Homeಮುಖಪುಟಜಾರ್ಖಂಡ್: ವಿಮಾನ ನಿಲ್ದಾಣದಲ್ಲಿ ಅತಿಕ್ರಮ ಪ್ರವೇಶ, ಬಲವಂತವಾಗಿ ವಿಮಾನ ಹಾರಿಸಿದ್ದ ಬಿಜೆಪಿ ಸಂಸದನ ವಿರುದ್ಧ ದೂರು

ಜಾರ್ಖಂಡ್: ವಿಮಾನ ನಿಲ್ದಾಣದಲ್ಲಿ ಅತಿಕ್ರಮ ಪ್ರವೇಶ, ಬಲವಂತವಾಗಿ ವಿಮಾನ ಹಾರಿಸಿದ್ದ ಬಿಜೆಪಿ ಸಂಸದನ ವಿರುದ್ಧ ದೂರು

- Advertisement -
- Advertisement -

ಜಾರ್ಖಂಡ್ ರಾಜ್ಯದ ಪ್ರಭಾವಿ ಬಿಜೆಪಿ ಮುಖಂಡ ಹಾಗೂ ಸಂಸದ ನಿಶಿಕಾಂತ್ ದುಬೆ ವಿರುದ್ಧ ಗಂಭೀರ ಸ್ವರೂಪದ ಪ್ರಕರಣ ದಾಖಲಾಗಿದೆ. ದಿಯೋಘರ್ ವಿಮಾನ ನಿಲ್ದಾಣಕ್ಕೆ ಅತಿಕ್ರಮ ಪ್ರವೇಶ, ದಾಂಧಲೆ, ಬಲವಂತವಾಗಿ ವಿಮಾನ ಹಾರಿಸಿದ ಆರೋಪದ ಮೇಲೆ ಎಫ್‌ಐಆರ್ ದಾಖಲಾಗಿದೆ.

ಗೊಡ್ಡಾ ಕ್ಷೇತ್ರದ ಬಿಜೆಪಿ ಸಂಸದರಾಗಿರುವ ನಿಶಿಕಾಂತ್ ದುಬೆ ತನ್ನ ಪುತ್ರ ಸೇರಿದಂತೆ ಹಲವರ ಜೊತೆ ಆಗಸ್ಟ್ 31ರಂದು ದಿಯೋಘರ್ ವಿಮಾನ ನಿಲ್ದಾಣದ ಬಹು ರಕ್ಷಣೆಯ ಏರ್ ಟ್ರಾಫಿಕ್ ಕಂಟ್ರೋಲ್ ಪ್ರದೇಶಕ್ಕೆ ಅತಿಕ್ರಮ ಪ್ರವೇಶ ಮಾಡಿದ್ದಲ್ಲದೆ ಸಂಜೆ ವೇಳೆ ಬಲವಂತವಾಗಿ ಚಾರ್ಟಡ್ ವಿಮಾನ ಹಾರಿಸುವಂತೆ ಒತ್ತಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ.

ದಿಯೋಘರ್ ವಿಮಾನ ನಿಲ್ದಾಣವನ್ನು ಜುಲೈ ತಿಂಗಳಿನಲ್ಲಿ ಪ್ರಧಾನಿ ಮೋದಿ ಉದ್ಘಾಟಿಸಿದ್ದರು. ಆದರೆ ರಾತ್ರಿವೇಳೆ ಸಂಚಾರಕ್ಕೆ ಇನ್ನೂ ಅನುಮತಿ ಸಿಕ್ಕಿಲ್ಲ. ಸಂಜೆ ಸೂರ್ಯ ಮುಳುಗುವ ಅರ್ಧ ಗಂಟೆ ಮುಂಚಿತವಾಗಿ ಮಾತ್ರ ವಿಮಾನ ಹಾರಾಟಕ್ಕೆ ಅವಕಾಶ ನೀಡಲಾಗಿದೆ. ಈ ನಿಯಮವನ್ನು ಮೀರಿ ರಾತ್ರಿ ವೇಳೆ ಸಂಸದ ತನ್ನ ಚಾರ್ಟಡ್ ವಿಮಾನವನ್ನು ಟೇಕ್ ಆಫ್ ಮಾಡಿಸಿದ್ದಾರೆ ಎನ್ನಲಾಗಿದೆ.

ಈ ಸಂಬಂಧ ವಿಮಾನ ನಿಲ್ದಾಣ ರಕ್ಷಣಾ ಮುಖ್ಯಸ್ಥರಾಗಿರುವ ಸುಮನ್ ಅನನ್ ರವರ ದೂರಿನ ಮೇರೆಗೆ ನಿಶಿಕಾಂತ್ ದುಬೆ, ಮನೋಜ್ ತಿವಾರಿ ಸೇರಿದಂತೆ 9 ಜನರ ವಿರುದ್ಧ ಇತರರ ಜೀವ ಅಥವಾ ಸುರಕ್ಷತೆಗೆ ಅಪಾಯವನ್ನುಂಟುಮಾಡುವ ಮತ್ತು ಕ್ರಿಮಿನಲ್ ಅತಿಕ್ರಮಣದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ.

ಐಎಎಸ್ ಅಧಿಕಾರಿ ಜಾರ್ಖಂಡ್ ಕ್ಯಾಬಿನೆಟ್ ಸಮನ್ವಯ (ನಾಗರಿಕ ವಿಮಾನಯಾನ) ಪ್ರಧಾನ ಕಾರ್ಯದರ್ಶಿಗೆ ಈ ವಿಷಯದ ಬಗ್ಗೆ ಪತ್ರ ಬರೆದಿದ್ದಾರೆ. ಅಧಿಕಾರಿಗಳು ತಮ್ಮ ಕೆಲಸಕ್ಕೆ ಅಡ್ಡಿಪಡಿಸುತ್ತಿದ್ದಾರೆ ಎಂದು ಆರೋಪಿಸಿ ಸಂಸದರು ಜಿಲ್ಲಾ ಪೊಲೀಸ್ ಮುಖ್ಯಸ್ಥರಿಗೂ ಪತ್ರ ಬರೆದಿದ್ದಾರೆ.

ನಿಶಿಕಾಂತ್ ದುಬೆ ಮತ್ತು ಇತರರು ಭದ್ರತೆಯನ್ನು ಉಲ್ಲಂಘಿಸಿ ಎಟಿಸಿ ಕೋಣೆಗೆ ಪ್ರವೇಶಿಸಿದರು. “ಪೈಲಟ್ ಮತ್ತು ಪ್ರಯಾಣಿಕರು ಟೇಕಾಫ್‌ಗೆ ಕ್ಲಿಯರೆನ್ಸ್ ನೀಡಬೇಕೆಂದು ಒತ್ತಡ ಹೇರಿದರು. ಅದರ ಪರಿಣಾಮವಾಗಿ ಎಟಿಸಿ ಕ್ಲಿಯರೆನ್ಸ್ ನೀಡಲಾಯಿತು” ಎಂದು ವಿಮಾನ ನಿಲ್ದಾಣದ ಭದ್ರತಾ ಉಸ್ತುವಾರಿ ಹೇಳಿದ್ದಾರೆ.

ಆನಂತರ ನಿಶಿಕಾಂತ್ ದುಬೆ ಟ್ವಿಟರ್‌ನಲ್ಲಿ ಐಎಎಸ್ ಅಧಿಕಾರಿಗಳನ್ನು ಜಾರ್ಖಂಡ್ ಮುಖ್ಯಮಂತ್ರಿಯ ಚಮಚಗಳು ಎಂದು ಹೀಯಾಳಿಸಿ ಬರೆದಿದ್ದಾರೆ. ಅದಕ್ಕೆ ಪ್ರತಿ ಉತ್ತರ ನೀಡಿರುವ ಅಧಿಕಾರಿಗಳು “ವಿಮಾನ ನಿಲ್ದಾಣದಲ್ಲಿ ರಾತ್ರಿ ಕಾರ್ಯಾಚರಣೆಗೆ ಅನುಮತಿ ಇಲ್ಲದಿರುವಾಗ ಸೂರ್ಯಾಸ್ತದ ನಂತರ ಚಾರ್ಟರ್ಡ್ ವಿಮಾನವನ್ನು ಹೇಗೆ ಹಾರಿಸಲಾಯಿತು? ಸಂಸದರು, ಅವರ ಪುತ್ರರು ಮತ್ತು ಇತರರು ಹೆಚ್ಚಿನ ಭದ್ರತೆಯ ಎಟಿಸಿ ಪ್ರದೇಶಕ್ಕೆ ಹೇಗೆ ಪ್ರವೇಶಿಸಿದರು? ಎಂದು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ಮಣಿಪುರದಲ್ಲಿ ಆಪರೇಷನ್ ಕಮಲ: ಐವರು ಜೆಡಿಯು ಶಾಸಕರು ಬಿಜೆಪಿ ತೆಕ್ಕೆಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....