Homeಮುಖಪುಟಜಾರ್ಖಂಡ್ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ | ಪ್ರಧಾನಿ ಮೋದಿ ಚಿತ್ರಗಳೆ ಹೈಲೈಟ್; ಆದಿವಾಸಿ ನಾಯಕರ ನಿರ್ಲಕ್ಷ್ಯ!

ಜಾರ್ಖಂಡ್ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ | ಪ್ರಧಾನಿ ಮೋದಿ ಚಿತ್ರಗಳೆ ಹೈಲೈಟ್; ಆದಿವಾಸಿ ನಾಯಕರ ನಿರ್ಲಕ್ಷ್ಯ!

- Advertisement -
- Advertisement -

2024ರ ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ, ಬಿಜೆಪಿ ತನ್ನ ಪ್ರಣಾಳಿಕೆಯನ್ನು ಶನಿವಾರ ಬಿಡುಗಡೆ ಮಾಡಿದೆ. ಆದರೆ ಅದರಲ್ಲಿ ಇರುವ ಪ್ರಧಾನ ವಿಚಾರ ಏನೆಂದರೆ ಪ್ರತಿ ಮೂರನೇ ಪುಟದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಚಿತ್ರ. ಸುಮಾರು 76 ಪುಟಗಳ ಪ್ರಣಾಳಿಕೆಯಲ್ಲಿ ಮೋದಿ ಅವರ ಚಿತ್ರ 23 ಬಾರಿ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ. ಜಾರ್ಖಂಡ್ ಬಿಜೆಪಿ ಪ್ರಣಾಳಿಕೆ

ಇದಕ್ಕೆ ವ್ಯತಿರಿಕ್ತವಾಗಿ, ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿಗಳಾದ ಬಾಬುಲಾಲ್ ಮರಾಂಡಿ ಮತ್ತು ಅರ್ಜುನ್ ಮುಂಡಾ ಸೇರಿದಂತೆ ಪಕ್ಷದ ಪ್ರಮುಖ ಆದಿವಾಸಿ ನಾಯಕರ ಚಿತ್ರ ಬಹುತೇಕ ಕಾಣಿಸಿಕೊಂಡಿಲ್ಲ ಎಂದು ವರದಿ ಉಲ್ಲೇಖಿಸಿದೆ. ಜೊತೆಗೆ, ಪ್ರಣಾಳಿಕೆಯಲ್ಲಿ ಮಹಿಳಾ ನಾಯಕರ ಪ್ರಾತಿನಿಧ್ಯದ ಕೊರತೆಯಿದ್ದು, ವಿಶೇಷವಾಗಿ ಆದಿವಾಸಿ ಮಹಿಳೆಯರಿಗೆ, ಮಹಿಳಾ ಸಬಲೀಕರಣಕ್ಕೆ ಪಕ್ಷಕ್ಕೆ ಇರುವ ಬದ್ಧತೆಯ ಬಗ್ಗೆ ಪ್ರಶ್ನೆಗಳು ಮುನ್ನಲೆಗೆ ಬಂದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪ್ರಣಾಳಿಕೆಯ ಹಲವಾರು ಪುಟಗಳು ಮೋದಿಯವರ ಫೋಟೋಗಳಿಗೆ ಮಾತ್ರ ಸಂಪೂರ್ಣವಾಗಿ ಮೀಸಲಾಗಿದ್ದು, ಆದಿವಾಸಿ ನಾಯಕ ಮರಾಂಡಿ ಅವರ ಕೇವಲ ಎರಡು, ಅದೂ ಕೂಡಾ ಚಿಕ್ಕದಾದ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರಣಾಳಿಕೆಯಲ್ಲಿ ಮೋದಿ ಕೇಂದ್ರ ಸ್ಥಾನದಲ್ಲಿರುವ ಛಾಯಾಚಿತ್ರದ ಹಿನ್ನೆಲೆಯಲ್ಲಿ ಮಾತ್ರ ಅರ್ಜುನ್ ಮುಂಡಾ ಅವರ ಚಿತ್ರ ಕಾಣಿಸಿಕೊಂಡಿದೆ. ಜಾರ್ಖಂಡ್ ಬಿಜೆಪಿ ಪ್ರಣಾಳಿಕೆ

ಬಿರ್ಸಾ ಮುಂಡಾ (1875-1900), ತೆಲಂಗಾ ಖರಿಯಾ (1806-1880), ಮತ್ತು ವೀರ್ ಬುಧು ಭಗತ್ (1792-1832) ನಂತಹ ಆದಿವಾಸಿ ಐಕಾನ್‌ಗಳಿಗೆ ಮೋದಿ ಗೌರವ ಸಲ್ಲಿಸುತ್ತಿರುವ ಚಿತ್ರಗಳು ಪ್ರಣಾಳಿಕೆಯಲ್ಲಿ ಕಂಡುಬರುತ್ತದೆ. ಮತ್ತೊಂದು ಚಿತ್ರದಲ್ಲಿ, ಮಹಿಳೆಯರ ಗುಂಪಿನ ನಡುವೆ ಮೋದಿಯನ್ನು ತೋರಿಸಲಾಗಿದೆ.

ಉಳಿದಂತೆ, ಪ್ರಧಾನ ಮಂತ್ರಿ ಕಿಸಾನ್ ಮಂಧನ್ ಯೋಜನೆಯಿಂದ ಪ್ರಯೋಜನಗಳನ್ನು ವಿತರಿಸುತ್ತಿರುವ ಮೋದಿ ಚಿತ್ರವಿದೆ. ಮತ್ತೊಂದು ಫೋಟೋದಲ್ಲಿ ಅವರು ಕುಂಬಾರರೊಬ್ಬರಿಂದ ಸಂವಹನ ನಡೆಸುತ್ತಿರುವುದು ಮತ್ತು ಇನ್ನೊಂದು ಚಿತ್ರ ಅವರು ಮಕ್ಕಳೊಂದಿಗೆ ತಮಾಷೆಯಾಗಿ ತೊಡಗಿಸಿಕೊಂಡಿರುವಂತೆ ತೋರಿಸಲಾಗಿದೆ.

ಅಷ್ಟೆ ಅಲ್ಲದೆ ಪ್ರಣಾಳಿಕೆಯ 67 ನೇ ಪುಟದಲ್ಲಿರುವ ದೊಡ್ಡ ಗಾತ್ರದ ಛಾಯಾಚಿತ್ರವು ಕೈಗಳನ್ನು ಮಡಚಿ, ಹಣೆಯ ಮೇಲೆ ಧಾರ್ಮಿಕ ಚಿಹ್ನೆಗಳು ಇರುವ ಚಿತ್ರನ್ನು ಹಾಕಲಾಗಿದ್ದು, ಅದರಲ್ಲಿ ಅವರು ಆರ್‌ಎಸ್‌ಎಸ್ ಕಾರ್ಯಕರ್ತ ಎಂಬ ಗುರುತನ್ನು ಸೂಚಿಸಲಾಗಿದೆ. ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಹೊರತುಪಡಿಸಿ, ಪಕ್ಷದ ಯಾವುದೇ ಪ್ರಮುಖ ನಾಯಕರು ಪ್ರಣಾಳಿಕೆಯಲ್ಲಿ ಕಾಣಿಸಿಕೊಂಡಿಲ್ಲ

ಅಷ್ಟೆ ಅಲ್ಲದೆ, ಬಿಜೆಪಿ ಜಾರ್ಖಂಡ್ ಪ್ರಣಾಳಿಕೆಯು ಜಾರ್ಖಂಡ್‌ನ ದಲಿತ ಮತ್ತು ಒಬಿಸಿ ನಾಯಕರನ್ನು ಸಹ ಕೈಬಿಟ್ಟಿದೆ. ರಾಜ್ಯದಲ್ಲಿ ದಲಿತ (12%) ಮತ್ತು OBC ಸಮುದಾಯದ ಕಲ್ಯಾಣಕ್ಕಾಗಿ ಪಕ್ಷವು ಯಾವುದೇ ಗಣನೀಯ ಕಾರ್ಯಕ್ರಮವನ್ನು ನೀಡಿಲ್ಲ.

ರಾಜ್ಯದ ಇತರ ಹಿಂದುಳಿದ ಜಾತಿಗಳಿಗೆ ಪಕ್ಷವು OBC ಗಳಿಗೆ 27% ಮೀಸಲಾತಿಗೆ ನೀಡುವುದಾಗಿ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ. ಅದಾಗ್ಯೂ, JMM ನೇತೃತ್ವದ ಹೇಮಂತ್ ಸೊರೆನ್ ಸರ್ಕಾರವು ವರ್ಷಗಳ ಹಿಂದೆಯೆ OBC ಮೀಸಲಾತಿಯನ್ನು ಈ ಮಟ್ಟಕ್ಕೆ ಹೆಚ್ಚಿಸಲು ಈಗಾಗಲೇ ನಿರ್ಧರಿಸಿದೆ.

ಇದಲ್ಲದೆ, ಸಂತಾಲ್ ಪರಗಣದಲ್ಲಿ “ಬಾಂಗ್ಲಾದೇಶಿ ನುಸುಳುಕೋರರ” ಬೆದರಿಕೆಯನ್ನು ಒತ್ತಿಹೇಳುವ ಮೂಲಕ ಆದಿವಾಸಿ ಮತದಾರರನ್ನು ಒಟ್ಟುಗೂಡಿಸುವ ಪ್ರಯತ್ನವನ್ನು ಬಿಜೆಪಿ ಮಾಡಿದ್ದರೂ, ರಾಜ್ಯದ ಮುಸ್ಲಿಂ ಅಲ್ಪಸಂಖ್ಯಾತರ ಕಡೆಗೆ ಯಾವುದೇ ಮಹತ್ವದ ಸೂಚನೆಗಳನ್ನು ನೀಡಿಲ್ಲ. ಮುಸ್ಲಿಂ ಅಲ್ಪಸಂಖ್ಯಾತರ (14.5%) ಜೊತೆಗೆ, ಜನಸಂಖ್ಯೆಯ 4.3% ರಷ್ಟಿರುವ ಕ್ರಿಶ್ಚಿಯನ್ ಸಮುದಾಯವನ್ನು ಕೂಡಾ ಬಿಜೆಪಿ ಪ್ರಣಾಳಿಕೆಯಲ್ಲಿ ನಿರ್ಲಕ್ಷಿಸಲಾಗಿದೆ.

ಇದನ್ನೂ ಓದಿ: ಕೋವಿಡ್ ಹಗರಣ : ಯಡಿಯೂರಪ್ಪ, ಶ್ರೀರಾಮುಲು ವಿರುದ್ದ ಕಾನೂನು ಕ್ರಮಕ್ಕೆ ನ್ಯಾ. ಡಿ’ಕುನ್ಹಾ ಆಯೋಗ ಶಿಫಾರಸು

ಕೋವಿಡ್ ಹಗರಣ : ಯಡಿಯೂರಪ್ಪ, ಶ್ರೀರಾಮುಲು ವಿರುದ್ದ ಕಾನೂನು ಕ್ರಮಕ್ಕೆ ನ್ಯಾ. ಡಿ’ಕುನ್ಹಾ ಆಯೋಗ ಶಿಫಾರಸು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...