Homeಮುಖಪುಟಜಾರ್ಖಂಡ್‌: ಬಹುಮತ ಸಾಬೀತುಪಡಿಸಿದ ಸಿಎಂ ಸೊರೆನ್; ಸದನದಿಂದ ಹೊರ ನಡೆದ ಬಿಜೆಪಿ

ಜಾರ್ಖಂಡ್‌: ಬಹುಮತ ಸಾಬೀತುಪಡಿಸಿದ ಸಿಎಂ ಸೊರೆನ್; ಸದನದಿಂದ ಹೊರ ನಡೆದ ಬಿಜೆಪಿ

- Advertisement -
- Advertisement -

ಆಡಳಿತಾರೂಢ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನೇತೃತ್ವದ ಸರ್ಕಾರವನ್ನು ಬಿಜೆಪಿ ಉರುಳಿಸಲು ಪ್ರಯತ್ನಿಸುತ್ತಿದೆ ಎಂಬ ಆರೋಪದ ನಡುವೆ, ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರು ಸೋಮವಾರ ತಮ್ಮ ಪರವಾಗಿ ಬಹುಮತವನ್ನು ಸಾಬೀತು ಮಾಡಿದ್ದಾರೆ. ಮುಖ್ಯಮಂತ್ರಿ ವಿರುದ್ಧ ಚುನಾವಣಾ ಆಯೋಗವು ಭ್ರಷ್ಟಾಚಾರದ ಆರೋಪ ಮಾಡಿದೆ.

ಒಂದು ದಿನದ ವಿಶೇಷ ಅಧಿವೇಶನದ ಕಲಾಪಗಳ ಉದ್ದಕ್ಕೂ ಪ್ರತಿಭಟಿಸಿದ ಪ್ರತಿಪಕ್ಷ ಬಿಜೆಪಿ ವಿಶ್ವಾಸ ಮತಯಾಚೆನೆಗೂ ಮುನ್ನ ಸದನದಿಂದ ಹೊರನಡೆದಿದೆ.

ವಿಶ್ವಾಸ ಮತ ಯಾಚೆನೆಯ ನಂತರ ಮಾತನಾಡಿದ ಸಿಎಂ ಹೇಮಂತ್ ಸೊರೆನ್, “ಚುನಾವಣೆಯಲ್ಲಿ ಗೆಲ್ಲಲು ಗಲಭೆಗಳನ್ನು ಉತ್ತೇಜಿಸುವ ಮೂಲಕ ಬಿಜೆಪಿಯು ದೇಶದಲ್ಲಿ ಅಂತರ್ಯುದ್ಧದಂತಹ ಪರಿಸ್ಥಿತಿ ಉಂಟು ಮಾಡಲು  ಪ್ರಯತ್ನಿಸುತ್ತಿದೆ” ಎಂದು ಆರೋಪಿಸಿದ್ದಾರೆ.

“ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಜಾರ್ಖಂಡ್‌‌ ಸರ್ಕಾರವನ್ನು ಉರುಳಿಸುವ ಸಲುವಾಗಿ ಪಕ್ಷದ ಶಾಸಕರನ್ನು ಖರೀದಿಸುವಲ್ಲಿ ತೊಡಗಿಸಿಕೊಂಡಿದ್ದಾರೆ” ಎಂದು ಅವರು ಹೇಳಿದ್ದಾರೆ.

“ಪ್ರತಿಪಕ್ಷ ಬಿಜೆಪಿ ಪ್ರಜಾಪ್ರಭುತ್ವವನ್ನು ನಾಶಪಡಿಸಿದ್ದು, ಶಾಸಕರ ಕುದುರೆ ವ್ಯಾಪಾರದಲ್ಲಿ ತೊಡಗಿದೆ…ಸದನದಲ್ಲಿ ನಮ್ಮ ಶಕ್ತಿ ತೋರಿಸುತ್ತೇವೆ” ಎಂದು ಬಿಜೆಪಿ ಶಾಸಕರು ಘೋಷಣೆ ಕೂಗಿದ ಹಿನ್ನೆಲೆ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಹೇಳಿದ್ದಾರೆ.

“ಬಟ್ಟೆ, ಪಡಿತರ, ದಿನಸಿ ಖರೀದಿಸುವವರ ಬಗ್ಗೆ ಕೇಳಿದ್ದೇವೆ. ಆದರೆ ಬಿಜೆಪಿ ಶಾಸಕರನ್ನು ಖರೀದಿಸುತ್ತಿದೆ…ದೇಶದ ಮೊದಲ ಬುಡಕಟ್ಟು ಜನಾಂಗದ ರಾಷ್ಟ್ರಪತಿಯನ್ನು ಪ್ರತಿಷ್ಠಾಪಿಸಿ, ನಂತರ ಅವರು ಬುಡಕಟ್ಟು ಮುಖ್ಯಮಂತ್ರಿಯನ್ನು ಪದಚ್ಯುತಗೊಳಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ.

ಕಾಂಗ್ರೆಸ್ ಆಡಳಿತವಿರುವ ಛತ್ತೀಸ್‌ಗಢದಿಂದ ವಿಶೇಷ ವಿಮಾನದಲ್ಲಿ ಆಡಳಿತಾರೂಢ ಒಕ್ಕೂಟದ ಶಾಸಕರು ಭಾನುವಾರದಂದು ರಾಜ್ಯ ರಾಜಧಾನಿ ರಾಂಚಿಗೆ ಹಿಂತಿರುಗಿದರು. ಶಾಸಕರನ್ನು ಆಪರೇಷನ್‌ ಕಮಲ ನಡೆಸದೆ ಇರಲು ಅವರನ್ನು ಐಷಾರಾಮಿ ರೆಸಾರ್ಟ್‌ನಲ್ಲಿ ಅವರನ್ನು ಇಡಲಾಗಿತ್ತು. ಅತಿಥಿ ಗೃಹದಲ್ಲಿ ಇದ್ದ ಶಾಸಕರನ್ನು ನೇರವಾಗಿ ವಿಧಾನಸಭೆಗೆ ಕರೆದೊಯ್ಯಲಾಯಿತು.

ಗಣಿ ಗುತ್ತಿಗೆ ನೀಡುವ ಮೂಲಕ ಚುನಾವಣಾ ನಿಯಮಾವಳಿಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಹೇಮಂತ್ ಸೋರೆನ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಬಿಜೆಪಿ ಹೇಳಿದೆ. ಹೊಸದಾಗಿ ಚುನಾವಣೆ ನಡೆಸುವಂತೆ ಅದು ಕರೆ ನೀಡಿದ್ದು, ಮುಖ್ಯಮಂತ್ರಿ ನೈತಿಕ ಆಧಾರದ ಮೇಲೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದೆ.

ಜಾರ್ಖಂಡ್ ರಾಜ್ಯಪಾಲ ಮುಖ್ಯಮಂತ್ರಿ ಸೋರೆನ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿದರೆ, ಅವರು ಮುಖ್ಯಮಂತ್ರಿಯಾಗಿ ಮುಂದುವರಿಯಲು ಸಾಧ್ಯವಿಲ್ಲ. ಚುನಾವಣಾ ಆಯೋಗವು ರಾಜ್ಯಪಾಲರಿಗೆ ತನ್ನ ಅಭಿಪ್ರಾಯವನ್ನು ಸಲ್ಲಿಸಿದ್ದು, ಅವರು ಯಾವುದೇ ಸಮಯದಲ್ಲಿ ಸೊರೆನ್ ಅವರ ನಿರ್ಧಾರವನ್ನು ಪ್ರಕಟಿಸುವ ನಿರೀಕ್ಷೆಯಿದೆ.

81 ಸದಸ್ಯರ ವಿಧಾನಸಭೆಯಲ್ಲಿ ಆಡಳಿತಾರೂಢ ಸಮ್ಮಿಶ್ರ 49 ಶಾಸಕರನ್ನು ಹೊಂದಿದ್ದು, ಇದರಲ್ಲಿ ಬಹುಮತಕ್ಕೆ 41 ಸ್ಥಾನಗಳ ಅಗತ್ಯವಿದೆ. ಅತಿ ದೊಡ್ಡ ಪಕ್ಷವಾದ ಜೆಎಂಎಂ 30 ಶಾಸಕರನ್ನು ಹೊಂದಿದ್ದು, ಕಾಂಗ್ರೆಸ್ 18 ಮತ್ತು ತೇಜಸ್ವಿ ಯಾದವ್ ಅವರ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಒಬ್ಬ ಸದಸ್ಯರನ್ನು ಹೊಂದಿದೆ. ಪ್ರಮುಖ ಪ್ರತಿಪಕ್ಷವಾಗಿರುವ ಬಿಜೆಪಿ 26 ಶಾಸಕರನ್ನು ಹೊಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...