Homeಮುಖಪುಟಜಾರ್ಖಂಡ್‌: ಬಡತನ, ಅನಾರೋಗ್ಯದಿಂದ ಐದು ತಿಂಗಳ ಹಸುಳೆಯನ್ನು ಮಾರಿದ ದಂಪತಿ

ಜಾರ್ಖಂಡ್‌: ಬಡತನ, ಅನಾರೋಗ್ಯದಿಂದ ಐದು ತಿಂಗಳ ಹಸುಳೆಯನ್ನು ಮಾರಿದ ದಂಪತಿ

- Advertisement -
- Advertisement -

ಕಿತ್ತು ತಿನ್ನುವ ಬಡತನದಿಂದ ಹೆತ್ತವರೆ ತಮ್ಮ ಐದು ತಿಂಗಳ ಹಸುಗೂಸನ್ನು 5,000 ರೂಪಾಯಿಗಳಿಗೆ ಮಾರಾಟ ಮಾಡಿರುವ ಹೃದಯ ವಿದ್ರಾವಕ ಘಟನೆ ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯಲ್ಲಿ ವರದಿಯಾಗಿದೆ. ಒಂದು ವರದಿಯ ಪ್ರಕಾರ ಭಾರತವು ವಿಶ್ವ ಹಸಿವು ಸೂಚ್ಯಂಕದಲ್ಲಿ 101ನೇ ಸ್ಥಾನಕ್ಕೆ ಕುಸಿದಿದೆ.

ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಬಜರಂಗ ನಾಯಕ್ ಮತ್ತು ಅವರ ಪತ್ನಿ ಗುಡಿಯಾ ದೇವಿ ಚಿಂದಿ ಆಯ್ದು ಜೀವನ ಸಾಗಿಸುತ್ತಿದ್ದರು. ಇದರ ಜೊತೆಗೆ ಗುಡಿಯಾ ದೇವಿ ಕ್ಷಯ ರೋಗದಿಂದ ಬಳಲುತ್ತಿದ್ದರು. ಹೀಗಾಗಿ, ಆಕೆಯ ಚಿಕಿತ್ಸೆ ಹಣವಿಲ್ಲದೆ, ಈ ದಂಪತಿ ತಮ್ಮ ಮಗುವನ್ನೇ ಮಾರಾಟ ಮಾಡಿದ್ದಾರೆ.

ಈ ದಂಪತಿ ಈ ಹಿಂದೆಯೂ ಒಮ್ಮೆ ತಮ್ಮ ಮೂರು ವರ್ಷದ ಮಗಳು ದೀಪಾಲಿ ಕುಮಾರಿಯನ್ನೂ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದಾಗ ಸ್ಥಳೀಯರು ಅವರನ್ನು ತಡೆದು ಸ್ಥಳೀಯ ಆಡಳಿತಕ್ಕೆ ಒಪ್ಪಿಸಿದ್ದರು ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.

“ನಮಗೆ ನಾಲ್ವರು ಮಕ್ಕಳಿದ್ದಾರೆ. ಇಬ್ಬರು ಮಕ್ಕಳು 9 ವರ್ಷದ ಆಕಾಶ್ ಕುಮಾರ್ ಮತ್ತು ಖುಷಿ ಕುಮಾರಿ ಪಾಟ್ನಾ ಬಳಿಯ ಬಿಹ್ತಾ ಎಂಬಲ್ಲಿ ಇಟ್ಟಿಗೆ ಭಟ್ಟಿಯಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ. ನನ್ನ ಹೆಂಡತಿಯ ಚಿಕಿತ್ಸೆಗಾಗಿ, ನಾವು ನಮ್ಮ ಚಿಕ್ಕ ಮಗುವನ್ನು ಮಾರಾಟ ಮಾಡಬೇಕಾಯಿತು” ಎಂದು ಬಜರಂಗ್ ಹೇಳಿದ್ದಾರೆ.

ಇದನ್ನೂ ಓದಿ: ಮೋದಿ ಸೇನಾ ಸಮವಸ್ತ್ರ ಧರಿಸಿದ್ದ ಪ್ರಕರಣ: ಪ್ರಧಾನಿ ಕಚೇರಿಗೆ ನೋಟಿಸ್ ಜಾರಿ

ಮೂಲತಃ ಸಿಮ್ಡೆಗಾದಲ್ಲಿರುವ ಬಂಗ್ರು ಪ್ರದೇಶದ ದಂಪತಿ ಪ್ರಸ್ತುತ ಗುಮ್ಲಾದಲ್ಲಿ ನೆಲೆಸಿದ್ದಾರೆ. ಗುಡಿಯಾ ಮತ್ತು ಅವರ ಮೂರು ವರ್ಷದ ಮಗಳು ಚಿಂದಿ ಅಂಗಡಿಯ ಆಶ್ರಯದಲ್ಲಿ ವಾಸಿಸುತ್ತಿದ್ದಾರೆ. ಬಜರಂಗ್ ಫುಟ್‌ಪಾತ್‌ನಲ್ಲಿ ಮಲಗಿ ಜೀವನ ಸಾಗಿಸುತ್ತಿದ್ದಾರೆ. “ಬಡತನದಿಂದಾಗಿ ನಮ್ಮ ನವಜಾತ ಶಿಶುವನ್ನು ನೋಡಿಕೊಳ್ಳಲು ನಮಗೆ ಸಾಧ್ಯವಾಗಲಿಲ್ಲ” ಎಂದು ಗುಡಿಯಾ ಹೇಳಿದ್ದಾರೆ.

ಸದ್ಯ ಮಾರಾಟ ಮಾಡಿರುವ ಐದು ತಿಂಗಳ ಶಿಶುವನ್ನು ಮರಳಿ ತರಲು ಆಡಳಿತಾಧಿಕಾರಿಗಳು ಸಾಮಾಜಿಕ ಕಾರ್ಯಕರ್ತರಿಗೆ ಸೂಚಿಸಿದೆ. ಅಧಿಕಾರಿಗಳು ದಂಪತಿಗೆ ಪಡಿತರ ಮತ್ತು ಬಟ್ಟೆ ಲಭ್ಯವಾಗುವಂತೆ ನೆರವು ನೀಡಿದ್ದಾರೆ. ಕ್ಷಯ ರೋಗದಿಂದ ಬಳಲುತ್ತಿರುವ ಗುಡಿಯಾ ಅವರ ಚಿಕಿತ್ಸೆಗೂ ವ್ಯವಸ್ಥೆ ಮಾಡಿದ್ದಾರೆ. ಗುಡಿಯಾಗೆ ಟಿಬಿ ಸೇರಿದಂತೆ ಹಲವು ಕಾಯಿಲೆಗಳಿದ್ದು, ಚಿಕಿತ್ಸೆ ಆರಂಭಿಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ ಎಂದು ಸ್ಥಳೀಯ ಸುದ್ದಿಸಂಸ್ಥೆಗಳು ವರದಿ ಮಾಡಿವೆ.

“ಮಗುವನ್ನು ಮಾರಾಟ ಮಾಡಿದ ದಂಪತಿಯನ್ನು ಭೇಟಿ ಮಾಡಿ, ಮಗುವನ್ನು ಮರಳಿ ತರುವಂತೆ ನಗರ ವ್ಯವಸ್ಥಾಪಕ ಮತ್ತು ವಾರ್ಡ್ ಆಯುಕ್ತರಿಗೆ ಸೂಚಿಸಿದ್ದೇನೆ. ಅವರಿಗೆ ಸಮಸ್ಯೆಗಳು ಎದುರಾದರೆ, ಸ್ಥಳೀಯ ಪೊಲೀಸ್ ಠಾಣೆಯು ಮಗುವನ್ನು ಪೋಷಿಸಲು ಸಹಾಯ ಮಾಡುತ್ತದೆ. ಜೊತೆಗೆ ಬಿಹಾರದ ಪಾಟ್ನಾದಲ್ಲಿ ಇಟ್ಟಿಗೆ ಭಟ್ಟಿಯಲ್ಲಿ ಕೆಲಸ ಮಾಡುತ್ತಿರುವ ಗುಡಿಯಾ ದೇವಿಯ ಇಬ್ಬರು ಮಕ್ಕಳನ್ನು ಕರೆತರಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ” ಎಂದು ಉಪವಿಭಾಗಾಧಿಕಾರಿ ರವಿ ಆನಂದ್ ಹೇಳಿದ್ದಾರೆ.


ಇದನ್ನೂ ಓದಿ: ಕುಂದಾಪುರ ಕಾಲೇಜಿನಲ್ಲೂ ‘ಕೇಸರಿ ಶಾಲು ವಿವಾದ’; ಹಿಜಾಬ್‌ ಧರಿಸಿ ಬರದಂತೆ ಪ್ರಿನ್ಸಿಪಾಲ್‌ ಹೇಳಿದ್ದಾರೆಂದು ಪೋಷಕರ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...