Homeಮುಖಪುಟಜಾರ್ಖಂಡ್‌: ಕಾಂಗ್ರೆಸ್‌ OBC ವಿಭಾಗದ ಪ್ರಧಾನ ಕಾರ್ಯದರ್ಶಿ ಮೇಲೆ ಗುಂಡಿನ ದಾಳಿ

ಜಾರ್ಖಂಡ್‌: ಕಾಂಗ್ರೆಸ್‌ OBC ವಿಭಾಗದ ಪ್ರಧಾನ ಕಾರ್ಯದರ್ಶಿ ಮೇಲೆ ಗುಂಡಿನ ದಾಳಿ

- Advertisement -
- Advertisement -

ಜಾರ್ಖಂಡ್‌ನ ಹಜಾರಿಬಾಗ್ ಜಿಲ್ಲೆಯಲ್ಲಿ ಜಾರ್ಖಂಡ್ ಪ್ರದೇಶ ಕಾಂಗ್ರೆಸ್ ಸಮಿತಿಯ ಒಬಿಸಿ ವಿಭಾಗದ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಅವರ ಮೇಲೆ ಶಸ್ತ್ರಸಜ್ಜಿತ ವ್ಯಕ್ತಿಗಳು ಗುಂಡಿನ ದಾಳಿ ನಡೆಸಿದ್ದು, ಅವರ ಸ್ಥಿತಿ ಗಂಭೀರವಾಗಿದೆ.

ಜಾರ್ಖಂಡ್ ಪ್ರದೇಶ ಕಾಂಗ್ರೆಸ್ ಸಮಿತಿಯ ಒಬಿಸಿ ವಿಭಾಗದ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಅವರು ಶುಕ್ರವಾರ ಸಂಜೆ ಕೊರ್ರಾ ಪ್ರದೇಶದ ಕ್ಯಾನರಿ ಹಿಲ್ ರಸ್ತೆಯಲ್ಲಿನ ತಾವು ಇತ್ತೀಚೆಗೆ ಖರೀದಿಸಿದ ಭೂಮಿಯಲ್ಲಿ ನಡೆಯುತ್ತಿದ್ದ ನಿರ್ಮಾಣ ಕಾಮಗಾರಿಯನ್ನು ವೀಕ್ಷಿಸಲು ಹೋದಾಗ ಈ ಘಟನೆ ನಡೆದಿದೆ.

ಅಶೋಕ್ ಸಾವೊ ನೇತೃತ್ವದ ತಂಡ ಮೊದಲು ಜಮೀನು ವಿವಾದಕ್ಕೆ ಸಂಬಂಧಿಸಿ ಪ್ರಕಾಶ್ ಅವರ ಜೊತೆ ವಾಗ್ವಾದ ನಡೆಸಿದ್ದು, ಬಳಿಕ  ಅವರ ಮೇಲೆ ಗುಂಡು ಹಾರಿಸಿದೆ ಎಂದು ಡಿಎಸ್ಪಿ ರಾಜೀವ್ ಕುಮಾರ್ ಹೇಳಿದ್ದಾರೆ.

ಪ್ರಕಾಶ್ ಅವರನ್ನು ರಾಂಚಿಯ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ. ಅವರ ಆರೋಗ್ಯದ ಮೇಲೆ ವೈದ್ಯರ ವಿಶೇಷ ತಂಡ ನಿಗಾ ಇಟ್ಟಿದೆ ಎಂದು ವರದಿ ತಿಳಿಸಿದೆ.

ಘಟನೆ ಬೆನ್ನಲ್ಲೇ ಪೊಲೀಸರು ಅಶೋಕ್ ಸಾವೊನನ್ನು ಬಂಧಿಸಿದ್ದಾರೆ. ಆದರೆ ಆತನ ಐವರು ಸಹಚರರು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದರೆ. ಆರೋಪಿಗಳ ವಿರುದ್ಧ ಐಪಿಸಿಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಉಳಿದ ಆರೋಪಿಗಳ ಪತ್ತೆಗೆ ಶೋಧ ನಡೆಸಲಾಗುತ್ತಿದೆ.

ಇದನ್ನು ಓದಿ: ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಧಾರವಾಡ ಅಖಾಡ: ಕೇಸರಿ ಕೋಟೆಯಲ್ಲೇ ಸಂಘೀ ಸೇನಾಧಿಪತಿ ಪ್ರಹ್ಲಾದ್ ಜೋಶಿಗೆ ನಡುಕ!!

0
ಪೇಡಾ ನಗರಿ, ಸಾಂಸ್ಕೃತಿಕ ರಾಜಧಾನಿ, ಕರ್ನಾಟಕದ ಆಕ್ಸ್‌ಫರ್ಡ್ ಎಂದೆಲ್ಲ ಗುರುತಿಸಲ್ಪಡುವ ಧಾರವಾಡ ನಗರ ಕೇಂದ್ರವಾಗಿರುವ ಧಾರವಾಡ ಲೋಕಸಭಾ ಕ್ಷೇತ್ರ ಮಲೆನಾಡು, ಅರೆಮಲೆನಾಡು ಮತ್ತು ಬಯಲುನಾಡುಗಳ ವಿಭಿನ್ನ ನೈಸರ್ಗಿಕ ಗುಣ-ಧರ್ಮದ ಸೀಮೆ. ಖಡಕ್ ಜವಾರಿ...