Homeಮುಖಪುಟಜಾರ್ಖಂಡ್ ನಲ್ಲಿ ಸೋಲಿನತ್ತ ಬಿಜೆಪಿ... ಕಾರಣಗಳೇನು ಗೊತ್ತೆ?

ಜಾರ್ಖಂಡ್ ನಲ್ಲಿ ಸೋಲಿನತ್ತ ಬಿಜೆಪಿ… ಕಾರಣಗಳೇನು ಗೊತ್ತೆ?

- Advertisement -
- Advertisement -

ಜಾರ್ಖಂಡ್ ರಾಜ್ಯದ ವಿಧಾನಸಭೆಯ 81 ಕ್ಷೇತ್ರಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ಮುಂದುವರಿದಿದ್ದು ಕಾಂಗ್ರೆಸ್-ಜೆಎಂಎಎಂ-ಆರ್‌ಜೆಡಿ ಮೈತ್ರಿ ಕೂಟ ಸರಳ ಬಹುಮತದತ್ತ ಹೆಜ್ಜೆ ಇಟ್ಟಿದೆ. ಕಳೆದ ಬಾರಿ ಅಧಿಕಾರ ಹಿಡಿದಿದ್ದ ಬಿಜೆಪಿ ತೀವ್ರ ಹಿನ್ನಡೆ ಅನುಭವಿಸಿದೆ.

ಜಾರ್ಖಂಡ್ ರಾಜ್ಯದಲ್ಲಿ ಐದು ಹಂತಗಳಲ್ಲಿ ಚುನಾವಣೆ ನಡೆದಿತ್ತು. ಬಿಜೆಪಿ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಅಧ್ಯಕ್ಷ ಹಾಗೂ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಘಟಾನುಘಟಿ ನಾಯಕರೆಲ್ಲರೂ ಪ್ರಚಾರ ನಡೆಸಿದ್ದರೂ ಕಳೆದ ಸ್ಥಾನಗಳನ್ನು ಉಳಿಸಿಕೊಳ್ಳುವಲ್ಲಿ ಬಿಜೆಪಿ ವಿಫಲವಾಗಿದೆ.

ಬಿಜೆಪಿಯ ನಾಯಕರು ರಾಷ್ಟ್ರೀಯ ಪೌರತ್ವ ನೋಂದಣಿ, ಪೌರತ್ವ ತಿದ್ದುಪಡಿ ಕಾಯ್ದೆ, ರಾಷ್ಟ್ರೀಯತೆ, ಕಾಶ್ಮೀರ ಮೊದಲಾದ ರಾಷ್ಟ್ರೀಯ ವಿಷಯಗಳನ್ನು ಚುನಾವಣಾ ಸಮಯದಲ್ಲಿ ಉಲ್ಲೇಖಿಸಿ ಮತಯಾಚಿಸಿದ್ದರು. ಆದರೆ ರಾಷ್ಟ್ರೀಯ ವಿಷಯಗಳಿಗೆ ಮತದಾರ ಆಸಕ್ತಿ ವಹಿಸದೇ ಇರುವುದು ಈ ಚುನಾವಣೆಯ ಫಲಿತಾಂಶದಿಂದ ವ್ಯಕ್ತವಾಗಿದೆ.

ಕೇಂದ್ರದಲ್ಲಿ ಅಧಿಕಾರದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಯೋಜನೆಗಳು ಅಷ್ಟಾಗಿ ಜನರಿಗೆ ಇಷ್ಟವಾಗಿಲ್ಲ. ಬದಲಿಗೆ ಸ್ಥಳೀಯ ವಿಷಯಗಳಿಗೆ ಮತದಾರರು ಹೆಚ್ಚಿನ ಆದ್ಯತೆ ನೀಡಿದಂತೆ ಕಂಡು ಬಂದಿದೆ. ಬಿಜೆಪಿ ಅತಿ ಹೆಚ್ಚು ಸ್ಥಾನಗಳನ್ನು ಪಡೆದಿದ್ದರೂ ಅಧಿಕಾರ ಹಿಡಿಯಲು ಸಾಧ್ಯವಾಗುತ್ತಿಲ್ಲ. ಈ ಬಾರಿ ಬಿಜೆಪಿ ಯಾರೊಂದಿಗೂ ಮೈತ್ರಿ ಮಾಡಿಕೊಂಡಿಲ್ಲದಿರುವುದು ಬಿಜೆಪಿ ಹಿನ್ನಡೆಗೆ ಕಾರಣವಾಗಿದೆ.

ಕಾಂಗ್ರೆಸ್-ಜೆಎಂಎಂ-ಆರ್ ಜೆಡಿ ಮೈತ್ರಿ ಕೂಡ ಸರಳ ಬಹುಮತ ಪಡೆಯುವತ್ತ ಹೆಜ್ಜೆ ಹಾಕಿದೆ. ನಾಲ್ಕನೇ ಸುತ್ತಿನ ಮತೆ ಎಣಿಕೆಯಲ್ಲಿಯೂ ಅದು ಮುನ್ನಡೆ ಸಾಧಿಸಿದೆ. ಪ್ರತಿಪಕ್ಷದಲ್ಲಿದ್ದ ಈ ಮೈತ್ರಿ ಕೂಟ ಅಧಿಕಾರಕ್ಕೆ ಏರುವ ಎಲ್ಲಾ ಲಕ್ಷಣಗಳು ಕಂಡುಬಂದಿದೆ. ಆದಿವಾಸಿಗಳು, ಅರಣ್ಯವಾಸಿಗಳ ಸ್ಥಳಾಂತರ, ಆಹಾರ ಭದ್ರತೆ ಕಾಯ್ದೆ ಜಾರಿಗೆ ತರುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದ್ದು ಹಸಿವಿನಿಂದ ಹಲವರು ಮೃತಪಟ್ಟಿದ್ದರು. ಈ ವಿಷಯವನ್ನು ಕಾಂಗ್ರೆಸ್-ಜೆಎಂಎಂ-ಆರ್ ಜೆಡಿ ಚುನಾವಣೆಯಲ್ಲಿ ಪ್ರಸ್ತಾಪಿಸಿದ್ದವು.

ಅಷ್ಟೇ ಅಲ್ಲ ಪಡಿತರ ಚೀಟಿ, ಪಿಂಚಣಿ ಮತ್ತು ಉದ್ಯೋಗ ಖಾತ್ರಿ ಯೋಜನೆಗೆ ಆಧಾರ್ ಲಿಂಕ್ ಮಾಡುವುದು ಕಡ್ಡಾಯ ಎಂಬ ಕಾರಣ ನೀಡಿದ ಸರ್ಕಾರ ಸುಮಾರು 11.64 ಲಕ್ಷ ಕಾರ್ಡುಗಳನ್ನು ರದ್ದುಪಡಿಸಿತ್ತು. ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರು ಇದೊಂದು ಪ್ರಮಾದ ಎಂದು ಹೇಳಿದ್ದರು. ಈ ವಿಷಯವನ್ನು ಕೂಡ ಪ್ರತಿಪಕ್ಷಗಳು ಚುನಾವಣೆಯಲ್ಲಿ ಪ್ರಸ್ತಾಪಿಸಿ ಜನರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿರುವುದರಿಂದ ಜೆಎಂಎಂ ಮೈತ್ರಿ ಕೂಟ ಅಧಿಕಾರ ಹಿಡಿಯಲು ಸಾಧ್ಯವಾಗಿದೆ.

ಆದಿವಾಸಿಗಳು ಭೂಮಿಯ ಮಾಲಿಕತ್ವವನ್ನು ಹೊಂದಿದ್ದು ಅವರ ಭೂಮಿಯನ್ನು  ಕೈಗಾರಿಕೆಗಳಿಗೆ ನೀಡಲು ಮುಂದಾಗಿತ್ತು. ಇದು ಆದಿವಾಸಿಗಳು ಮತ್ತು ಅರಣ್ಯವಾಸಿಗಳಲ್ಲಿ ಅಸಮಾಧಾನಕ್ಕೆ ಕಾರಣವಾಗಿತ್ತು. ಆದಿವಾಸಿಗಳೇ ಹೆಚ್ಚು ಸಂಖ್ಯೆಯಲ್ಲಿರುವ ಜಾರ್ಖಂಡ್ ನಲ್ಲಿ ಅವರ ಅಸಮಾಧಾನ ಜೆಎಂಎಎಂ ಮೈತ್ರಿಕೂಟಕ್ಕೆ ವರವಾಗಿ ಪಡಿಣಮಿಸಿದೆ.

ಜಾರ್ಖಂಡ್ ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಆರ್ ಜೆಡಿ ಐದು ಸ್ಥಾನಗಳನ್ನು ಗಳಿಸಿದೆ. ಕಾಂಗ್ರೆಸ್ ತನ್ನ ಸ್ಥಾನಗಳನ್ನು ಹೆಚ್ಚಿಸಿಕೊಂಡಿದೆ. ಜಾರ್ಖಂಡ್‌ ಮುಕ್ತಿ ಮೋರ್ಚಾ ಕೂಡ ತನ್ನ ಅಸ್ತಿತ್ವವನ್ನು ಸಾಬೀತುಪಡಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...