Homeಮುಖಪುಟಜಾರ್ಖಂಡ್ ನಲ್ಲಿ ಸೋಲಿನತ್ತ ಬಿಜೆಪಿ... ಕಾರಣಗಳೇನು ಗೊತ್ತೆ?

ಜಾರ್ಖಂಡ್ ನಲ್ಲಿ ಸೋಲಿನತ್ತ ಬಿಜೆಪಿ… ಕಾರಣಗಳೇನು ಗೊತ್ತೆ?

- Advertisement -
- Advertisement -

ಜಾರ್ಖಂಡ್ ರಾಜ್ಯದ ವಿಧಾನಸಭೆಯ 81 ಕ್ಷೇತ್ರಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ಮುಂದುವರಿದಿದ್ದು ಕಾಂಗ್ರೆಸ್-ಜೆಎಂಎಎಂ-ಆರ್‌ಜೆಡಿ ಮೈತ್ರಿ ಕೂಟ ಸರಳ ಬಹುಮತದತ್ತ ಹೆಜ್ಜೆ ಇಟ್ಟಿದೆ. ಕಳೆದ ಬಾರಿ ಅಧಿಕಾರ ಹಿಡಿದಿದ್ದ ಬಿಜೆಪಿ ತೀವ್ರ ಹಿನ್ನಡೆ ಅನುಭವಿಸಿದೆ.

ಜಾರ್ಖಂಡ್ ರಾಜ್ಯದಲ್ಲಿ ಐದು ಹಂತಗಳಲ್ಲಿ ಚುನಾವಣೆ ನಡೆದಿತ್ತು. ಬಿಜೆಪಿ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಅಧ್ಯಕ್ಷ ಹಾಗೂ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಘಟಾನುಘಟಿ ನಾಯಕರೆಲ್ಲರೂ ಪ್ರಚಾರ ನಡೆಸಿದ್ದರೂ ಕಳೆದ ಸ್ಥಾನಗಳನ್ನು ಉಳಿಸಿಕೊಳ್ಳುವಲ್ಲಿ ಬಿಜೆಪಿ ವಿಫಲವಾಗಿದೆ.

ಬಿಜೆಪಿಯ ನಾಯಕರು ರಾಷ್ಟ್ರೀಯ ಪೌರತ್ವ ನೋಂದಣಿ, ಪೌರತ್ವ ತಿದ್ದುಪಡಿ ಕಾಯ್ದೆ, ರಾಷ್ಟ್ರೀಯತೆ, ಕಾಶ್ಮೀರ ಮೊದಲಾದ ರಾಷ್ಟ್ರೀಯ ವಿಷಯಗಳನ್ನು ಚುನಾವಣಾ ಸಮಯದಲ್ಲಿ ಉಲ್ಲೇಖಿಸಿ ಮತಯಾಚಿಸಿದ್ದರು. ಆದರೆ ರಾಷ್ಟ್ರೀಯ ವಿಷಯಗಳಿಗೆ ಮತದಾರ ಆಸಕ್ತಿ ವಹಿಸದೇ ಇರುವುದು ಈ ಚುನಾವಣೆಯ ಫಲಿತಾಂಶದಿಂದ ವ್ಯಕ್ತವಾಗಿದೆ.

ಕೇಂದ್ರದಲ್ಲಿ ಅಧಿಕಾರದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಯೋಜನೆಗಳು ಅಷ್ಟಾಗಿ ಜನರಿಗೆ ಇಷ್ಟವಾಗಿಲ್ಲ. ಬದಲಿಗೆ ಸ್ಥಳೀಯ ವಿಷಯಗಳಿಗೆ ಮತದಾರರು ಹೆಚ್ಚಿನ ಆದ್ಯತೆ ನೀಡಿದಂತೆ ಕಂಡು ಬಂದಿದೆ. ಬಿಜೆಪಿ ಅತಿ ಹೆಚ್ಚು ಸ್ಥಾನಗಳನ್ನು ಪಡೆದಿದ್ದರೂ ಅಧಿಕಾರ ಹಿಡಿಯಲು ಸಾಧ್ಯವಾಗುತ್ತಿಲ್ಲ. ಈ ಬಾರಿ ಬಿಜೆಪಿ ಯಾರೊಂದಿಗೂ ಮೈತ್ರಿ ಮಾಡಿಕೊಂಡಿಲ್ಲದಿರುವುದು ಬಿಜೆಪಿ ಹಿನ್ನಡೆಗೆ ಕಾರಣವಾಗಿದೆ.

ಕಾಂಗ್ರೆಸ್-ಜೆಎಂಎಂ-ಆರ್ ಜೆಡಿ ಮೈತ್ರಿ ಕೂಡ ಸರಳ ಬಹುಮತ ಪಡೆಯುವತ್ತ ಹೆಜ್ಜೆ ಹಾಕಿದೆ. ನಾಲ್ಕನೇ ಸುತ್ತಿನ ಮತೆ ಎಣಿಕೆಯಲ್ಲಿಯೂ ಅದು ಮುನ್ನಡೆ ಸಾಧಿಸಿದೆ. ಪ್ರತಿಪಕ್ಷದಲ್ಲಿದ್ದ ಈ ಮೈತ್ರಿ ಕೂಟ ಅಧಿಕಾರಕ್ಕೆ ಏರುವ ಎಲ್ಲಾ ಲಕ್ಷಣಗಳು ಕಂಡುಬಂದಿದೆ. ಆದಿವಾಸಿಗಳು, ಅರಣ್ಯವಾಸಿಗಳ ಸ್ಥಳಾಂತರ, ಆಹಾರ ಭದ್ರತೆ ಕಾಯ್ದೆ ಜಾರಿಗೆ ತರುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದ್ದು ಹಸಿವಿನಿಂದ ಹಲವರು ಮೃತಪಟ್ಟಿದ್ದರು. ಈ ವಿಷಯವನ್ನು ಕಾಂಗ್ರೆಸ್-ಜೆಎಂಎಂ-ಆರ್ ಜೆಡಿ ಚುನಾವಣೆಯಲ್ಲಿ ಪ್ರಸ್ತಾಪಿಸಿದ್ದವು.

ಅಷ್ಟೇ ಅಲ್ಲ ಪಡಿತರ ಚೀಟಿ, ಪಿಂಚಣಿ ಮತ್ತು ಉದ್ಯೋಗ ಖಾತ್ರಿ ಯೋಜನೆಗೆ ಆಧಾರ್ ಲಿಂಕ್ ಮಾಡುವುದು ಕಡ್ಡಾಯ ಎಂಬ ಕಾರಣ ನೀಡಿದ ಸರ್ಕಾರ ಸುಮಾರು 11.64 ಲಕ್ಷ ಕಾರ್ಡುಗಳನ್ನು ರದ್ದುಪಡಿಸಿತ್ತು. ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರು ಇದೊಂದು ಪ್ರಮಾದ ಎಂದು ಹೇಳಿದ್ದರು. ಈ ವಿಷಯವನ್ನು ಕೂಡ ಪ್ರತಿಪಕ್ಷಗಳು ಚುನಾವಣೆಯಲ್ಲಿ ಪ್ರಸ್ತಾಪಿಸಿ ಜನರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿರುವುದರಿಂದ ಜೆಎಂಎಂ ಮೈತ್ರಿ ಕೂಟ ಅಧಿಕಾರ ಹಿಡಿಯಲು ಸಾಧ್ಯವಾಗಿದೆ.

ಆದಿವಾಸಿಗಳು ಭೂಮಿಯ ಮಾಲಿಕತ್ವವನ್ನು ಹೊಂದಿದ್ದು ಅವರ ಭೂಮಿಯನ್ನು  ಕೈಗಾರಿಕೆಗಳಿಗೆ ನೀಡಲು ಮುಂದಾಗಿತ್ತು. ಇದು ಆದಿವಾಸಿಗಳು ಮತ್ತು ಅರಣ್ಯವಾಸಿಗಳಲ್ಲಿ ಅಸಮಾಧಾನಕ್ಕೆ ಕಾರಣವಾಗಿತ್ತು. ಆದಿವಾಸಿಗಳೇ ಹೆಚ್ಚು ಸಂಖ್ಯೆಯಲ್ಲಿರುವ ಜಾರ್ಖಂಡ್ ನಲ್ಲಿ ಅವರ ಅಸಮಾಧಾನ ಜೆಎಂಎಎಂ ಮೈತ್ರಿಕೂಟಕ್ಕೆ ವರವಾಗಿ ಪಡಿಣಮಿಸಿದೆ.

ಜಾರ್ಖಂಡ್ ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಆರ್ ಜೆಡಿ ಐದು ಸ್ಥಾನಗಳನ್ನು ಗಳಿಸಿದೆ. ಕಾಂಗ್ರೆಸ್ ತನ್ನ ಸ್ಥಾನಗಳನ್ನು ಹೆಚ್ಚಿಸಿಕೊಂಡಿದೆ. ಜಾರ್ಖಂಡ್‌ ಮುಕ್ತಿ ಮೋರ್ಚಾ ಕೂಡ ತನ್ನ ಅಸ್ತಿತ್ವವನ್ನು ಸಾಬೀತುಪಡಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...