Homeಮುಖಪುಟಜಾರ್ಖಂಡ್ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ | ಪ್ರಧಾನಿ ಮೋದಿ ಚಿತ್ರಗಳೆ ಹೈಲೈಟ್; ಆದಿವಾಸಿ ನಾಯಕರ ನಿರ್ಲಕ್ಷ್ಯ!

ಜಾರ್ಖಂಡ್ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ | ಪ್ರಧಾನಿ ಮೋದಿ ಚಿತ್ರಗಳೆ ಹೈಲೈಟ್; ಆದಿವಾಸಿ ನಾಯಕರ ನಿರ್ಲಕ್ಷ್ಯ!

- Advertisement -
- Advertisement -

2024ರ ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ, ಬಿಜೆಪಿ ತನ್ನ ಪ್ರಣಾಳಿಕೆಯನ್ನು ಶನಿವಾರ ಬಿಡುಗಡೆ ಮಾಡಿದೆ. ಆದರೆ ಅದರಲ್ಲಿ ಇರುವ ಪ್ರಧಾನ ವಿಚಾರ ಏನೆಂದರೆ ಪ್ರತಿ ಮೂರನೇ ಪುಟದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಚಿತ್ರ. ಸುಮಾರು 76 ಪುಟಗಳ ಪ್ರಣಾಳಿಕೆಯಲ್ಲಿ ಮೋದಿ ಅವರ ಚಿತ್ರ 23 ಬಾರಿ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ. ಜಾರ್ಖಂಡ್ ಬಿಜೆಪಿ ಪ್ರಣಾಳಿಕೆ

ಇದಕ್ಕೆ ವ್ಯತಿರಿಕ್ತವಾಗಿ, ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿಗಳಾದ ಬಾಬುಲಾಲ್ ಮರಾಂಡಿ ಮತ್ತು ಅರ್ಜುನ್ ಮುಂಡಾ ಸೇರಿದಂತೆ ಪಕ್ಷದ ಪ್ರಮುಖ ಆದಿವಾಸಿ ನಾಯಕರ ಚಿತ್ರ ಬಹುತೇಕ ಕಾಣಿಸಿಕೊಂಡಿಲ್ಲ ಎಂದು ವರದಿ ಉಲ್ಲೇಖಿಸಿದೆ. ಜೊತೆಗೆ, ಪ್ರಣಾಳಿಕೆಯಲ್ಲಿ ಮಹಿಳಾ ನಾಯಕರ ಪ್ರಾತಿನಿಧ್ಯದ ಕೊರತೆಯಿದ್ದು, ವಿಶೇಷವಾಗಿ ಆದಿವಾಸಿ ಮಹಿಳೆಯರಿಗೆ, ಮಹಿಳಾ ಸಬಲೀಕರಣಕ್ಕೆ ಪಕ್ಷಕ್ಕೆ ಇರುವ ಬದ್ಧತೆಯ ಬಗ್ಗೆ ಪ್ರಶ್ನೆಗಳು ಮುನ್ನಲೆಗೆ ಬಂದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪ್ರಣಾಳಿಕೆಯ ಹಲವಾರು ಪುಟಗಳು ಮೋದಿಯವರ ಫೋಟೋಗಳಿಗೆ ಮಾತ್ರ ಸಂಪೂರ್ಣವಾಗಿ ಮೀಸಲಾಗಿದ್ದು, ಆದಿವಾಸಿ ನಾಯಕ ಮರಾಂಡಿ ಅವರ ಕೇವಲ ಎರಡು, ಅದೂ ಕೂಡಾ ಚಿಕ್ಕದಾದ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರಣಾಳಿಕೆಯಲ್ಲಿ ಮೋದಿ ಕೇಂದ್ರ ಸ್ಥಾನದಲ್ಲಿರುವ ಛಾಯಾಚಿತ್ರದ ಹಿನ್ನೆಲೆಯಲ್ಲಿ ಮಾತ್ರ ಅರ್ಜುನ್ ಮುಂಡಾ ಅವರ ಚಿತ್ರ ಕಾಣಿಸಿಕೊಂಡಿದೆ. ಜಾರ್ಖಂಡ್ ಬಿಜೆಪಿ ಪ್ರಣಾಳಿಕೆ

ಬಿರ್ಸಾ ಮುಂಡಾ (1875-1900), ತೆಲಂಗಾ ಖರಿಯಾ (1806-1880), ಮತ್ತು ವೀರ್ ಬುಧು ಭಗತ್ (1792-1832) ನಂತಹ ಆದಿವಾಸಿ ಐಕಾನ್‌ಗಳಿಗೆ ಮೋದಿ ಗೌರವ ಸಲ್ಲಿಸುತ್ತಿರುವ ಚಿತ್ರಗಳು ಪ್ರಣಾಳಿಕೆಯಲ್ಲಿ ಕಂಡುಬರುತ್ತದೆ. ಮತ್ತೊಂದು ಚಿತ್ರದಲ್ಲಿ, ಮಹಿಳೆಯರ ಗುಂಪಿನ ನಡುವೆ ಮೋದಿಯನ್ನು ತೋರಿಸಲಾಗಿದೆ.

ಉಳಿದಂತೆ, ಪ್ರಧಾನ ಮಂತ್ರಿ ಕಿಸಾನ್ ಮಂಧನ್ ಯೋಜನೆಯಿಂದ ಪ್ರಯೋಜನಗಳನ್ನು ವಿತರಿಸುತ್ತಿರುವ ಮೋದಿ ಚಿತ್ರವಿದೆ. ಮತ್ತೊಂದು ಫೋಟೋದಲ್ಲಿ ಅವರು ಕುಂಬಾರರೊಬ್ಬರಿಂದ ಸಂವಹನ ನಡೆಸುತ್ತಿರುವುದು ಮತ್ತು ಇನ್ನೊಂದು ಚಿತ್ರ ಅವರು ಮಕ್ಕಳೊಂದಿಗೆ ತಮಾಷೆಯಾಗಿ ತೊಡಗಿಸಿಕೊಂಡಿರುವಂತೆ ತೋರಿಸಲಾಗಿದೆ.

ಅಷ್ಟೆ ಅಲ್ಲದೆ ಪ್ರಣಾಳಿಕೆಯ 67 ನೇ ಪುಟದಲ್ಲಿರುವ ದೊಡ್ಡ ಗಾತ್ರದ ಛಾಯಾಚಿತ್ರವು ಕೈಗಳನ್ನು ಮಡಚಿ, ಹಣೆಯ ಮೇಲೆ ಧಾರ್ಮಿಕ ಚಿಹ್ನೆಗಳು ಇರುವ ಚಿತ್ರನ್ನು ಹಾಕಲಾಗಿದ್ದು, ಅದರಲ್ಲಿ ಅವರು ಆರ್‌ಎಸ್‌ಎಸ್ ಕಾರ್ಯಕರ್ತ ಎಂಬ ಗುರುತನ್ನು ಸೂಚಿಸಲಾಗಿದೆ. ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಹೊರತುಪಡಿಸಿ, ಪಕ್ಷದ ಯಾವುದೇ ಪ್ರಮುಖ ನಾಯಕರು ಪ್ರಣಾಳಿಕೆಯಲ್ಲಿ ಕಾಣಿಸಿಕೊಂಡಿಲ್ಲ

ಅಷ್ಟೆ ಅಲ್ಲದೆ, ಬಿಜೆಪಿ ಜಾರ್ಖಂಡ್ ಪ್ರಣಾಳಿಕೆಯು ಜಾರ್ಖಂಡ್‌ನ ದಲಿತ ಮತ್ತು ಒಬಿಸಿ ನಾಯಕರನ್ನು ಸಹ ಕೈಬಿಟ್ಟಿದೆ. ರಾಜ್ಯದಲ್ಲಿ ದಲಿತ (12%) ಮತ್ತು OBC ಸಮುದಾಯದ ಕಲ್ಯಾಣಕ್ಕಾಗಿ ಪಕ್ಷವು ಯಾವುದೇ ಗಣನೀಯ ಕಾರ್ಯಕ್ರಮವನ್ನು ನೀಡಿಲ್ಲ.

ರಾಜ್ಯದ ಇತರ ಹಿಂದುಳಿದ ಜಾತಿಗಳಿಗೆ ಪಕ್ಷವು OBC ಗಳಿಗೆ 27% ಮೀಸಲಾತಿಗೆ ನೀಡುವುದಾಗಿ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ. ಅದಾಗ್ಯೂ, JMM ನೇತೃತ್ವದ ಹೇಮಂತ್ ಸೊರೆನ್ ಸರ್ಕಾರವು ವರ್ಷಗಳ ಹಿಂದೆಯೆ OBC ಮೀಸಲಾತಿಯನ್ನು ಈ ಮಟ್ಟಕ್ಕೆ ಹೆಚ್ಚಿಸಲು ಈಗಾಗಲೇ ನಿರ್ಧರಿಸಿದೆ.

ಇದಲ್ಲದೆ, ಸಂತಾಲ್ ಪರಗಣದಲ್ಲಿ “ಬಾಂಗ್ಲಾದೇಶಿ ನುಸುಳುಕೋರರ” ಬೆದರಿಕೆಯನ್ನು ಒತ್ತಿಹೇಳುವ ಮೂಲಕ ಆದಿವಾಸಿ ಮತದಾರರನ್ನು ಒಟ್ಟುಗೂಡಿಸುವ ಪ್ರಯತ್ನವನ್ನು ಬಿಜೆಪಿ ಮಾಡಿದ್ದರೂ, ರಾಜ್ಯದ ಮುಸ್ಲಿಂ ಅಲ್ಪಸಂಖ್ಯಾತರ ಕಡೆಗೆ ಯಾವುದೇ ಮಹತ್ವದ ಸೂಚನೆಗಳನ್ನು ನೀಡಿಲ್ಲ. ಮುಸ್ಲಿಂ ಅಲ್ಪಸಂಖ್ಯಾತರ (14.5%) ಜೊತೆಗೆ, ಜನಸಂಖ್ಯೆಯ 4.3% ರಷ್ಟಿರುವ ಕ್ರಿಶ್ಚಿಯನ್ ಸಮುದಾಯವನ್ನು ಕೂಡಾ ಬಿಜೆಪಿ ಪ್ರಣಾಳಿಕೆಯಲ್ಲಿ ನಿರ್ಲಕ್ಷಿಸಲಾಗಿದೆ.

ಇದನ್ನೂ ಓದಿ: ಕೋವಿಡ್ ಹಗರಣ : ಯಡಿಯೂರಪ್ಪ, ಶ್ರೀರಾಮುಲು ವಿರುದ್ದ ಕಾನೂನು ಕ್ರಮಕ್ಕೆ ನ್ಯಾ. ಡಿ’ಕುನ್ಹಾ ಆಯೋಗ ಶಿಫಾರಸು

ಕೋವಿಡ್ ಹಗರಣ : ಯಡಿಯೂರಪ್ಪ, ಶ್ರೀರಾಮುಲು ವಿರುದ್ದ ಕಾನೂನು ಕ್ರಮಕ್ಕೆ ನ್ಯಾ. ಡಿ’ಕುನ್ಹಾ ಆಯೋಗ ಶಿಫಾರಸು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...