Homeಮುಖಪುಟಜಾರ್ಖಂಡ್‌: ಬಹುಮತ ಸಾಬೀತುಪಡಿಸಿದ ಸಿಎಂ ಸೊರೆನ್; ಸದನದಿಂದ ಹೊರ ನಡೆದ ಬಿಜೆಪಿ

ಜಾರ್ಖಂಡ್‌: ಬಹುಮತ ಸಾಬೀತುಪಡಿಸಿದ ಸಿಎಂ ಸೊರೆನ್; ಸದನದಿಂದ ಹೊರ ನಡೆದ ಬಿಜೆಪಿ

- Advertisement -
- Advertisement -

ಆಡಳಿತಾರೂಢ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನೇತೃತ್ವದ ಸರ್ಕಾರವನ್ನು ಬಿಜೆಪಿ ಉರುಳಿಸಲು ಪ್ರಯತ್ನಿಸುತ್ತಿದೆ ಎಂಬ ಆರೋಪದ ನಡುವೆ, ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರು ಸೋಮವಾರ ತಮ್ಮ ಪರವಾಗಿ ಬಹುಮತವನ್ನು ಸಾಬೀತು ಮಾಡಿದ್ದಾರೆ. ಮುಖ್ಯಮಂತ್ರಿ ವಿರುದ್ಧ ಚುನಾವಣಾ ಆಯೋಗವು ಭ್ರಷ್ಟಾಚಾರದ ಆರೋಪ ಮಾಡಿದೆ.

ಒಂದು ದಿನದ ವಿಶೇಷ ಅಧಿವೇಶನದ ಕಲಾಪಗಳ ಉದ್ದಕ್ಕೂ ಪ್ರತಿಭಟಿಸಿದ ಪ್ರತಿಪಕ್ಷ ಬಿಜೆಪಿ ವಿಶ್ವಾಸ ಮತಯಾಚೆನೆಗೂ ಮುನ್ನ ಸದನದಿಂದ ಹೊರನಡೆದಿದೆ.

ವಿಶ್ವಾಸ ಮತ ಯಾಚೆನೆಯ ನಂತರ ಮಾತನಾಡಿದ ಸಿಎಂ ಹೇಮಂತ್ ಸೊರೆನ್, “ಚುನಾವಣೆಯಲ್ಲಿ ಗೆಲ್ಲಲು ಗಲಭೆಗಳನ್ನು ಉತ್ತೇಜಿಸುವ ಮೂಲಕ ಬಿಜೆಪಿಯು ದೇಶದಲ್ಲಿ ಅಂತರ್ಯುದ್ಧದಂತಹ ಪರಿಸ್ಥಿತಿ ಉಂಟು ಮಾಡಲು  ಪ್ರಯತ್ನಿಸುತ್ತಿದೆ” ಎಂದು ಆರೋಪಿಸಿದ್ದಾರೆ.

“ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಜಾರ್ಖಂಡ್‌‌ ಸರ್ಕಾರವನ್ನು ಉರುಳಿಸುವ ಸಲುವಾಗಿ ಪಕ್ಷದ ಶಾಸಕರನ್ನು ಖರೀದಿಸುವಲ್ಲಿ ತೊಡಗಿಸಿಕೊಂಡಿದ್ದಾರೆ” ಎಂದು ಅವರು ಹೇಳಿದ್ದಾರೆ.

“ಪ್ರತಿಪಕ್ಷ ಬಿಜೆಪಿ ಪ್ರಜಾಪ್ರಭುತ್ವವನ್ನು ನಾಶಪಡಿಸಿದ್ದು, ಶಾಸಕರ ಕುದುರೆ ವ್ಯಾಪಾರದಲ್ಲಿ ತೊಡಗಿದೆ…ಸದನದಲ್ಲಿ ನಮ್ಮ ಶಕ್ತಿ ತೋರಿಸುತ್ತೇವೆ” ಎಂದು ಬಿಜೆಪಿ ಶಾಸಕರು ಘೋಷಣೆ ಕೂಗಿದ ಹಿನ್ನೆಲೆ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಹೇಳಿದ್ದಾರೆ.

“ಬಟ್ಟೆ, ಪಡಿತರ, ದಿನಸಿ ಖರೀದಿಸುವವರ ಬಗ್ಗೆ ಕೇಳಿದ್ದೇವೆ. ಆದರೆ ಬಿಜೆಪಿ ಶಾಸಕರನ್ನು ಖರೀದಿಸುತ್ತಿದೆ…ದೇಶದ ಮೊದಲ ಬುಡಕಟ್ಟು ಜನಾಂಗದ ರಾಷ್ಟ್ರಪತಿಯನ್ನು ಪ್ರತಿಷ್ಠಾಪಿಸಿ, ನಂತರ ಅವರು ಬುಡಕಟ್ಟು ಮುಖ್ಯಮಂತ್ರಿಯನ್ನು ಪದಚ್ಯುತಗೊಳಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ.

ಕಾಂಗ್ರೆಸ್ ಆಡಳಿತವಿರುವ ಛತ್ತೀಸ್‌ಗಢದಿಂದ ವಿಶೇಷ ವಿಮಾನದಲ್ಲಿ ಆಡಳಿತಾರೂಢ ಒಕ್ಕೂಟದ ಶಾಸಕರು ಭಾನುವಾರದಂದು ರಾಜ್ಯ ರಾಜಧಾನಿ ರಾಂಚಿಗೆ ಹಿಂತಿರುಗಿದರು. ಶಾಸಕರನ್ನು ಆಪರೇಷನ್‌ ಕಮಲ ನಡೆಸದೆ ಇರಲು ಅವರನ್ನು ಐಷಾರಾಮಿ ರೆಸಾರ್ಟ್‌ನಲ್ಲಿ ಅವರನ್ನು ಇಡಲಾಗಿತ್ತು. ಅತಿಥಿ ಗೃಹದಲ್ಲಿ ಇದ್ದ ಶಾಸಕರನ್ನು ನೇರವಾಗಿ ವಿಧಾನಸಭೆಗೆ ಕರೆದೊಯ್ಯಲಾಯಿತು.

ಗಣಿ ಗುತ್ತಿಗೆ ನೀಡುವ ಮೂಲಕ ಚುನಾವಣಾ ನಿಯಮಾವಳಿಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಹೇಮಂತ್ ಸೋರೆನ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಬಿಜೆಪಿ ಹೇಳಿದೆ. ಹೊಸದಾಗಿ ಚುನಾವಣೆ ನಡೆಸುವಂತೆ ಅದು ಕರೆ ನೀಡಿದ್ದು, ಮುಖ್ಯಮಂತ್ರಿ ನೈತಿಕ ಆಧಾರದ ಮೇಲೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದೆ.

ಜಾರ್ಖಂಡ್ ರಾಜ್ಯಪಾಲ ಮುಖ್ಯಮಂತ್ರಿ ಸೋರೆನ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿದರೆ, ಅವರು ಮುಖ್ಯಮಂತ್ರಿಯಾಗಿ ಮುಂದುವರಿಯಲು ಸಾಧ್ಯವಿಲ್ಲ. ಚುನಾವಣಾ ಆಯೋಗವು ರಾಜ್ಯಪಾಲರಿಗೆ ತನ್ನ ಅಭಿಪ್ರಾಯವನ್ನು ಸಲ್ಲಿಸಿದ್ದು, ಅವರು ಯಾವುದೇ ಸಮಯದಲ್ಲಿ ಸೊರೆನ್ ಅವರ ನಿರ್ಧಾರವನ್ನು ಪ್ರಕಟಿಸುವ ನಿರೀಕ್ಷೆಯಿದೆ.

81 ಸದಸ್ಯರ ವಿಧಾನಸಭೆಯಲ್ಲಿ ಆಡಳಿತಾರೂಢ ಸಮ್ಮಿಶ್ರ 49 ಶಾಸಕರನ್ನು ಹೊಂದಿದ್ದು, ಇದರಲ್ಲಿ ಬಹುಮತಕ್ಕೆ 41 ಸ್ಥಾನಗಳ ಅಗತ್ಯವಿದೆ. ಅತಿ ದೊಡ್ಡ ಪಕ್ಷವಾದ ಜೆಎಂಎಂ 30 ಶಾಸಕರನ್ನು ಹೊಂದಿದ್ದು, ಕಾಂಗ್ರೆಸ್ 18 ಮತ್ತು ತೇಜಸ್ವಿ ಯಾದವ್ ಅವರ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಒಬ್ಬ ಸದಸ್ಯರನ್ನು ಹೊಂದಿದೆ. ಪ್ರಮುಖ ಪ್ರತಿಪಕ್ಷವಾಗಿರುವ ಬಿಜೆಪಿ 26 ಶಾಸಕರನ್ನು ಹೊಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...