Homeಮುಖಪುಟಜಾರ್ಖಂಡ್ | ಸಿಎಂ ಸೊರೇನ್ ವಿರುದ್ಧ ನಿಂದನೆ; ಬಿಜೆಪಿಯ ಶ್ಯಾಡೊ ಖಾತೆಗಳ ವಿರುದ್ಧ ಎಫ್‌ಐಆರ್

ಜಾರ್ಖಂಡ್ | ಸಿಎಂ ಸೊರೇನ್ ವಿರುದ್ಧ ನಿಂದನೆ; ಬಿಜೆಪಿಯ ಶ್ಯಾಡೊ ಖಾತೆಗಳ ವಿರುದ್ಧ ಎಫ್‌ಐಆರ್

- Advertisement -
- Advertisement -

ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಮತ್ತು ರಾಜ್ಯವನ್ನು ನಿಂದಿಸಿದ ಆರೋಪದ ಮೇಲೆ ಎರಡು ಸಾಮಾಜಿಕ ಮಾಧ್ಯಮ ಖಾತೆಗಳ ಅಪರಿಚಿತ ಆಪರೇಟರ್‌ಗಳ ವಿರುದ್ಧ ರಾಜ್ಯದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಮುಖ್ಯಮಂತ್ರಿಯ ಪ್ರತಿಷ್ಠೆಗೆ ಹಾನಿ ತರಲು ಬಿಜೆಪಿಯು ತನ್ನ ಬೆಂಬಲಿಗ “ಶ್ಯಾಡೋ ಖಾತೆಗಳನ್ನು” ನಡೆಸುತ್ತಿದೆ ಎಂದು ಆಡಳಿತಾರೂಢ ಜಾರ್ಖಂಡ್ ಮುಕ್ತಿ ಮೋರ್ಚಾ ಆರೋಪಿಸಿದ ನಂತರ ಕನಿಷ್ಠ ಎರಡು ಎಫ್‌ಐಆರ್‌ ದಾಖಲಾಗಿದೆ ಎಂದು ವರದಿಯಾಗಿದೆ. ಜಾರ್ಖಂಡ್

“ಸಿಎಂ ಮತ್ತು ರಾಜ್ಯದ ವಿರುದ್ಧ ಅಪ್ರಚಾರ ನಡೆಸಿದ್ದಕ್ಕಾಗಿ ಎರಡು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ಅಸೆಂಬ್ಲಿ ಚುನಾವಣೆಯ ಮೇಲೆ ಪ್ರಭಾವ ಬೀರಲು ಪ್ರಯತ್ನಿಸುತ್ತಿರುವ ಖಾತೆಗಳಿಂದ ಪೋಸ್ಟ್‌ಗಳನ್ನು ತೆಗೆದುಹಾಕಲು ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್‌ನ ಮೂಲ ಕಂಪನಿಯಾದ ಮೆಟಾವನ್ನು ಪೊಲೀಸರು ಕೇಳಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಈ ಖಾತೆಗಳನ್ನು ನಿರ್ವಹಿಸುವ ವ್ಯಕ್ತಿಗಳ ಬಗ್ಗೆಯೂ ಅವರು ಮಾಹಿತಿ ಕೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮೊದಲ ಎರಡು ಪ್ರಕರಣಗಳು ನವೆಂಬರ್ 8 ರಂದು ರಾಂಚಿಯ ಗೊಂಡಾ ಮತ್ತು ರಾತು ಪೊಲೀಸ್ ಠಾಣೆಗಳಲ್ಲಿ “ರಾಂಚಿ ಚೌಪಾಲ್” ಪುಟದ ವಿರುದ್ಧ ದಾಖಲಾಗಿದ್ದರೆ, ರಾಂಚಿಯ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ “ಜಾರ್ಖಂಡ್ ಚೌಪಾಲ್” ಪುಟದ ವಿರುದ್ಧ ಮೂರನೇ ಪ್ರಕರಣವನ್ನು ಬುಧವಾರ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಜಾರ್ಖಂಡ್

ಚುನಾವಣೆಗೆ ಸಂಬಂಧಿಸಿದ ಸುಳ್ಳು ಹೇಳಿಕೆಗಳು ಮತ್ತು ಫೋರ್ಜರಿಗೆ ಸಂಬಂಧಿಸಿದ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ. ಮಾಹಿತಿ ತಂತ್ರಜ್ಞಾನ ಕಾಯಿದೆಯ ನಿಬಂಧನೆಗಳು ಮತ್ತು ಜನತಾ ಪ್ರಾತಿನಿಧ್ಯ ಕಾಯ್ದೆಯ ನಿಬಂಧನೆಗಳನ್ನು ಸಹ ಈ ಪ್ರಕರಣಗಳಿಗೆ ಅನ್ವಯಿಸಿದ್ದಾರೆ ಎಂದು ವರದಿಯಾಗಿದೆ.

ಜಾರ್ಖಂಡ್ ವಿಧಾನಸಭಾ ಚುನಾವಣೆಯು ಎರಡು ಹಂತಗಳಲ್ಲಿ ನಡೆಯುತ್ತಿದ್ದು, ಮೊದಲನೆಯ ಮತದಾನ ನವೆಂಬರ್ 13 ನಡೆದಿದ್ದು, ಎರಡನೆಯ ಹಂತದ ಮತದಾನ ನವೆಂಬರ್ 20 ರಂದು ಮುಕ್ತಾಯಗೊಳ್ಳಲಿದೆ. ಮಹಾರಾಷ್ಟ್ರ ಚುನಾವಣೆಯ ಜೊತೆಗೆ ನವೆಂಬರ್ 23 ರಂದು ಮತ ಎಣಿಕೆ ನಡೆಯಲಿದೆ.

ಜಾರ್ಖಂಡ್ ಮುಕ್ತಿ ಮೋರ್ಚಾ ನೇತೃತ್ವದ ಒಕ್ಕೂಟವನ್ನು ಗುರಿಯಾಗಿಸಲು ಬಿಜೆಪಿಯು ಸಾಮಾಜಿಕ ಮಾಧ್ಯಮ ಪ್ರಚಾರಕ್ಕಾಗಿ ಕೋಟ್ಯಂತರ ರೂಪಾಯಿಗಳನ್ನು ಖರ್ಚು ಮಾಡಿದ್ದು, 95,000 ವಾಟ್ಸಾಪ್ ಗುಂಪುಗಳನ್ನು ರಚಿಸಿದೆ ಎಂದು ಸೋರೆನ್ ಆರೋಪಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

“ನಾವು ಶ್ಯಾಡೊ ಖಾತೆಗಳ ಮೂಲಕ ಪ್ರಚಾರ ಮಾಡುವ ಸಾಮಾಜಿಕ ಮಾಧ್ಯಮ ವೇದಿಕೆಗಳ ವಿರುದ್ಧ ರಾಂಚಿಯ ಗೊಂಡಾ ಮತ್ತು ರತು ಪೊಲೀಸ್ ಠಾಣೆಗಳಲ್ಲಿ ಎರಡು ದೂರುಗಳನ್ನು ದಾಖಲಿಸಿದ್ದೇವೆ” ಎಂದು ಜಾರ್ಖಂಡ್ ಮುಕ್ತಿ ಮೋರ್ಚಾ ವಕ್ತಾರ ವಿನೋದ್ ಪಾಂಡೆ ಪಿಟಿಐಗೆ ತಿಳಿಸಿದ್ದಾರೆ. ಜಾರ್ಖಂಡ್ ಮುಕ್ತಿ ಮೋರ್ಚಾ ಪಕ್ಷದಿಂದ ರಾಜ್ಯದ ಮುಖ್ಯ ಚುನಾವಣಾಧಿಕಾರಿ ಕೆ. ರವಿಕುಮಾರ್ ಅವರು ದೂರನ್ನು ಸ್ವೀಕರಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ಬಿಜೆಪಿಯನ್ನು ಟೀಕಿಸಿರುವ ಸಿಎಂ ಸೊರೆನ್, “ಸರ್ವಾಧಿಕಾರಿಗಳು ಶತಕೋಟಿ ರೂಪಾಯಿಗಳನ್ನು ಹೊಂದಿರಬಹುದು. ಆದರೆ, ಅನ್ಯಾಯ ವಿಧಾನಗಳ ಮೂಲಕ ಗೆಲ್ಲುವ ಬದಲು ಸಿದ್ದಾಂತಗಳಿಗೆ ಅಂಟಿಕೊಳ್ಳುವುದು ಉತ್ತಮ. ನಾನು ನಿಮಗೆ ಒಂದು ಪ್ರಮುಖ ವರದಿಯನ್ನು ಪ್ರಸ್ತುತಪಡಿಸಲು ಬಯಸುತ್ತೇನೆ. ಶ್ಯಾಡೊ ಖಾತೆಗಳ ಮೂಲಕ ಅಪ್ರಚಾರ ಮಾಡುವ ಮೂಲಕ ನನ್ನ ಮತ್ತು ರಾಜ್ಯದ ಇಮೇಜ್‌ಗೆ ಹಾನಿ ಮಾಡಲು ಬಿಜೆಪಿಯು ಫೇಸ್‌ಬುಕ್ ಜಾಹೀರಾತುಗಳಿಗೆ ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದೆ” ಎಂದು ಹೇಳಿದ್ದಾರೆ.

‘ಜಾರ್ಖಂಡ್ ಚೌಪಾಲ್’ ಮತ್ತು ‘ರಾಂಚಿ ಚೌಪಾಲ್’ ನಂತಹ ಸಾಮಾಜಿಕ ಮಾಧ್ಯಮ ಪುಟಗಳಲ್ಲಿ ಅಪಪ್ರಚಾರ ಮಾಡಲು ಕಳೆದ 30 ದಿನಗಳಲ್ಲಿ 72 ಲಕ್ಷ ರೂಪಾಯಿಗಳನ್ನು ಜಾಹೀರಾತುಗಳಿಗಾಗಿ ಖರ್ಚು ಮಾಡಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

“ಈ ಪುಟಗಳ ವಿಷಯವನ್ನು ನೀವು ನೋಡಿದರೆ, ಅವರ ಏಕೈಕ ಉದ್ದೇಶ ನನ್ನ ಮತ್ತು ರಾಜ್ಯದ ಪ್ರತಿಷ್ಠೆಯನ್ನು ಹಾಳುಮಾಡುವುದು. ಧಾರ್ಮಿಕ ದ್ವೇಷವನ್ನು ಹರಡುವುದು ಮತ್ತು ಜನರು ತಮ್ಮೊಳಗೆ ಜಗಳವಾಡುವಂತೆ ಮಾಡುವುದು” ಎಂದು ಅವರು ಹೇಳಿದ್ದಾರೆ.

“ಬಿಜೆಪಿ ನನ್ನ ಪ್ರತಿಷ್ಠೆಯನ್ನು ಹಾಳುಮಾಡಲು ಕೋಟಿಗಟ್ಟಲೆ ಖರ್ಚು ಮಾಡಿದ್ದರೂ, ನಾನು ಯಾವುದೇ ಪ್ರಚಾರಕ್ಕಾಗಿ ಒಂದು ರೂಪಾಯಿಯನ್ನು ಖರ್ಚು ಮಾಡಿಲ್ಲ. ನೀವು ಯಾವುದೇ ಸಾಮಾಜಿಕ ಮಾಧ್ಯಮದ ಜಾಹೀರಾತು ಲೈಬ್ರರಿಗೆ ಭೇಟಿ ನೀಡುವ ಮೂಲಕ ಪರಿಶೀಲಿಸಬಹುದು” ಎಂದು ಸೋರೆನ್ ಹೇಳಿದ್ದಾರೆ. ಅದಾಗ್ಯೂ, ಸೋರೆನ್ ಆರೋಪವನ್ನು ಬಿಜೆಪಿ ತಳ್ಳಿ ಹಾಕಿದೆ.

ಇದನ್ನೂ ಓದಿ: ಚುನಾವಣೆ ಹೊತ್ತಿನಲ್ಲಿ ‘ಎಎಪಿ’ಗೆ ಭಾರೀ ಹಿನ್ನಡೆ; ಪಕ್ಷ ತೊರೆದ ದೆಹಲಿ ಸಚಿವ ಕೈಲಾಶ್ ಗಹ್ಲೋಟ್

ಚುನಾವಣೆ ಹೊತ್ತಿನಲ್ಲಿ ‘ಎಎಪಿ’ಗೆ ಭಾರೀ ಹಿನ್ನಡೆ; ಪಕ್ಷ ತೊರೆದ ದೆಹಲಿ ಸಚಿವ ಕೈಲಾಶ್ ಗಹ್ಲೋಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....