Homeಮುಖಪುಟಜಾರ್ಖಂಡ್: ವಿಮಾನ ನಿಲ್ದಾಣದಲ್ಲಿ ಅತಿಕ್ರಮ ಪ್ರವೇಶ, ಬಲವಂತವಾಗಿ ವಿಮಾನ ಹಾರಿಸಿದ್ದ ಬಿಜೆಪಿ ಸಂಸದನ ವಿರುದ್ಧ ದೂರು

ಜಾರ್ಖಂಡ್: ವಿಮಾನ ನಿಲ್ದಾಣದಲ್ಲಿ ಅತಿಕ್ರಮ ಪ್ರವೇಶ, ಬಲವಂತವಾಗಿ ವಿಮಾನ ಹಾರಿಸಿದ್ದ ಬಿಜೆಪಿ ಸಂಸದನ ವಿರುದ್ಧ ದೂರು

- Advertisement -
- Advertisement -

ಜಾರ್ಖಂಡ್ ರಾಜ್ಯದ ಪ್ರಭಾವಿ ಬಿಜೆಪಿ ಮುಖಂಡ ಹಾಗೂ ಸಂಸದ ನಿಶಿಕಾಂತ್ ದುಬೆ ವಿರುದ್ಧ ಗಂಭೀರ ಸ್ವರೂಪದ ಪ್ರಕರಣ ದಾಖಲಾಗಿದೆ. ದಿಯೋಘರ್ ವಿಮಾನ ನಿಲ್ದಾಣಕ್ಕೆ ಅತಿಕ್ರಮ ಪ್ರವೇಶ, ದಾಂಧಲೆ, ಬಲವಂತವಾಗಿ ವಿಮಾನ ಹಾರಿಸಿದ ಆರೋಪದ ಮೇಲೆ ಎಫ್‌ಐಆರ್ ದಾಖಲಾಗಿದೆ.

ಗೊಡ್ಡಾ ಕ್ಷೇತ್ರದ ಬಿಜೆಪಿ ಸಂಸದರಾಗಿರುವ ನಿಶಿಕಾಂತ್ ದುಬೆ ತನ್ನ ಪುತ್ರ ಸೇರಿದಂತೆ ಹಲವರ ಜೊತೆ ಆಗಸ್ಟ್ 31ರಂದು ದಿಯೋಘರ್ ವಿಮಾನ ನಿಲ್ದಾಣದ ಬಹು ರಕ್ಷಣೆಯ ಏರ್ ಟ್ರಾಫಿಕ್ ಕಂಟ್ರೋಲ್ ಪ್ರದೇಶಕ್ಕೆ ಅತಿಕ್ರಮ ಪ್ರವೇಶ ಮಾಡಿದ್ದಲ್ಲದೆ ಸಂಜೆ ವೇಳೆ ಬಲವಂತವಾಗಿ ಚಾರ್ಟಡ್ ವಿಮಾನ ಹಾರಿಸುವಂತೆ ಒತ್ತಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ.

ದಿಯೋಘರ್ ವಿಮಾನ ನಿಲ್ದಾಣವನ್ನು ಜುಲೈ ತಿಂಗಳಿನಲ್ಲಿ ಪ್ರಧಾನಿ ಮೋದಿ ಉದ್ಘಾಟಿಸಿದ್ದರು. ಆದರೆ ರಾತ್ರಿವೇಳೆ ಸಂಚಾರಕ್ಕೆ ಇನ್ನೂ ಅನುಮತಿ ಸಿಕ್ಕಿಲ್ಲ. ಸಂಜೆ ಸೂರ್ಯ ಮುಳುಗುವ ಅರ್ಧ ಗಂಟೆ ಮುಂಚಿತವಾಗಿ ಮಾತ್ರ ವಿಮಾನ ಹಾರಾಟಕ್ಕೆ ಅವಕಾಶ ನೀಡಲಾಗಿದೆ. ಈ ನಿಯಮವನ್ನು ಮೀರಿ ರಾತ್ರಿ ವೇಳೆ ಸಂಸದ ತನ್ನ ಚಾರ್ಟಡ್ ವಿಮಾನವನ್ನು ಟೇಕ್ ಆಫ್ ಮಾಡಿಸಿದ್ದಾರೆ ಎನ್ನಲಾಗಿದೆ.

ಈ ಸಂಬಂಧ ವಿಮಾನ ನಿಲ್ದಾಣ ರಕ್ಷಣಾ ಮುಖ್ಯಸ್ಥರಾಗಿರುವ ಸುಮನ್ ಅನನ್ ರವರ ದೂರಿನ ಮೇರೆಗೆ ನಿಶಿಕಾಂತ್ ದುಬೆ, ಮನೋಜ್ ತಿವಾರಿ ಸೇರಿದಂತೆ 9 ಜನರ ವಿರುದ್ಧ ಇತರರ ಜೀವ ಅಥವಾ ಸುರಕ್ಷತೆಗೆ ಅಪಾಯವನ್ನುಂಟುಮಾಡುವ ಮತ್ತು ಕ್ರಿಮಿನಲ್ ಅತಿಕ್ರಮಣದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ.

ಐಎಎಸ್ ಅಧಿಕಾರಿ ಜಾರ್ಖಂಡ್ ಕ್ಯಾಬಿನೆಟ್ ಸಮನ್ವಯ (ನಾಗರಿಕ ವಿಮಾನಯಾನ) ಪ್ರಧಾನ ಕಾರ್ಯದರ್ಶಿಗೆ ಈ ವಿಷಯದ ಬಗ್ಗೆ ಪತ್ರ ಬರೆದಿದ್ದಾರೆ. ಅಧಿಕಾರಿಗಳು ತಮ್ಮ ಕೆಲಸಕ್ಕೆ ಅಡ್ಡಿಪಡಿಸುತ್ತಿದ್ದಾರೆ ಎಂದು ಆರೋಪಿಸಿ ಸಂಸದರು ಜಿಲ್ಲಾ ಪೊಲೀಸ್ ಮುಖ್ಯಸ್ಥರಿಗೂ ಪತ್ರ ಬರೆದಿದ್ದಾರೆ.

ನಿಶಿಕಾಂತ್ ದುಬೆ ಮತ್ತು ಇತರರು ಭದ್ರತೆಯನ್ನು ಉಲ್ಲಂಘಿಸಿ ಎಟಿಸಿ ಕೋಣೆಗೆ ಪ್ರವೇಶಿಸಿದರು. “ಪೈಲಟ್ ಮತ್ತು ಪ್ರಯಾಣಿಕರು ಟೇಕಾಫ್‌ಗೆ ಕ್ಲಿಯರೆನ್ಸ್ ನೀಡಬೇಕೆಂದು ಒತ್ತಡ ಹೇರಿದರು. ಅದರ ಪರಿಣಾಮವಾಗಿ ಎಟಿಸಿ ಕ್ಲಿಯರೆನ್ಸ್ ನೀಡಲಾಯಿತು” ಎಂದು ವಿಮಾನ ನಿಲ್ದಾಣದ ಭದ್ರತಾ ಉಸ್ತುವಾರಿ ಹೇಳಿದ್ದಾರೆ.

ಆನಂತರ ನಿಶಿಕಾಂತ್ ದುಬೆ ಟ್ವಿಟರ್‌ನಲ್ಲಿ ಐಎಎಸ್ ಅಧಿಕಾರಿಗಳನ್ನು ಜಾರ್ಖಂಡ್ ಮುಖ್ಯಮಂತ್ರಿಯ ಚಮಚಗಳು ಎಂದು ಹೀಯಾಳಿಸಿ ಬರೆದಿದ್ದಾರೆ. ಅದಕ್ಕೆ ಪ್ರತಿ ಉತ್ತರ ನೀಡಿರುವ ಅಧಿಕಾರಿಗಳು “ವಿಮಾನ ನಿಲ್ದಾಣದಲ್ಲಿ ರಾತ್ರಿ ಕಾರ್ಯಾಚರಣೆಗೆ ಅನುಮತಿ ಇಲ್ಲದಿರುವಾಗ ಸೂರ್ಯಾಸ್ತದ ನಂತರ ಚಾರ್ಟರ್ಡ್ ವಿಮಾನವನ್ನು ಹೇಗೆ ಹಾರಿಸಲಾಯಿತು? ಸಂಸದರು, ಅವರ ಪುತ್ರರು ಮತ್ತು ಇತರರು ಹೆಚ್ಚಿನ ಭದ್ರತೆಯ ಎಟಿಸಿ ಪ್ರದೇಶಕ್ಕೆ ಹೇಗೆ ಪ್ರವೇಶಿಸಿದರು? ಎಂದು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ಮಣಿಪುರದಲ್ಲಿ ಆಪರೇಷನ್ ಕಮಲ: ಐವರು ಜೆಡಿಯು ಶಾಸಕರು ಬಿಜೆಪಿ ತೆಕ್ಕೆಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...