Homeಮುಖಪುಟಜಾರ್ಖಂಡ್ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ | ಪ್ರಧಾನಿ ಮೋದಿ ಚಿತ್ರಗಳೆ ಹೈಲೈಟ್; ಆದಿವಾಸಿ ನಾಯಕರ ನಿರ್ಲಕ್ಷ್ಯ!

ಜಾರ್ಖಂಡ್ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ | ಪ್ರಧಾನಿ ಮೋದಿ ಚಿತ್ರಗಳೆ ಹೈಲೈಟ್; ಆದಿವಾಸಿ ನಾಯಕರ ನಿರ್ಲಕ್ಷ್ಯ!

- Advertisement -
- Advertisement -

2024ರ ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ, ಬಿಜೆಪಿ ತನ್ನ ಪ್ರಣಾಳಿಕೆಯನ್ನು ಶನಿವಾರ ಬಿಡುಗಡೆ ಮಾಡಿದೆ. ಆದರೆ ಅದರಲ್ಲಿ ಇರುವ ಪ್ರಧಾನ ವಿಚಾರ ಏನೆಂದರೆ ಪ್ರತಿ ಮೂರನೇ ಪುಟದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಚಿತ್ರ. ಸುಮಾರು 76 ಪುಟಗಳ ಪ್ರಣಾಳಿಕೆಯಲ್ಲಿ ಮೋದಿ ಅವರ ಚಿತ್ರ 23 ಬಾರಿ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ. ಜಾರ್ಖಂಡ್ ಬಿಜೆಪಿ ಪ್ರಣಾಳಿಕೆ

ಇದಕ್ಕೆ ವ್ಯತಿರಿಕ್ತವಾಗಿ, ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿಗಳಾದ ಬಾಬುಲಾಲ್ ಮರಾಂಡಿ ಮತ್ತು ಅರ್ಜುನ್ ಮುಂಡಾ ಸೇರಿದಂತೆ ಪಕ್ಷದ ಪ್ರಮುಖ ಆದಿವಾಸಿ ನಾಯಕರ ಚಿತ್ರ ಬಹುತೇಕ ಕಾಣಿಸಿಕೊಂಡಿಲ್ಲ ಎಂದು ವರದಿ ಉಲ್ಲೇಖಿಸಿದೆ. ಜೊತೆಗೆ, ಪ್ರಣಾಳಿಕೆಯಲ್ಲಿ ಮಹಿಳಾ ನಾಯಕರ ಪ್ರಾತಿನಿಧ್ಯದ ಕೊರತೆಯಿದ್ದು, ವಿಶೇಷವಾಗಿ ಆದಿವಾಸಿ ಮಹಿಳೆಯರಿಗೆ, ಮಹಿಳಾ ಸಬಲೀಕರಣಕ್ಕೆ ಪಕ್ಷಕ್ಕೆ ಇರುವ ಬದ್ಧತೆಯ ಬಗ್ಗೆ ಪ್ರಶ್ನೆಗಳು ಮುನ್ನಲೆಗೆ ಬಂದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪ್ರಣಾಳಿಕೆಯ ಹಲವಾರು ಪುಟಗಳು ಮೋದಿಯವರ ಫೋಟೋಗಳಿಗೆ ಮಾತ್ರ ಸಂಪೂರ್ಣವಾಗಿ ಮೀಸಲಾಗಿದ್ದು, ಆದಿವಾಸಿ ನಾಯಕ ಮರಾಂಡಿ ಅವರ ಕೇವಲ ಎರಡು, ಅದೂ ಕೂಡಾ ಚಿಕ್ಕದಾದ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರಣಾಳಿಕೆಯಲ್ಲಿ ಮೋದಿ ಕೇಂದ್ರ ಸ್ಥಾನದಲ್ಲಿರುವ ಛಾಯಾಚಿತ್ರದ ಹಿನ್ನೆಲೆಯಲ್ಲಿ ಮಾತ್ರ ಅರ್ಜುನ್ ಮುಂಡಾ ಅವರ ಚಿತ್ರ ಕಾಣಿಸಿಕೊಂಡಿದೆ. ಜಾರ್ಖಂಡ್ ಬಿಜೆಪಿ ಪ್ರಣಾಳಿಕೆ

ಬಿರ್ಸಾ ಮುಂಡಾ (1875-1900), ತೆಲಂಗಾ ಖರಿಯಾ (1806-1880), ಮತ್ತು ವೀರ್ ಬುಧು ಭಗತ್ (1792-1832) ನಂತಹ ಆದಿವಾಸಿ ಐಕಾನ್‌ಗಳಿಗೆ ಮೋದಿ ಗೌರವ ಸಲ್ಲಿಸುತ್ತಿರುವ ಚಿತ್ರಗಳು ಪ್ರಣಾಳಿಕೆಯಲ್ಲಿ ಕಂಡುಬರುತ್ತದೆ. ಮತ್ತೊಂದು ಚಿತ್ರದಲ್ಲಿ, ಮಹಿಳೆಯರ ಗುಂಪಿನ ನಡುವೆ ಮೋದಿಯನ್ನು ತೋರಿಸಲಾಗಿದೆ.

ಉಳಿದಂತೆ, ಪ್ರಧಾನ ಮಂತ್ರಿ ಕಿಸಾನ್ ಮಂಧನ್ ಯೋಜನೆಯಿಂದ ಪ್ರಯೋಜನಗಳನ್ನು ವಿತರಿಸುತ್ತಿರುವ ಮೋದಿ ಚಿತ್ರವಿದೆ. ಮತ್ತೊಂದು ಫೋಟೋದಲ್ಲಿ ಅವರು ಕುಂಬಾರರೊಬ್ಬರಿಂದ ಸಂವಹನ ನಡೆಸುತ್ತಿರುವುದು ಮತ್ತು ಇನ್ನೊಂದು ಚಿತ್ರ ಅವರು ಮಕ್ಕಳೊಂದಿಗೆ ತಮಾಷೆಯಾಗಿ ತೊಡಗಿಸಿಕೊಂಡಿರುವಂತೆ ತೋರಿಸಲಾಗಿದೆ.

ಅಷ್ಟೆ ಅಲ್ಲದೆ ಪ್ರಣಾಳಿಕೆಯ 67 ನೇ ಪುಟದಲ್ಲಿರುವ ದೊಡ್ಡ ಗಾತ್ರದ ಛಾಯಾಚಿತ್ರವು ಕೈಗಳನ್ನು ಮಡಚಿ, ಹಣೆಯ ಮೇಲೆ ಧಾರ್ಮಿಕ ಚಿಹ್ನೆಗಳು ಇರುವ ಚಿತ್ರನ್ನು ಹಾಕಲಾಗಿದ್ದು, ಅದರಲ್ಲಿ ಅವರು ಆರ್‌ಎಸ್‌ಎಸ್ ಕಾರ್ಯಕರ್ತ ಎಂಬ ಗುರುತನ್ನು ಸೂಚಿಸಲಾಗಿದೆ. ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಹೊರತುಪಡಿಸಿ, ಪಕ್ಷದ ಯಾವುದೇ ಪ್ರಮುಖ ನಾಯಕರು ಪ್ರಣಾಳಿಕೆಯಲ್ಲಿ ಕಾಣಿಸಿಕೊಂಡಿಲ್ಲ

ಅಷ್ಟೆ ಅಲ್ಲದೆ, ಬಿಜೆಪಿ ಜಾರ್ಖಂಡ್ ಪ್ರಣಾಳಿಕೆಯು ಜಾರ್ಖಂಡ್‌ನ ದಲಿತ ಮತ್ತು ಒಬಿಸಿ ನಾಯಕರನ್ನು ಸಹ ಕೈಬಿಟ್ಟಿದೆ. ರಾಜ್ಯದಲ್ಲಿ ದಲಿತ (12%) ಮತ್ತು OBC ಸಮುದಾಯದ ಕಲ್ಯಾಣಕ್ಕಾಗಿ ಪಕ್ಷವು ಯಾವುದೇ ಗಣನೀಯ ಕಾರ್ಯಕ್ರಮವನ್ನು ನೀಡಿಲ್ಲ.

ರಾಜ್ಯದ ಇತರ ಹಿಂದುಳಿದ ಜಾತಿಗಳಿಗೆ ಪಕ್ಷವು OBC ಗಳಿಗೆ 27% ಮೀಸಲಾತಿಗೆ ನೀಡುವುದಾಗಿ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ. ಅದಾಗ್ಯೂ, JMM ನೇತೃತ್ವದ ಹೇಮಂತ್ ಸೊರೆನ್ ಸರ್ಕಾರವು ವರ್ಷಗಳ ಹಿಂದೆಯೆ OBC ಮೀಸಲಾತಿಯನ್ನು ಈ ಮಟ್ಟಕ್ಕೆ ಹೆಚ್ಚಿಸಲು ಈಗಾಗಲೇ ನಿರ್ಧರಿಸಿದೆ.

ಇದಲ್ಲದೆ, ಸಂತಾಲ್ ಪರಗಣದಲ್ಲಿ “ಬಾಂಗ್ಲಾದೇಶಿ ನುಸುಳುಕೋರರ” ಬೆದರಿಕೆಯನ್ನು ಒತ್ತಿಹೇಳುವ ಮೂಲಕ ಆದಿವಾಸಿ ಮತದಾರರನ್ನು ಒಟ್ಟುಗೂಡಿಸುವ ಪ್ರಯತ್ನವನ್ನು ಬಿಜೆಪಿ ಮಾಡಿದ್ದರೂ, ರಾಜ್ಯದ ಮುಸ್ಲಿಂ ಅಲ್ಪಸಂಖ್ಯಾತರ ಕಡೆಗೆ ಯಾವುದೇ ಮಹತ್ವದ ಸೂಚನೆಗಳನ್ನು ನೀಡಿಲ್ಲ. ಮುಸ್ಲಿಂ ಅಲ್ಪಸಂಖ್ಯಾತರ (14.5%) ಜೊತೆಗೆ, ಜನಸಂಖ್ಯೆಯ 4.3% ರಷ್ಟಿರುವ ಕ್ರಿಶ್ಚಿಯನ್ ಸಮುದಾಯವನ್ನು ಕೂಡಾ ಬಿಜೆಪಿ ಪ್ರಣಾಳಿಕೆಯಲ್ಲಿ ನಿರ್ಲಕ್ಷಿಸಲಾಗಿದೆ.

ಇದನ್ನೂ ಓದಿ: ಕೋವಿಡ್ ಹಗರಣ : ಯಡಿಯೂರಪ್ಪ, ಶ್ರೀರಾಮುಲು ವಿರುದ್ದ ಕಾನೂನು ಕ್ರಮಕ್ಕೆ ನ್ಯಾ. ಡಿ’ಕುನ್ಹಾ ಆಯೋಗ ಶಿಫಾರಸು

ಕೋವಿಡ್ ಹಗರಣ : ಯಡಿಯೂರಪ್ಪ, ಶ್ರೀರಾಮುಲು ವಿರುದ್ದ ಕಾನೂನು ಕ್ರಮಕ್ಕೆ ನ್ಯಾ. ಡಿ’ಕುನ್ಹಾ ಆಯೋಗ ಶಿಫಾರಸು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...