Homeಮುಖಪುಟಜಾರ್ಖಂಡ್ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ | ಪ್ರಧಾನಿ ಮೋದಿ ಚಿತ್ರಗಳೆ ಹೈಲೈಟ್; ಆದಿವಾಸಿ ನಾಯಕರ ನಿರ್ಲಕ್ಷ್ಯ!

ಜಾರ್ಖಂಡ್ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ | ಪ್ರಧಾನಿ ಮೋದಿ ಚಿತ್ರಗಳೆ ಹೈಲೈಟ್; ಆದಿವಾಸಿ ನಾಯಕರ ನಿರ್ಲಕ್ಷ್ಯ!

- Advertisement -
- Advertisement -

2024ರ ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ, ಬಿಜೆಪಿ ತನ್ನ ಪ್ರಣಾಳಿಕೆಯನ್ನು ಶನಿವಾರ ಬಿಡುಗಡೆ ಮಾಡಿದೆ. ಆದರೆ ಅದರಲ್ಲಿ ಇರುವ ಪ್ರಧಾನ ವಿಚಾರ ಏನೆಂದರೆ ಪ್ರತಿ ಮೂರನೇ ಪುಟದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಚಿತ್ರ. ಸುಮಾರು 76 ಪುಟಗಳ ಪ್ರಣಾಳಿಕೆಯಲ್ಲಿ ಮೋದಿ ಅವರ ಚಿತ್ರ 23 ಬಾರಿ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ. ಜಾರ್ಖಂಡ್ ಬಿಜೆಪಿ ಪ್ರಣಾಳಿಕೆ

ಇದಕ್ಕೆ ವ್ಯತಿರಿಕ್ತವಾಗಿ, ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿಗಳಾದ ಬಾಬುಲಾಲ್ ಮರಾಂಡಿ ಮತ್ತು ಅರ್ಜುನ್ ಮುಂಡಾ ಸೇರಿದಂತೆ ಪಕ್ಷದ ಪ್ರಮುಖ ಆದಿವಾಸಿ ನಾಯಕರ ಚಿತ್ರ ಬಹುತೇಕ ಕಾಣಿಸಿಕೊಂಡಿಲ್ಲ ಎಂದು ವರದಿ ಉಲ್ಲೇಖಿಸಿದೆ. ಜೊತೆಗೆ, ಪ್ರಣಾಳಿಕೆಯಲ್ಲಿ ಮಹಿಳಾ ನಾಯಕರ ಪ್ರಾತಿನಿಧ್ಯದ ಕೊರತೆಯಿದ್ದು, ವಿಶೇಷವಾಗಿ ಆದಿವಾಸಿ ಮಹಿಳೆಯರಿಗೆ, ಮಹಿಳಾ ಸಬಲೀಕರಣಕ್ಕೆ ಪಕ್ಷಕ್ಕೆ ಇರುವ ಬದ್ಧತೆಯ ಬಗ್ಗೆ ಪ್ರಶ್ನೆಗಳು ಮುನ್ನಲೆಗೆ ಬಂದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪ್ರಣಾಳಿಕೆಯ ಹಲವಾರು ಪುಟಗಳು ಮೋದಿಯವರ ಫೋಟೋಗಳಿಗೆ ಮಾತ್ರ ಸಂಪೂರ್ಣವಾಗಿ ಮೀಸಲಾಗಿದ್ದು, ಆದಿವಾಸಿ ನಾಯಕ ಮರಾಂಡಿ ಅವರ ಕೇವಲ ಎರಡು, ಅದೂ ಕೂಡಾ ಚಿಕ್ಕದಾದ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರಣಾಳಿಕೆಯಲ್ಲಿ ಮೋದಿ ಕೇಂದ್ರ ಸ್ಥಾನದಲ್ಲಿರುವ ಛಾಯಾಚಿತ್ರದ ಹಿನ್ನೆಲೆಯಲ್ಲಿ ಮಾತ್ರ ಅರ್ಜುನ್ ಮುಂಡಾ ಅವರ ಚಿತ್ರ ಕಾಣಿಸಿಕೊಂಡಿದೆ. ಜಾರ್ಖಂಡ್ ಬಿಜೆಪಿ ಪ್ರಣಾಳಿಕೆ

ಬಿರ್ಸಾ ಮುಂಡಾ (1875-1900), ತೆಲಂಗಾ ಖರಿಯಾ (1806-1880), ಮತ್ತು ವೀರ್ ಬುಧು ಭಗತ್ (1792-1832) ನಂತಹ ಆದಿವಾಸಿ ಐಕಾನ್‌ಗಳಿಗೆ ಮೋದಿ ಗೌರವ ಸಲ್ಲಿಸುತ್ತಿರುವ ಚಿತ್ರಗಳು ಪ್ರಣಾಳಿಕೆಯಲ್ಲಿ ಕಂಡುಬರುತ್ತದೆ. ಮತ್ತೊಂದು ಚಿತ್ರದಲ್ಲಿ, ಮಹಿಳೆಯರ ಗುಂಪಿನ ನಡುವೆ ಮೋದಿಯನ್ನು ತೋರಿಸಲಾಗಿದೆ.

ಉಳಿದಂತೆ, ಪ್ರಧಾನ ಮಂತ್ರಿ ಕಿಸಾನ್ ಮಂಧನ್ ಯೋಜನೆಯಿಂದ ಪ್ರಯೋಜನಗಳನ್ನು ವಿತರಿಸುತ್ತಿರುವ ಮೋದಿ ಚಿತ್ರವಿದೆ. ಮತ್ತೊಂದು ಫೋಟೋದಲ್ಲಿ ಅವರು ಕುಂಬಾರರೊಬ್ಬರಿಂದ ಸಂವಹನ ನಡೆಸುತ್ತಿರುವುದು ಮತ್ತು ಇನ್ನೊಂದು ಚಿತ್ರ ಅವರು ಮಕ್ಕಳೊಂದಿಗೆ ತಮಾಷೆಯಾಗಿ ತೊಡಗಿಸಿಕೊಂಡಿರುವಂತೆ ತೋರಿಸಲಾಗಿದೆ.

ಅಷ್ಟೆ ಅಲ್ಲದೆ ಪ್ರಣಾಳಿಕೆಯ 67 ನೇ ಪುಟದಲ್ಲಿರುವ ದೊಡ್ಡ ಗಾತ್ರದ ಛಾಯಾಚಿತ್ರವು ಕೈಗಳನ್ನು ಮಡಚಿ, ಹಣೆಯ ಮೇಲೆ ಧಾರ್ಮಿಕ ಚಿಹ್ನೆಗಳು ಇರುವ ಚಿತ್ರನ್ನು ಹಾಕಲಾಗಿದ್ದು, ಅದರಲ್ಲಿ ಅವರು ಆರ್‌ಎಸ್‌ಎಸ್ ಕಾರ್ಯಕರ್ತ ಎಂಬ ಗುರುತನ್ನು ಸೂಚಿಸಲಾಗಿದೆ. ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಹೊರತುಪಡಿಸಿ, ಪಕ್ಷದ ಯಾವುದೇ ಪ್ರಮುಖ ನಾಯಕರು ಪ್ರಣಾಳಿಕೆಯಲ್ಲಿ ಕಾಣಿಸಿಕೊಂಡಿಲ್ಲ

ಅಷ್ಟೆ ಅಲ್ಲದೆ, ಬಿಜೆಪಿ ಜಾರ್ಖಂಡ್ ಪ್ರಣಾಳಿಕೆಯು ಜಾರ್ಖಂಡ್‌ನ ದಲಿತ ಮತ್ತು ಒಬಿಸಿ ನಾಯಕರನ್ನು ಸಹ ಕೈಬಿಟ್ಟಿದೆ. ರಾಜ್ಯದಲ್ಲಿ ದಲಿತ (12%) ಮತ್ತು OBC ಸಮುದಾಯದ ಕಲ್ಯಾಣಕ್ಕಾಗಿ ಪಕ್ಷವು ಯಾವುದೇ ಗಣನೀಯ ಕಾರ್ಯಕ್ರಮವನ್ನು ನೀಡಿಲ್ಲ.

ರಾಜ್ಯದ ಇತರ ಹಿಂದುಳಿದ ಜಾತಿಗಳಿಗೆ ಪಕ್ಷವು OBC ಗಳಿಗೆ 27% ಮೀಸಲಾತಿಗೆ ನೀಡುವುದಾಗಿ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ. ಅದಾಗ್ಯೂ, JMM ನೇತೃತ್ವದ ಹೇಮಂತ್ ಸೊರೆನ್ ಸರ್ಕಾರವು ವರ್ಷಗಳ ಹಿಂದೆಯೆ OBC ಮೀಸಲಾತಿಯನ್ನು ಈ ಮಟ್ಟಕ್ಕೆ ಹೆಚ್ಚಿಸಲು ಈಗಾಗಲೇ ನಿರ್ಧರಿಸಿದೆ.

ಇದಲ್ಲದೆ, ಸಂತಾಲ್ ಪರಗಣದಲ್ಲಿ “ಬಾಂಗ್ಲಾದೇಶಿ ನುಸುಳುಕೋರರ” ಬೆದರಿಕೆಯನ್ನು ಒತ್ತಿಹೇಳುವ ಮೂಲಕ ಆದಿವಾಸಿ ಮತದಾರರನ್ನು ಒಟ್ಟುಗೂಡಿಸುವ ಪ್ರಯತ್ನವನ್ನು ಬಿಜೆಪಿ ಮಾಡಿದ್ದರೂ, ರಾಜ್ಯದ ಮುಸ್ಲಿಂ ಅಲ್ಪಸಂಖ್ಯಾತರ ಕಡೆಗೆ ಯಾವುದೇ ಮಹತ್ವದ ಸೂಚನೆಗಳನ್ನು ನೀಡಿಲ್ಲ. ಮುಸ್ಲಿಂ ಅಲ್ಪಸಂಖ್ಯಾತರ (14.5%) ಜೊತೆಗೆ, ಜನಸಂಖ್ಯೆಯ 4.3% ರಷ್ಟಿರುವ ಕ್ರಿಶ್ಚಿಯನ್ ಸಮುದಾಯವನ್ನು ಕೂಡಾ ಬಿಜೆಪಿ ಪ್ರಣಾಳಿಕೆಯಲ್ಲಿ ನಿರ್ಲಕ್ಷಿಸಲಾಗಿದೆ.

ಇದನ್ನೂ ಓದಿ: ಕೋವಿಡ್ ಹಗರಣ : ಯಡಿಯೂರಪ್ಪ, ಶ್ರೀರಾಮುಲು ವಿರುದ್ದ ಕಾನೂನು ಕ್ರಮಕ್ಕೆ ನ್ಯಾ. ಡಿ’ಕುನ್ಹಾ ಆಯೋಗ ಶಿಫಾರಸು

ಕೋವಿಡ್ ಹಗರಣ : ಯಡಿಯೂರಪ್ಪ, ಶ್ರೀರಾಮುಲು ವಿರುದ್ದ ಕಾನೂನು ಕ್ರಮಕ್ಕೆ ನ್ಯಾ. ಡಿ’ಕುನ್ಹಾ ಆಯೋಗ ಶಿಫಾರಸು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...