Homeಮುಖಪುಟಜಾರ್ಖಂಡ್ | ಸಿಎಂ ಸೊರೇನ್ ವಿರುದ್ಧ ನಿಂದನೆ; ಬಿಜೆಪಿಯ ಶ್ಯಾಡೊ ಖಾತೆಗಳ ವಿರುದ್ಧ ಎಫ್‌ಐಆರ್

ಜಾರ್ಖಂಡ್ | ಸಿಎಂ ಸೊರೇನ್ ವಿರುದ್ಧ ನಿಂದನೆ; ಬಿಜೆಪಿಯ ಶ್ಯಾಡೊ ಖಾತೆಗಳ ವಿರುದ್ಧ ಎಫ್‌ಐಆರ್

- Advertisement -
- Advertisement -

ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಮತ್ತು ರಾಜ್ಯವನ್ನು ನಿಂದಿಸಿದ ಆರೋಪದ ಮೇಲೆ ಎರಡು ಸಾಮಾಜಿಕ ಮಾಧ್ಯಮ ಖಾತೆಗಳ ಅಪರಿಚಿತ ಆಪರೇಟರ್‌ಗಳ ವಿರುದ್ಧ ರಾಜ್ಯದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಮುಖ್ಯಮಂತ್ರಿಯ ಪ್ರತಿಷ್ಠೆಗೆ ಹಾನಿ ತರಲು ಬಿಜೆಪಿಯು ತನ್ನ ಬೆಂಬಲಿಗ “ಶ್ಯಾಡೋ ಖಾತೆಗಳನ್ನು” ನಡೆಸುತ್ತಿದೆ ಎಂದು ಆಡಳಿತಾರೂಢ ಜಾರ್ಖಂಡ್ ಮುಕ್ತಿ ಮೋರ್ಚಾ ಆರೋಪಿಸಿದ ನಂತರ ಕನಿಷ್ಠ ಎರಡು ಎಫ್‌ಐಆರ್‌ ದಾಖಲಾಗಿದೆ ಎಂದು ವರದಿಯಾಗಿದೆ. ಜಾರ್ಖಂಡ್

“ಸಿಎಂ ಮತ್ತು ರಾಜ್ಯದ ವಿರುದ್ಧ ಅಪ್ರಚಾರ ನಡೆಸಿದ್ದಕ್ಕಾಗಿ ಎರಡು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ಅಸೆಂಬ್ಲಿ ಚುನಾವಣೆಯ ಮೇಲೆ ಪ್ರಭಾವ ಬೀರಲು ಪ್ರಯತ್ನಿಸುತ್ತಿರುವ ಖಾತೆಗಳಿಂದ ಪೋಸ್ಟ್‌ಗಳನ್ನು ತೆಗೆದುಹಾಕಲು ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್‌ನ ಮೂಲ ಕಂಪನಿಯಾದ ಮೆಟಾವನ್ನು ಪೊಲೀಸರು ಕೇಳಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಈ ಖಾತೆಗಳನ್ನು ನಿರ್ವಹಿಸುವ ವ್ಯಕ್ತಿಗಳ ಬಗ್ಗೆಯೂ ಅವರು ಮಾಹಿತಿ ಕೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮೊದಲ ಎರಡು ಪ್ರಕರಣಗಳು ನವೆಂಬರ್ 8 ರಂದು ರಾಂಚಿಯ ಗೊಂಡಾ ಮತ್ತು ರಾತು ಪೊಲೀಸ್ ಠಾಣೆಗಳಲ್ಲಿ “ರಾಂಚಿ ಚೌಪಾಲ್” ಪುಟದ ವಿರುದ್ಧ ದಾಖಲಾಗಿದ್ದರೆ, ರಾಂಚಿಯ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ “ಜಾರ್ಖಂಡ್ ಚೌಪಾಲ್” ಪುಟದ ವಿರುದ್ಧ ಮೂರನೇ ಪ್ರಕರಣವನ್ನು ಬುಧವಾರ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಜಾರ್ಖಂಡ್

ಚುನಾವಣೆಗೆ ಸಂಬಂಧಿಸಿದ ಸುಳ್ಳು ಹೇಳಿಕೆಗಳು ಮತ್ತು ಫೋರ್ಜರಿಗೆ ಸಂಬಂಧಿಸಿದ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ. ಮಾಹಿತಿ ತಂತ್ರಜ್ಞಾನ ಕಾಯಿದೆಯ ನಿಬಂಧನೆಗಳು ಮತ್ತು ಜನತಾ ಪ್ರಾತಿನಿಧ್ಯ ಕಾಯ್ದೆಯ ನಿಬಂಧನೆಗಳನ್ನು ಸಹ ಈ ಪ್ರಕರಣಗಳಿಗೆ ಅನ್ವಯಿಸಿದ್ದಾರೆ ಎಂದು ವರದಿಯಾಗಿದೆ.

ಜಾರ್ಖಂಡ್ ವಿಧಾನಸಭಾ ಚುನಾವಣೆಯು ಎರಡು ಹಂತಗಳಲ್ಲಿ ನಡೆಯುತ್ತಿದ್ದು, ಮೊದಲನೆಯ ಮತದಾನ ನವೆಂಬರ್ 13 ನಡೆದಿದ್ದು, ಎರಡನೆಯ ಹಂತದ ಮತದಾನ ನವೆಂಬರ್ 20 ರಂದು ಮುಕ್ತಾಯಗೊಳ್ಳಲಿದೆ. ಮಹಾರಾಷ್ಟ್ರ ಚುನಾವಣೆಯ ಜೊತೆಗೆ ನವೆಂಬರ್ 23 ರಂದು ಮತ ಎಣಿಕೆ ನಡೆಯಲಿದೆ.

ಜಾರ್ಖಂಡ್ ಮುಕ್ತಿ ಮೋರ್ಚಾ ನೇತೃತ್ವದ ಒಕ್ಕೂಟವನ್ನು ಗುರಿಯಾಗಿಸಲು ಬಿಜೆಪಿಯು ಸಾಮಾಜಿಕ ಮಾಧ್ಯಮ ಪ್ರಚಾರಕ್ಕಾಗಿ ಕೋಟ್ಯಂತರ ರೂಪಾಯಿಗಳನ್ನು ಖರ್ಚು ಮಾಡಿದ್ದು, 95,000 ವಾಟ್ಸಾಪ್ ಗುಂಪುಗಳನ್ನು ರಚಿಸಿದೆ ಎಂದು ಸೋರೆನ್ ಆರೋಪಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

“ನಾವು ಶ್ಯಾಡೊ ಖಾತೆಗಳ ಮೂಲಕ ಪ್ರಚಾರ ಮಾಡುವ ಸಾಮಾಜಿಕ ಮಾಧ್ಯಮ ವೇದಿಕೆಗಳ ವಿರುದ್ಧ ರಾಂಚಿಯ ಗೊಂಡಾ ಮತ್ತು ರತು ಪೊಲೀಸ್ ಠಾಣೆಗಳಲ್ಲಿ ಎರಡು ದೂರುಗಳನ್ನು ದಾಖಲಿಸಿದ್ದೇವೆ” ಎಂದು ಜಾರ್ಖಂಡ್ ಮುಕ್ತಿ ಮೋರ್ಚಾ ವಕ್ತಾರ ವಿನೋದ್ ಪಾಂಡೆ ಪಿಟಿಐಗೆ ತಿಳಿಸಿದ್ದಾರೆ. ಜಾರ್ಖಂಡ್ ಮುಕ್ತಿ ಮೋರ್ಚಾ ಪಕ್ಷದಿಂದ ರಾಜ್ಯದ ಮುಖ್ಯ ಚುನಾವಣಾಧಿಕಾರಿ ಕೆ. ರವಿಕುಮಾರ್ ಅವರು ದೂರನ್ನು ಸ್ವೀಕರಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ಬಿಜೆಪಿಯನ್ನು ಟೀಕಿಸಿರುವ ಸಿಎಂ ಸೊರೆನ್, “ಸರ್ವಾಧಿಕಾರಿಗಳು ಶತಕೋಟಿ ರೂಪಾಯಿಗಳನ್ನು ಹೊಂದಿರಬಹುದು. ಆದರೆ, ಅನ್ಯಾಯ ವಿಧಾನಗಳ ಮೂಲಕ ಗೆಲ್ಲುವ ಬದಲು ಸಿದ್ದಾಂತಗಳಿಗೆ ಅಂಟಿಕೊಳ್ಳುವುದು ಉತ್ತಮ. ನಾನು ನಿಮಗೆ ಒಂದು ಪ್ರಮುಖ ವರದಿಯನ್ನು ಪ್ರಸ್ತುತಪಡಿಸಲು ಬಯಸುತ್ತೇನೆ. ಶ್ಯಾಡೊ ಖಾತೆಗಳ ಮೂಲಕ ಅಪ್ರಚಾರ ಮಾಡುವ ಮೂಲಕ ನನ್ನ ಮತ್ತು ರಾಜ್ಯದ ಇಮೇಜ್‌ಗೆ ಹಾನಿ ಮಾಡಲು ಬಿಜೆಪಿಯು ಫೇಸ್‌ಬುಕ್ ಜಾಹೀರಾತುಗಳಿಗೆ ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದೆ” ಎಂದು ಹೇಳಿದ್ದಾರೆ.

‘ಜಾರ್ಖಂಡ್ ಚೌಪಾಲ್’ ಮತ್ತು ‘ರಾಂಚಿ ಚೌಪಾಲ್’ ನಂತಹ ಸಾಮಾಜಿಕ ಮಾಧ್ಯಮ ಪುಟಗಳಲ್ಲಿ ಅಪಪ್ರಚಾರ ಮಾಡಲು ಕಳೆದ 30 ದಿನಗಳಲ್ಲಿ 72 ಲಕ್ಷ ರೂಪಾಯಿಗಳನ್ನು ಜಾಹೀರಾತುಗಳಿಗಾಗಿ ಖರ್ಚು ಮಾಡಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

“ಈ ಪುಟಗಳ ವಿಷಯವನ್ನು ನೀವು ನೋಡಿದರೆ, ಅವರ ಏಕೈಕ ಉದ್ದೇಶ ನನ್ನ ಮತ್ತು ರಾಜ್ಯದ ಪ್ರತಿಷ್ಠೆಯನ್ನು ಹಾಳುಮಾಡುವುದು. ಧಾರ್ಮಿಕ ದ್ವೇಷವನ್ನು ಹರಡುವುದು ಮತ್ತು ಜನರು ತಮ್ಮೊಳಗೆ ಜಗಳವಾಡುವಂತೆ ಮಾಡುವುದು” ಎಂದು ಅವರು ಹೇಳಿದ್ದಾರೆ.

“ಬಿಜೆಪಿ ನನ್ನ ಪ್ರತಿಷ್ಠೆಯನ್ನು ಹಾಳುಮಾಡಲು ಕೋಟಿಗಟ್ಟಲೆ ಖರ್ಚು ಮಾಡಿದ್ದರೂ, ನಾನು ಯಾವುದೇ ಪ್ರಚಾರಕ್ಕಾಗಿ ಒಂದು ರೂಪಾಯಿಯನ್ನು ಖರ್ಚು ಮಾಡಿಲ್ಲ. ನೀವು ಯಾವುದೇ ಸಾಮಾಜಿಕ ಮಾಧ್ಯಮದ ಜಾಹೀರಾತು ಲೈಬ್ರರಿಗೆ ಭೇಟಿ ನೀಡುವ ಮೂಲಕ ಪರಿಶೀಲಿಸಬಹುದು” ಎಂದು ಸೋರೆನ್ ಹೇಳಿದ್ದಾರೆ. ಅದಾಗ್ಯೂ, ಸೋರೆನ್ ಆರೋಪವನ್ನು ಬಿಜೆಪಿ ತಳ್ಳಿ ಹಾಕಿದೆ.

ಇದನ್ನೂ ಓದಿ: ಚುನಾವಣೆ ಹೊತ್ತಿನಲ್ಲಿ ‘ಎಎಪಿ’ಗೆ ಭಾರೀ ಹಿನ್ನಡೆ; ಪಕ್ಷ ತೊರೆದ ದೆಹಲಿ ಸಚಿವ ಕೈಲಾಶ್ ಗಹ್ಲೋಟ್

ಚುನಾವಣೆ ಹೊತ್ತಿನಲ್ಲಿ ‘ಎಎಪಿ’ಗೆ ಭಾರೀ ಹಿನ್ನಡೆ; ಪಕ್ಷ ತೊರೆದ ದೆಹಲಿ ಸಚಿವ ಕೈಲಾಶ್ ಗಹ್ಲೋಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಲ್ವರು ಬಾಲಕರಿಂದ ಬಾಲಕಿಗೆ ಕಿರುಕುಳ ಆರೋಪ : ‘ಉತ್ತಮ ಸಂಸ್ಕಾರ ಕಲಿಸಿಲ್ಲ’ ಎಂದು ತಾಯಂದಿರನ್ನು ಬಂಧಿಸಿದ ಪೊಲೀಸರು!

ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಾಲ್ವರು ಬಾಲಕರ ವಿರುದ್ಧ ಬಾಲಕಿಗೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದ್ದು, ಪೊಲೀಸರು ಬಾಲಕರ ತಾಯಂದಿರನ್ನು 'ಪ್ರಿವೆಂಟಿವ್ ಅರೆಸ್ಟ್' ಮಾಡಿದ್ದಾರೆ ಎಂದು indianexpress.com ಶನಿವಾರ (ಡಿ.20) ವರದಿ...

ಎಸ್‌ಐಆರ್‌: ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರದಲ್ಲಿ 1 ಲಕ್ಷ ಮತದಾರ ಹೆಸರು ಕರಡು ಮತದಾರರ ಪಟ್ಟಿಯಲ್ಲಿ ಡಿಲೀಟ್

ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರದಿಂದ 1,03,812 ಕ್ಕೂ ಹೆಚ್ಚು ಮತದಾರರ ಹೆಸರು ತೆಗೆದುಹಾಕಲಾಗಿದೆ. ಇದು ತಮಿಳುನಾಡಿನಲ್ಲಿ ರಾಜ್ಯಾದ್ಯಂತ ನಡೆದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಮತದಾರರ ಪಟ್ಟಿಯಲ್ಲಿನ ಅತಿದೊಡ್ಡ ಮತದಾರರ...

ಅಸ್ಸಾಂ : 15 ಮಂದಿಗೆ 24 ಗಂಟೆಯೊಳಗೆ ದೇಶ ತೊರೆಯಲು ಆದೇಶ : ಮಾಧ್ಯಮಗಳ ಮೂಲಕ ವಿಷಯ ತಿಳಿದುಕೊಂಡ ಕುಟುಂಬಸ್ಥರು

ಅಸ್ಸಾಂನ ನಾಗಾಂವ್ ಜಿಲ್ಲಾಡಳಿತವು 15 ಘೋಷಿತ ವಿದೇಶಿಯರಿಗೆ 24 ಗಂಟೆಗಳ ಒಳಗೆ ರಾಜ್ಯ ತೊರೆಯುವಂತೆ ಆದೇಶಿಸಿದ ಬಗ್ಗೆ ವರದಿಯಾಗಿದೆ. ಬುಧವಾರ (ಡಿ.17) ಜಿಲ್ಲಾಡಳಿತ ಈ ಆದೇಶ ನೀಡಿತ್ತು. ಆದರೆ, ಇದುವರೆಗೆ (ಡಿ.20) ಈ 15...

ಸಿರಿಯಾದ ಐಸಿಸ್ ಅಡಗುತಾಣಗಳ ಮೇಲೆ ಅಮೆರಿಕ ವಾಯುದಾಳಿ

ಕಳೆದ ವಾರ ಅಮೆರಿಕದ ಸಿಬ್ಬಂದಿ ಮೇಲೆ ನಡೆದ ಮಾರಕ ದಾಳಿಗೆ ಪ್ರತೀಕಾರವಾಗಿ ಅಮೆರಿಕವು ಮಧ್ಯ ಸಿರಿಯಾದಾದ್ಯಂತ ಡಜನ್‌ಗಟ್ಟಲೆ ಇಸ್ಲಾಮಿಕ್ ಸ್ಟೇಟ್ (ಐಎಸ್) ನೆಲೆಗಳ ಮೇಲೆ ವಾಯುದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 'ಆಪರೇಷನ್ ಹಾಕೈ...

16 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ‘ಮನರೇಗಾ’ ಪಟ್ಟಿಯಿಂದ ಕೈಬಿಟ್ಟ ಕೇಂದ್ರ ಸರ್ಕಾರ: ವರದಿ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರನ್ನು ಬದಲಿಸಲು ಪ್ರಯತ್ನಿಸುವ 'ವಿಕ್ಷಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ–ಜಿ...

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...