Homeಮುಖಪುಟಜಾರ್ಖಂಡ್‌: ಬಡತನ, ಅನಾರೋಗ್ಯದಿಂದ ಐದು ತಿಂಗಳ ಹಸುಳೆಯನ್ನು ಮಾರಿದ ದಂಪತಿ

ಜಾರ್ಖಂಡ್‌: ಬಡತನ, ಅನಾರೋಗ್ಯದಿಂದ ಐದು ತಿಂಗಳ ಹಸುಳೆಯನ್ನು ಮಾರಿದ ದಂಪತಿ

- Advertisement -
- Advertisement -

ಕಿತ್ತು ತಿನ್ನುವ ಬಡತನದಿಂದ ಹೆತ್ತವರೆ ತಮ್ಮ ಐದು ತಿಂಗಳ ಹಸುಗೂಸನ್ನು 5,000 ರೂಪಾಯಿಗಳಿಗೆ ಮಾರಾಟ ಮಾಡಿರುವ ಹೃದಯ ವಿದ್ರಾವಕ ಘಟನೆ ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯಲ್ಲಿ ವರದಿಯಾಗಿದೆ. ಒಂದು ವರದಿಯ ಪ್ರಕಾರ ಭಾರತವು ವಿಶ್ವ ಹಸಿವು ಸೂಚ್ಯಂಕದಲ್ಲಿ 101ನೇ ಸ್ಥಾನಕ್ಕೆ ಕುಸಿದಿದೆ.

ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಬಜರಂಗ ನಾಯಕ್ ಮತ್ತು ಅವರ ಪತ್ನಿ ಗುಡಿಯಾ ದೇವಿ ಚಿಂದಿ ಆಯ್ದು ಜೀವನ ಸಾಗಿಸುತ್ತಿದ್ದರು. ಇದರ ಜೊತೆಗೆ ಗುಡಿಯಾ ದೇವಿ ಕ್ಷಯ ರೋಗದಿಂದ ಬಳಲುತ್ತಿದ್ದರು. ಹೀಗಾಗಿ, ಆಕೆಯ ಚಿಕಿತ್ಸೆ ಹಣವಿಲ್ಲದೆ, ಈ ದಂಪತಿ ತಮ್ಮ ಮಗುವನ್ನೇ ಮಾರಾಟ ಮಾಡಿದ್ದಾರೆ.

ಈ ದಂಪತಿ ಈ ಹಿಂದೆಯೂ ಒಮ್ಮೆ ತಮ್ಮ ಮೂರು ವರ್ಷದ ಮಗಳು ದೀಪಾಲಿ ಕುಮಾರಿಯನ್ನೂ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದಾಗ ಸ್ಥಳೀಯರು ಅವರನ್ನು ತಡೆದು ಸ್ಥಳೀಯ ಆಡಳಿತಕ್ಕೆ ಒಪ್ಪಿಸಿದ್ದರು ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.

“ನಮಗೆ ನಾಲ್ವರು ಮಕ್ಕಳಿದ್ದಾರೆ. ಇಬ್ಬರು ಮಕ್ಕಳು 9 ವರ್ಷದ ಆಕಾಶ್ ಕುಮಾರ್ ಮತ್ತು ಖುಷಿ ಕುಮಾರಿ ಪಾಟ್ನಾ ಬಳಿಯ ಬಿಹ್ತಾ ಎಂಬಲ್ಲಿ ಇಟ್ಟಿಗೆ ಭಟ್ಟಿಯಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ. ನನ್ನ ಹೆಂಡತಿಯ ಚಿಕಿತ್ಸೆಗಾಗಿ, ನಾವು ನಮ್ಮ ಚಿಕ್ಕ ಮಗುವನ್ನು ಮಾರಾಟ ಮಾಡಬೇಕಾಯಿತು” ಎಂದು ಬಜರಂಗ್ ಹೇಳಿದ್ದಾರೆ.

ಇದನ್ನೂ ಓದಿ: ಮೋದಿ ಸೇನಾ ಸಮವಸ್ತ್ರ ಧರಿಸಿದ್ದ ಪ್ರಕರಣ: ಪ್ರಧಾನಿ ಕಚೇರಿಗೆ ನೋಟಿಸ್ ಜಾರಿ

ಮೂಲತಃ ಸಿಮ್ಡೆಗಾದಲ್ಲಿರುವ ಬಂಗ್ರು ಪ್ರದೇಶದ ದಂಪತಿ ಪ್ರಸ್ತುತ ಗುಮ್ಲಾದಲ್ಲಿ ನೆಲೆಸಿದ್ದಾರೆ. ಗುಡಿಯಾ ಮತ್ತು ಅವರ ಮೂರು ವರ್ಷದ ಮಗಳು ಚಿಂದಿ ಅಂಗಡಿಯ ಆಶ್ರಯದಲ್ಲಿ ವಾಸಿಸುತ್ತಿದ್ದಾರೆ. ಬಜರಂಗ್ ಫುಟ್‌ಪಾತ್‌ನಲ್ಲಿ ಮಲಗಿ ಜೀವನ ಸಾಗಿಸುತ್ತಿದ್ದಾರೆ. “ಬಡತನದಿಂದಾಗಿ ನಮ್ಮ ನವಜಾತ ಶಿಶುವನ್ನು ನೋಡಿಕೊಳ್ಳಲು ನಮಗೆ ಸಾಧ್ಯವಾಗಲಿಲ್ಲ” ಎಂದು ಗುಡಿಯಾ ಹೇಳಿದ್ದಾರೆ.

ಸದ್ಯ ಮಾರಾಟ ಮಾಡಿರುವ ಐದು ತಿಂಗಳ ಶಿಶುವನ್ನು ಮರಳಿ ತರಲು ಆಡಳಿತಾಧಿಕಾರಿಗಳು ಸಾಮಾಜಿಕ ಕಾರ್ಯಕರ್ತರಿಗೆ ಸೂಚಿಸಿದೆ. ಅಧಿಕಾರಿಗಳು ದಂಪತಿಗೆ ಪಡಿತರ ಮತ್ತು ಬಟ್ಟೆ ಲಭ್ಯವಾಗುವಂತೆ ನೆರವು ನೀಡಿದ್ದಾರೆ. ಕ್ಷಯ ರೋಗದಿಂದ ಬಳಲುತ್ತಿರುವ ಗುಡಿಯಾ ಅವರ ಚಿಕಿತ್ಸೆಗೂ ವ್ಯವಸ್ಥೆ ಮಾಡಿದ್ದಾರೆ. ಗುಡಿಯಾಗೆ ಟಿಬಿ ಸೇರಿದಂತೆ ಹಲವು ಕಾಯಿಲೆಗಳಿದ್ದು, ಚಿಕಿತ್ಸೆ ಆರಂಭಿಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ ಎಂದು ಸ್ಥಳೀಯ ಸುದ್ದಿಸಂಸ್ಥೆಗಳು ವರದಿ ಮಾಡಿವೆ.

“ಮಗುವನ್ನು ಮಾರಾಟ ಮಾಡಿದ ದಂಪತಿಯನ್ನು ಭೇಟಿ ಮಾಡಿ, ಮಗುವನ್ನು ಮರಳಿ ತರುವಂತೆ ನಗರ ವ್ಯವಸ್ಥಾಪಕ ಮತ್ತು ವಾರ್ಡ್ ಆಯುಕ್ತರಿಗೆ ಸೂಚಿಸಿದ್ದೇನೆ. ಅವರಿಗೆ ಸಮಸ್ಯೆಗಳು ಎದುರಾದರೆ, ಸ್ಥಳೀಯ ಪೊಲೀಸ್ ಠಾಣೆಯು ಮಗುವನ್ನು ಪೋಷಿಸಲು ಸಹಾಯ ಮಾಡುತ್ತದೆ. ಜೊತೆಗೆ ಬಿಹಾರದ ಪಾಟ್ನಾದಲ್ಲಿ ಇಟ್ಟಿಗೆ ಭಟ್ಟಿಯಲ್ಲಿ ಕೆಲಸ ಮಾಡುತ್ತಿರುವ ಗುಡಿಯಾ ದೇವಿಯ ಇಬ್ಬರು ಮಕ್ಕಳನ್ನು ಕರೆತರಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ” ಎಂದು ಉಪವಿಭಾಗಾಧಿಕಾರಿ ರವಿ ಆನಂದ್ ಹೇಳಿದ್ದಾರೆ.


ಇದನ್ನೂ ಓದಿ: ಕುಂದಾಪುರ ಕಾಲೇಜಿನಲ್ಲೂ ‘ಕೇಸರಿ ಶಾಲು ವಿವಾದ’; ಹಿಜಾಬ್‌ ಧರಿಸಿ ಬರದಂತೆ ಪ್ರಿನ್ಸಿಪಾಲ್‌ ಹೇಳಿದ್ದಾರೆಂದು ಪೋಷಕರ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...