Homeಮುಖಪುಟಜಾರ್ಖಂಡ್ ಚುನಾವಣೆ | ಮೊದಲ 35 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಜೆಎಂಎಂ

ಜಾರ್ಖಂಡ್ ಚುನಾವಣೆ | ಮೊದಲ 35 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಜೆಎಂಎಂ

- Advertisement -
- Advertisement -

ಮುಂಬರುವ ವಿಧಾನಸಭಾ ಚುನಾವಣೆಗೆ ಜಾರ್ಖಂಡ್ ಮುಕ್ತಿ ಮೋರ್ಚಾ ತನ್ನ 35 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದೆ. ಬರ್ಹೈತ್‌ ಕ್ಷೇತ್ರದಿಂದ ಮುಖ್ಯಮಂತ್ರಿ ಹೇಮಂತ್ ಸೊರೆನ್ ಮತ್ತು ಗಂಡೇ ಕ್ಷೇತ್ರದಿಂದ ಅವರ ಪತ್ನಿ ಕಲ್ಪನಾ ಸೊರೆನ್ ಅವರನ್ನು ಕಣಕ್ಕಿಳಿಸಿದೆ. ನವೆಂಬರ್ 13 ಮತ್ತು 20 ರಂದು ಎರಡು ಹಂತಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ನವೆಂಬರ್ 23 ರಂದು ಫಲಿತಾಂಶ ಪ್ರಕಟವಾಗಲಿದೆ.

ಸಾಹಿಬ್‌ಗಂಜ್ ಜಿಲ್ಲೆಯ ಬರ್ಹೈತ್ (ಎಸ್‌ಟಿ) ಕ್ಷೇತ್ರದ ಹಾಲಿ ಶಾಸಕರಾಗಿರುವ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರು 2019 ರ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಹತ್ತಿರದ ಬಿಜೆಪಿ ಪ್ರತಿಸ್ಪರ್ಧಿ ಸೈಮನ್ ಮಾಲ್ಟೊ ಅವರಿಗಿಂತ 25,740 ಮತಗಳಿಂದ ಗೆದ್ದಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅವರ ಪತ್ನಿ ಕಲ್ಪನಾ ಸೊರೆನ್ ಅವರು ತಮ್ಮ ಸಮೀಪದ ಬಿಜೆಪಿ ಪ್ರತಿಸ್ಪರ್ಧಿ ದಿಲೀಪ್ ಕುಮಾರ್ ವರ್ಮಾ ವಿರುದ್ಧ 27,149 ಮತಗಳಿಂದ ಗಂಡೇ ಉಪಚುನಾವಣೆಯಲ್ಲಿ ಜಯಗಳಿಸಿದ್ದರು. ಜೆಎಂಎಂ ಶಾಸಕ ಸರ್ಫರಾಜ್ ಅಹ್ಮದ್ ರಾಜೀನಾಮೆ ನೀಡಿದ ನಂತರ ಈ ಸ್ಥಾನ ತೆರವಾಗಿತ್ತು.  ಜಾರ್ಖಂಡ್

ಜೆಎಂಎಂ ಬಿಡುಗಡೆ ಮಾಡಿರುವ 35 ಕ್ಷೇತ್ರಗಳಲ್ಲಿ ಮುಖ್ಯಮಂತ್ರಿ ಅವರ ಸಹೋದರ ಬಸಂತ್ ಸೊರೆನ್, ರಾಜ್ಯದ ಸ್ಪೀಕರ್ ರವೀಂದ್ರನಾಥ್ ಮಹತೋ, ಸಚಿವರಾದ ಮಿಥಿಲೇಶ್ ಠಾಕೂರ್, ಸೋನು ಸುದಿವ್ಯಾ ಗಿರಿದಿಹ್ ಮತ್ತು ಬೇಬಿ ದೇವಿ ಅವರ ಹೆಸರಿದೆ. ಬಸಂತ್ ಸೊರೆನ್ ಈ ಹಿಂದೆ ಜೆಎಂಎಂ ಭದ್ರಕೋಟೆಯಾದ ದುಮ್ಕಾದಲ್ಲಿ ಬಿಜೆಪಿಯ ಮಾಜಿ ಸಚಿವ ಲೋಯಿಸ್ ಮರಾಂಡಿ ಅವರನ್ನು 6,842 ಮತಗಳಿಂದ ಸೋಲಿಸಿದ್ದರು.

ಅಸೆಂಬ್ಲಿ ಸ್ಪೀಕರ್ ಮಹ್ತೋ ಅವರು ಕಳೆದ ಚುನಾವಣೆಯಲ್ಲಿ ಬಿಜೆಪಿಯ ಸತ್ಯಾನಂದ್ ಝಾ ಅವರನ್ನು ಸೋಲಿಸಿ 3,520 ಮತಗಳ ಅಂತರದಿಂದ ಜಮ್ತಾರಾದ ನಾಲಾ ಕ್ಷೇತ್ರವನ್ನು ಗೆದ್ದಿದ್ದರು. ಮಹತೋ ಈ ಹಿಂದೆ 2005 ಮತ್ತು 2014ರಲ್ಲಿ ಕೂಡಾ ಈ ಕ್ಷೇತ್ರವನ್ನು ಗೆದ್ದಿದ್ದರು.

ಜೆಎಂಎಂ ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ಇತ್ತೀಚೆಗಷ್ಟೆ ಬಿಜೆಪಿ ತೊರೆದು ಪಕ್ಷ ಸೇರಿದ ಶಾಸಕ ಕೇದರ್ ಹಜಾರಾ ಅವರ ಹೆಸರು ಕೂಡಾ ಇವೆ.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟದ ಪಕ್ಷಗಳು ಒಟ್ಟಾಗಿ ಸ್ಪರ್ಧಿಸಲಿದ್ದು, ಕಾಂಗ್ರೆಸ್ ಮತ್ತು ಜೆಎಂಎಂ 81 ಸ್ಥಾನಗಳಲ್ಲಿ 70 ಸ್ಥಾನಗಳಿಗೆ ಸ್ಪರ್ಧಿಸಲಿದ್ದು, ಉಳಿದ 11 ಸ್ಥಾನಗಳಲ್ಲಿ ಆರ್‌ಜೆಡಿ ಮತ್ತು ಎಡ ಪಕ್ಷಗಳು ಸ್ಪರ್ಧಿಸಲಿವೆ. ಆರ್‌ಜೆಡಿ ಮಂಗಳವಾರ ಆರು ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ.

ವಿರೋಧ ಪಕ್ಷದಲ್ಲಿ ಬಿಜೆಪಿ 68 ಸ್ಥಾನಗಳಲ್ಲಿ ಸ್ಪರ್ಧಿಸಲಿದ್ದು, ಎಜೆಎಸ್‌ಯು ಪಕ್ಷ 10, ಜೆಡಿಯು 2 ಮತ್ತು ಎಲ್‌ಜೆಪಿ (ರಾಮ್ ವಿಲಾಸ್) 1 ರಲ್ಲಿ ಸ್ಪರ್ಧಿಸಲಿದೆ.

ಮೊದಲ ಹಂತದ ಮತದಾನ ನವೆಂಬರ್ 13 ರಂದು ನಡೆಯಲಿದೆ. ರಾಜ್ಯದ 43 ವಿಧಾನಸಭಾ ಕ್ಷೇತ್ರಗಳಿಗೆ ಶುಕ್ರವಾರ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು, ಅಕ್ಟೋಬರ್ 25 ಸಲ್ಲಿಕೆಗೆ ಕೊನೆಯ ದಿನವಾಗಿದೆ. ರಾಜ್ಯದಲ್ಲಿ ಒಟ್ಟು 2.60 ಕೋಟಿ ಮತದಾರರಿದ್ದು, 11.84 ಲಕ್ಷ ಮತದಾರರು ಮೊದಲ ಬಾರಿ ಮತ ಚಲಾವಣೆ ಮಾಡಲಿದ್ದಾರೆ.

ಇದನ್ನೂ ಓದಿ: ಸಾರ್ವಜನಿಕ ಸಾರಿಗೆ ವ್ಯವಸ್ಥೆ ’ಜನಸ್ನೇಹಿ’ಯಾಗುವುದು ಯಾವಾಗ?

ಸಾರ್ವಜನಿಕ ಸಾರಿಗೆ ವ್ಯವಸ್ಥೆ ’ಜನಸ್ನೇಹಿ’ಯಾಗುವುದು ಯಾವಾಗ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...