Homeಮುಖಪುಟಜಾರ್ಖಂಡ್ ನಲ್ಲಿ ಸೋಲಿನತ್ತ ಬಿಜೆಪಿ... ಕಾರಣಗಳೇನು ಗೊತ್ತೆ?

ಜಾರ್ಖಂಡ್ ನಲ್ಲಿ ಸೋಲಿನತ್ತ ಬಿಜೆಪಿ… ಕಾರಣಗಳೇನು ಗೊತ್ತೆ?

- Advertisement -
- Advertisement -

ಜಾರ್ಖಂಡ್ ರಾಜ್ಯದ ವಿಧಾನಸಭೆಯ 81 ಕ್ಷೇತ್ರಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ಮುಂದುವರಿದಿದ್ದು ಕಾಂಗ್ರೆಸ್-ಜೆಎಂಎಎಂ-ಆರ್‌ಜೆಡಿ ಮೈತ್ರಿ ಕೂಟ ಸರಳ ಬಹುಮತದತ್ತ ಹೆಜ್ಜೆ ಇಟ್ಟಿದೆ. ಕಳೆದ ಬಾರಿ ಅಧಿಕಾರ ಹಿಡಿದಿದ್ದ ಬಿಜೆಪಿ ತೀವ್ರ ಹಿನ್ನಡೆ ಅನುಭವಿಸಿದೆ.

ಜಾರ್ಖಂಡ್ ರಾಜ್ಯದಲ್ಲಿ ಐದು ಹಂತಗಳಲ್ಲಿ ಚುನಾವಣೆ ನಡೆದಿತ್ತು. ಬಿಜೆಪಿ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಅಧ್ಯಕ್ಷ ಹಾಗೂ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಘಟಾನುಘಟಿ ನಾಯಕರೆಲ್ಲರೂ ಪ್ರಚಾರ ನಡೆಸಿದ್ದರೂ ಕಳೆದ ಸ್ಥಾನಗಳನ್ನು ಉಳಿಸಿಕೊಳ್ಳುವಲ್ಲಿ ಬಿಜೆಪಿ ವಿಫಲವಾಗಿದೆ.

ಬಿಜೆಪಿಯ ನಾಯಕರು ರಾಷ್ಟ್ರೀಯ ಪೌರತ್ವ ನೋಂದಣಿ, ಪೌರತ್ವ ತಿದ್ದುಪಡಿ ಕಾಯ್ದೆ, ರಾಷ್ಟ್ರೀಯತೆ, ಕಾಶ್ಮೀರ ಮೊದಲಾದ ರಾಷ್ಟ್ರೀಯ ವಿಷಯಗಳನ್ನು ಚುನಾವಣಾ ಸಮಯದಲ್ಲಿ ಉಲ್ಲೇಖಿಸಿ ಮತಯಾಚಿಸಿದ್ದರು. ಆದರೆ ರಾಷ್ಟ್ರೀಯ ವಿಷಯಗಳಿಗೆ ಮತದಾರ ಆಸಕ್ತಿ ವಹಿಸದೇ ಇರುವುದು ಈ ಚುನಾವಣೆಯ ಫಲಿತಾಂಶದಿಂದ ವ್ಯಕ್ತವಾಗಿದೆ.

ಕೇಂದ್ರದಲ್ಲಿ ಅಧಿಕಾರದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಯೋಜನೆಗಳು ಅಷ್ಟಾಗಿ ಜನರಿಗೆ ಇಷ್ಟವಾಗಿಲ್ಲ. ಬದಲಿಗೆ ಸ್ಥಳೀಯ ವಿಷಯಗಳಿಗೆ ಮತದಾರರು ಹೆಚ್ಚಿನ ಆದ್ಯತೆ ನೀಡಿದಂತೆ ಕಂಡು ಬಂದಿದೆ. ಬಿಜೆಪಿ ಅತಿ ಹೆಚ್ಚು ಸ್ಥಾನಗಳನ್ನು ಪಡೆದಿದ್ದರೂ ಅಧಿಕಾರ ಹಿಡಿಯಲು ಸಾಧ್ಯವಾಗುತ್ತಿಲ್ಲ. ಈ ಬಾರಿ ಬಿಜೆಪಿ ಯಾರೊಂದಿಗೂ ಮೈತ್ರಿ ಮಾಡಿಕೊಂಡಿಲ್ಲದಿರುವುದು ಬಿಜೆಪಿ ಹಿನ್ನಡೆಗೆ ಕಾರಣವಾಗಿದೆ.

ಕಾಂಗ್ರೆಸ್-ಜೆಎಂಎಂ-ಆರ್ ಜೆಡಿ ಮೈತ್ರಿ ಕೂಡ ಸರಳ ಬಹುಮತ ಪಡೆಯುವತ್ತ ಹೆಜ್ಜೆ ಹಾಕಿದೆ. ನಾಲ್ಕನೇ ಸುತ್ತಿನ ಮತೆ ಎಣಿಕೆಯಲ್ಲಿಯೂ ಅದು ಮುನ್ನಡೆ ಸಾಧಿಸಿದೆ. ಪ್ರತಿಪಕ್ಷದಲ್ಲಿದ್ದ ಈ ಮೈತ್ರಿ ಕೂಟ ಅಧಿಕಾರಕ್ಕೆ ಏರುವ ಎಲ್ಲಾ ಲಕ್ಷಣಗಳು ಕಂಡುಬಂದಿದೆ. ಆದಿವಾಸಿಗಳು, ಅರಣ್ಯವಾಸಿಗಳ ಸ್ಥಳಾಂತರ, ಆಹಾರ ಭದ್ರತೆ ಕಾಯ್ದೆ ಜಾರಿಗೆ ತರುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದ್ದು ಹಸಿವಿನಿಂದ ಹಲವರು ಮೃತಪಟ್ಟಿದ್ದರು. ಈ ವಿಷಯವನ್ನು ಕಾಂಗ್ರೆಸ್-ಜೆಎಂಎಂ-ಆರ್ ಜೆಡಿ ಚುನಾವಣೆಯಲ್ಲಿ ಪ್ರಸ್ತಾಪಿಸಿದ್ದವು.

ಅಷ್ಟೇ ಅಲ್ಲ ಪಡಿತರ ಚೀಟಿ, ಪಿಂಚಣಿ ಮತ್ತು ಉದ್ಯೋಗ ಖಾತ್ರಿ ಯೋಜನೆಗೆ ಆಧಾರ್ ಲಿಂಕ್ ಮಾಡುವುದು ಕಡ್ಡಾಯ ಎಂಬ ಕಾರಣ ನೀಡಿದ ಸರ್ಕಾರ ಸುಮಾರು 11.64 ಲಕ್ಷ ಕಾರ್ಡುಗಳನ್ನು ರದ್ದುಪಡಿಸಿತ್ತು. ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರು ಇದೊಂದು ಪ್ರಮಾದ ಎಂದು ಹೇಳಿದ್ದರು. ಈ ವಿಷಯವನ್ನು ಕೂಡ ಪ್ರತಿಪಕ್ಷಗಳು ಚುನಾವಣೆಯಲ್ಲಿ ಪ್ರಸ್ತಾಪಿಸಿ ಜನರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿರುವುದರಿಂದ ಜೆಎಂಎಂ ಮೈತ್ರಿ ಕೂಟ ಅಧಿಕಾರ ಹಿಡಿಯಲು ಸಾಧ್ಯವಾಗಿದೆ.

ಆದಿವಾಸಿಗಳು ಭೂಮಿಯ ಮಾಲಿಕತ್ವವನ್ನು ಹೊಂದಿದ್ದು ಅವರ ಭೂಮಿಯನ್ನು  ಕೈಗಾರಿಕೆಗಳಿಗೆ ನೀಡಲು ಮುಂದಾಗಿತ್ತು. ಇದು ಆದಿವಾಸಿಗಳು ಮತ್ತು ಅರಣ್ಯವಾಸಿಗಳಲ್ಲಿ ಅಸಮಾಧಾನಕ್ಕೆ ಕಾರಣವಾಗಿತ್ತು. ಆದಿವಾಸಿಗಳೇ ಹೆಚ್ಚು ಸಂಖ್ಯೆಯಲ್ಲಿರುವ ಜಾರ್ಖಂಡ್ ನಲ್ಲಿ ಅವರ ಅಸಮಾಧಾನ ಜೆಎಂಎಎಂ ಮೈತ್ರಿಕೂಟಕ್ಕೆ ವರವಾಗಿ ಪಡಿಣಮಿಸಿದೆ.

ಜಾರ್ಖಂಡ್ ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಆರ್ ಜೆಡಿ ಐದು ಸ್ಥಾನಗಳನ್ನು ಗಳಿಸಿದೆ. ಕಾಂಗ್ರೆಸ್ ತನ್ನ ಸ್ಥಾನಗಳನ್ನು ಹೆಚ್ಚಿಸಿಕೊಂಡಿದೆ. ಜಾರ್ಖಂಡ್‌ ಮುಕ್ತಿ ಮೋರ್ಚಾ ಕೂಡ ತನ್ನ ಅಸ್ತಿತ್ವವನ್ನು ಸಾಬೀತುಪಡಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಇದು ಟ್ರಂಪ್ ವಾಗ್ದಾನ ಮಾಡಿದ ರಕ್ಷಣೆ’: 165 ಮಕ್ಕಳ ಸಾಮೂಹಿಕ ಸಮಾಧಿಯ ಫೋಟೋ ಹಂಚಿಕೊಂಡ ಇರಾನ್; ಮರುಗಿದ ಮಾನವ ಜಗತ್ತು

ದಕ್ಷಿಣ ಇರಾನ್‌ನ ಮಿನಾಬ್ ನಗರದ ಬಾಲಕಿಯರ ಶಾಲೆಯೊಂದರ ಮೇಲೆ ಶನಿವಾರ (ಫೆ.28) ಅಮೆರಿಕ-ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಸಾವನ್ನಪ್ಪಿದ 165 ವಿದ್ಯಾರ್ಥಿನಿಯರು ಮತ್ತು ಸಿಬ್ಬಂದಿಯ ಬೃಹತ್ ಅಂತಿಮ ಸಂಸ್ಕಾರ ಮೆರವಣಿಗೆ ಮಂಗಳವಾರ (ಮಾ.3)...

ಖಮೇನಿ ಪುತ್ರ ಮೊಜ್ತಬಾ ಅವರನ್ನು ಸರ್ವೋಚ್ಚ ನಾಯಕನನ್ನಾಗಿ ಹೆಸರಿಸಿದ ಇರಾನ್ ತಜ್ಞರ ಸಭೆ?

ದಿವಂಗತ ಅಯತೊಲ್ಲಾ ಅಲಿ ಖಮೇನಿಯವರ ಪುತ್ರ 56 ವರ್ಷದ ಮೊಜ್ತಬಾ ಖಮೇನಿ ಅವರನ್ನು ತಜ್ಞರ ಸಭೆಯು ಇರಾನ್‌ನ ಹೊಸ ಸರ್ವೋಚ್ಚ ನಾಯಕನನ್ನಾಗಿ ಆಯ್ಕೆ ಮಾಡಿದೆ ಎಂದು ಬಲ್ಲ ಮೂಲಗಳನ್ನು ಉಲ್ಲೇಖಿಸಿ ಇರಾನ್ ಅಂತಾರಾಷ್ಟ್ರೀಯ...

ಲೋಕಸಭೆ ಹಕ್ಕುಬಾಧ್ಯತಾ ಸಮಿತಿಗೆ 15 ಸದಸ್ಯರ ಆಯ್ಕೆ; ರವಿಶಂಕರ್ ಪ್ರಸಾದ್ ನೇತೃತ್ವ

ಹದಿನೆಂಟನೇ ಲೋಕಸಭೆ ರಚನೆಯಾಗಿ ಸುಮಾರು ಎರಡು ವರ್ಷಗಳ ನಂತರ, ಸ್ಪೀಕರ್ ಓಂ ಬಿರ್ಲಾ ಅವರು ಮಂಗಳವಾರ (ಮಾ.3) ಹಕ್ಕುಬಾಧ್ಯತಾ ಸಮಿತಿಗೆ 15 ಸದಸ್ಯರನ್ನು ನಾಮನಿರ್ದೇಶನ ಮಾಡಿದ್ದಾರೆ. ಸದನ ಮತ್ತು ಅದರ ಸದಸ್ಯರ ಹಕ್ಕುಚ್ಯುತಿಗೆ...

ಪಶ್ಚಿಮ ಬಂಗಾಳ : ಚುನಾವಣೆ ಹೊಸ್ತಿಲಲ್ಲಿ ತ್ವರಿತಗೊಂಡ ಸಿಎಎ ಜಾರಿ ಪ್ರಕ್ರಿಯೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಪ್ರಕ್ರಿಯೆಯು ಅತ್ಯಂತ ವೇಗ ಪಡೆದುಕೊಂಡಿದೆ. ಇತ್ತೀಚಿನ ಬೆಳವಣಿಗೆಗಳು ರಾಜ್ಯದ ರಾಜಕೀಯ ಸಮೀಕರಣಗಳನ್ನು ಬದಲಿಸುವ ಮುನ್ಸೂಚನೆ ನೀಡುತ್ತಿವೆ. ಕೇಂದ್ರ ಗೃಹ ಸಚಿವಾಲಯವು...

ರಾಜಸ್ಥಾನದ ಭಿವಾಡಿಯಲ್ಲಿ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ಘರ್ಷಣೆ: ಯುವಕ ಸಾವು

ಜೈಪುರ: ರಾಜಸ್ಥಾನದ ಭಿವಾಡಿಯಲ್ಲಿ ಸೋಮವಾರ ಬೆಳಗಿನ ಜಾವ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ನಡೆದ ಘರ್ಷಣೆಯಲ್ಲಿ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಈ ಘಟನೆಯಿಂದಾಗಿ ಮೃತನ ಕುಟುಂಬ ಪ್ರತಿಭಟನೆ ನಡೆಸಿದ್ದು, ಆತನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು...

ಖಮೇನಿ ಹತ್ಯೆ ಬಗ್ಗೆ ಪ್ರಧಾನಿ ಮೋದಿ ತಮ್ಮ ನಿಲುವು ತಿಳಿಸಬೇಕು: ರಾಹುಲ್ ಗಾಂಧಿ ಒತ್ತಾಯ

ಇರಾನ್‌ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಯ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟವಾಗಿ ತಿಳಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿದ್ದಾರೆ. ಅಮೆರಿಕ ಮತ್ತು...

ಇರಾನ್‌ ಮೇಲೆ ಇಸ್ರೇಲ್ ದಾಳಿ: ಟೆಹ್ರಾನ್‌ನಿಂದ 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಕೋಮ್‌ಗೆ ಸ್ಥಳಾಂತರ

ನವದೆಹಲಿ: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಗಳು ತೀವ್ರಗೊಳ್ಳುತ್ತಿರುವ ಮಧ್ಯೆ, ಟೆಹ್ರಾನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯ ವಿದ್ಯಾರ್ಥಿಗಳನ್ನು ಕೋಮ್‌ಗೆ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ, ಆದರೆ ಭಾರತೀಯ ರಾಯಭಾರ ಕಚೇರಿಯು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ಪ್ರಜೆಗಳನ್ನು ಮನೆಯೊಳಗೆ ಇರುವಂತೆ...

‘ಪಿಟಿಸಿಎಲ್‌ ಕಾಯ್ದೆ’ ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ

'ಪಿಟಿಸಿಎಲ್‌ (PTCL) ಕಾಯ್ದೆ' ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು 'ಪಿಟಿಸಿಎಲ್‌ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿ' ಮುಖಂಡರು ಘೋಷಿಸಿದರು. ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ...

ರಾಜಸ್ಥಾನ| ‘ನೀವು ಕೆಳಜಾತಿಯವರು, ಎಲ್‌ಎಲ್‌ಬಿ ನಿಮಗೆ ಸೂಕ್ತವಲ್ಲ..’; ದಲಿತ ವಿದ್ಯಾರ್ಥಿನಿಗೆ ಪ್ರಾಧ್ಯಾಪಕರಿಂದ ಜಾತಿ ನಿಂದನೆ

ರಾಜಸ್ಥಾನದ ಚುರುವಿನ ಸರ್ಕಾರಿ ಕಾನೂನು ಕಾಲೇಜಿನ ಮೂರನೇ ಸೆಮಿಸ್ಟರ್ ದಲಿತ ಎಲ್‌ಎಲ್‌ಬಿ ವಿದ್ಯಾರ್ಥಿನಿಯೊಬ್ಬರು, ಇಬ್ಬರು ಪ್ರಾಧ್ಯಾಪಕರಿಂದ ಜಾತಿ ಆಧಾರಿತ ನಿಂದನೆ, ಬೆದರಿಕೆ ಮತ್ತು ತಾರತಮ್ಯ ಆರೋಪದ ಮೇಲೆ ಪೊಲೀಸ್ ದೂರು ದಾಖಲಿಸಿದ್ದಾರೆ. ಎಸ್‌ಸಿ...

ಬೆಂಗಳೂರು: ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ: ಮಹಿಳೆ ಸಾವು, ಮೂವರ ರಕ್ಷಣೆ

ಬೆಂಗಳೂರು: ಸೋಮವಾರ ರಾತ್ರಿ ಉತ್ತರ ಬೆಂಗಳೂರಿನಲ್ಲಿರುವ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮೃತರನ್ನು 55 ವರ್ಷದ ಸವಿತಾ ಎಂದು ಗುರುತಿಸಲಾಗಿದೆ. ಅವರ ಪತಿ ಗುತ್ತಿಗೆದಾರ ರಮೇಶ್...