Homeಮುಖಪುಟಜಾರ್ಖಂಡ್‌: ಬಡತನ, ಅನಾರೋಗ್ಯದಿಂದ ಐದು ತಿಂಗಳ ಹಸುಳೆಯನ್ನು ಮಾರಿದ ದಂಪತಿ

ಜಾರ್ಖಂಡ್‌: ಬಡತನ, ಅನಾರೋಗ್ಯದಿಂದ ಐದು ತಿಂಗಳ ಹಸುಳೆಯನ್ನು ಮಾರಿದ ದಂಪತಿ

- Advertisement -
- Advertisement -

ಕಿತ್ತು ತಿನ್ನುವ ಬಡತನದಿಂದ ಹೆತ್ತವರೆ ತಮ್ಮ ಐದು ತಿಂಗಳ ಹಸುಗೂಸನ್ನು 5,000 ರೂಪಾಯಿಗಳಿಗೆ ಮಾರಾಟ ಮಾಡಿರುವ ಹೃದಯ ವಿದ್ರಾವಕ ಘಟನೆ ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯಲ್ಲಿ ವರದಿಯಾಗಿದೆ. ಒಂದು ವರದಿಯ ಪ್ರಕಾರ ಭಾರತವು ವಿಶ್ವ ಹಸಿವು ಸೂಚ್ಯಂಕದಲ್ಲಿ 101ನೇ ಸ್ಥಾನಕ್ಕೆ ಕುಸಿದಿದೆ.

ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಬಜರಂಗ ನಾಯಕ್ ಮತ್ತು ಅವರ ಪತ್ನಿ ಗುಡಿಯಾ ದೇವಿ ಚಿಂದಿ ಆಯ್ದು ಜೀವನ ಸಾಗಿಸುತ್ತಿದ್ದರು. ಇದರ ಜೊತೆಗೆ ಗುಡಿಯಾ ದೇವಿ ಕ್ಷಯ ರೋಗದಿಂದ ಬಳಲುತ್ತಿದ್ದರು. ಹೀಗಾಗಿ, ಆಕೆಯ ಚಿಕಿತ್ಸೆ ಹಣವಿಲ್ಲದೆ, ಈ ದಂಪತಿ ತಮ್ಮ ಮಗುವನ್ನೇ ಮಾರಾಟ ಮಾಡಿದ್ದಾರೆ.

ಈ ದಂಪತಿ ಈ ಹಿಂದೆಯೂ ಒಮ್ಮೆ ತಮ್ಮ ಮೂರು ವರ್ಷದ ಮಗಳು ದೀಪಾಲಿ ಕುಮಾರಿಯನ್ನೂ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದಾಗ ಸ್ಥಳೀಯರು ಅವರನ್ನು ತಡೆದು ಸ್ಥಳೀಯ ಆಡಳಿತಕ್ಕೆ ಒಪ್ಪಿಸಿದ್ದರು ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.

“ನಮಗೆ ನಾಲ್ವರು ಮಕ್ಕಳಿದ್ದಾರೆ. ಇಬ್ಬರು ಮಕ್ಕಳು 9 ವರ್ಷದ ಆಕಾಶ್ ಕುಮಾರ್ ಮತ್ತು ಖುಷಿ ಕುಮಾರಿ ಪಾಟ್ನಾ ಬಳಿಯ ಬಿಹ್ತಾ ಎಂಬಲ್ಲಿ ಇಟ್ಟಿಗೆ ಭಟ್ಟಿಯಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ. ನನ್ನ ಹೆಂಡತಿಯ ಚಿಕಿತ್ಸೆಗಾಗಿ, ನಾವು ನಮ್ಮ ಚಿಕ್ಕ ಮಗುವನ್ನು ಮಾರಾಟ ಮಾಡಬೇಕಾಯಿತು” ಎಂದು ಬಜರಂಗ್ ಹೇಳಿದ್ದಾರೆ.

ಇದನ್ನೂ ಓದಿ: ಮೋದಿ ಸೇನಾ ಸಮವಸ್ತ್ರ ಧರಿಸಿದ್ದ ಪ್ರಕರಣ: ಪ್ರಧಾನಿ ಕಚೇರಿಗೆ ನೋಟಿಸ್ ಜಾರಿ

ಮೂಲತಃ ಸಿಮ್ಡೆಗಾದಲ್ಲಿರುವ ಬಂಗ್ರು ಪ್ರದೇಶದ ದಂಪತಿ ಪ್ರಸ್ತುತ ಗುಮ್ಲಾದಲ್ಲಿ ನೆಲೆಸಿದ್ದಾರೆ. ಗುಡಿಯಾ ಮತ್ತು ಅವರ ಮೂರು ವರ್ಷದ ಮಗಳು ಚಿಂದಿ ಅಂಗಡಿಯ ಆಶ್ರಯದಲ್ಲಿ ವಾಸಿಸುತ್ತಿದ್ದಾರೆ. ಬಜರಂಗ್ ಫುಟ್‌ಪಾತ್‌ನಲ್ಲಿ ಮಲಗಿ ಜೀವನ ಸಾಗಿಸುತ್ತಿದ್ದಾರೆ. “ಬಡತನದಿಂದಾಗಿ ನಮ್ಮ ನವಜಾತ ಶಿಶುವನ್ನು ನೋಡಿಕೊಳ್ಳಲು ನಮಗೆ ಸಾಧ್ಯವಾಗಲಿಲ್ಲ” ಎಂದು ಗುಡಿಯಾ ಹೇಳಿದ್ದಾರೆ.

ಸದ್ಯ ಮಾರಾಟ ಮಾಡಿರುವ ಐದು ತಿಂಗಳ ಶಿಶುವನ್ನು ಮರಳಿ ತರಲು ಆಡಳಿತಾಧಿಕಾರಿಗಳು ಸಾಮಾಜಿಕ ಕಾರ್ಯಕರ್ತರಿಗೆ ಸೂಚಿಸಿದೆ. ಅಧಿಕಾರಿಗಳು ದಂಪತಿಗೆ ಪಡಿತರ ಮತ್ತು ಬಟ್ಟೆ ಲಭ್ಯವಾಗುವಂತೆ ನೆರವು ನೀಡಿದ್ದಾರೆ. ಕ್ಷಯ ರೋಗದಿಂದ ಬಳಲುತ್ತಿರುವ ಗುಡಿಯಾ ಅವರ ಚಿಕಿತ್ಸೆಗೂ ವ್ಯವಸ್ಥೆ ಮಾಡಿದ್ದಾರೆ. ಗುಡಿಯಾಗೆ ಟಿಬಿ ಸೇರಿದಂತೆ ಹಲವು ಕಾಯಿಲೆಗಳಿದ್ದು, ಚಿಕಿತ್ಸೆ ಆರಂಭಿಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ ಎಂದು ಸ್ಥಳೀಯ ಸುದ್ದಿಸಂಸ್ಥೆಗಳು ವರದಿ ಮಾಡಿವೆ.

“ಮಗುವನ್ನು ಮಾರಾಟ ಮಾಡಿದ ದಂಪತಿಯನ್ನು ಭೇಟಿ ಮಾಡಿ, ಮಗುವನ್ನು ಮರಳಿ ತರುವಂತೆ ನಗರ ವ್ಯವಸ್ಥಾಪಕ ಮತ್ತು ವಾರ್ಡ್ ಆಯುಕ್ತರಿಗೆ ಸೂಚಿಸಿದ್ದೇನೆ. ಅವರಿಗೆ ಸಮಸ್ಯೆಗಳು ಎದುರಾದರೆ, ಸ್ಥಳೀಯ ಪೊಲೀಸ್ ಠಾಣೆಯು ಮಗುವನ್ನು ಪೋಷಿಸಲು ಸಹಾಯ ಮಾಡುತ್ತದೆ. ಜೊತೆಗೆ ಬಿಹಾರದ ಪಾಟ್ನಾದಲ್ಲಿ ಇಟ್ಟಿಗೆ ಭಟ್ಟಿಯಲ್ಲಿ ಕೆಲಸ ಮಾಡುತ್ತಿರುವ ಗುಡಿಯಾ ದೇವಿಯ ಇಬ್ಬರು ಮಕ್ಕಳನ್ನು ಕರೆತರಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ” ಎಂದು ಉಪವಿಭಾಗಾಧಿಕಾರಿ ರವಿ ಆನಂದ್ ಹೇಳಿದ್ದಾರೆ.


ಇದನ್ನೂ ಓದಿ: ಕುಂದಾಪುರ ಕಾಲೇಜಿನಲ್ಲೂ ‘ಕೇಸರಿ ಶಾಲು ವಿವಾದ’; ಹಿಜಾಬ್‌ ಧರಿಸಿ ಬರದಂತೆ ಪ್ರಿನ್ಸಿಪಾಲ್‌ ಹೇಳಿದ್ದಾರೆಂದು ಪೋಷಕರ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....