Homeಮುಖಪುಟಜಾರ್ಖಂಡ್ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ | ಪ್ರಧಾನಿ ಮೋದಿ ಚಿತ್ರಗಳೆ ಹೈಲೈಟ್; ಆದಿವಾಸಿ ನಾಯಕರ ನಿರ್ಲಕ್ಷ್ಯ!

ಜಾರ್ಖಂಡ್ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ | ಪ್ರಧಾನಿ ಮೋದಿ ಚಿತ್ರಗಳೆ ಹೈಲೈಟ್; ಆದಿವಾಸಿ ನಾಯಕರ ನಿರ್ಲಕ್ಷ್ಯ!

- Advertisement -
- Advertisement -

2024ರ ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ, ಬಿಜೆಪಿ ತನ್ನ ಪ್ರಣಾಳಿಕೆಯನ್ನು ಶನಿವಾರ ಬಿಡುಗಡೆ ಮಾಡಿದೆ. ಆದರೆ ಅದರಲ್ಲಿ ಇರುವ ಪ್ರಧಾನ ವಿಚಾರ ಏನೆಂದರೆ ಪ್ರತಿ ಮೂರನೇ ಪುಟದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಚಿತ್ರ. ಸುಮಾರು 76 ಪುಟಗಳ ಪ್ರಣಾಳಿಕೆಯಲ್ಲಿ ಮೋದಿ ಅವರ ಚಿತ್ರ 23 ಬಾರಿ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ. ಜಾರ್ಖಂಡ್ ಬಿಜೆಪಿ ಪ್ರಣಾಳಿಕೆ

ಇದಕ್ಕೆ ವ್ಯತಿರಿಕ್ತವಾಗಿ, ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿಗಳಾದ ಬಾಬುಲಾಲ್ ಮರಾಂಡಿ ಮತ್ತು ಅರ್ಜುನ್ ಮುಂಡಾ ಸೇರಿದಂತೆ ಪಕ್ಷದ ಪ್ರಮುಖ ಆದಿವಾಸಿ ನಾಯಕರ ಚಿತ್ರ ಬಹುತೇಕ ಕಾಣಿಸಿಕೊಂಡಿಲ್ಲ ಎಂದು ವರದಿ ಉಲ್ಲೇಖಿಸಿದೆ. ಜೊತೆಗೆ, ಪ್ರಣಾಳಿಕೆಯಲ್ಲಿ ಮಹಿಳಾ ನಾಯಕರ ಪ್ರಾತಿನಿಧ್ಯದ ಕೊರತೆಯಿದ್ದು, ವಿಶೇಷವಾಗಿ ಆದಿವಾಸಿ ಮಹಿಳೆಯರಿಗೆ, ಮಹಿಳಾ ಸಬಲೀಕರಣಕ್ಕೆ ಪಕ್ಷಕ್ಕೆ ಇರುವ ಬದ್ಧತೆಯ ಬಗ್ಗೆ ಪ್ರಶ್ನೆಗಳು ಮುನ್ನಲೆಗೆ ಬಂದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪ್ರಣಾಳಿಕೆಯ ಹಲವಾರು ಪುಟಗಳು ಮೋದಿಯವರ ಫೋಟೋಗಳಿಗೆ ಮಾತ್ರ ಸಂಪೂರ್ಣವಾಗಿ ಮೀಸಲಾಗಿದ್ದು, ಆದಿವಾಸಿ ನಾಯಕ ಮರಾಂಡಿ ಅವರ ಕೇವಲ ಎರಡು, ಅದೂ ಕೂಡಾ ಚಿಕ್ಕದಾದ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರಣಾಳಿಕೆಯಲ್ಲಿ ಮೋದಿ ಕೇಂದ್ರ ಸ್ಥಾನದಲ್ಲಿರುವ ಛಾಯಾಚಿತ್ರದ ಹಿನ್ನೆಲೆಯಲ್ಲಿ ಮಾತ್ರ ಅರ್ಜುನ್ ಮುಂಡಾ ಅವರ ಚಿತ್ರ ಕಾಣಿಸಿಕೊಂಡಿದೆ. ಜಾರ್ಖಂಡ್ ಬಿಜೆಪಿ ಪ್ರಣಾಳಿಕೆ

ಬಿರ್ಸಾ ಮುಂಡಾ (1875-1900), ತೆಲಂಗಾ ಖರಿಯಾ (1806-1880), ಮತ್ತು ವೀರ್ ಬುಧು ಭಗತ್ (1792-1832) ನಂತಹ ಆದಿವಾಸಿ ಐಕಾನ್‌ಗಳಿಗೆ ಮೋದಿ ಗೌರವ ಸಲ್ಲಿಸುತ್ತಿರುವ ಚಿತ್ರಗಳು ಪ್ರಣಾಳಿಕೆಯಲ್ಲಿ ಕಂಡುಬರುತ್ತದೆ. ಮತ್ತೊಂದು ಚಿತ್ರದಲ್ಲಿ, ಮಹಿಳೆಯರ ಗುಂಪಿನ ನಡುವೆ ಮೋದಿಯನ್ನು ತೋರಿಸಲಾಗಿದೆ.

ಉಳಿದಂತೆ, ಪ್ರಧಾನ ಮಂತ್ರಿ ಕಿಸಾನ್ ಮಂಧನ್ ಯೋಜನೆಯಿಂದ ಪ್ರಯೋಜನಗಳನ್ನು ವಿತರಿಸುತ್ತಿರುವ ಮೋದಿ ಚಿತ್ರವಿದೆ. ಮತ್ತೊಂದು ಫೋಟೋದಲ್ಲಿ ಅವರು ಕುಂಬಾರರೊಬ್ಬರಿಂದ ಸಂವಹನ ನಡೆಸುತ್ತಿರುವುದು ಮತ್ತು ಇನ್ನೊಂದು ಚಿತ್ರ ಅವರು ಮಕ್ಕಳೊಂದಿಗೆ ತಮಾಷೆಯಾಗಿ ತೊಡಗಿಸಿಕೊಂಡಿರುವಂತೆ ತೋರಿಸಲಾಗಿದೆ.

ಅಷ್ಟೆ ಅಲ್ಲದೆ ಪ್ರಣಾಳಿಕೆಯ 67 ನೇ ಪುಟದಲ್ಲಿರುವ ದೊಡ್ಡ ಗಾತ್ರದ ಛಾಯಾಚಿತ್ರವು ಕೈಗಳನ್ನು ಮಡಚಿ, ಹಣೆಯ ಮೇಲೆ ಧಾರ್ಮಿಕ ಚಿಹ್ನೆಗಳು ಇರುವ ಚಿತ್ರನ್ನು ಹಾಕಲಾಗಿದ್ದು, ಅದರಲ್ಲಿ ಅವರು ಆರ್‌ಎಸ್‌ಎಸ್ ಕಾರ್ಯಕರ್ತ ಎಂಬ ಗುರುತನ್ನು ಸೂಚಿಸಲಾಗಿದೆ. ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಹೊರತುಪಡಿಸಿ, ಪಕ್ಷದ ಯಾವುದೇ ಪ್ರಮುಖ ನಾಯಕರು ಪ್ರಣಾಳಿಕೆಯಲ್ಲಿ ಕಾಣಿಸಿಕೊಂಡಿಲ್ಲ

ಅಷ್ಟೆ ಅಲ್ಲದೆ, ಬಿಜೆಪಿ ಜಾರ್ಖಂಡ್ ಪ್ರಣಾಳಿಕೆಯು ಜಾರ್ಖಂಡ್‌ನ ದಲಿತ ಮತ್ತು ಒಬಿಸಿ ನಾಯಕರನ್ನು ಸಹ ಕೈಬಿಟ್ಟಿದೆ. ರಾಜ್ಯದಲ್ಲಿ ದಲಿತ (12%) ಮತ್ತು OBC ಸಮುದಾಯದ ಕಲ್ಯಾಣಕ್ಕಾಗಿ ಪಕ್ಷವು ಯಾವುದೇ ಗಣನೀಯ ಕಾರ್ಯಕ್ರಮವನ್ನು ನೀಡಿಲ್ಲ.

ರಾಜ್ಯದ ಇತರ ಹಿಂದುಳಿದ ಜಾತಿಗಳಿಗೆ ಪಕ್ಷವು OBC ಗಳಿಗೆ 27% ಮೀಸಲಾತಿಗೆ ನೀಡುವುದಾಗಿ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ. ಅದಾಗ್ಯೂ, JMM ನೇತೃತ್ವದ ಹೇಮಂತ್ ಸೊರೆನ್ ಸರ್ಕಾರವು ವರ್ಷಗಳ ಹಿಂದೆಯೆ OBC ಮೀಸಲಾತಿಯನ್ನು ಈ ಮಟ್ಟಕ್ಕೆ ಹೆಚ್ಚಿಸಲು ಈಗಾಗಲೇ ನಿರ್ಧರಿಸಿದೆ.

ಇದಲ್ಲದೆ, ಸಂತಾಲ್ ಪರಗಣದಲ್ಲಿ “ಬಾಂಗ್ಲಾದೇಶಿ ನುಸುಳುಕೋರರ” ಬೆದರಿಕೆಯನ್ನು ಒತ್ತಿಹೇಳುವ ಮೂಲಕ ಆದಿವಾಸಿ ಮತದಾರರನ್ನು ಒಟ್ಟುಗೂಡಿಸುವ ಪ್ರಯತ್ನವನ್ನು ಬಿಜೆಪಿ ಮಾಡಿದ್ದರೂ, ರಾಜ್ಯದ ಮುಸ್ಲಿಂ ಅಲ್ಪಸಂಖ್ಯಾತರ ಕಡೆಗೆ ಯಾವುದೇ ಮಹತ್ವದ ಸೂಚನೆಗಳನ್ನು ನೀಡಿಲ್ಲ. ಮುಸ್ಲಿಂ ಅಲ್ಪಸಂಖ್ಯಾತರ (14.5%) ಜೊತೆಗೆ, ಜನಸಂಖ್ಯೆಯ 4.3% ರಷ್ಟಿರುವ ಕ್ರಿಶ್ಚಿಯನ್ ಸಮುದಾಯವನ್ನು ಕೂಡಾ ಬಿಜೆಪಿ ಪ್ರಣಾಳಿಕೆಯಲ್ಲಿ ನಿರ್ಲಕ್ಷಿಸಲಾಗಿದೆ.

ಇದನ್ನೂ ಓದಿ: ಕೋವಿಡ್ ಹಗರಣ : ಯಡಿಯೂರಪ್ಪ, ಶ್ರೀರಾಮುಲು ವಿರುದ್ದ ಕಾನೂನು ಕ್ರಮಕ್ಕೆ ನ್ಯಾ. ಡಿ’ಕುನ್ಹಾ ಆಯೋಗ ಶಿಫಾರಸು

ಕೋವಿಡ್ ಹಗರಣ : ಯಡಿಯೂರಪ್ಪ, ಶ್ರೀರಾಮುಲು ವಿರುದ್ದ ಕಾನೂನು ಕ್ರಮಕ್ಕೆ ನ್ಯಾ. ಡಿ’ಕುನ್ಹಾ ಆಯೋಗ ಶಿಫಾರಸು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...