Homeಮುಖಪುಟಜಾರ್ಖಂಡ್‌: ಬಹುಮತ ಸಾಬೀತುಪಡಿಸಿದ ಸಿಎಂ ಸೊರೆನ್; ಸದನದಿಂದ ಹೊರ ನಡೆದ ಬಿಜೆಪಿ

ಜಾರ್ಖಂಡ್‌: ಬಹುಮತ ಸಾಬೀತುಪಡಿಸಿದ ಸಿಎಂ ಸೊರೆನ್; ಸದನದಿಂದ ಹೊರ ನಡೆದ ಬಿಜೆಪಿ

- Advertisement -
- Advertisement -

ಆಡಳಿತಾರೂಢ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನೇತೃತ್ವದ ಸರ್ಕಾರವನ್ನು ಬಿಜೆಪಿ ಉರುಳಿಸಲು ಪ್ರಯತ್ನಿಸುತ್ತಿದೆ ಎಂಬ ಆರೋಪದ ನಡುವೆ, ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರು ಸೋಮವಾರ ತಮ್ಮ ಪರವಾಗಿ ಬಹುಮತವನ್ನು ಸಾಬೀತು ಮಾಡಿದ್ದಾರೆ. ಮುಖ್ಯಮಂತ್ರಿ ವಿರುದ್ಧ ಚುನಾವಣಾ ಆಯೋಗವು ಭ್ರಷ್ಟಾಚಾರದ ಆರೋಪ ಮಾಡಿದೆ.

ಒಂದು ದಿನದ ವಿಶೇಷ ಅಧಿವೇಶನದ ಕಲಾಪಗಳ ಉದ್ದಕ್ಕೂ ಪ್ರತಿಭಟಿಸಿದ ಪ್ರತಿಪಕ್ಷ ಬಿಜೆಪಿ ವಿಶ್ವಾಸ ಮತಯಾಚೆನೆಗೂ ಮುನ್ನ ಸದನದಿಂದ ಹೊರನಡೆದಿದೆ.

ವಿಶ್ವಾಸ ಮತ ಯಾಚೆನೆಯ ನಂತರ ಮಾತನಾಡಿದ ಸಿಎಂ ಹೇಮಂತ್ ಸೊರೆನ್, “ಚುನಾವಣೆಯಲ್ಲಿ ಗೆಲ್ಲಲು ಗಲಭೆಗಳನ್ನು ಉತ್ತೇಜಿಸುವ ಮೂಲಕ ಬಿಜೆಪಿಯು ದೇಶದಲ್ಲಿ ಅಂತರ್ಯುದ್ಧದಂತಹ ಪರಿಸ್ಥಿತಿ ಉಂಟು ಮಾಡಲು  ಪ್ರಯತ್ನಿಸುತ್ತಿದೆ” ಎಂದು ಆರೋಪಿಸಿದ್ದಾರೆ.

“ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಜಾರ್ಖಂಡ್‌‌ ಸರ್ಕಾರವನ್ನು ಉರುಳಿಸುವ ಸಲುವಾಗಿ ಪಕ್ಷದ ಶಾಸಕರನ್ನು ಖರೀದಿಸುವಲ್ಲಿ ತೊಡಗಿಸಿಕೊಂಡಿದ್ದಾರೆ” ಎಂದು ಅವರು ಹೇಳಿದ್ದಾರೆ.

“ಪ್ರತಿಪಕ್ಷ ಬಿಜೆಪಿ ಪ್ರಜಾಪ್ರಭುತ್ವವನ್ನು ನಾಶಪಡಿಸಿದ್ದು, ಶಾಸಕರ ಕುದುರೆ ವ್ಯಾಪಾರದಲ್ಲಿ ತೊಡಗಿದೆ…ಸದನದಲ್ಲಿ ನಮ್ಮ ಶಕ್ತಿ ತೋರಿಸುತ್ತೇವೆ” ಎಂದು ಬಿಜೆಪಿ ಶಾಸಕರು ಘೋಷಣೆ ಕೂಗಿದ ಹಿನ್ನೆಲೆ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಹೇಳಿದ್ದಾರೆ.

“ಬಟ್ಟೆ, ಪಡಿತರ, ದಿನಸಿ ಖರೀದಿಸುವವರ ಬಗ್ಗೆ ಕೇಳಿದ್ದೇವೆ. ಆದರೆ ಬಿಜೆಪಿ ಶಾಸಕರನ್ನು ಖರೀದಿಸುತ್ತಿದೆ…ದೇಶದ ಮೊದಲ ಬುಡಕಟ್ಟು ಜನಾಂಗದ ರಾಷ್ಟ್ರಪತಿಯನ್ನು ಪ್ರತಿಷ್ಠಾಪಿಸಿ, ನಂತರ ಅವರು ಬುಡಕಟ್ಟು ಮುಖ್ಯಮಂತ್ರಿಯನ್ನು ಪದಚ್ಯುತಗೊಳಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ.

ಕಾಂಗ್ರೆಸ್ ಆಡಳಿತವಿರುವ ಛತ್ತೀಸ್‌ಗಢದಿಂದ ವಿಶೇಷ ವಿಮಾನದಲ್ಲಿ ಆಡಳಿತಾರೂಢ ಒಕ್ಕೂಟದ ಶಾಸಕರು ಭಾನುವಾರದಂದು ರಾಜ್ಯ ರಾಜಧಾನಿ ರಾಂಚಿಗೆ ಹಿಂತಿರುಗಿದರು. ಶಾಸಕರನ್ನು ಆಪರೇಷನ್‌ ಕಮಲ ನಡೆಸದೆ ಇರಲು ಅವರನ್ನು ಐಷಾರಾಮಿ ರೆಸಾರ್ಟ್‌ನಲ್ಲಿ ಅವರನ್ನು ಇಡಲಾಗಿತ್ತು. ಅತಿಥಿ ಗೃಹದಲ್ಲಿ ಇದ್ದ ಶಾಸಕರನ್ನು ನೇರವಾಗಿ ವಿಧಾನಸಭೆಗೆ ಕರೆದೊಯ್ಯಲಾಯಿತು.

ಗಣಿ ಗುತ್ತಿಗೆ ನೀಡುವ ಮೂಲಕ ಚುನಾವಣಾ ನಿಯಮಾವಳಿಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಹೇಮಂತ್ ಸೋರೆನ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಬಿಜೆಪಿ ಹೇಳಿದೆ. ಹೊಸದಾಗಿ ಚುನಾವಣೆ ನಡೆಸುವಂತೆ ಅದು ಕರೆ ನೀಡಿದ್ದು, ಮುಖ್ಯಮಂತ್ರಿ ನೈತಿಕ ಆಧಾರದ ಮೇಲೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದೆ.

ಜಾರ್ಖಂಡ್ ರಾಜ್ಯಪಾಲ ಮುಖ್ಯಮಂತ್ರಿ ಸೋರೆನ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿದರೆ, ಅವರು ಮುಖ್ಯಮಂತ್ರಿಯಾಗಿ ಮುಂದುವರಿಯಲು ಸಾಧ್ಯವಿಲ್ಲ. ಚುನಾವಣಾ ಆಯೋಗವು ರಾಜ್ಯಪಾಲರಿಗೆ ತನ್ನ ಅಭಿಪ್ರಾಯವನ್ನು ಸಲ್ಲಿಸಿದ್ದು, ಅವರು ಯಾವುದೇ ಸಮಯದಲ್ಲಿ ಸೊರೆನ್ ಅವರ ನಿರ್ಧಾರವನ್ನು ಪ್ರಕಟಿಸುವ ನಿರೀಕ್ಷೆಯಿದೆ.

81 ಸದಸ್ಯರ ವಿಧಾನಸಭೆಯಲ್ಲಿ ಆಡಳಿತಾರೂಢ ಸಮ್ಮಿಶ್ರ 49 ಶಾಸಕರನ್ನು ಹೊಂದಿದ್ದು, ಇದರಲ್ಲಿ ಬಹುಮತಕ್ಕೆ 41 ಸ್ಥಾನಗಳ ಅಗತ್ಯವಿದೆ. ಅತಿ ದೊಡ್ಡ ಪಕ್ಷವಾದ ಜೆಎಂಎಂ 30 ಶಾಸಕರನ್ನು ಹೊಂದಿದ್ದು, ಕಾಂಗ್ರೆಸ್ 18 ಮತ್ತು ತೇಜಸ್ವಿ ಯಾದವ್ ಅವರ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಒಬ್ಬ ಸದಸ್ಯರನ್ನು ಹೊಂದಿದೆ. ಪ್ರಮುಖ ಪ್ರತಿಪಕ್ಷವಾಗಿರುವ ಬಿಜೆಪಿ 26 ಶಾಸಕರನ್ನು ಹೊಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...