Homeಮುಖಪುಟಜಾರ್ಖಂಡ್‌: ಹಣದೊಂದಿಗೆ ಸಿಕ್ಕಿಬಿದ್ದ ಮೂವರು ಶಾಸಕರನ್ನು ಅಮಾನತು ಮಾಡಿದ ಕಾಂಗ್ರೆಸ್!

ಜಾರ್ಖಂಡ್‌: ಹಣದೊಂದಿಗೆ ಸಿಕ್ಕಿಬಿದ್ದ ಮೂವರು ಶಾಸಕರನ್ನು ಅಮಾನತು ಮಾಡಿದ ಕಾಂಗ್ರೆಸ್!

- Advertisement -
- Advertisement -

ನಿನ್ನೆ ಬಂಗಾಲದಲ್ಲಿ ಹಣದ ರಾಶಿಯೊಂದಿಗೆ ಸಿಕ್ಕಿಬಿದ್ದಿದ್ದ ಜಾರ್ಖಂಡ್‌ನ ಮೂವರು ಕಾಂಗ್ರೆಸ್ ಶಾಸಕರನ್ನು ಬಂಧಿಸಲಾಗಿದ್ದು, ಪ್ರಕರಣದ ತನಿಖೆಯನ್ನು ಅಪರಾಧ ತನಿಖಾ ಇಲಾಖೆ (ಸಿಐಡಿ) ವಹಿಸಿಕೊಳ್ಳಲಿದೆ ಎಂದು ಅಧಿಕಾರಿಗಳು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

“ತಕ್ಷಣದಿಂದ ಜಾರಿಗೆ ಬರುವಂತೆ ಅವರನ್ನು ಇಂದು ಪಕ್ಷದಿಂದ ಅಮಾನತುಗೊಳಿಸಲಾಗಿದೆ. ಸರ್ಕಾರವನ್ನು ಪತನ ಮಾಡಲು ಮೂವರು ಶಾಸಕರಿಗೆ ಬಿಜೆಪಿ ಹಣ ನೀಡಿದೆ” ಎಂದು ಕಾಂಗ್ರೆಸ್ ಹೇಳಿದೆ. ಇದನ್ನು ಅಲ್ಲಗಳೆದಿರುವ ಬಿಜೆಪಿ, “ಈ ಹಣ ಜಾರ್ಖಂಡ್ ಮುಕ್ತಿ ಮೋರ್ಚಾ-ಕಾಂಗ್ರೆಸ್ ಮೈತ್ರಿ ಸರ್ಕಾರದ ಭ್ರಷ್ಟಾಚಾರಕ್ಕೆ ಸಾಕ್ಷಿಯಾಗಿದೆ” ಎಂದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರತಿ ಶಾಸಕರಿಗೆ ₹ 10 ಕೋಟಿ ನೀಡುವ ಮೂಲಕ ಜಾರ್ಖಂಡ್‌ನಲ್ಲಿ ಜೆಎಂಎಂ ನೇತೃತ್ವದ ಸರ್ಕಾರವನ್ನು ಬೀಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಪಶ್ಚಿಮ ಬಂಗಾಳದ ಹೌರಾದಲ್ಲಿ ಬಂಧಿಸಲಾದ ತನ್ನ ಮೂವರು ಶಾಸಕರ ವಿರುದ್ಧ ಪೊಲೀಸ್‌ ದೂರು ದಾಖಲಿಸಲಾಗಿದೆ ಎಂದು ತಿಳಿಸಿದೆ.

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಸಚಿವ ಅಲಂಗೀರ್ ಆಲಂ, “ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚಿಸಿದರೆ ತಲಾ ₹ 10 ಕೋಟಿ ಮತ್ತು ಸಚಿವ ಸ್ಥಾನ ನೀಡುವ ಆಮಿಷವನ್ನು ಶಾಸಕರಿಗೆ ಒಡ್ಡಲಾಗಿದೆ. ಬರ್ಮೊ ಶಾಸಕ ಕುಮಾರ್ ಜಯಮಂಗಲ್ ಅವರು ಮೂವರು ಶಾಸಕರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ” ಎಂದು ಮಾಹಿತಿ ನೀಡಿದ್ದಾರೆ.

ನಮ್ಮಲ್ಲಿ ಪ್ರತಿಯೊಬ್ಬರ ಬಗ್ಗೆ ಮಾಹಿತಿ ಇದೆ. ಮುಂದಿನ ದಿನಗಳಲ್ಲಿ ಇಂತಹ ಜನಪ್ರತಿನಿಧಿಗಳು, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು- ಯಾರೇ ಆಗಿರಲಿ ಕ್ರಮ ಜರುಗಿಸಲಾಗುವುದು ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಅವಿನಾಶ್ ಪಾಂಡೆ ಮತ್ತು ಜಾರ್ಖಂಡ್ ಕಾಂಗ್ರೆಸ್ ಉಸ್ತುವಾರಿ ಈ ಹಿಂದೆ ಹೇಳಿದ್ದರು.

ದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಪಾಂಡೆ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಕ್ಷಣದಿಂದ ಜಾರಿಗೆ ಬರುವಂತೆ ಮೂವರು ಶಾಸಕರನ್ನು ಅಮಾನತುಗೊಳಿಸಿದ್ದಾರೆ ಎಂದು ತಿಳಿಸಿದ್ದಾರೆ.

ಶಾಸಕರಾದ ಇರ್ಫಾನ್ ಅನ್ಸಾರಿ, ರಾಜೇಶ್ ಕಚ್ಚಪ್ ಮತ್ತು ನಮನ್ ಬಿಕ್ಸಲ್ ಕೊಂಗರಿ ಅವರನ್ನು ಹೌರಾ ಗ್ರಾಮಾಂತರ ಪೊಲೀಸರು ಹಣದ ಮೂಲದ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ.

ಸುಳಿವಿನ ಆಧಾರದ ಮೇರೆಗೆ ಪೊಲೀಸರು ಶನಿವಾರ ಹೌರಾದ ರಾನಿಹಟಿಯಲ್ಲಿ ರಾಷ್ಟ್ರೀಯ ಹೆದ್ದಾರಿ-16 ರಲ್ಲಿ ಕಾಂಗ್ರೆಸ್ ಶಾಸಕರು ಪ್ರಯಾಣಿಸುತ್ತಿದ್ದ ಎಸ್‌ಯುವಿಯನ್ನು ತಡೆದರು. ವಾಹನದಲ್ಲಿ ಅಪಾರ ಪ್ರಮಾಣದ ನಗದು ಪತ್ತೆಯಾಗಿದೆ.

“ತಮ್ಮದಲ್ಲದ ಯಾವುದೇ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುವುದು ಮತ್ತು ಅಸ್ಥಿರಗೊಳಿಸುವುದು ಬಿಜೆಪಿಯ ಸ್ವಭಾವವಾಗಿದೆ. ಸಿಎಂ ಹೇಮಂತ್ ಸೋರೆನ್ ಅವರ ಸರ್ಕಾರದ ವಿರುದ್ಧವೂ ಅದೇ ರೀತಿ ಯತ್ನಿಸಲಾಗಿದೆ” ಎಂದು ಜಾರ್ಖಂಡ್ ಕಾಂಗ್ರೆಸ್ ಕಾರ್ಯಾಧ್ಯಕ್ಷ ಬಂಧು ಟಿರ್ಕಿ ಈ ಹಿಂದೆ ಆರೋಪಿಸಿದ್ದರು. “ಶಾಸಕರಿಗೆ ಹಣ ನೀಡಿದ ಏಕೈಕ ಕಾರಣ ಸರಕಾರ ಬೀಳಿಸಲಷ್ಟೇ” ಎಂದಿದ್ದರು.

ಇದನ್ನೂ ಓದಿರಿ: ಮುಸ್ಲಿಮರನ್ನು ಕೊಲ್ಲಲು ಪ್ರಚೋದನೆ; ಕಾಳಿ ಸ್ವಾಮೀಜಿ ವಿರುದ್ಧ ಎಫ್‌ಐಆರ್‌

ಆದರೆ, ಜಾರ್ಖಂಡ್‌ನಲ್ಲಿ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂಬ ಆರೋಪವನ್ನು ಶಾಸಕ ಇರ್ಫಾನ್ ಅನ್ಸಾರಿ ಅವರ ಸಂಬಂಧಿಕರು ತಳ್ಳಿಹಾಕಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

“ಕೇವಲ ₹ 40-50 ಲಕ್ಷ ಅಲ್ಪ ಮೊತ್ತದಲ್ಲಿ ಸರ್ಕಾರವನ್ನು ಉರುಳಿಸಲು ಸಾಧ್ಯವಿಲ್ಲ. ಹಬ್ಬಕ್ಕಾಗಿ ಬಟ್ಟೆಗಳನ್ನು ಖರೀದಿಸಲು ಇಷ್ಟು ಹಣವನ್ನು ತೆಗೆದುಕೊಂಡು ಹೋಗುತ್ತಿದ್ದರು” ಎಂದು ಹೇಳಿಕೆ ನೀಡಲಾಗಿದೆ.

ಜಾರ್ಖಾಂಡ್‌ನಲ್ಲಿ ಆಪರೇಷನ್‌ ಕಮಲ ಮಾಡಲು ಆಗುತ್ತಿರುವ ಪ್ರಯತ್ನಗಳನ್ನು ಈ ಘಟನೆ ಸೂಚಿಸುತ್ತದೆ ಎಂದು ಕಾಂಗ್ರೆಸ್‌ನ ಸಂವಹನ ಉಸ್ತುವಾರಿ ಜೈರಾಮ್ ರಮೇಶ್ ಅಭಿಪ್ರಾಯಪಟ್ಟಿದ್ದಾರೆ. “ಮಹಾರಾಷ್ಟ್ರದಲ್ಲಿ ಸರ್ಕಾರವನ್ನು ಕೆಡವಿದಂತೆಯೇ ಇಲ್ಲಿಯೂ ಸರ್ಕಾರವನ್ನು ಬೀಳಿಸಲು ಯತ್ನಿಸಲಾಗಿದೆ” ಎಂದು ದೂರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...