Homeಮುಖಪುಟಜಾರ್ಖಂಡ್: ವಿಮಾನ ನಿಲ್ದಾಣದಲ್ಲಿ ಅತಿಕ್ರಮ ಪ್ರವೇಶ, ಬಲವಂತವಾಗಿ ವಿಮಾನ ಹಾರಿಸಿದ್ದ ಬಿಜೆಪಿ ಸಂಸದನ ವಿರುದ್ಧ ದೂರು

ಜಾರ್ಖಂಡ್: ವಿಮಾನ ನಿಲ್ದಾಣದಲ್ಲಿ ಅತಿಕ್ರಮ ಪ್ರವೇಶ, ಬಲವಂತವಾಗಿ ವಿಮಾನ ಹಾರಿಸಿದ್ದ ಬಿಜೆಪಿ ಸಂಸದನ ವಿರುದ್ಧ ದೂರು

- Advertisement -
- Advertisement -

ಜಾರ್ಖಂಡ್ ರಾಜ್ಯದ ಪ್ರಭಾವಿ ಬಿಜೆಪಿ ಮುಖಂಡ ಹಾಗೂ ಸಂಸದ ನಿಶಿಕಾಂತ್ ದುಬೆ ವಿರುದ್ಧ ಗಂಭೀರ ಸ್ವರೂಪದ ಪ್ರಕರಣ ದಾಖಲಾಗಿದೆ. ದಿಯೋಘರ್ ವಿಮಾನ ನಿಲ್ದಾಣಕ್ಕೆ ಅತಿಕ್ರಮ ಪ್ರವೇಶ, ದಾಂಧಲೆ, ಬಲವಂತವಾಗಿ ವಿಮಾನ ಹಾರಿಸಿದ ಆರೋಪದ ಮೇಲೆ ಎಫ್‌ಐಆರ್ ದಾಖಲಾಗಿದೆ.

ಗೊಡ್ಡಾ ಕ್ಷೇತ್ರದ ಬಿಜೆಪಿ ಸಂಸದರಾಗಿರುವ ನಿಶಿಕಾಂತ್ ದುಬೆ ತನ್ನ ಪುತ್ರ ಸೇರಿದಂತೆ ಹಲವರ ಜೊತೆ ಆಗಸ್ಟ್ 31ರಂದು ದಿಯೋಘರ್ ವಿಮಾನ ನಿಲ್ದಾಣದ ಬಹು ರಕ್ಷಣೆಯ ಏರ್ ಟ್ರಾಫಿಕ್ ಕಂಟ್ರೋಲ್ ಪ್ರದೇಶಕ್ಕೆ ಅತಿಕ್ರಮ ಪ್ರವೇಶ ಮಾಡಿದ್ದಲ್ಲದೆ ಸಂಜೆ ವೇಳೆ ಬಲವಂತವಾಗಿ ಚಾರ್ಟಡ್ ವಿಮಾನ ಹಾರಿಸುವಂತೆ ಒತ್ತಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ.

ದಿಯೋಘರ್ ವಿಮಾನ ನಿಲ್ದಾಣವನ್ನು ಜುಲೈ ತಿಂಗಳಿನಲ್ಲಿ ಪ್ರಧಾನಿ ಮೋದಿ ಉದ್ಘಾಟಿಸಿದ್ದರು. ಆದರೆ ರಾತ್ರಿವೇಳೆ ಸಂಚಾರಕ್ಕೆ ಇನ್ನೂ ಅನುಮತಿ ಸಿಕ್ಕಿಲ್ಲ. ಸಂಜೆ ಸೂರ್ಯ ಮುಳುಗುವ ಅರ್ಧ ಗಂಟೆ ಮುಂಚಿತವಾಗಿ ಮಾತ್ರ ವಿಮಾನ ಹಾರಾಟಕ್ಕೆ ಅವಕಾಶ ನೀಡಲಾಗಿದೆ. ಈ ನಿಯಮವನ್ನು ಮೀರಿ ರಾತ್ರಿ ವೇಳೆ ಸಂಸದ ತನ್ನ ಚಾರ್ಟಡ್ ವಿಮಾನವನ್ನು ಟೇಕ್ ಆಫ್ ಮಾಡಿಸಿದ್ದಾರೆ ಎನ್ನಲಾಗಿದೆ.

ಈ ಸಂಬಂಧ ವಿಮಾನ ನಿಲ್ದಾಣ ರಕ್ಷಣಾ ಮುಖ್ಯಸ್ಥರಾಗಿರುವ ಸುಮನ್ ಅನನ್ ರವರ ದೂರಿನ ಮೇರೆಗೆ ನಿಶಿಕಾಂತ್ ದುಬೆ, ಮನೋಜ್ ತಿವಾರಿ ಸೇರಿದಂತೆ 9 ಜನರ ವಿರುದ್ಧ ಇತರರ ಜೀವ ಅಥವಾ ಸುರಕ್ಷತೆಗೆ ಅಪಾಯವನ್ನುಂಟುಮಾಡುವ ಮತ್ತು ಕ್ರಿಮಿನಲ್ ಅತಿಕ್ರಮಣದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ.

ಐಎಎಸ್ ಅಧಿಕಾರಿ ಜಾರ್ಖಂಡ್ ಕ್ಯಾಬಿನೆಟ್ ಸಮನ್ವಯ (ನಾಗರಿಕ ವಿಮಾನಯಾನ) ಪ್ರಧಾನ ಕಾರ್ಯದರ್ಶಿಗೆ ಈ ವಿಷಯದ ಬಗ್ಗೆ ಪತ್ರ ಬರೆದಿದ್ದಾರೆ. ಅಧಿಕಾರಿಗಳು ತಮ್ಮ ಕೆಲಸಕ್ಕೆ ಅಡ್ಡಿಪಡಿಸುತ್ತಿದ್ದಾರೆ ಎಂದು ಆರೋಪಿಸಿ ಸಂಸದರು ಜಿಲ್ಲಾ ಪೊಲೀಸ್ ಮುಖ್ಯಸ್ಥರಿಗೂ ಪತ್ರ ಬರೆದಿದ್ದಾರೆ.

ನಿಶಿಕಾಂತ್ ದುಬೆ ಮತ್ತು ಇತರರು ಭದ್ರತೆಯನ್ನು ಉಲ್ಲಂಘಿಸಿ ಎಟಿಸಿ ಕೋಣೆಗೆ ಪ್ರವೇಶಿಸಿದರು. “ಪೈಲಟ್ ಮತ್ತು ಪ್ರಯಾಣಿಕರು ಟೇಕಾಫ್‌ಗೆ ಕ್ಲಿಯರೆನ್ಸ್ ನೀಡಬೇಕೆಂದು ಒತ್ತಡ ಹೇರಿದರು. ಅದರ ಪರಿಣಾಮವಾಗಿ ಎಟಿಸಿ ಕ್ಲಿಯರೆನ್ಸ್ ನೀಡಲಾಯಿತು” ಎಂದು ವಿಮಾನ ನಿಲ್ದಾಣದ ಭದ್ರತಾ ಉಸ್ತುವಾರಿ ಹೇಳಿದ್ದಾರೆ.

ಆನಂತರ ನಿಶಿಕಾಂತ್ ದುಬೆ ಟ್ವಿಟರ್‌ನಲ್ಲಿ ಐಎಎಸ್ ಅಧಿಕಾರಿಗಳನ್ನು ಜಾರ್ಖಂಡ್ ಮುಖ್ಯಮಂತ್ರಿಯ ಚಮಚಗಳು ಎಂದು ಹೀಯಾಳಿಸಿ ಬರೆದಿದ್ದಾರೆ. ಅದಕ್ಕೆ ಪ್ರತಿ ಉತ್ತರ ನೀಡಿರುವ ಅಧಿಕಾರಿಗಳು “ವಿಮಾನ ನಿಲ್ದಾಣದಲ್ಲಿ ರಾತ್ರಿ ಕಾರ್ಯಾಚರಣೆಗೆ ಅನುಮತಿ ಇಲ್ಲದಿರುವಾಗ ಸೂರ್ಯಾಸ್ತದ ನಂತರ ಚಾರ್ಟರ್ಡ್ ವಿಮಾನವನ್ನು ಹೇಗೆ ಹಾರಿಸಲಾಯಿತು? ಸಂಸದರು, ಅವರ ಪುತ್ರರು ಮತ್ತು ಇತರರು ಹೆಚ್ಚಿನ ಭದ್ರತೆಯ ಎಟಿಸಿ ಪ್ರದೇಶಕ್ಕೆ ಹೇಗೆ ಪ್ರವೇಶಿಸಿದರು? ಎಂದು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ಮಣಿಪುರದಲ್ಲಿ ಆಪರೇಷನ್ ಕಮಲ: ಐವರು ಜೆಡಿಯು ಶಾಸಕರು ಬಿಜೆಪಿ ತೆಕ್ಕೆಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...