Homeಮುಖಪುಟಜಾರ್ಖಂಡ್‌: ಬಹುಮತ ಸಾಬೀತುಪಡಿಸಿದ ಸಿಎಂ ಸೊರೆನ್; ಸದನದಿಂದ ಹೊರ ನಡೆದ ಬಿಜೆಪಿ

ಜಾರ್ಖಂಡ್‌: ಬಹುಮತ ಸಾಬೀತುಪಡಿಸಿದ ಸಿಎಂ ಸೊರೆನ್; ಸದನದಿಂದ ಹೊರ ನಡೆದ ಬಿಜೆಪಿ

- Advertisement -
- Advertisement -

ಆಡಳಿತಾರೂಢ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನೇತೃತ್ವದ ಸರ್ಕಾರವನ್ನು ಬಿಜೆಪಿ ಉರುಳಿಸಲು ಪ್ರಯತ್ನಿಸುತ್ತಿದೆ ಎಂಬ ಆರೋಪದ ನಡುವೆ, ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರು ಸೋಮವಾರ ತಮ್ಮ ಪರವಾಗಿ ಬಹುಮತವನ್ನು ಸಾಬೀತು ಮಾಡಿದ್ದಾರೆ. ಮುಖ್ಯಮಂತ್ರಿ ವಿರುದ್ಧ ಚುನಾವಣಾ ಆಯೋಗವು ಭ್ರಷ್ಟಾಚಾರದ ಆರೋಪ ಮಾಡಿದೆ.

ಒಂದು ದಿನದ ವಿಶೇಷ ಅಧಿವೇಶನದ ಕಲಾಪಗಳ ಉದ್ದಕ್ಕೂ ಪ್ರತಿಭಟಿಸಿದ ಪ್ರತಿಪಕ್ಷ ಬಿಜೆಪಿ ವಿಶ್ವಾಸ ಮತಯಾಚೆನೆಗೂ ಮುನ್ನ ಸದನದಿಂದ ಹೊರನಡೆದಿದೆ.

ವಿಶ್ವಾಸ ಮತ ಯಾಚೆನೆಯ ನಂತರ ಮಾತನಾಡಿದ ಸಿಎಂ ಹೇಮಂತ್ ಸೊರೆನ್, “ಚುನಾವಣೆಯಲ್ಲಿ ಗೆಲ್ಲಲು ಗಲಭೆಗಳನ್ನು ಉತ್ತೇಜಿಸುವ ಮೂಲಕ ಬಿಜೆಪಿಯು ದೇಶದಲ್ಲಿ ಅಂತರ್ಯುದ್ಧದಂತಹ ಪರಿಸ್ಥಿತಿ ಉಂಟು ಮಾಡಲು  ಪ್ರಯತ್ನಿಸುತ್ತಿದೆ” ಎಂದು ಆರೋಪಿಸಿದ್ದಾರೆ.

“ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಜಾರ್ಖಂಡ್‌‌ ಸರ್ಕಾರವನ್ನು ಉರುಳಿಸುವ ಸಲುವಾಗಿ ಪಕ್ಷದ ಶಾಸಕರನ್ನು ಖರೀದಿಸುವಲ್ಲಿ ತೊಡಗಿಸಿಕೊಂಡಿದ್ದಾರೆ” ಎಂದು ಅವರು ಹೇಳಿದ್ದಾರೆ.

“ಪ್ರತಿಪಕ್ಷ ಬಿಜೆಪಿ ಪ್ರಜಾಪ್ರಭುತ್ವವನ್ನು ನಾಶಪಡಿಸಿದ್ದು, ಶಾಸಕರ ಕುದುರೆ ವ್ಯಾಪಾರದಲ್ಲಿ ತೊಡಗಿದೆ…ಸದನದಲ್ಲಿ ನಮ್ಮ ಶಕ್ತಿ ತೋರಿಸುತ್ತೇವೆ” ಎಂದು ಬಿಜೆಪಿ ಶಾಸಕರು ಘೋಷಣೆ ಕೂಗಿದ ಹಿನ್ನೆಲೆ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಹೇಳಿದ್ದಾರೆ.

“ಬಟ್ಟೆ, ಪಡಿತರ, ದಿನಸಿ ಖರೀದಿಸುವವರ ಬಗ್ಗೆ ಕೇಳಿದ್ದೇವೆ. ಆದರೆ ಬಿಜೆಪಿ ಶಾಸಕರನ್ನು ಖರೀದಿಸುತ್ತಿದೆ…ದೇಶದ ಮೊದಲ ಬುಡಕಟ್ಟು ಜನಾಂಗದ ರಾಷ್ಟ್ರಪತಿಯನ್ನು ಪ್ರತಿಷ್ಠಾಪಿಸಿ, ನಂತರ ಅವರು ಬುಡಕಟ್ಟು ಮುಖ್ಯಮಂತ್ರಿಯನ್ನು ಪದಚ್ಯುತಗೊಳಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ.

ಕಾಂಗ್ರೆಸ್ ಆಡಳಿತವಿರುವ ಛತ್ತೀಸ್‌ಗಢದಿಂದ ವಿಶೇಷ ವಿಮಾನದಲ್ಲಿ ಆಡಳಿತಾರೂಢ ಒಕ್ಕೂಟದ ಶಾಸಕರು ಭಾನುವಾರದಂದು ರಾಜ್ಯ ರಾಜಧಾನಿ ರಾಂಚಿಗೆ ಹಿಂತಿರುಗಿದರು. ಶಾಸಕರನ್ನು ಆಪರೇಷನ್‌ ಕಮಲ ನಡೆಸದೆ ಇರಲು ಅವರನ್ನು ಐಷಾರಾಮಿ ರೆಸಾರ್ಟ್‌ನಲ್ಲಿ ಅವರನ್ನು ಇಡಲಾಗಿತ್ತು. ಅತಿಥಿ ಗೃಹದಲ್ಲಿ ಇದ್ದ ಶಾಸಕರನ್ನು ನೇರವಾಗಿ ವಿಧಾನಸಭೆಗೆ ಕರೆದೊಯ್ಯಲಾಯಿತು.

ಗಣಿ ಗುತ್ತಿಗೆ ನೀಡುವ ಮೂಲಕ ಚುನಾವಣಾ ನಿಯಮಾವಳಿಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಹೇಮಂತ್ ಸೋರೆನ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಬಿಜೆಪಿ ಹೇಳಿದೆ. ಹೊಸದಾಗಿ ಚುನಾವಣೆ ನಡೆಸುವಂತೆ ಅದು ಕರೆ ನೀಡಿದ್ದು, ಮುಖ್ಯಮಂತ್ರಿ ನೈತಿಕ ಆಧಾರದ ಮೇಲೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದೆ.

ಜಾರ್ಖಂಡ್ ರಾಜ್ಯಪಾಲ ಮುಖ್ಯಮಂತ್ರಿ ಸೋರೆನ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿದರೆ, ಅವರು ಮುಖ್ಯಮಂತ್ರಿಯಾಗಿ ಮುಂದುವರಿಯಲು ಸಾಧ್ಯವಿಲ್ಲ. ಚುನಾವಣಾ ಆಯೋಗವು ರಾಜ್ಯಪಾಲರಿಗೆ ತನ್ನ ಅಭಿಪ್ರಾಯವನ್ನು ಸಲ್ಲಿಸಿದ್ದು, ಅವರು ಯಾವುದೇ ಸಮಯದಲ್ಲಿ ಸೊರೆನ್ ಅವರ ನಿರ್ಧಾರವನ್ನು ಪ್ರಕಟಿಸುವ ನಿರೀಕ್ಷೆಯಿದೆ.

81 ಸದಸ್ಯರ ವಿಧಾನಸಭೆಯಲ್ಲಿ ಆಡಳಿತಾರೂಢ ಸಮ್ಮಿಶ್ರ 49 ಶಾಸಕರನ್ನು ಹೊಂದಿದ್ದು, ಇದರಲ್ಲಿ ಬಹುಮತಕ್ಕೆ 41 ಸ್ಥಾನಗಳ ಅಗತ್ಯವಿದೆ. ಅತಿ ದೊಡ್ಡ ಪಕ್ಷವಾದ ಜೆಎಂಎಂ 30 ಶಾಸಕರನ್ನು ಹೊಂದಿದ್ದು, ಕಾಂಗ್ರೆಸ್ 18 ಮತ್ತು ತೇಜಸ್ವಿ ಯಾದವ್ ಅವರ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಒಬ್ಬ ಸದಸ್ಯರನ್ನು ಹೊಂದಿದೆ. ಪ್ರಮುಖ ಪ್ರತಿಪಕ್ಷವಾಗಿರುವ ಬಿಜೆಪಿ 26 ಶಾಸಕರನ್ನು ಹೊಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...