕೆ ಯೋಗ್ಯರಲ್ಲ ಎಂದು ಚುನಾವಣಾ ಆಯೋಗವು ಘೋಷಿಸಿದೆ ಎಂದು “ಅತ್ಯಂತ ವಿಶ್ವಾಸಾರ್ಹ ಮೂಲ”ಗಳನ್ನು ಉಲ್ಲೇಖಿಸಿ ಅವರು ಹೇಳಿದ್ದಾರೆ.

“ವಿಶ್ವಾಸಾರ್ಹ ಮೂಲಗಳ ಪ್ರಕಾರ, ಚುನಾವಣಾ ಆಯೋಗವು ಹೇಮಂತ್ ಸೊರೆನ್‌ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿದೆ. ಅನರ್ಹತೆಯ ಅಧಿಸೂಚನೆಯು ರಾಜಭವನದಿಂದ ಹೊರಬಂದ ತಕ್ಷಣ ಅವರು ರಾಜೀನಾಮೆ ನೀಡಬೇಕು ಅಥವಾ ಗೌರವಾನ್ವಿತ ನ್ಯಾಯಾಲಯದಿಂದ ಈ ಅಧಿಸೂಚನೆಗೆ ತಡೆಯಾಜ್ಞೆ ಪಡೆಯಬೇಕು” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ‘ಮಾಬ್‌ ಲಿಂಚಿಂಗ್‌ ವಿರೋಧಿ ಮಸೂದೆ’ಗೆ ಸಹಿ ಹಾಕಲು ನಿರಾಕರಿಸಿದ ಜಾರ್ಖಂಡ್‌ ರಾಜ್ಯಪಾಲ

ಮುಖ್ಯಮಂತ್ರಿ ಹೇಮಂತ್‌ ಸೊರೆನ್‌ ಅವರು ಸ್ವತಃ ತಾವೇ ಸರ್ಕಾರಿ ಗುತ್ತಿಗೆ ಪಡೆದಿದ್ದರಿಂದ ಶಾಸಕ ಸ್ಥಾನದಿಂದ ಅನರ್ಹಗೊಂಡಿದ್ದಾರೆ ಎಂದು ಚುನಾವಣಾ ಆಯೋಜ ಅಭಿಪ್ರಾಯಪಟ್ಟಿದೆ ಎಂದು ಮೂಲಗಳು ತಿಳಿಸಿವೆ. ಅವರು ಗಣಿಗಾರಿಕೆ ಗುತ್ತಿಗೆಯನ್ನು ತನಗೇ ತಾನೆ ಪಡೆದುಕೊಂಡಿದ್ದಾರ ಎಂದು ಆರೋಪಿಸಿ ಅವರ ವಿರುದ್ಧ ದೂರು ದಾಖಲಿಸಲಾಗಿದೆ.

ರಾಜ್ಯಪಾಲ ರಮೇಶ್ ಬೈಸ್ ಅವರು ಹೇಮಂತ್‌ ಸೋರೆನ್ ಅವರ ಅನರ್ಹತೆಯ ಬಗ್ಗೆ ಚುನಾವಣಾ ಆಯೋಗದ ಅಭಿಪ್ರಾಯವನ್ನು ಪರಿಶೀಲಿಸುತ್ತಿದ್ದು, ಶೀಘ್ರದಲ್ಲೇ ಅದನ್ನು ತಿಳಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ ಮುಂದಕ್ಕೆ ಹೇಮಂತ್‌ ಸೊರೆನ್ ಅವರು ಚುನಾವಣೆಯಲ್ಲಿ ಸ್ಪರ್ಧಿಸದೆ ಇರಲು ನಿರ್ಬಂಧಿಸಲಾಗಿಲ್ಲ ಎಂದು ಮೂಲ ಹೇಳಿದೆ. ಈ ನಡುವೆ ಮುಖ್ಯಮಂತ್ರಿ ಸೋರೆನ್ ಅವರು ತಮ್ಮ ಮುಂದಿನ ಕ್ರಮದ ಬಗ್ಗೆ ಸಂವಿಧಾನಿಕ ತಜ್ಞರೊಂದಿಗೆ ಸಮಾಲೋಚನೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.

ರಾಜ್ಯಪಾಲರ ಆದೇಶದ ನಂತರ ಮುಖ್ಯಮಂತ್ರಿ ಸೊರೆನ್ ಅವರು ರಾಂಚಿಯ ತಮ್ಮ ನಿವಾಸದಲ್ಲಿ ಯುಪಿಎ ಸಭೆಯನ್ನು ಕರೆದಿದ್ದಾರೆ. “ಜಾರ್ಖಂಡ್‌ನಲ್ಲಿನ ಇತ್ತೀಚಿನ ರಾಜಕೀಯ ಬೆಳವಣಿಗೆಗಳು ಮತ್ತು ಊಹಾಪೋಹಗಳನ್ನು ಗಮನದಲ್ಲಿಟ್ಟುಕೊಂಡು ನಮಗೆ ಜಾರ್ಖಂಡ್ ಕಾಂಗ್ರೆಸ್ ಶಾಸಕರು ರಾಂಚಿಯಲ್ಲಿ ಲಭ್ಯವಾಗುವಂತೆ ಸೂಚನೆ ನೀಡಿದ್ದೇವೆ. ನಾಳೆ ಬೆಳಗ್ಗೆ 11 ಗಂಟೆಗೆ ಸಿಎಂ ನಿವಾಸದಲ್ಲಿ ಮತ್ತೊಂದು ಸಭೆಗೆ ನಮ್ಮನ್ನು (ಯುಪಿಎ ಶಾಸಕರು) ಕರೆಯಲಾಗಿದೆ” ಎಂದು ಜಾರ್ಖಂಡ್‌ನ ಕಾಂಗ್ರೆಸ್ ಶಾಸಕಿ ಪೂರ್ಣಿಮಾ ನೀರಜ್ ಸಿಂಗ್ ಅವರು ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಇದನ್ನೂ ಓದಿ: ದೆಹಲಿ ಮಾದರಿಯಲ್ಲಿ ಜಾರ್ಖಂಡ್‌ನಲ್ಲಿಯೂ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳ ಬಲವರ್ಧನೆ: ಕೇಜ್ರಿವಾಲ್‌ ಭೇಟಿ ಬಳಿಕ ಹೇಮಂತ್ ಸೊರೆನ್ ಘೋಷಣೆ 

ಯುಪಿಎ ಮೈತ್ರಿಕೂಟದ ಭಾಗವಾಗಿ ಆಡಳಿತಾರೂಢ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಪಕ್ಷದ ಹೇಮಂತ್‌ ಸೋರೆನ್ ಅವರು 2024 ರವರೆಗೆ ಮುಖ್ಯಮಂತ್ರಿಯಾಗಿ ಉಳಿಯುತ್ತಾರೆ ಪಕ್ಷವೂ ವಿಶ್ವಾಸ ವ್ಯಕ್ತಪಡಿಸಿದೆ.

82 ಸದಸ್ಯರಿರುವ ಜಾರ್ಖಂಡ್‌ ಅಸೆಂಬ್ಲಿಯಲ್ಲಿ JMM (30) ಮತ್ತು ಕಾಂಗ್ರೆಸ್ (17) ಸೇರಿ ಒಟ್ಟು 47 ಸದಸ್ಯರನ್ನು ಹೊಂದಿವೆ. ವಿಧಾನಸೌಧದ ವೆಬ್‌ಸೈಟ್‌ನ ಪ್ರಕಾರ 25 ಸದಸ್ಯರಿರುವ ಬಿಜೆಪಿ ರಾಜ್ಯದ ಪ್ರಮುಖ ಪ್ರತಿಪಕ್ಷವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...