Homeಮುಖಪುಟಜಾರ್ಖಂಡ್‌: ಹಣದೊಂದಿಗೆ ಸಿಕ್ಕಿಬಿದ್ದ ಮೂವರು ಶಾಸಕರನ್ನು ಅಮಾನತು ಮಾಡಿದ ಕಾಂಗ್ರೆಸ್!

ಜಾರ್ಖಂಡ್‌: ಹಣದೊಂದಿಗೆ ಸಿಕ್ಕಿಬಿದ್ದ ಮೂವರು ಶಾಸಕರನ್ನು ಅಮಾನತು ಮಾಡಿದ ಕಾಂಗ್ರೆಸ್!

- Advertisement -
- Advertisement -

ನಿನ್ನೆ ಬಂಗಾಲದಲ್ಲಿ ಹಣದ ರಾಶಿಯೊಂದಿಗೆ ಸಿಕ್ಕಿಬಿದ್ದಿದ್ದ ಜಾರ್ಖಂಡ್‌ನ ಮೂವರು ಕಾಂಗ್ರೆಸ್ ಶಾಸಕರನ್ನು ಬಂಧಿಸಲಾಗಿದ್ದು, ಪ್ರಕರಣದ ತನಿಖೆಯನ್ನು ಅಪರಾಧ ತನಿಖಾ ಇಲಾಖೆ (ಸಿಐಡಿ) ವಹಿಸಿಕೊಳ್ಳಲಿದೆ ಎಂದು ಅಧಿಕಾರಿಗಳು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

“ತಕ್ಷಣದಿಂದ ಜಾರಿಗೆ ಬರುವಂತೆ ಅವರನ್ನು ಇಂದು ಪಕ್ಷದಿಂದ ಅಮಾನತುಗೊಳಿಸಲಾಗಿದೆ. ಸರ್ಕಾರವನ್ನು ಪತನ ಮಾಡಲು ಮೂವರು ಶಾಸಕರಿಗೆ ಬಿಜೆಪಿ ಹಣ ನೀಡಿದೆ” ಎಂದು ಕಾಂಗ್ರೆಸ್ ಹೇಳಿದೆ. ಇದನ್ನು ಅಲ್ಲಗಳೆದಿರುವ ಬಿಜೆಪಿ, “ಈ ಹಣ ಜಾರ್ಖಂಡ್ ಮುಕ್ತಿ ಮೋರ್ಚಾ-ಕಾಂಗ್ರೆಸ್ ಮೈತ್ರಿ ಸರ್ಕಾರದ ಭ್ರಷ್ಟಾಚಾರಕ್ಕೆ ಸಾಕ್ಷಿಯಾಗಿದೆ” ಎಂದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರತಿ ಶಾಸಕರಿಗೆ ₹ 10 ಕೋಟಿ ನೀಡುವ ಮೂಲಕ ಜಾರ್ಖಂಡ್‌ನಲ್ಲಿ ಜೆಎಂಎಂ ನೇತೃತ್ವದ ಸರ್ಕಾರವನ್ನು ಬೀಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಪಶ್ಚಿಮ ಬಂಗಾಳದ ಹೌರಾದಲ್ಲಿ ಬಂಧಿಸಲಾದ ತನ್ನ ಮೂವರು ಶಾಸಕರ ವಿರುದ್ಧ ಪೊಲೀಸ್‌ ದೂರು ದಾಖಲಿಸಲಾಗಿದೆ ಎಂದು ತಿಳಿಸಿದೆ.

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಸಚಿವ ಅಲಂಗೀರ್ ಆಲಂ, “ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚಿಸಿದರೆ ತಲಾ ₹ 10 ಕೋಟಿ ಮತ್ತು ಸಚಿವ ಸ್ಥಾನ ನೀಡುವ ಆಮಿಷವನ್ನು ಶಾಸಕರಿಗೆ ಒಡ್ಡಲಾಗಿದೆ. ಬರ್ಮೊ ಶಾಸಕ ಕುಮಾರ್ ಜಯಮಂಗಲ್ ಅವರು ಮೂವರು ಶಾಸಕರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ” ಎಂದು ಮಾಹಿತಿ ನೀಡಿದ್ದಾರೆ.

ನಮ್ಮಲ್ಲಿ ಪ್ರತಿಯೊಬ್ಬರ ಬಗ್ಗೆ ಮಾಹಿತಿ ಇದೆ. ಮುಂದಿನ ದಿನಗಳಲ್ಲಿ ಇಂತಹ ಜನಪ್ರತಿನಿಧಿಗಳು, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು- ಯಾರೇ ಆಗಿರಲಿ ಕ್ರಮ ಜರುಗಿಸಲಾಗುವುದು ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಅವಿನಾಶ್ ಪಾಂಡೆ ಮತ್ತು ಜಾರ್ಖಂಡ್ ಕಾಂಗ್ರೆಸ್ ಉಸ್ತುವಾರಿ ಈ ಹಿಂದೆ ಹೇಳಿದ್ದರು.

ದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಪಾಂಡೆ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಕ್ಷಣದಿಂದ ಜಾರಿಗೆ ಬರುವಂತೆ ಮೂವರು ಶಾಸಕರನ್ನು ಅಮಾನತುಗೊಳಿಸಿದ್ದಾರೆ ಎಂದು ತಿಳಿಸಿದ್ದಾರೆ.

ಶಾಸಕರಾದ ಇರ್ಫಾನ್ ಅನ್ಸಾರಿ, ರಾಜೇಶ್ ಕಚ್ಚಪ್ ಮತ್ತು ನಮನ್ ಬಿಕ್ಸಲ್ ಕೊಂಗರಿ ಅವರನ್ನು ಹೌರಾ ಗ್ರಾಮಾಂತರ ಪೊಲೀಸರು ಹಣದ ಮೂಲದ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ.

ಸುಳಿವಿನ ಆಧಾರದ ಮೇರೆಗೆ ಪೊಲೀಸರು ಶನಿವಾರ ಹೌರಾದ ರಾನಿಹಟಿಯಲ್ಲಿ ರಾಷ್ಟ್ರೀಯ ಹೆದ್ದಾರಿ-16 ರಲ್ಲಿ ಕಾಂಗ್ರೆಸ್ ಶಾಸಕರು ಪ್ರಯಾಣಿಸುತ್ತಿದ್ದ ಎಸ್‌ಯುವಿಯನ್ನು ತಡೆದರು. ವಾಹನದಲ್ಲಿ ಅಪಾರ ಪ್ರಮಾಣದ ನಗದು ಪತ್ತೆಯಾಗಿದೆ.

“ತಮ್ಮದಲ್ಲದ ಯಾವುದೇ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುವುದು ಮತ್ತು ಅಸ್ಥಿರಗೊಳಿಸುವುದು ಬಿಜೆಪಿಯ ಸ್ವಭಾವವಾಗಿದೆ. ಸಿಎಂ ಹೇಮಂತ್ ಸೋರೆನ್ ಅವರ ಸರ್ಕಾರದ ವಿರುದ್ಧವೂ ಅದೇ ರೀತಿ ಯತ್ನಿಸಲಾಗಿದೆ” ಎಂದು ಜಾರ್ಖಂಡ್ ಕಾಂಗ್ರೆಸ್ ಕಾರ್ಯಾಧ್ಯಕ್ಷ ಬಂಧು ಟಿರ್ಕಿ ಈ ಹಿಂದೆ ಆರೋಪಿಸಿದ್ದರು. “ಶಾಸಕರಿಗೆ ಹಣ ನೀಡಿದ ಏಕೈಕ ಕಾರಣ ಸರಕಾರ ಬೀಳಿಸಲಷ್ಟೇ” ಎಂದಿದ್ದರು.

ಇದನ್ನೂ ಓದಿರಿ: ಮುಸ್ಲಿಮರನ್ನು ಕೊಲ್ಲಲು ಪ್ರಚೋದನೆ; ಕಾಳಿ ಸ್ವಾಮೀಜಿ ವಿರುದ್ಧ ಎಫ್‌ಐಆರ್‌

ಆದರೆ, ಜಾರ್ಖಂಡ್‌ನಲ್ಲಿ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂಬ ಆರೋಪವನ್ನು ಶಾಸಕ ಇರ್ಫಾನ್ ಅನ್ಸಾರಿ ಅವರ ಸಂಬಂಧಿಕರು ತಳ್ಳಿಹಾಕಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

“ಕೇವಲ ₹ 40-50 ಲಕ್ಷ ಅಲ್ಪ ಮೊತ್ತದಲ್ಲಿ ಸರ್ಕಾರವನ್ನು ಉರುಳಿಸಲು ಸಾಧ್ಯವಿಲ್ಲ. ಹಬ್ಬಕ್ಕಾಗಿ ಬಟ್ಟೆಗಳನ್ನು ಖರೀದಿಸಲು ಇಷ್ಟು ಹಣವನ್ನು ತೆಗೆದುಕೊಂಡು ಹೋಗುತ್ತಿದ್ದರು” ಎಂದು ಹೇಳಿಕೆ ನೀಡಲಾಗಿದೆ.

ಜಾರ್ಖಾಂಡ್‌ನಲ್ಲಿ ಆಪರೇಷನ್‌ ಕಮಲ ಮಾಡಲು ಆಗುತ್ತಿರುವ ಪ್ರಯತ್ನಗಳನ್ನು ಈ ಘಟನೆ ಸೂಚಿಸುತ್ತದೆ ಎಂದು ಕಾಂಗ್ರೆಸ್‌ನ ಸಂವಹನ ಉಸ್ತುವಾರಿ ಜೈರಾಮ್ ರಮೇಶ್ ಅಭಿಪ್ರಾಯಪಟ್ಟಿದ್ದಾರೆ. “ಮಹಾರಾಷ್ಟ್ರದಲ್ಲಿ ಸರ್ಕಾರವನ್ನು ಕೆಡವಿದಂತೆಯೇ ಇಲ್ಲಿಯೂ ಸರ್ಕಾರವನ್ನು ಬೀಳಿಸಲು ಯತ್ನಿಸಲಾಗಿದೆ” ಎಂದು ದೂರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...